Homeಅಂತರಾಷ್ಟ್ರೀಯಯೆಮನ್ | ಇಸ್ರೇಲ್ ದಾಳಿಯಲ್ಲಿ ಹೌತಿ ಸರ್ಕಾರದ ಪ್ರಧಾನಿ, ಹಲವು ಸಚಿವರು ಸಾವು: ವರದಿ

ಯೆಮನ್ | ಇಸ್ರೇಲ್ ದಾಳಿಯಲ್ಲಿ ಹೌತಿ ಸರ್ಕಾರದ ಪ್ರಧಾನಿ, ಹಲವು ಸಚಿವರು ಸಾವು: ವರದಿ

- Advertisement -
- Advertisement -

ಯೆಮನ್‌ ರಾಜಧಾನಿ ಸನಾ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ ಹೌತಿ ಸರ್ಕಾರದ ಪ್ರಧಾನಿ ಅಹ್ಮದ್ ಗಲೇಬ್ ನಾಸರ್ ಅಲ್-ರಹಾವಿ ಮತ್ತು ಹಲವು ಸಚಿವರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ.

ಕಳೆದ ಗುರುವಾರ (ಆ.28) ಇಸ್ರೇಲ್ ದಾಳಿ ನಡೆಸಿದೆ. ಈ ದಾಳಿಯಲ್ಲಿ ಪ್ರಧಾನಿ ರಹಾವಿ, ಸಚಿವರು ಮತ್ತು ಅಧಿಕಾರಿಗಳು ಸಾವನ್ನಪ್ಪಿದ್ದಾರೆ ಎಂಬುವುದನ್ನು ಹೌತಿ ದೃಢಪಡಿಸಿದೆ ಎಂದು ಬಿಬಿಸಿ ಭಾನುವಾರ(31) ವರದಿ ಮಾಡಿದೆ.

ಸನಾ ಪ್ರದೇಶದಲ್ಲಿ ಸಭೆಯೊಂದರ ಮೇಲೆ ಇಸ್ರೇಲಿ ಫೈಟರ್ ಜೆಟ್‌ಗಳು ದಾಳಿ ನಡೆಸಿದ್ದು, ಹೌತಿ ಆಡಳಿತದ ಪ್ರಧಾನಿ ರಹಾವಿ ಮತ್ತು ಇತರ ಹಿರಿಯ ಹೌತಿ ಅಧಿಕಾರಿಗಳನ್ನು ಹತ್ಯೆ ಮಾಡಲಾಗಿದೆ ಎಂದು ಇಸ್ರೇಲ್‌ನ ಐಡಿಎಫ್ ಕೂಡ ಹೇಳಿದೆ.

ವರದಿಗಳ ಪ್ರಕಾರ, ವಿನಾಶಕಾರಿ ಅಂತರ್ಯುದ್ಧ ನಡೆದು ಯೆಮನ್‌ ರಾಜಧಾನಿ ಸನಾದಿಂದ ಅಧಿಕೃತ ಸರ್ಕಾರದ ಆಡಳಿತವನ್ನು ಕಿತ್ತು ಹಾಕಿದ ಬಳಿಕ, 2014 ರಿಂದ ಹೌತಿಗಳು ವಾಯುವ್ಯ ಯೆಮೆನ್‌ನ ಹೆಚ್ಚಿನ ಭಾಗವನ್ನು ತಮ್ಮ ನಿಯಂತ್ರಣದಲ್ಲಿಟ್ಟುಕೊಂಡಿದ್ದಾರೆ.

ತಮ್ಮ ಪ್ರಧಾನಿ ರಹಾವಿ ಮತ್ತು ಸಚಿವರು ಇಸ್ರೇಲ್ ದಾಳಿಯಲ್ಲಿ ಹತ್ಯೆಯಾಗಿದ್ದಾರೆ ಎಂದು ಹೌತಿ ಹೇಳಿಕೊಂಡಿದೆ. ಮೃತ ಸಚಿವರ ಹೆಸರು ತಿಳಿಸಿಲ್ಲ.

ಸೌದಿ ಅರೇಬಿಯಾದ ಸುದ್ದಿ ತಾಣ ಅಲ್-ಹದತ್ ವರದಿ ಮಾಡಿರುವ ಪ್ರಕಾರ, ಹೌತಿಗಳ ವಿದೇಶಾಂಗ ಸಚಿವರು, ನ್ಯಾಯ, ಯುವಜನ ಮತ್ತು ಕ್ರೀಡೆ, ಸಾಮಾಜಿಕ ವ್ಯವಹಾರಗಳು ಮತ್ತು ಕಾರ್ಮಿಕ ಸಚಿವರು ಕೊಲ್ಲಲ್ಪಟ್ಟಿದ್ದಾರೆ.

ಇಸ್ರೇಲ್ ದಾಳಿಯಲ್ಲಿ ಹಲವಾರು ಇತರ ಸಚಿವರು ಕೂಡ ಸಾಧಾರಣ ಮತ್ತು ಗಂಭೀರ ಗಾಯಗಳಿಗೆ ಒಳಗಾಗಿದ್ದಾರೆ ಎಂದು ಹೌತಿಗಳ ಅಧ್ಯಕ್ಷ ಮಹ್ದಿ ಅಲ್-ಮಶಾತ್ ಅವರ ಕಚೇರಿಯನ್ನು ಉಲ್ಲೇಖಿಸಿ ಬಿಬಿಸಿ ವರದಿ ಮಾಡಿದೆ.

ಪ್ರಧಾನಿ ಹತ್ಯೆಯಾಗಿರುವ ಹಿನ್ನೆಲೆ ಉಪ ಪ್ರಧಾನಿ ಮುಹಮ್ಮದ್ ಅಹ್ಮದ್ ಮಿಫ್ತಾ ಅವರು ಪ್ರಧಾನಿ ಸ್ಥಾನ ಅಲಂಕರಿಸಲಿದ್ದಾರೆ ಎಂದು ಹೌತಿ ಹೇಳಿದೆ.

ರಹಾವಿ ಆಗಸ್ಟ್ 2024ರಿಂದ ಹೌತಿ ಆಡಳಿತದ ಪ್ರಧಾನಿಯಾಗಿದ್ದರು. ಅದಕ್ಕೂ ಮುನ್ನ ಮಿಲಿಟರಿ ಕಾರ್ಯಾಚರಣೆಗಳನ್ನು ಯೋಜಿಸುವ ಉನ್ನತ ನಿರ್ಧಾರ ತೆಗೆದುಕೊಳ್ಳುವ ತಂಡದ ಭಾಗವಾಗುವ ಬದಲು ಹೌತಿ ಚಳವಳಿಯ ಪ್ರಮುಖ ವ್ಯಕ್ತಿಯಾಗಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದರು ಎಂದು ವರದಿಗಳು ಹೇಳಿವೆ.

ಗುರುವಾರದ ದಾಳಿಯಲ್ಲಿ ಹೌತಿ ಚಳುವಳಿಯ ಅಂತಿಮ ನಾಯಕ ಅಬ್ದುಲ್-ಮಲಿಕ್ ಅಲ್-ಹೌತಿ, ಹಾಗೆಯೇ ಗುಂಪಿನ ರಕ್ಷಣಾ ಸಚಿವರು ಮತ್ತು ಸಿಬ್ಬಂದಿ ಮುಖ್ಯಸ್ಥರು ಸಾವನ್ನಪ್ಪಿದ್ದಾರೆಯೇ ಎಂಬುವುದರ ಬಗ್ಗೆ ಖಚಿತ ಮಾಹಿತಿ ದೊರೆತಿಲ್ಲ.

ಹೌತಿ ಸಭೆಯ ಬಗ್ಗೆ ಗುಪ್ತಚರ ಮಾಹಿತಿ ಪಡೆದ ‘ಕೆಲವೇ ಗಂಟೆಗಳಲ್ಲಿ’ ದಾಳಿ ನಡೆಸಲಾಗಿದೆ ಎಂದು ಐಡಿಎಫ್ ಶನಿವಾರ ತಡರಾತ್ರಿ ಹೇಳಿಕೆಯಲ್ಲಿ ತಿಳಿಸಿದೆ. ಕಾರ್ಯಾಚರಣೆಯ ಸಂಪೂರ್ಣ ಪರಿಣಾಮವನ್ನು ಇನ್ನೂ ನಿರ್ಣಯಿಸಲಾಗುತ್ತಿದೆ ಎಂದು ಅದು ಹೇಳಿದೆ.

ಗಾಝಾದಲ್ಲಿ ಇಸ್ರೇಲ್ ಮತ್ತು ಹಮಾಸ್ ನಡುವಿನ ಯುದ್ಧ ಪ್ರಾರಂಭವಾದಾಗಿನಿಂದ, ಹೌತಿಗಳು ನಿಯಮಿತವಾಗಿ ಇಸ್ರೇಲ್ ಮೇಲೆ ಕ್ಷಿಪಣಿಗಳನ್ನು ಉಡಾಯಿಸುತ್ತಿದ್ದಾರೆ ಮತ್ತು ಕೆಂಪು ಸಮುದ್ರ ಮತ್ತು ಅಡೆನ್ ಕೊಲ್ಲಿಯಲ್ಲಿ ವಾಣಿಜ್ಯ ಹಡಗುಗಳನ್ನು ಗುರಿಯಾಗಿಸಿಕೊಂಡಿದ್ದಾರೆ. ಹೌತಿಗಳು ಪ್ಯಾಲೆಸ್ತೀನಿಯರನ್ನು ಬೆಂಬಲಿಸುವುದಾಗಿ ಹೇಳಿಕೊಂಡಿದ್ದಾರೆ.

ಇದಕ್ಕೆ ಪ್ರತಿಯಾಗಿ, ಇಸ್ರೇಲ್ ಯೆಮನ್‌ನ ಹೌತಿ ಹಿಡಿತದಲ್ಲಿರುವ ಪ್ರದೇಶಗಳ ಮೇಲೆ ವಾಯುದಾಳಿಗಳನ್ನು ನಡೆಸುತ್ತಿದೆ.

ಉಕ್ರೇನ್‌ನಲ್ಲಿ ನಡೆಯುತ್ತಿರುವುದು ‘ಮೋದಿ ಯುದ್ಧ’: ಅಮೆರಿಕ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...