Homeಅಂತರಾಷ್ಟ್ರೀಯಯೆಮನ್ | ಇಸ್ರೇಲ್ ದಾಳಿಯಲ್ಲಿ ಹೌತಿ ಸರ್ಕಾರದ ಪ್ರಧಾನಿ, ಹಲವು ಸಚಿವರು ಸಾವು: ವರದಿ

ಯೆಮನ್ | ಇಸ್ರೇಲ್ ದಾಳಿಯಲ್ಲಿ ಹೌತಿ ಸರ್ಕಾರದ ಪ್ರಧಾನಿ, ಹಲವು ಸಚಿವರು ಸಾವು: ವರದಿ

- Advertisement -
- Advertisement -

ಯೆಮನ್‌ ರಾಜಧಾನಿ ಸನಾ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ ಹೌತಿ ಸರ್ಕಾರದ ಪ್ರಧಾನಿ ಅಹ್ಮದ್ ಗಲೇಬ್ ನಾಸರ್ ಅಲ್-ರಹಾವಿ ಮತ್ತು ಹಲವು ಸಚಿವರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ.

ಕಳೆದ ಗುರುವಾರ (ಆ.28) ಇಸ್ರೇಲ್ ದಾಳಿ ನಡೆಸಿದೆ. ಈ ದಾಳಿಯಲ್ಲಿ ಪ್ರಧಾನಿ ರಹಾವಿ, ಸಚಿವರು ಮತ್ತು ಅಧಿಕಾರಿಗಳು ಸಾವನ್ನಪ್ಪಿದ್ದಾರೆ ಎಂಬುವುದನ್ನು ಹೌತಿ ದೃಢಪಡಿಸಿದೆ ಎಂದು ಬಿಬಿಸಿ ಭಾನುವಾರ(31) ವರದಿ ಮಾಡಿದೆ.

ಸನಾ ಪ್ರದೇಶದಲ್ಲಿ ಸಭೆಯೊಂದರ ಮೇಲೆ ಇಸ್ರೇಲಿ ಫೈಟರ್ ಜೆಟ್‌ಗಳು ದಾಳಿ ನಡೆಸಿದ್ದು, ಹೌತಿ ಆಡಳಿತದ ಪ್ರಧಾನಿ ರಹಾವಿ ಮತ್ತು ಇತರ ಹಿರಿಯ ಹೌತಿ ಅಧಿಕಾರಿಗಳನ್ನು ಹತ್ಯೆ ಮಾಡಲಾಗಿದೆ ಎಂದು ಇಸ್ರೇಲ್‌ನ ಐಡಿಎಫ್ ಕೂಡ ಹೇಳಿದೆ.

ವರದಿಗಳ ಪ್ರಕಾರ, ವಿನಾಶಕಾರಿ ಅಂತರ್ಯುದ್ಧ ನಡೆದು ಯೆಮನ್‌ ರಾಜಧಾನಿ ಸನಾದಿಂದ ಅಧಿಕೃತ ಸರ್ಕಾರದ ಆಡಳಿತವನ್ನು ಕಿತ್ತು ಹಾಕಿದ ಬಳಿಕ, 2014 ರಿಂದ ಹೌತಿಗಳು ವಾಯುವ್ಯ ಯೆಮೆನ್‌ನ ಹೆಚ್ಚಿನ ಭಾಗವನ್ನು ತಮ್ಮ ನಿಯಂತ್ರಣದಲ್ಲಿಟ್ಟುಕೊಂಡಿದ್ದಾರೆ.

ತಮ್ಮ ಪ್ರಧಾನಿ ರಹಾವಿ ಮತ್ತು ಸಚಿವರು ಇಸ್ರೇಲ್ ದಾಳಿಯಲ್ಲಿ ಹತ್ಯೆಯಾಗಿದ್ದಾರೆ ಎಂದು ಹೌತಿ ಹೇಳಿಕೊಂಡಿದೆ. ಮೃತ ಸಚಿವರ ಹೆಸರು ತಿಳಿಸಿಲ್ಲ.

ಸೌದಿ ಅರೇಬಿಯಾದ ಸುದ್ದಿ ತಾಣ ಅಲ್-ಹದತ್ ವರದಿ ಮಾಡಿರುವ ಪ್ರಕಾರ, ಹೌತಿಗಳ ವಿದೇಶಾಂಗ ಸಚಿವರು, ನ್ಯಾಯ, ಯುವಜನ ಮತ್ತು ಕ್ರೀಡೆ, ಸಾಮಾಜಿಕ ವ್ಯವಹಾರಗಳು ಮತ್ತು ಕಾರ್ಮಿಕ ಸಚಿವರು ಕೊಲ್ಲಲ್ಪಟ್ಟಿದ್ದಾರೆ.

ಇಸ್ರೇಲ್ ದಾಳಿಯಲ್ಲಿ ಹಲವಾರು ಇತರ ಸಚಿವರು ಕೂಡ ಸಾಧಾರಣ ಮತ್ತು ಗಂಭೀರ ಗಾಯಗಳಿಗೆ ಒಳಗಾಗಿದ್ದಾರೆ ಎಂದು ಹೌತಿಗಳ ಅಧ್ಯಕ್ಷ ಮಹ್ದಿ ಅಲ್-ಮಶಾತ್ ಅವರ ಕಚೇರಿಯನ್ನು ಉಲ್ಲೇಖಿಸಿ ಬಿಬಿಸಿ ವರದಿ ಮಾಡಿದೆ.

ಪ್ರಧಾನಿ ಹತ್ಯೆಯಾಗಿರುವ ಹಿನ್ನೆಲೆ ಉಪ ಪ್ರಧಾನಿ ಮುಹಮ್ಮದ್ ಅಹ್ಮದ್ ಮಿಫ್ತಾ ಅವರು ಪ್ರಧಾನಿ ಸ್ಥಾನ ಅಲಂಕರಿಸಲಿದ್ದಾರೆ ಎಂದು ಹೌತಿ ಹೇಳಿದೆ.

ರಹಾವಿ ಆಗಸ್ಟ್ 2024ರಿಂದ ಹೌತಿ ಆಡಳಿತದ ಪ್ರಧಾನಿಯಾಗಿದ್ದರು. ಅದಕ್ಕೂ ಮುನ್ನ ಮಿಲಿಟರಿ ಕಾರ್ಯಾಚರಣೆಗಳನ್ನು ಯೋಜಿಸುವ ಉನ್ನತ ನಿರ್ಧಾರ ತೆಗೆದುಕೊಳ್ಳುವ ತಂಡದ ಭಾಗವಾಗುವ ಬದಲು ಹೌತಿ ಚಳವಳಿಯ ಪ್ರಮುಖ ವ್ಯಕ್ತಿಯಾಗಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದರು ಎಂದು ವರದಿಗಳು ಹೇಳಿವೆ.

ಗುರುವಾರದ ದಾಳಿಯಲ್ಲಿ ಹೌತಿ ಚಳುವಳಿಯ ಅಂತಿಮ ನಾಯಕ ಅಬ್ದುಲ್-ಮಲಿಕ್ ಅಲ್-ಹೌತಿ, ಹಾಗೆಯೇ ಗುಂಪಿನ ರಕ್ಷಣಾ ಸಚಿವರು ಮತ್ತು ಸಿಬ್ಬಂದಿ ಮುಖ್ಯಸ್ಥರು ಸಾವನ್ನಪ್ಪಿದ್ದಾರೆಯೇ ಎಂಬುವುದರ ಬಗ್ಗೆ ಖಚಿತ ಮಾಹಿತಿ ದೊರೆತಿಲ್ಲ.

ಹೌತಿ ಸಭೆಯ ಬಗ್ಗೆ ಗುಪ್ತಚರ ಮಾಹಿತಿ ಪಡೆದ ‘ಕೆಲವೇ ಗಂಟೆಗಳಲ್ಲಿ’ ದಾಳಿ ನಡೆಸಲಾಗಿದೆ ಎಂದು ಐಡಿಎಫ್ ಶನಿವಾರ ತಡರಾತ್ರಿ ಹೇಳಿಕೆಯಲ್ಲಿ ತಿಳಿಸಿದೆ. ಕಾರ್ಯಾಚರಣೆಯ ಸಂಪೂರ್ಣ ಪರಿಣಾಮವನ್ನು ಇನ್ನೂ ನಿರ್ಣಯಿಸಲಾಗುತ್ತಿದೆ ಎಂದು ಅದು ಹೇಳಿದೆ.

ಗಾಝಾದಲ್ಲಿ ಇಸ್ರೇಲ್ ಮತ್ತು ಹಮಾಸ್ ನಡುವಿನ ಯುದ್ಧ ಪ್ರಾರಂಭವಾದಾಗಿನಿಂದ, ಹೌತಿಗಳು ನಿಯಮಿತವಾಗಿ ಇಸ್ರೇಲ್ ಮೇಲೆ ಕ್ಷಿಪಣಿಗಳನ್ನು ಉಡಾಯಿಸುತ್ತಿದ್ದಾರೆ ಮತ್ತು ಕೆಂಪು ಸಮುದ್ರ ಮತ್ತು ಅಡೆನ್ ಕೊಲ್ಲಿಯಲ್ಲಿ ವಾಣಿಜ್ಯ ಹಡಗುಗಳನ್ನು ಗುರಿಯಾಗಿಸಿಕೊಂಡಿದ್ದಾರೆ. ಹೌತಿಗಳು ಪ್ಯಾಲೆಸ್ತೀನಿಯರನ್ನು ಬೆಂಬಲಿಸುವುದಾಗಿ ಹೇಳಿಕೊಂಡಿದ್ದಾರೆ.

ಇದಕ್ಕೆ ಪ್ರತಿಯಾಗಿ, ಇಸ್ರೇಲ್ ಯೆಮನ್‌ನ ಹೌತಿ ಹಿಡಿತದಲ್ಲಿರುವ ಪ್ರದೇಶಗಳ ಮೇಲೆ ವಾಯುದಾಳಿಗಳನ್ನು ನಡೆಸುತ್ತಿದೆ.

ಉಕ್ರೇನ್‌ನಲ್ಲಿ ನಡೆಯುತ್ತಿರುವುದು ‘ಮೋದಿ ಯುದ್ಧ’: ಅಮೆರಿಕ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...