Homeಅಂತರಾಷ್ಟ್ರೀಯಯೆಮನ್ | ಇಸ್ರೇಲ್ ದಾಳಿಯಲ್ಲಿ ಹೌತಿ ಸರ್ಕಾರದ ಪ್ರಧಾನಿ, ಹಲವು ಸಚಿವರು ಸಾವು: ವರದಿ

ಯೆಮನ್ | ಇಸ್ರೇಲ್ ದಾಳಿಯಲ್ಲಿ ಹೌತಿ ಸರ್ಕಾರದ ಪ್ರಧಾನಿ, ಹಲವು ಸಚಿವರು ಸಾವು: ವರದಿ

- Advertisement -
- Advertisement -

ಯೆಮನ್‌ ರಾಜಧಾನಿ ಸನಾ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ ಹೌತಿ ಸರ್ಕಾರದ ಪ್ರಧಾನಿ ಅಹ್ಮದ್ ಗಲೇಬ್ ನಾಸರ್ ಅಲ್-ರಹಾವಿ ಮತ್ತು ಹಲವು ಸಚಿವರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ.

ಕಳೆದ ಗುರುವಾರ (ಆ.28) ಇಸ್ರೇಲ್ ದಾಳಿ ನಡೆಸಿದೆ. ಈ ದಾಳಿಯಲ್ಲಿ ಪ್ರಧಾನಿ ರಹಾವಿ, ಸಚಿವರು ಮತ್ತು ಅಧಿಕಾರಿಗಳು ಸಾವನ್ನಪ್ಪಿದ್ದಾರೆ ಎಂಬುವುದನ್ನು ಹೌತಿ ದೃಢಪಡಿಸಿದೆ ಎಂದು ಬಿಬಿಸಿ ಭಾನುವಾರ(31) ವರದಿ ಮಾಡಿದೆ.

ಸನಾ ಪ್ರದೇಶದಲ್ಲಿ ಸಭೆಯೊಂದರ ಮೇಲೆ ಇಸ್ರೇಲಿ ಫೈಟರ್ ಜೆಟ್‌ಗಳು ದಾಳಿ ನಡೆಸಿದ್ದು, ಹೌತಿ ಆಡಳಿತದ ಪ್ರಧಾನಿ ರಹಾವಿ ಮತ್ತು ಇತರ ಹಿರಿಯ ಹೌತಿ ಅಧಿಕಾರಿಗಳನ್ನು ಹತ್ಯೆ ಮಾಡಲಾಗಿದೆ ಎಂದು ಇಸ್ರೇಲ್‌ನ ಐಡಿಎಫ್ ಕೂಡ ಹೇಳಿದೆ.

ವರದಿಗಳ ಪ್ರಕಾರ, ವಿನಾಶಕಾರಿ ಅಂತರ್ಯುದ್ಧ ನಡೆದು ಯೆಮನ್‌ ರಾಜಧಾನಿ ಸನಾದಿಂದ ಅಧಿಕೃತ ಸರ್ಕಾರದ ಆಡಳಿತವನ್ನು ಕಿತ್ತು ಹಾಕಿದ ಬಳಿಕ, 2014 ರಿಂದ ಹೌತಿಗಳು ವಾಯುವ್ಯ ಯೆಮೆನ್‌ನ ಹೆಚ್ಚಿನ ಭಾಗವನ್ನು ತಮ್ಮ ನಿಯಂತ್ರಣದಲ್ಲಿಟ್ಟುಕೊಂಡಿದ್ದಾರೆ.

ತಮ್ಮ ಪ್ರಧಾನಿ ರಹಾವಿ ಮತ್ತು ಸಚಿವರು ಇಸ್ರೇಲ್ ದಾಳಿಯಲ್ಲಿ ಹತ್ಯೆಯಾಗಿದ್ದಾರೆ ಎಂದು ಹೌತಿ ಹೇಳಿಕೊಂಡಿದೆ. ಮೃತ ಸಚಿವರ ಹೆಸರು ತಿಳಿಸಿಲ್ಲ.

ಸೌದಿ ಅರೇಬಿಯಾದ ಸುದ್ದಿ ತಾಣ ಅಲ್-ಹದತ್ ವರದಿ ಮಾಡಿರುವ ಪ್ರಕಾರ, ಹೌತಿಗಳ ವಿದೇಶಾಂಗ ಸಚಿವರು, ನ್ಯಾಯ, ಯುವಜನ ಮತ್ತು ಕ್ರೀಡೆ, ಸಾಮಾಜಿಕ ವ್ಯವಹಾರಗಳು ಮತ್ತು ಕಾರ್ಮಿಕ ಸಚಿವರು ಕೊಲ್ಲಲ್ಪಟ್ಟಿದ್ದಾರೆ.

ಇಸ್ರೇಲ್ ದಾಳಿಯಲ್ಲಿ ಹಲವಾರು ಇತರ ಸಚಿವರು ಕೂಡ ಸಾಧಾರಣ ಮತ್ತು ಗಂಭೀರ ಗಾಯಗಳಿಗೆ ಒಳಗಾಗಿದ್ದಾರೆ ಎಂದು ಹೌತಿಗಳ ಅಧ್ಯಕ್ಷ ಮಹ್ದಿ ಅಲ್-ಮಶಾತ್ ಅವರ ಕಚೇರಿಯನ್ನು ಉಲ್ಲೇಖಿಸಿ ಬಿಬಿಸಿ ವರದಿ ಮಾಡಿದೆ.

ಪ್ರಧಾನಿ ಹತ್ಯೆಯಾಗಿರುವ ಹಿನ್ನೆಲೆ ಉಪ ಪ್ರಧಾನಿ ಮುಹಮ್ಮದ್ ಅಹ್ಮದ್ ಮಿಫ್ತಾ ಅವರು ಪ್ರಧಾನಿ ಸ್ಥಾನ ಅಲಂಕರಿಸಲಿದ್ದಾರೆ ಎಂದು ಹೌತಿ ಹೇಳಿದೆ.

ರಹಾವಿ ಆಗಸ್ಟ್ 2024ರಿಂದ ಹೌತಿ ಆಡಳಿತದ ಪ್ರಧಾನಿಯಾಗಿದ್ದರು. ಅದಕ್ಕೂ ಮುನ್ನ ಮಿಲಿಟರಿ ಕಾರ್ಯಾಚರಣೆಗಳನ್ನು ಯೋಜಿಸುವ ಉನ್ನತ ನಿರ್ಧಾರ ತೆಗೆದುಕೊಳ್ಳುವ ತಂಡದ ಭಾಗವಾಗುವ ಬದಲು ಹೌತಿ ಚಳವಳಿಯ ಪ್ರಮುಖ ವ್ಯಕ್ತಿಯಾಗಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದರು ಎಂದು ವರದಿಗಳು ಹೇಳಿವೆ.

ಗುರುವಾರದ ದಾಳಿಯಲ್ಲಿ ಹೌತಿ ಚಳುವಳಿಯ ಅಂತಿಮ ನಾಯಕ ಅಬ್ದುಲ್-ಮಲಿಕ್ ಅಲ್-ಹೌತಿ, ಹಾಗೆಯೇ ಗುಂಪಿನ ರಕ್ಷಣಾ ಸಚಿವರು ಮತ್ತು ಸಿಬ್ಬಂದಿ ಮುಖ್ಯಸ್ಥರು ಸಾವನ್ನಪ್ಪಿದ್ದಾರೆಯೇ ಎಂಬುವುದರ ಬಗ್ಗೆ ಖಚಿತ ಮಾಹಿತಿ ದೊರೆತಿಲ್ಲ.

ಹೌತಿ ಸಭೆಯ ಬಗ್ಗೆ ಗುಪ್ತಚರ ಮಾಹಿತಿ ಪಡೆದ ‘ಕೆಲವೇ ಗಂಟೆಗಳಲ್ಲಿ’ ದಾಳಿ ನಡೆಸಲಾಗಿದೆ ಎಂದು ಐಡಿಎಫ್ ಶನಿವಾರ ತಡರಾತ್ರಿ ಹೇಳಿಕೆಯಲ್ಲಿ ತಿಳಿಸಿದೆ. ಕಾರ್ಯಾಚರಣೆಯ ಸಂಪೂರ್ಣ ಪರಿಣಾಮವನ್ನು ಇನ್ನೂ ನಿರ್ಣಯಿಸಲಾಗುತ್ತಿದೆ ಎಂದು ಅದು ಹೇಳಿದೆ.

ಗಾಝಾದಲ್ಲಿ ಇಸ್ರೇಲ್ ಮತ್ತು ಹಮಾಸ್ ನಡುವಿನ ಯುದ್ಧ ಪ್ರಾರಂಭವಾದಾಗಿನಿಂದ, ಹೌತಿಗಳು ನಿಯಮಿತವಾಗಿ ಇಸ್ರೇಲ್ ಮೇಲೆ ಕ್ಷಿಪಣಿಗಳನ್ನು ಉಡಾಯಿಸುತ್ತಿದ್ದಾರೆ ಮತ್ತು ಕೆಂಪು ಸಮುದ್ರ ಮತ್ತು ಅಡೆನ್ ಕೊಲ್ಲಿಯಲ್ಲಿ ವಾಣಿಜ್ಯ ಹಡಗುಗಳನ್ನು ಗುರಿಯಾಗಿಸಿಕೊಂಡಿದ್ದಾರೆ. ಹೌತಿಗಳು ಪ್ಯಾಲೆಸ್ತೀನಿಯರನ್ನು ಬೆಂಬಲಿಸುವುದಾಗಿ ಹೇಳಿಕೊಂಡಿದ್ದಾರೆ.

ಇದಕ್ಕೆ ಪ್ರತಿಯಾಗಿ, ಇಸ್ರೇಲ್ ಯೆಮನ್‌ನ ಹೌತಿ ಹಿಡಿತದಲ್ಲಿರುವ ಪ್ರದೇಶಗಳ ಮೇಲೆ ವಾಯುದಾಳಿಗಳನ್ನು ನಡೆಸುತ್ತಿದೆ.

ಉಕ್ರೇನ್‌ನಲ್ಲಿ ನಡೆಯುತ್ತಿರುವುದು ‘ಮೋದಿ ಯುದ್ಧ’: ಅಮೆರಿಕ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....