Homeಅಂತರಾಷ್ಟ್ರೀಯಯೆಮನ್ | ಇಸ್ರೇಲ್ ದಾಳಿಯಲ್ಲಿ ಹೌತಿ ಸರ್ಕಾರದ ಪ್ರಧಾನಿ, ಹಲವು ಸಚಿವರು ಸಾವು: ವರದಿ

ಯೆಮನ್ | ಇಸ್ರೇಲ್ ದಾಳಿಯಲ್ಲಿ ಹೌತಿ ಸರ್ಕಾರದ ಪ್ರಧಾನಿ, ಹಲವು ಸಚಿವರು ಸಾವು: ವರದಿ

- Advertisement -
- Advertisement -

ಯೆಮನ್‌ ರಾಜಧಾನಿ ಸನಾ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ ಹೌತಿ ಸರ್ಕಾರದ ಪ್ರಧಾನಿ ಅಹ್ಮದ್ ಗಲೇಬ್ ನಾಸರ್ ಅಲ್-ರಹಾವಿ ಮತ್ತು ಹಲವು ಸಚಿವರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ.

ಕಳೆದ ಗುರುವಾರ (ಆ.28) ಇಸ್ರೇಲ್ ದಾಳಿ ನಡೆಸಿದೆ. ಈ ದಾಳಿಯಲ್ಲಿ ಪ್ರಧಾನಿ ರಹಾವಿ, ಸಚಿವರು ಮತ್ತು ಅಧಿಕಾರಿಗಳು ಸಾವನ್ನಪ್ಪಿದ್ದಾರೆ ಎಂಬುವುದನ್ನು ಹೌತಿ ದೃಢಪಡಿಸಿದೆ ಎಂದು ಬಿಬಿಸಿ ಭಾನುವಾರ(31) ವರದಿ ಮಾಡಿದೆ.

ಸನಾ ಪ್ರದೇಶದಲ್ಲಿ ಸಭೆಯೊಂದರ ಮೇಲೆ ಇಸ್ರೇಲಿ ಫೈಟರ್ ಜೆಟ್‌ಗಳು ದಾಳಿ ನಡೆಸಿದ್ದು, ಹೌತಿ ಆಡಳಿತದ ಪ್ರಧಾನಿ ರಹಾವಿ ಮತ್ತು ಇತರ ಹಿರಿಯ ಹೌತಿ ಅಧಿಕಾರಿಗಳನ್ನು ಹತ್ಯೆ ಮಾಡಲಾಗಿದೆ ಎಂದು ಇಸ್ರೇಲ್‌ನ ಐಡಿಎಫ್ ಕೂಡ ಹೇಳಿದೆ.

ವರದಿಗಳ ಪ್ರಕಾರ, ವಿನಾಶಕಾರಿ ಅಂತರ್ಯುದ್ಧ ನಡೆದು ಯೆಮನ್‌ ರಾಜಧಾನಿ ಸನಾದಿಂದ ಅಧಿಕೃತ ಸರ್ಕಾರದ ಆಡಳಿತವನ್ನು ಕಿತ್ತು ಹಾಕಿದ ಬಳಿಕ, 2014 ರಿಂದ ಹೌತಿಗಳು ವಾಯುವ್ಯ ಯೆಮೆನ್‌ನ ಹೆಚ್ಚಿನ ಭಾಗವನ್ನು ತಮ್ಮ ನಿಯಂತ್ರಣದಲ್ಲಿಟ್ಟುಕೊಂಡಿದ್ದಾರೆ.

ತಮ್ಮ ಪ್ರಧಾನಿ ರಹಾವಿ ಮತ್ತು ಸಚಿವರು ಇಸ್ರೇಲ್ ದಾಳಿಯಲ್ಲಿ ಹತ್ಯೆಯಾಗಿದ್ದಾರೆ ಎಂದು ಹೌತಿ ಹೇಳಿಕೊಂಡಿದೆ. ಮೃತ ಸಚಿವರ ಹೆಸರು ತಿಳಿಸಿಲ್ಲ.

ಸೌದಿ ಅರೇಬಿಯಾದ ಸುದ್ದಿ ತಾಣ ಅಲ್-ಹದತ್ ವರದಿ ಮಾಡಿರುವ ಪ್ರಕಾರ, ಹೌತಿಗಳ ವಿದೇಶಾಂಗ ಸಚಿವರು, ನ್ಯಾಯ, ಯುವಜನ ಮತ್ತು ಕ್ರೀಡೆ, ಸಾಮಾಜಿಕ ವ್ಯವಹಾರಗಳು ಮತ್ತು ಕಾರ್ಮಿಕ ಸಚಿವರು ಕೊಲ್ಲಲ್ಪಟ್ಟಿದ್ದಾರೆ.

ಇಸ್ರೇಲ್ ದಾಳಿಯಲ್ಲಿ ಹಲವಾರು ಇತರ ಸಚಿವರು ಕೂಡ ಸಾಧಾರಣ ಮತ್ತು ಗಂಭೀರ ಗಾಯಗಳಿಗೆ ಒಳಗಾಗಿದ್ದಾರೆ ಎಂದು ಹೌತಿಗಳ ಅಧ್ಯಕ್ಷ ಮಹ್ದಿ ಅಲ್-ಮಶಾತ್ ಅವರ ಕಚೇರಿಯನ್ನು ಉಲ್ಲೇಖಿಸಿ ಬಿಬಿಸಿ ವರದಿ ಮಾಡಿದೆ.

ಪ್ರಧಾನಿ ಹತ್ಯೆಯಾಗಿರುವ ಹಿನ್ನೆಲೆ ಉಪ ಪ್ರಧಾನಿ ಮುಹಮ್ಮದ್ ಅಹ್ಮದ್ ಮಿಫ್ತಾ ಅವರು ಪ್ರಧಾನಿ ಸ್ಥಾನ ಅಲಂಕರಿಸಲಿದ್ದಾರೆ ಎಂದು ಹೌತಿ ಹೇಳಿದೆ.

ರಹಾವಿ ಆಗಸ್ಟ್ 2024ರಿಂದ ಹೌತಿ ಆಡಳಿತದ ಪ್ರಧಾನಿಯಾಗಿದ್ದರು. ಅದಕ್ಕೂ ಮುನ್ನ ಮಿಲಿಟರಿ ಕಾರ್ಯಾಚರಣೆಗಳನ್ನು ಯೋಜಿಸುವ ಉನ್ನತ ನಿರ್ಧಾರ ತೆಗೆದುಕೊಳ್ಳುವ ತಂಡದ ಭಾಗವಾಗುವ ಬದಲು ಹೌತಿ ಚಳವಳಿಯ ಪ್ರಮುಖ ವ್ಯಕ್ತಿಯಾಗಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದರು ಎಂದು ವರದಿಗಳು ಹೇಳಿವೆ.

ಗುರುವಾರದ ದಾಳಿಯಲ್ಲಿ ಹೌತಿ ಚಳುವಳಿಯ ಅಂತಿಮ ನಾಯಕ ಅಬ್ದುಲ್-ಮಲಿಕ್ ಅಲ್-ಹೌತಿ, ಹಾಗೆಯೇ ಗುಂಪಿನ ರಕ್ಷಣಾ ಸಚಿವರು ಮತ್ತು ಸಿಬ್ಬಂದಿ ಮುಖ್ಯಸ್ಥರು ಸಾವನ್ನಪ್ಪಿದ್ದಾರೆಯೇ ಎಂಬುವುದರ ಬಗ್ಗೆ ಖಚಿತ ಮಾಹಿತಿ ದೊರೆತಿಲ್ಲ.

ಹೌತಿ ಸಭೆಯ ಬಗ್ಗೆ ಗುಪ್ತಚರ ಮಾಹಿತಿ ಪಡೆದ ‘ಕೆಲವೇ ಗಂಟೆಗಳಲ್ಲಿ’ ದಾಳಿ ನಡೆಸಲಾಗಿದೆ ಎಂದು ಐಡಿಎಫ್ ಶನಿವಾರ ತಡರಾತ್ರಿ ಹೇಳಿಕೆಯಲ್ಲಿ ತಿಳಿಸಿದೆ. ಕಾರ್ಯಾಚರಣೆಯ ಸಂಪೂರ್ಣ ಪರಿಣಾಮವನ್ನು ಇನ್ನೂ ನಿರ್ಣಯಿಸಲಾಗುತ್ತಿದೆ ಎಂದು ಅದು ಹೇಳಿದೆ.

ಗಾಝಾದಲ್ಲಿ ಇಸ್ರೇಲ್ ಮತ್ತು ಹಮಾಸ್ ನಡುವಿನ ಯುದ್ಧ ಪ್ರಾರಂಭವಾದಾಗಿನಿಂದ, ಹೌತಿಗಳು ನಿಯಮಿತವಾಗಿ ಇಸ್ರೇಲ್ ಮೇಲೆ ಕ್ಷಿಪಣಿಗಳನ್ನು ಉಡಾಯಿಸುತ್ತಿದ್ದಾರೆ ಮತ್ತು ಕೆಂಪು ಸಮುದ್ರ ಮತ್ತು ಅಡೆನ್ ಕೊಲ್ಲಿಯಲ್ಲಿ ವಾಣಿಜ್ಯ ಹಡಗುಗಳನ್ನು ಗುರಿಯಾಗಿಸಿಕೊಂಡಿದ್ದಾರೆ. ಹೌತಿಗಳು ಪ್ಯಾಲೆಸ್ತೀನಿಯರನ್ನು ಬೆಂಬಲಿಸುವುದಾಗಿ ಹೇಳಿಕೊಂಡಿದ್ದಾರೆ.

ಇದಕ್ಕೆ ಪ್ರತಿಯಾಗಿ, ಇಸ್ರೇಲ್ ಯೆಮನ್‌ನ ಹೌತಿ ಹಿಡಿತದಲ್ಲಿರುವ ಪ್ರದೇಶಗಳ ಮೇಲೆ ವಾಯುದಾಳಿಗಳನ್ನು ನಡೆಸುತ್ತಿದೆ.

ಉಕ್ರೇನ್‌ನಲ್ಲಿ ನಡೆಯುತ್ತಿರುವುದು ‘ಮೋದಿ ಯುದ್ಧ’: ಅಮೆರಿಕ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...