Homeಅಂತರಾಷ್ಟ್ರೀಯಸೌದಿ ಮೇಲೆ ಯೆಮನ್ ದಾಳಿ: ಭಾರತದಲ್ಲಿ ಪೆಟ್ರೋಲ್ ಡೀಸೆಲ್ ದುಬಾರಿ

ಸೌದಿ ಮೇಲೆ ಯೆಮನ್ ದಾಳಿ: ಭಾರತದಲ್ಲಿ ಪೆಟ್ರೋಲ್ ಡೀಸೆಲ್ ದುಬಾರಿ

ಮೋದಿ ಅಧಿಕಾರಕ್ಕೆ ಬರುವುದಾದರೆ ಒಂದು ಲೀಟರ್ ಪೆಟ್ರೋಲಿಗೆ 100 ರೂ. ಬೇಕಾದರೂ ಕೊಡುತ್ತೇವೆ ಎಂಬ ಭಕ್ತರ ಭಂಡ ಭವಿಷ್ಯ ಸದ್ಯವೇ ನಿಜವಾಗುವ ಲಕ್ಷಣಗಳಿವೆ.

- Advertisement -
- Advertisement -

ಮೋದಿ ಅಧಿಕಾರಕ್ಕೆ ಬಂದಂದಿನಿಂದಲೂ ಅಂತರರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಛಾ ತೈಲದ ಬೆಲೆ ಕಡಿಮೆ ಇದ್ದುದರ ಹೊರತಾಗಿಯೂ ಸರಕಾರ ಭಾರತೀಯ ಗ್ರಾಹಕರಿಗೆ ದುಬಾರಿ ದರದಲ್ಲಿ ಪೆಟ್ರೋಲ್ ಮತ್ತು ಡೀಸೆಲನ್ನು ಮಾರುತ್ತಾ ಬಂದಿದೆ. ಅರ್ಧ ದಶಕಕಾಲದಿಂದಲೂ ದಾಖಲೆ ಪ್ರಮಾಣದಲ್ಲಿ ಕಡಿಮೆಯಿದ್ದ ಕಚ್ಛಾ ತೈಲದ ಬೆಲೆಯು ಸೌದಿ ಅರೇಬಿಯಾದಲ್ಲಿ ತೆರೆದುಕೊಳ್ಳುತ್ತಿರುವ ಇತ್ತೀಚಿನ ಬೆಳವಣಿಗೆಗಳ ಕಾರಣದಿಂದ ಭಾರೀ ಪ್ರಮಾಣದಲ್ಲಿ ಏರುವ ಸಾಧ್ಯತೆ ಇದೆ.

ಸೌದಿ ಅರೇಬಿಯಾದ ಅಬ್ಖೈಕ್ (ಪ್ರಪಂಚದಲ್ಲಿಯೇ ಅತೀದೊಡ್ಡ) ಮತ್ತು ಖುರೈಸ್‍ನಲ್ಲಿರುವ ಎರಡು ತೈಲ ಸಂಸ್ಕರಣಾ ಘಟಕಗಳ ಮೇಲೆ ಯೆಮೆನ್‍ನ ಹೌಥಿ ಬಂಡುಕೋರರು ಡ್ರೋನ್ ಮೂಲಕ ದಾಳಿ ನಡೆಸಿದ್ದಾರೆ. ಈ ದಾಳಿಗಳ ಪರಿಣಾಮವಾಗಿ ತೈಲಬೆಲೆ ದಾಖಲೆಯ 20 ಶೇಕಡಾ ನೆಗೆತ ಕಂಡಿದೆ. ಕೊಲ್ಲಿ ಯುದ್ಧದ ಸಂದರ್ಭದಲ್ಲಿ, ಅಂದರೆ, ಜನವರಿ 14, 1991ರ ನಂತರ ಇತಿಹಾಸದಲ್ಲಿಯೇ ಎರಡನೇ ಅತಿದೊಡ್ಡ ಪ್ರಮಾಣದ ಏರಿಕೆ ಇದಾಗಿದೆ. ತೈಲ ಬೆಲೆ ಈಗಿರುವ ಬ್ಯಾರಲ್‍ಗೆ 54 ಡಾಲರ್ ಮಟ್ಟದಿಂದ ಬ್ಯಾರಲ್‍ಗೆ 100 ಡಾಲರ್‍ಗೂ ಹೆಚ್ಚಿನ ಮಟ್ಟಕ್ಕೆ ಏರುವ ನಿರೀಕ್ಷೆ ಇದೆ.

ಸೆಪ್ಟೆಂಬರ್ 14ರಂದು ಯೆಮೆನಿ ಹೌಥಿ ಬಂಡುಕೋರರು ಹಾರಿಸಿದ ಡ್ರೋನ್ ಅಥವಾ ಕ್ರೂಸ್ ಕ್ಷಿಪಣಿಗಳಿಂದ ಅಬ್ಖೈಕ್‍ನಲ್ಲಿರುವ ಪ್ರಪಂಚದ ಅತ್ಯಂತ ದೊಡ್ಡ ತೈಲ ಸ್ಥಿರೀಕರಣ ಸೌಲಭ್ಯಕ್ಕೆ ಬೆಂಕಿ ಹತ್ತಿಕೊಂಡಿದೆ. ಸ್ಥಿರೀಕರಣವೆಂದರೆ, ಕಚ್ಛಾ ತೈಲವನ್ನು ಭಾಗಶಃ ಸಂಸ್ಕರಿಸಿ, ಅದರಲ್ಲಿ ಇರುವ ಹೈಡ್ರೋಜನ್ ಸಲ್ಫೈಡ್ ಅಂಶವನ್ನು ತೆಗೆದು, ಆವಿಯ ಒತ್ತಡವನ್ನು ಕಡಿಮೆ ಮಾಡುವ ಪ್ರಕ್ರಿಯೆ. ಇದರಿಂದ ಟ್ಯಾಂಕರ್ ಹಡಗುಗಳಲ್ಲಿ ತೈಲದ ಸಾಗಾಟ ಸುರಕ್ಷಿತವಾಗುತ್ತದೆ.

ಸೌದಿ ಸರಕಾರಿ ಸ್ವಾಮ್ಯದ ‘ಅರಾಮ್ಕೋ’ಗೆ ಸೇರಿದ ಈ ತೈಲ ಮತ್ತು ಅನಿಲ ಸಂಸ್ಕರಣಾ ಕೇಂದ್ರವು ಪ್ರಪಂಚದಲ್ಲಿಯೇ ಅತ್ಯಂತ ದೊಡ್ಡ ಘಟಕವಾಗಿದ್ದು, ಅದು ಪ್ರಪಂಚದ ಅತ್ಯಂತ ದೊಡ್ಡ ಸಾಂಪ್ರದಾಯಿಕ ತೈಲ ಕ್ಷೇತ್ರವಾದ ಘವರ್ ಕ್ಷೇತ್ರವನ್ನು ನಿರ್ವಹಿಸುತ್ತದೆ. ಅಲ್ಲದೆ ರಫ್ತು ಟರ್ಮಿನಲ್‍ಗಳಾದ ರಾಸ್ ತನುರಾ (ಪ್ರಪಂಚದಲ್ಲಿಯೇ ಅತ್ಯಂತ ದೊಡ್ಡ ಸಮುದ್ರ ಮಧ್ಯದ ತೈಲ ಲೋಡಿಂಗ್ ಸೌಲಭ್ಯ) ಮತ್ತು ಜುಆಯಿಮಾಗೆ ತೈಲ ಪೂರೈಸುತ್ತದೆ. ಅಬ್ಖೈಕ್ ಪ್ರತಿದಿನ 68 ಲಕ್ಷ ಬ್ಯಾರಲ್ ತೈಲ ಸಂಸ್ಕರಿಸುತ್ತದೆ. ಸೌದಿಯ ತೈಲ ಮತ್ತು ಅನಿಲ ಉತ್ಪಾದನೆಯ ಮೂರನೇ ಎರಡರಷ್ಟು ಭಾಗ ಈ ಘಟಕದ ಮೂಲಕವೇ ಸಾಗುತ್ತದೆ.


ದಾಳಿಯ ಎರಡನೇ ಗುರಿ – ದೇಶದ ಎರಡನೇ ಅತಿದೊಡ್ಡ ತೈಲ ಕ್ಷೇತ್ರದ ಬಳಿ ಇರುವ, ದಿನಕ್ಕೆ 18 ಲಕ್ಷ ಬ್ಯಾರಲ್ ತೈಲ ಸಂಸ್ಕರಿಸುವ ಖುರೈಸ್ ಘಟಕ. ಈ ಎರಡೂ ಘಟಕಗಳು ಯೆಮೆನ್‍ನಿಂದ 1000 ಕಿ.ಮೀ.ಗೂ ಹೆಚ್ಚು ದೂರದಲ್ಲಿವೆ. ಅಬ್ಖೈಕ್‍ನ 17 ಸ್ಥಳಗಳು ಉರಿಯುತ್ತಿವೆಯಾದರೂ, ಒಟ್ಟು ಎಷ್ಟು ಹಾನಿ, ನಾಶ ಸಂಭವಿಸಿದೆ ಎಂದು ಇನ್ನೂ ಸ್ಪಷ್ಟವಾಗಿಲ್ಲ.

ಪ್ರಪಂಚದ ಅತ್ಯಂತ ಬಡದೇಶಗಳಲ್ಲಿ ಒಂದಾಗಿರುವ ಯೆಮೆನ್, 2015ರಿಂದಲೂ ಸೌದಿ ಮತ್ತು ಯುಎಇ, ಪಾಶ್ಚಾತ್ಯ ಶಸ್ತ್ರಾಸ್ತ್ರಗಳ ಬೆಂಬಲದೊಂದಿಗೆ ನಡೆಸುತ್ತಿರುವ ಬರ್ಬರ ಯುದ್ಧವನ್ನು ಎದುರಿಸುತ್ತಿದೆ. ಹಾಗಾಗಿ ಅದಕ್ಕೆ ಪ್ರತಿರೋಧವಾಗಿ ಈ ದಾಳಿಗಳ ಹೊಣೆಯನ್ನು ಹೊತ್ತುಕೊಂಡಿದೆ. ಸೌದಿಯ ಬಾಂಬ್ ದಾಳಿ ಮತ್ತು ದಿಗ್ಬಂಧನದ ಪರಿಣಾಮವಾಗಿ ಯೆಮೆನ್‍ನ ಮೂರನೇ ಎರಡರಷ್ಟು ಪ್ರಜೆಗಳು ನಿರಾಶ್ರಿತರಾಗಿದ್ದು, ತೀವ್ರ ಅಪೌಷ್ಠಿಕತೆಯ ಹೊಸ್ತಿಲಲ್ಲಿದ್ದಾರೆ.

ಅಮೆರಿಕ ಪ್ರತಿಕ್ರಿಯೆ
ಇರಾನ್ ವಿರುದ್ಧದ ಅಮೆರಿಕ ಮತ್ತು ಸೌದಿ ನೇತೃತ್ವದ ಮಿತ್ರಕೂಟವು ಈ ಅವಕಾಶವನ್ನು ಇರಾನ್ ವಿರುದ್ಧ ದಾಳಿಯನ್ನು ಹೆಚ್ಚಿಸಲು ಬಳಸುತ್ತಿದೆ. ಯುಎಸ್‍ಎಯ ರಾಜ್ಯಾಂಗ ಕಾರ್ಯದರ್ಶಿ ಮೈಕ್ ಪೋಂಪಿಯೋ ನೇರವಾಗಿ ಇರಾನನ್ನು ಹೊಣೆ ಮಾಡಿದ್ದರೆ, ಅಧ್ಯಕ್ಷ ಟ್ರಂಪ್ ಇದನ್ನೇ ಎರಡು ಬಾರಿ ಟ್ವೀಟ್ ಮಾಡಿದ್ದಾರೆ. ಒಬ್ಬ ಸೆನೆಟರ್ ಅಂತೂ ಇರಾನಿನ ತೈಲಕ್ಷೇತ್ರಗಳ ಮೇಲೆ ಬಾಂಬ್ ದಾಳಿ ಮಾಡುವ ಸಲಹೆಯನ್ನೂ ನೀಡಿದ್ದಾರೆ. ಇರಾನಿನ ವಿದೇಶಾಂಗ ಮಂತ್ರಿ ಎಂ.ಜೆ. ಝರೀಫ್, ಪೋಂಪಿಯೋ ಆರೋಪವನ್ನು ಸಾರಾಸಗಟಾಗಿ ನಿರಾಕರಿಸಿದ್ದಾರೆ. ಹೌಥಿಗಳು ನಡೆಸಿದ ದಾಳಿಗೆ ಇರಾನನ್ನು ಹೊಣೆ ಮಾಡುವ ಮೂಲಕ ಯುಎಸ್‍ಎ ತನ್ನ ‘ಗರಿಷ್ಟ ಒತ್ತಡ’ದ ವಿಫಲ ಧೋರಣೆಯಿಂದ ಹಿಂದೆ ಸರಿದು, ‘ಗರಿಷ್ಟ ಸಂಚಿನ’ ಧೋರಣೆ ಅನುಸರಿಸುತ್ತಿದೆ ಎಂದು ಅವರು ಪ್ರತ್ಯಾರೋಪ ಮಾಡಿದ್ದಾರೆ.

ಸೌದಿಯ ಮೇಲಿನ ದಾಳಿಗಳ ಕುರಿತು ಆತಂಕ ವ್ಯಕ್ತಪಡಿಸಿರುವ ರಷ್ಯಾ ಮತ್ತು ಚೀನಾ, ಅವಸರದ ತೀರ್ಮಾನಗಳ ಕುರಿತು ಎಚ್ಚರಿಕೆ ನೀಡಿವೆ. ಯಾವುದೇ ತನಿಖೆ ಅಥವಾ ಸಾಕ್ಷ್ಯಾಧಾರಗಳು ಇಲ್ಲದೇ ಯುಎಸ್‍ಎಯ ಬಹಿರಂಗ ಮಿಲಿಟರಿ ಮಾತುಗಳು ಸ್ವೀಕಾರಾರ್ಹವಲ್ಲ ಎಂದು ಎರಡೂ ದೇಶಗಳ ವಿದೇಶಾಂಗ ಖಾತೆಗಳ ವಕ್ತಾರರು ಹೇಳಿಕೆ ನೀಡಿದ್ದಾರೆ. ರಷ್ಯಾದ ವಕ್ತಾರರು ಇನ್ನೂ ಮುಂದುವರಿದು, ಈ ದಾಳಿಗಳು ಯೆಮೆನ್‍ನಲ್ಲಿ ಮುಂದುವರಿಯುತ್ತಿರುವ ಬಿಕ್ಕಟ್ಟಿನ ನೇರ ಪರಿಣಾಮ’ ಎಂದು ಬಣ್ಣಿಸಿದ್ದಾರೆ.

“ಸೌದಿ ಅರೇಬಿಯಾ ನಮ್ಮ ಕ್ಷಿಪಣಿಗಳ ಖರೀದಿ ಪಟ್ಟಿಯು ಅದರ ಭದ್ರತೆಗೆ ಬೆದರಿಕೆ ಎಂಬ ನೆಪವೊಡ್ಡಿ ಯೆಮೆನ್‍ನ ಮೇಲೆ ಯುದ್ಧ ಸಾರಿತು. ಈಗ ನಾವು ಅವರ ತೈಲ ಕ್ಷೇತ್ರಗಳ ಮೇಲೆ ದಾಳಿ ನಡೆಸಿದಾಗ, ಅವರು ಯೆಮೆನನ್ನು ಬಿಟ್ಟು ಬೇರೆಯವರು ಇದನ್ನು ಮಾಡಿದ್ದಾರೆ ಎಂದು ದೂರಿದಾಗ ಆಶ್ಚರ್ಯವಾಗುತ್ತದೆ. ಇದು ಅವರ ಹೇಡಿತನವನ್ನು ತೋರಿಸುತ್ತದೆ” ಎಂದು ಹೌಥಿಗಳ ಅತ್ಯುನ್ನತ ರಾಜಕೀಯ ಮಂಡಳಿಯ ಸದಸ್ಯ ಮೊಹಮ್ಮದ್ ಅಲ್-ಬುಖೈತಿ ಹೇಳಿದ್ದಾರೆ.

ಇರಾನ್ ಮತ್ತು ನಂತರದಲ್ಲಿ ವೆನೆಜ್ಯೂಯೆಲಾ ವಿರುದ್ಧ ಅಮೆರಿಕದ ಏಕಪಕ್ಷೀಯ ಮತ್ತು ಕಾನೂನುಬಾಹಿರ ದಿಗ್ಬಂಧನ ಕಳೆದ ನವೆಂಬರ್‍ನಿಂದಲೇ ಜಾರಿಗೆ ಬಂದಿದೆ. ಅಲ್ಲಿಂದ ನಂತರ ಈ ಎರಡು ಬಿಕ್ಕಟ್ಟುಗಳು ಪ್ರಪಂಚವನ್ನು ಈಗಾಗಲೇ ತೈಲ ಮಾರುಕಟ್ಟೆಯ ಅಸ್ಥಿರತೆಯತ್ತ ತಳ್ಳಿವೆ. ಭಾರತವು ಅಮೆರಿಕದ ಒತ್ತಡಕ್ಕೆ ಮಣಿದು, ಏಪ್ರಿಲ್ 2019ರಿಂದ ಇರಾನಿನಿಂದ ತೈಲ ಖರೀದಿಯನ್ನು ನಿಲ್ಲಿಸಿತು. ಸೌದಿಯಿಂದಲೇ ಹೆಚ್ಚು ಆಮದು ಮಾಡಿಕೊಳ್ಳುತ್ತಿತ್ತು. ಆದುದರಿಂದ, ಒಂದು ಕಡೆ ಸೌದಿ ತೈಲದ ಕುರಿತ ಅಮೆರಿಕದ ಸುಳ್ಳು ಭರವಸೆ ಮತ್ತು ಇನ್ನೊಂದು ಕಡೆ ಇರಾನಿಗೆ ಭಾರತ ಕೈಕೊಟ್ಟ ಪರಿಣಾಮವಾಗಿ ಈ ಬಿಕ್ಕಟ್ಟಿನಿಂದ ಭಾರತವು ಗರಿಷ್ಟ ಬಾಧಿತವಾಗಲಿದೆ. ಭಾರತದ ಜನರು ತೈಲ ಬೆಲೆ ಹೆಚ್ಚಳದ ಜೊತೆಗೆ, ಅದರ ಪರಿಣಾಮವಾಗಿ ಉಂಟಾಗುವ ಸರಕು ಬೆಲೆಯೇರಿಕೆಯ ಪರಿಣಾಮವನ್ನೂ ಎದುರಿಸಲಿದ್ದಾರೆ. ಮೋದಿ ಮತ್ತವರ ಮಂತ್ರಿಗಳನ್ನು ಈ ಕುರಿತ ಪ್ರಶ್ನೆಗಳಿಂದ ರಕ್ಷಿಸಲು ಅತಿರೇಕದ ಉಡಾಫೆಗಳಲ್ಲಿ ಹೆಚ್ಚಳವನ್ನೂ ನಾವು ಕಾಣಬಹುದು.

ಒಟ್ಟಾರೆ ಆರ್ಥಿಕತೆಯು ಕುಂಠಿತಗೊಳ್ಳುತ್ತಿರುವ, ಬೆಳವಣಿಗೆಯ ಸೂಚ್ಯಂಕಗಳು ಕುಸಿಯುತ್ತಿರುವ ಮತ್ತು ಭಾರೀ ಪ್ರಮಾಣದಲ್ಲಿ ನಿರುದ್ಯೋಗ ಹೆಚ್ಚಿರುವ ಈ ಹೊತ್ತಿನಲ್ಲಿ ಭಾರತಕ್ಕೆ ಈ ತೈಲ ಬೆಲೆ ಏರಿಕೆಯು ಉರಿಯುವ ಬೆಂಕಿಗೆ ಪೆಟ್ರೋಲ್ ಸುರಿದಂತಾಗಬಹುದು!

  • ಭರತ್ ಹೆಬ್ಬಾಳ್
    ಅನುವಾದ: ನಿಖಿಲ್ ಕೋಲ್ಪೆ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...