Homeಅಂತರಾಷ್ಟ್ರೀಯಸೌದಿ ಮೇಲೆ ಯೆಮನ್ ದಾಳಿ: ಭಾರತದಲ್ಲಿ ಪೆಟ್ರೋಲ್ ಡೀಸೆಲ್ ದುಬಾರಿ

ಸೌದಿ ಮೇಲೆ ಯೆಮನ್ ದಾಳಿ: ಭಾರತದಲ್ಲಿ ಪೆಟ್ರೋಲ್ ಡೀಸೆಲ್ ದುಬಾರಿ

ಮೋದಿ ಅಧಿಕಾರಕ್ಕೆ ಬರುವುದಾದರೆ ಒಂದು ಲೀಟರ್ ಪೆಟ್ರೋಲಿಗೆ 100 ರೂ. ಬೇಕಾದರೂ ಕೊಡುತ್ತೇವೆ ಎಂಬ ಭಕ್ತರ ಭಂಡ ಭವಿಷ್ಯ ಸದ್ಯವೇ ನಿಜವಾಗುವ ಲಕ್ಷಣಗಳಿವೆ.

- Advertisement -
- Advertisement -

ಮೋದಿ ಅಧಿಕಾರಕ್ಕೆ ಬಂದಂದಿನಿಂದಲೂ ಅಂತರರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಛಾ ತೈಲದ ಬೆಲೆ ಕಡಿಮೆ ಇದ್ದುದರ ಹೊರತಾಗಿಯೂ ಸರಕಾರ ಭಾರತೀಯ ಗ್ರಾಹಕರಿಗೆ ದುಬಾರಿ ದರದಲ್ಲಿ ಪೆಟ್ರೋಲ್ ಮತ್ತು ಡೀಸೆಲನ್ನು ಮಾರುತ್ತಾ ಬಂದಿದೆ. ಅರ್ಧ ದಶಕಕಾಲದಿಂದಲೂ ದಾಖಲೆ ಪ್ರಮಾಣದಲ್ಲಿ ಕಡಿಮೆಯಿದ್ದ ಕಚ್ಛಾ ತೈಲದ ಬೆಲೆಯು ಸೌದಿ ಅರೇಬಿಯಾದಲ್ಲಿ ತೆರೆದುಕೊಳ್ಳುತ್ತಿರುವ ಇತ್ತೀಚಿನ ಬೆಳವಣಿಗೆಗಳ ಕಾರಣದಿಂದ ಭಾರೀ ಪ್ರಮಾಣದಲ್ಲಿ ಏರುವ ಸಾಧ್ಯತೆ ಇದೆ.

ಸೌದಿ ಅರೇಬಿಯಾದ ಅಬ್ಖೈಕ್ (ಪ್ರಪಂಚದಲ್ಲಿಯೇ ಅತೀದೊಡ್ಡ) ಮತ್ತು ಖುರೈಸ್‍ನಲ್ಲಿರುವ ಎರಡು ತೈಲ ಸಂಸ್ಕರಣಾ ಘಟಕಗಳ ಮೇಲೆ ಯೆಮೆನ್‍ನ ಹೌಥಿ ಬಂಡುಕೋರರು ಡ್ರೋನ್ ಮೂಲಕ ದಾಳಿ ನಡೆಸಿದ್ದಾರೆ. ಈ ದಾಳಿಗಳ ಪರಿಣಾಮವಾಗಿ ತೈಲಬೆಲೆ ದಾಖಲೆಯ 20 ಶೇಕಡಾ ನೆಗೆತ ಕಂಡಿದೆ. ಕೊಲ್ಲಿ ಯುದ್ಧದ ಸಂದರ್ಭದಲ್ಲಿ, ಅಂದರೆ, ಜನವರಿ 14, 1991ರ ನಂತರ ಇತಿಹಾಸದಲ್ಲಿಯೇ ಎರಡನೇ ಅತಿದೊಡ್ಡ ಪ್ರಮಾಣದ ಏರಿಕೆ ಇದಾಗಿದೆ. ತೈಲ ಬೆಲೆ ಈಗಿರುವ ಬ್ಯಾರಲ್‍ಗೆ 54 ಡಾಲರ್ ಮಟ್ಟದಿಂದ ಬ್ಯಾರಲ್‍ಗೆ 100 ಡಾಲರ್‍ಗೂ ಹೆಚ್ಚಿನ ಮಟ್ಟಕ್ಕೆ ಏರುವ ನಿರೀಕ್ಷೆ ಇದೆ.

ಸೆಪ್ಟೆಂಬರ್ 14ರಂದು ಯೆಮೆನಿ ಹೌಥಿ ಬಂಡುಕೋರರು ಹಾರಿಸಿದ ಡ್ರೋನ್ ಅಥವಾ ಕ್ರೂಸ್ ಕ್ಷಿಪಣಿಗಳಿಂದ ಅಬ್ಖೈಕ್‍ನಲ್ಲಿರುವ ಪ್ರಪಂಚದ ಅತ್ಯಂತ ದೊಡ್ಡ ತೈಲ ಸ್ಥಿರೀಕರಣ ಸೌಲಭ್ಯಕ್ಕೆ ಬೆಂಕಿ ಹತ್ತಿಕೊಂಡಿದೆ. ಸ್ಥಿರೀಕರಣವೆಂದರೆ, ಕಚ್ಛಾ ತೈಲವನ್ನು ಭಾಗಶಃ ಸಂಸ್ಕರಿಸಿ, ಅದರಲ್ಲಿ ಇರುವ ಹೈಡ್ರೋಜನ್ ಸಲ್ಫೈಡ್ ಅಂಶವನ್ನು ತೆಗೆದು, ಆವಿಯ ಒತ್ತಡವನ್ನು ಕಡಿಮೆ ಮಾಡುವ ಪ್ರಕ್ರಿಯೆ. ಇದರಿಂದ ಟ್ಯಾಂಕರ್ ಹಡಗುಗಳಲ್ಲಿ ತೈಲದ ಸಾಗಾಟ ಸುರಕ್ಷಿತವಾಗುತ್ತದೆ.

ಸೌದಿ ಸರಕಾರಿ ಸ್ವಾಮ್ಯದ ‘ಅರಾಮ್ಕೋ’ಗೆ ಸೇರಿದ ಈ ತೈಲ ಮತ್ತು ಅನಿಲ ಸಂಸ್ಕರಣಾ ಕೇಂದ್ರವು ಪ್ರಪಂಚದಲ್ಲಿಯೇ ಅತ್ಯಂತ ದೊಡ್ಡ ಘಟಕವಾಗಿದ್ದು, ಅದು ಪ್ರಪಂಚದ ಅತ್ಯಂತ ದೊಡ್ಡ ಸಾಂಪ್ರದಾಯಿಕ ತೈಲ ಕ್ಷೇತ್ರವಾದ ಘವರ್ ಕ್ಷೇತ್ರವನ್ನು ನಿರ್ವಹಿಸುತ್ತದೆ. ಅಲ್ಲದೆ ರಫ್ತು ಟರ್ಮಿನಲ್‍ಗಳಾದ ರಾಸ್ ತನುರಾ (ಪ್ರಪಂಚದಲ್ಲಿಯೇ ಅತ್ಯಂತ ದೊಡ್ಡ ಸಮುದ್ರ ಮಧ್ಯದ ತೈಲ ಲೋಡಿಂಗ್ ಸೌಲಭ್ಯ) ಮತ್ತು ಜುಆಯಿಮಾಗೆ ತೈಲ ಪೂರೈಸುತ್ತದೆ. ಅಬ್ಖೈಕ್ ಪ್ರತಿದಿನ 68 ಲಕ್ಷ ಬ್ಯಾರಲ್ ತೈಲ ಸಂಸ್ಕರಿಸುತ್ತದೆ. ಸೌದಿಯ ತೈಲ ಮತ್ತು ಅನಿಲ ಉತ್ಪಾದನೆಯ ಮೂರನೇ ಎರಡರಷ್ಟು ಭಾಗ ಈ ಘಟಕದ ಮೂಲಕವೇ ಸಾಗುತ್ತದೆ.


ದಾಳಿಯ ಎರಡನೇ ಗುರಿ – ದೇಶದ ಎರಡನೇ ಅತಿದೊಡ್ಡ ತೈಲ ಕ್ಷೇತ್ರದ ಬಳಿ ಇರುವ, ದಿನಕ್ಕೆ 18 ಲಕ್ಷ ಬ್ಯಾರಲ್ ತೈಲ ಸಂಸ್ಕರಿಸುವ ಖುರೈಸ್ ಘಟಕ. ಈ ಎರಡೂ ಘಟಕಗಳು ಯೆಮೆನ್‍ನಿಂದ 1000 ಕಿ.ಮೀ.ಗೂ ಹೆಚ್ಚು ದೂರದಲ್ಲಿವೆ. ಅಬ್ಖೈಕ್‍ನ 17 ಸ್ಥಳಗಳು ಉರಿಯುತ್ತಿವೆಯಾದರೂ, ಒಟ್ಟು ಎಷ್ಟು ಹಾನಿ, ನಾಶ ಸಂಭವಿಸಿದೆ ಎಂದು ಇನ್ನೂ ಸ್ಪಷ್ಟವಾಗಿಲ್ಲ.

ಪ್ರಪಂಚದ ಅತ್ಯಂತ ಬಡದೇಶಗಳಲ್ಲಿ ಒಂದಾಗಿರುವ ಯೆಮೆನ್, 2015ರಿಂದಲೂ ಸೌದಿ ಮತ್ತು ಯುಎಇ, ಪಾಶ್ಚಾತ್ಯ ಶಸ್ತ್ರಾಸ್ತ್ರಗಳ ಬೆಂಬಲದೊಂದಿಗೆ ನಡೆಸುತ್ತಿರುವ ಬರ್ಬರ ಯುದ್ಧವನ್ನು ಎದುರಿಸುತ್ತಿದೆ. ಹಾಗಾಗಿ ಅದಕ್ಕೆ ಪ್ರತಿರೋಧವಾಗಿ ಈ ದಾಳಿಗಳ ಹೊಣೆಯನ್ನು ಹೊತ್ತುಕೊಂಡಿದೆ. ಸೌದಿಯ ಬಾಂಬ್ ದಾಳಿ ಮತ್ತು ದಿಗ್ಬಂಧನದ ಪರಿಣಾಮವಾಗಿ ಯೆಮೆನ್‍ನ ಮೂರನೇ ಎರಡರಷ್ಟು ಪ್ರಜೆಗಳು ನಿರಾಶ್ರಿತರಾಗಿದ್ದು, ತೀವ್ರ ಅಪೌಷ್ಠಿಕತೆಯ ಹೊಸ್ತಿಲಲ್ಲಿದ್ದಾರೆ.

ಅಮೆರಿಕ ಪ್ರತಿಕ್ರಿಯೆ
ಇರಾನ್ ವಿರುದ್ಧದ ಅಮೆರಿಕ ಮತ್ತು ಸೌದಿ ನೇತೃತ್ವದ ಮಿತ್ರಕೂಟವು ಈ ಅವಕಾಶವನ್ನು ಇರಾನ್ ವಿರುದ್ಧ ದಾಳಿಯನ್ನು ಹೆಚ್ಚಿಸಲು ಬಳಸುತ್ತಿದೆ. ಯುಎಸ್‍ಎಯ ರಾಜ್ಯಾಂಗ ಕಾರ್ಯದರ್ಶಿ ಮೈಕ್ ಪೋಂಪಿಯೋ ನೇರವಾಗಿ ಇರಾನನ್ನು ಹೊಣೆ ಮಾಡಿದ್ದರೆ, ಅಧ್ಯಕ್ಷ ಟ್ರಂಪ್ ಇದನ್ನೇ ಎರಡು ಬಾರಿ ಟ್ವೀಟ್ ಮಾಡಿದ್ದಾರೆ. ಒಬ್ಬ ಸೆನೆಟರ್ ಅಂತೂ ಇರಾನಿನ ತೈಲಕ್ಷೇತ್ರಗಳ ಮೇಲೆ ಬಾಂಬ್ ದಾಳಿ ಮಾಡುವ ಸಲಹೆಯನ್ನೂ ನೀಡಿದ್ದಾರೆ. ಇರಾನಿನ ವಿದೇಶಾಂಗ ಮಂತ್ರಿ ಎಂ.ಜೆ. ಝರೀಫ್, ಪೋಂಪಿಯೋ ಆರೋಪವನ್ನು ಸಾರಾಸಗಟಾಗಿ ನಿರಾಕರಿಸಿದ್ದಾರೆ. ಹೌಥಿಗಳು ನಡೆಸಿದ ದಾಳಿಗೆ ಇರಾನನ್ನು ಹೊಣೆ ಮಾಡುವ ಮೂಲಕ ಯುಎಸ್‍ಎ ತನ್ನ ‘ಗರಿಷ್ಟ ಒತ್ತಡ’ದ ವಿಫಲ ಧೋರಣೆಯಿಂದ ಹಿಂದೆ ಸರಿದು, ‘ಗರಿಷ್ಟ ಸಂಚಿನ’ ಧೋರಣೆ ಅನುಸರಿಸುತ್ತಿದೆ ಎಂದು ಅವರು ಪ್ರತ್ಯಾರೋಪ ಮಾಡಿದ್ದಾರೆ.

ಸೌದಿಯ ಮೇಲಿನ ದಾಳಿಗಳ ಕುರಿತು ಆತಂಕ ವ್ಯಕ್ತಪಡಿಸಿರುವ ರಷ್ಯಾ ಮತ್ತು ಚೀನಾ, ಅವಸರದ ತೀರ್ಮಾನಗಳ ಕುರಿತು ಎಚ್ಚರಿಕೆ ನೀಡಿವೆ. ಯಾವುದೇ ತನಿಖೆ ಅಥವಾ ಸಾಕ್ಷ್ಯಾಧಾರಗಳು ಇಲ್ಲದೇ ಯುಎಸ್‍ಎಯ ಬಹಿರಂಗ ಮಿಲಿಟರಿ ಮಾತುಗಳು ಸ್ವೀಕಾರಾರ್ಹವಲ್ಲ ಎಂದು ಎರಡೂ ದೇಶಗಳ ವಿದೇಶಾಂಗ ಖಾತೆಗಳ ವಕ್ತಾರರು ಹೇಳಿಕೆ ನೀಡಿದ್ದಾರೆ. ರಷ್ಯಾದ ವಕ್ತಾರರು ಇನ್ನೂ ಮುಂದುವರಿದು, ಈ ದಾಳಿಗಳು ಯೆಮೆನ್‍ನಲ್ಲಿ ಮುಂದುವರಿಯುತ್ತಿರುವ ಬಿಕ್ಕಟ್ಟಿನ ನೇರ ಪರಿಣಾಮ’ ಎಂದು ಬಣ್ಣಿಸಿದ್ದಾರೆ.

“ಸೌದಿ ಅರೇಬಿಯಾ ನಮ್ಮ ಕ್ಷಿಪಣಿಗಳ ಖರೀದಿ ಪಟ್ಟಿಯು ಅದರ ಭದ್ರತೆಗೆ ಬೆದರಿಕೆ ಎಂಬ ನೆಪವೊಡ್ಡಿ ಯೆಮೆನ್‍ನ ಮೇಲೆ ಯುದ್ಧ ಸಾರಿತು. ಈಗ ನಾವು ಅವರ ತೈಲ ಕ್ಷೇತ್ರಗಳ ಮೇಲೆ ದಾಳಿ ನಡೆಸಿದಾಗ, ಅವರು ಯೆಮೆನನ್ನು ಬಿಟ್ಟು ಬೇರೆಯವರು ಇದನ್ನು ಮಾಡಿದ್ದಾರೆ ಎಂದು ದೂರಿದಾಗ ಆಶ್ಚರ್ಯವಾಗುತ್ತದೆ. ಇದು ಅವರ ಹೇಡಿತನವನ್ನು ತೋರಿಸುತ್ತದೆ” ಎಂದು ಹೌಥಿಗಳ ಅತ್ಯುನ್ನತ ರಾಜಕೀಯ ಮಂಡಳಿಯ ಸದಸ್ಯ ಮೊಹಮ್ಮದ್ ಅಲ್-ಬುಖೈತಿ ಹೇಳಿದ್ದಾರೆ.

ಇರಾನ್ ಮತ್ತು ನಂತರದಲ್ಲಿ ವೆನೆಜ್ಯೂಯೆಲಾ ವಿರುದ್ಧ ಅಮೆರಿಕದ ಏಕಪಕ್ಷೀಯ ಮತ್ತು ಕಾನೂನುಬಾಹಿರ ದಿಗ್ಬಂಧನ ಕಳೆದ ನವೆಂಬರ್‍ನಿಂದಲೇ ಜಾರಿಗೆ ಬಂದಿದೆ. ಅಲ್ಲಿಂದ ನಂತರ ಈ ಎರಡು ಬಿಕ್ಕಟ್ಟುಗಳು ಪ್ರಪಂಚವನ್ನು ಈಗಾಗಲೇ ತೈಲ ಮಾರುಕಟ್ಟೆಯ ಅಸ್ಥಿರತೆಯತ್ತ ತಳ್ಳಿವೆ. ಭಾರತವು ಅಮೆರಿಕದ ಒತ್ತಡಕ್ಕೆ ಮಣಿದು, ಏಪ್ರಿಲ್ 2019ರಿಂದ ಇರಾನಿನಿಂದ ತೈಲ ಖರೀದಿಯನ್ನು ನಿಲ್ಲಿಸಿತು. ಸೌದಿಯಿಂದಲೇ ಹೆಚ್ಚು ಆಮದು ಮಾಡಿಕೊಳ್ಳುತ್ತಿತ್ತು. ಆದುದರಿಂದ, ಒಂದು ಕಡೆ ಸೌದಿ ತೈಲದ ಕುರಿತ ಅಮೆರಿಕದ ಸುಳ್ಳು ಭರವಸೆ ಮತ್ತು ಇನ್ನೊಂದು ಕಡೆ ಇರಾನಿಗೆ ಭಾರತ ಕೈಕೊಟ್ಟ ಪರಿಣಾಮವಾಗಿ ಈ ಬಿಕ್ಕಟ್ಟಿನಿಂದ ಭಾರತವು ಗರಿಷ್ಟ ಬಾಧಿತವಾಗಲಿದೆ. ಭಾರತದ ಜನರು ತೈಲ ಬೆಲೆ ಹೆಚ್ಚಳದ ಜೊತೆಗೆ, ಅದರ ಪರಿಣಾಮವಾಗಿ ಉಂಟಾಗುವ ಸರಕು ಬೆಲೆಯೇರಿಕೆಯ ಪರಿಣಾಮವನ್ನೂ ಎದುರಿಸಲಿದ್ದಾರೆ. ಮೋದಿ ಮತ್ತವರ ಮಂತ್ರಿಗಳನ್ನು ಈ ಕುರಿತ ಪ್ರಶ್ನೆಗಳಿಂದ ರಕ್ಷಿಸಲು ಅತಿರೇಕದ ಉಡಾಫೆಗಳಲ್ಲಿ ಹೆಚ್ಚಳವನ್ನೂ ನಾವು ಕಾಣಬಹುದು.

ಒಟ್ಟಾರೆ ಆರ್ಥಿಕತೆಯು ಕುಂಠಿತಗೊಳ್ಳುತ್ತಿರುವ, ಬೆಳವಣಿಗೆಯ ಸೂಚ್ಯಂಕಗಳು ಕುಸಿಯುತ್ತಿರುವ ಮತ್ತು ಭಾರೀ ಪ್ರಮಾಣದಲ್ಲಿ ನಿರುದ್ಯೋಗ ಹೆಚ್ಚಿರುವ ಈ ಹೊತ್ತಿನಲ್ಲಿ ಭಾರತಕ್ಕೆ ಈ ತೈಲ ಬೆಲೆ ಏರಿಕೆಯು ಉರಿಯುವ ಬೆಂಕಿಗೆ ಪೆಟ್ರೋಲ್ ಸುರಿದಂತಾಗಬಹುದು!

  • ಭರತ್ ಹೆಬ್ಬಾಳ್
    ಅನುವಾದ: ನಿಖಿಲ್ ಕೋಲ್ಪೆ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...