Homeಅಂತರಾಷ್ಟ್ರೀಯಸೌದಿ ಮೇಲೆ ಯೆಮನ್ ದಾಳಿ: ಭಾರತದಲ್ಲಿ ಪೆಟ್ರೋಲ್ ಡೀಸೆಲ್ ದುಬಾರಿ

ಸೌದಿ ಮೇಲೆ ಯೆಮನ್ ದಾಳಿ: ಭಾರತದಲ್ಲಿ ಪೆಟ್ರೋಲ್ ಡೀಸೆಲ್ ದುಬಾರಿ

ಮೋದಿ ಅಧಿಕಾರಕ್ಕೆ ಬರುವುದಾದರೆ ಒಂದು ಲೀಟರ್ ಪೆಟ್ರೋಲಿಗೆ 100 ರೂ. ಬೇಕಾದರೂ ಕೊಡುತ್ತೇವೆ ಎಂಬ ಭಕ್ತರ ಭಂಡ ಭವಿಷ್ಯ ಸದ್ಯವೇ ನಿಜವಾಗುವ ಲಕ್ಷಣಗಳಿವೆ.

- Advertisement -
- Advertisement -

ಮೋದಿ ಅಧಿಕಾರಕ್ಕೆ ಬಂದಂದಿನಿಂದಲೂ ಅಂತರರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಛಾ ತೈಲದ ಬೆಲೆ ಕಡಿಮೆ ಇದ್ದುದರ ಹೊರತಾಗಿಯೂ ಸರಕಾರ ಭಾರತೀಯ ಗ್ರಾಹಕರಿಗೆ ದುಬಾರಿ ದರದಲ್ಲಿ ಪೆಟ್ರೋಲ್ ಮತ್ತು ಡೀಸೆಲನ್ನು ಮಾರುತ್ತಾ ಬಂದಿದೆ. ಅರ್ಧ ದಶಕಕಾಲದಿಂದಲೂ ದಾಖಲೆ ಪ್ರಮಾಣದಲ್ಲಿ ಕಡಿಮೆಯಿದ್ದ ಕಚ್ಛಾ ತೈಲದ ಬೆಲೆಯು ಸೌದಿ ಅರೇಬಿಯಾದಲ್ಲಿ ತೆರೆದುಕೊಳ್ಳುತ್ತಿರುವ ಇತ್ತೀಚಿನ ಬೆಳವಣಿಗೆಗಳ ಕಾರಣದಿಂದ ಭಾರೀ ಪ್ರಮಾಣದಲ್ಲಿ ಏರುವ ಸಾಧ್ಯತೆ ಇದೆ.

ಸೌದಿ ಅರೇಬಿಯಾದ ಅಬ್ಖೈಕ್ (ಪ್ರಪಂಚದಲ್ಲಿಯೇ ಅತೀದೊಡ್ಡ) ಮತ್ತು ಖುರೈಸ್‍ನಲ್ಲಿರುವ ಎರಡು ತೈಲ ಸಂಸ್ಕರಣಾ ಘಟಕಗಳ ಮೇಲೆ ಯೆಮೆನ್‍ನ ಹೌಥಿ ಬಂಡುಕೋರರು ಡ್ರೋನ್ ಮೂಲಕ ದಾಳಿ ನಡೆಸಿದ್ದಾರೆ. ಈ ದಾಳಿಗಳ ಪರಿಣಾಮವಾಗಿ ತೈಲಬೆಲೆ ದಾಖಲೆಯ 20 ಶೇಕಡಾ ನೆಗೆತ ಕಂಡಿದೆ. ಕೊಲ್ಲಿ ಯುದ್ಧದ ಸಂದರ್ಭದಲ್ಲಿ, ಅಂದರೆ, ಜನವರಿ 14, 1991ರ ನಂತರ ಇತಿಹಾಸದಲ್ಲಿಯೇ ಎರಡನೇ ಅತಿದೊಡ್ಡ ಪ್ರಮಾಣದ ಏರಿಕೆ ಇದಾಗಿದೆ. ತೈಲ ಬೆಲೆ ಈಗಿರುವ ಬ್ಯಾರಲ್‍ಗೆ 54 ಡಾಲರ್ ಮಟ್ಟದಿಂದ ಬ್ಯಾರಲ್‍ಗೆ 100 ಡಾಲರ್‍ಗೂ ಹೆಚ್ಚಿನ ಮಟ್ಟಕ್ಕೆ ಏರುವ ನಿರೀಕ್ಷೆ ಇದೆ.

ಸೆಪ್ಟೆಂಬರ್ 14ರಂದು ಯೆಮೆನಿ ಹೌಥಿ ಬಂಡುಕೋರರು ಹಾರಿಸಿದ ಡ್ರೋನ್ ಅಥವಾ ಕ್ರೂಸ್ ಕ್ಷಿಪಣಿಗಳಿಂದ ಅಬ್ಖೈಕ್‍ನಲ್ಲಿರುವ ಪ್ರಪಂಚದ ಅತ್ಯಂತ ದೊಡ್ಡ ತೈಲ ಸ್ಥಿರೀಕರಣ ಸೌಲಭ್ಯಕ್ಕೆ ಬೆಂಕಿ ಹತ್ತಿಕೊಂಡಿದೆ. ಸ್ಥಿರೀಕರಣವೆಂದರೆ, ಕಚ್ಛಾ ತೈಲವನ್ನು ಭಾಗಶಃ ಸಂಸ್ಕರಿಸಿ, ಅದರಲ್ಲಿ ಇರುವ ಹೈಡ್ರೋಜನ್ ಸಲ್ಫೈಡ್ ಅಂಶವನ್ನು ತೆಗೆದು, ಆವಿಯ ಒತ್ತಡವನ್ನು ಕಡಿಮೆ ಮಾಡುವ ಪ್ರಕ್ರಿಯೆ. ಇದರಿಂದ ಟ್ಯಾಂಕರ್ ಹಡಗುಗಳಲ್ಲಿ ತೈಲದ ಸಾಗಾಟ ಸುರಕ್ಷಿತವಾಗುತ್ತದೆ.

ಸೌದಿ ಸರಕಾರಿ ಸ್ವಾಮ್ಯದ ‘ಅರಾಮ್ಕೋ’ಗೆ ಸೇರಿದ ಈ ತೈಲ ಮತ್ತು ಅನಿಲ ಸಂಸ್ಕರಣಾ ಕೇಂದ್ರವು ಪ್ರಪಂಚದಲ್ಲಿಯೇ ಅತ್ಯಂತ ದೊಡ್ಡ ಘಟಕವಾಗಿದ್ದು, ಅದು ಪ್ರಪಂಚದ ಅತ್ಯಂತ ದೊಡ್ಡ ಸಾಂಪ್ರದಾಯಿಕ ತೈಲ ಕ್ಷೇತ್ರವಾದ ಘವರ್ ಕ್ಷೇತ್ರವನ್ನು ನಿರ್ವಹಿಸುತ್ತದೆ. ಅಲ್ಲದೆ ರಫ್ತು ಟರ್ಮಿನಲ್‍ಗಳಾದ ರಾಸ್ ತನುರಾ (ಪ್ರಪಂಚದಲ್ಲಿಯೇ ಅತ್ಯಂತ ದೊಡ್ಡ ಸಮುದ್ರ ಮಧ್ಯದ ತೈಲ ಲೋಡಿಂಗ್ ಸೌಲಭ್ಯ) ಮತ್ತು ಜುಆಯಿಮಾಗೆ ತೈಲ ಪೂರೈಸುತ್ತದೆ. ಅಬ್ಖೈಕ್ ಪ್ರತಿದಿನ 68 ಲಕ್ಷ ಬ್ಯಾರಲ್ ತೈಲ ಸಂಸ್ಕರಿಸುತ್ತದೆ. ಸೌದಿಯ ತೈಲ ಮತ್ತು ಅನಿಲ ಉತ್ಪಾದನೆಯ ಮೂರನೇ ಎರಡರಷ್ಟು ಭಾಗ ಈ ಘಟಕದ ಮೂಲಕವೇ ಸಾಗುತ್ತದೆ.


ದಾಳಿಯ ಎರಡನೇ ಗುರಿ – ದೇಶದ ಎರಡನೇ ಅತಿದೊಡ್ಡ ತೈಲ ಕ್ಷೇತ್ರದ ಬಳಿ ಇರುವ, ದಿನಕ್ಕೆ 18 ಲಕ್ಷ ಬ್ಯಾರಲ್ ತೈಲ ಸಂಸ್ಕರಿಸುವ ಖುರೈಸ್ ಘಟಕ. ಈ ಎರಡೂ ಘಟಕಗಳು ಯೆಮೆನ್‍ನಿಂದ 1000 ಕಿ.ಮೀ.ಗೂ ಹೆಚ್ಚು ದೂರದಲ್ಲಿವೆ. ಅಬ್ಖೈಕ್‍ನ 17 ಸ್ಥಳಗಳು ಉರಿಯುತ್ತಿವೆಯಾದರೂ, ಒಟ್ಟು ಎಷ್ಟು ಹಾನಿ, ನಾಶ ಸಂಭವಿಸಿದೆ ಎಂದು ಇನ್ನೂ ಸ್ಪಷ್ಟವಾಗಿಲ್ಲ.

ಪ್ರಪಂಚದ ಅತ್ಯಂತ ಬಡದೇಶಗಳಲ್ಲಿ ಒಂದಾಗಿರುವ ಯೆಮೆನ್, 2015ರಿಂದಲೂ ಸೌದಿ ಮತ್ತು ಯುಎಇ, ಪಾಶ್ಚಾತ್ಯ ಶಸ್ತ್ರಾಸ್ತ್ರಗಳ ಬೆಂಬಲದೊಂದಿಗೆ ನಡೆಸುತ್ತಿರುವ ಬರ್ಬರ ಯುದ್ಧವನ್ನು ಎದುರಿಸುತ್ತಿದೆ. ಹಾಗಾಗಿ ಅದಕ್ಕೆ ಪ್ರತಿರೋಧವಾಗಿ ಈ ದಾಳಿಗಳ ಹೊಣೆಯನ್ನು ಹೊತ್ತುಕೊಂಡಿದೆ. ಸೌದಿಯ ಬಾಂಬ್ ದಾಳಿ ಮತ್ತು ದಿಗ್ಬಂಧನದ ಪರಿಣಾಮವಾಗಿ ಯೆಮೆನ್‍ನ ಮೂರನೇ ಎರಡರಷ್ಟು ಪ್ರಜೆಗಳು ನಿರಾಶ್ರಿತರಾಗಿದ್ದು, ತೀವ್ರ ಅಪೌಷ್ಠಿಕತೆಯ ಹೊಸ್ತಿಲಲ್ಲಿದ್ದಾರೆ.

ಅಮೆರಿಕ ಪ್ರತಿಕ್ರಿಯೆ
ಇರಾನ್ ವಿರುದ್ಧದ ಅಮೆರಿಕ ಮತ್ತು ಸೌದಿ ನೇತೃತ್ವದ ಮಿತ್ರಕೂಟವು ಈ ಅವಕಾಶವನ್ನು ಇರಾನ್ ವಿರುದ್ಧ ದಾಳಿಯನ್ನು ಹೆಚ್ಚಿಸಲು ಬಳಸುತ್ತಿದೆ. ಯುಎಸ್‍ಎಯ ರಾಜ್ಯಾಂಗ ಕಾರ್ಯದರ್ಶಿ ಮೈಕ್ ಪೋಂಪಿಯೋ ನೇರವಾಗಿ ಇರಾನನ್ನು ಹೊಣೆ ಮಾಡಿದ್ದರೆ, ಅಧ್ಯಕ್ಷ ಟ್ರಂಪ್ ಇದನ್ನೇ ಎರಡು ಬಾರಿ ಟ್ವೀಟ್ ಮಾಡಿದ್ದಾರೆ. ಒಬ್ಬ ಸೆನೆಟರ್ ಅಂತೂ ಇರಾನಿನ ತೈಲಕ್ಷೇತ್ರಗಳ ಮೇಲೆ ಬಾಂಬ್ ದಾಳಿ ಮಾಡುವ ಸಲಹೆಯನ್ನೂ ನೀಡಿದ್ದಾರೆ. ಇರಾನಿನ ವಿದೇಶಾಂಗ ಮಂತ್ರಿ ಎಂ.ಜೆ. ಝರೀಫ್, ಪೋಂಪಿಯೋ ಆರೋಪವನ್ನು ಸಾರಾಸಗಟಾಗಿ ನಿರಾಕರಿಸಿದ್ದಾರೆ. ಹೌಥಿಗಳು ನಡೆಸಿದ ದಾಳಿಗೆ ಇರಾನನ್ನು ಹೊಣೆ ಮಾಡುವ ಮೂಲಕ ಯುಎಸ್‍ಎ ತನ್ನ ‘ಗರಿಷ್ಟ ಒತ್ತಡ’ದ ವಿಫಲ ಧೋರಣೆಯಿಂದ ಹಿಂದೆ ಸರಿದು, ‘ಗರಿಷ್ಟ ಸಂಚಿನ’ ಧೋರಣೆ ಅನುಸರಿಸುತ್ತಿದೆ ಎಂದು ಅವರು ಪ್ರತ್ಯಾರೋಪ ಮಾಡಿದ್ದಾರೆ.

ಸೌದಿಯ ಮೇಲಿನ ದಾಳಿಗಳ ಕುರಿತು ಆತಂಕ ವ್ಯಕ್ತಪಡಿಸಿರುವ ರಷ್ಯಾ ಮತ್ತು ಚೀನಾ, ಅವಸರದ ತೀರ್ಮಾನಗಳ ಕುರಿತು ಎಚ್ಚರಿಕೆ ನೀಡಿವೆ. ಯಾವುದೇ ತನಿಖೆ ಅಥವಾ ಸಾಕ್ಷ್ಯಾಧಾರಗಳು ಇಲ್ಲದೇ ಯುಎಸ್‍ಎಯ ಬಹಿರಂಗ ಮಿಲಿಟರಿ ಮಾತುಗಳು ಸ್ವೀಕಾರಾರ್ಹವಲ್ಲ ಎಂದು ಎರಡೂ ದೇಶಗಳ ವಿದೇಶಾಂಗ ಖಾತೆಗಳ ವಕ್ತಾರರು ಹೇಳಿಕೆ ನೀಡಿದ್ದಾರೆ. ರಷ್ಯಾದ ವಕ್ತಾರರು ಇನ್ನೂ ಮುಂದುವರಿದು, ಈ ದಾಳಿಗಳು ಯೆಮೆನ್‍ನಲ್ಲಿ ಮುಂದುವರಿಯುತ್ತಿರುವ ಬಿಕ್ಕಟ್ಟಿನ ನೇರ ಪರಿಣಾಮ’ ಎಂದು ಬಣ್ಣಿಸಿದ್ದಾರೆ.

“ಸೌದಿ ಅರೇಬಿಯಾ ನಮ್ಮ ಕ್ಷಿಪಣಿಗಳ ಖರೀದಿ ಪಟ್ಟಿಯು ಅದರ ಭದ್ರತೆಗೆ ಬೆದರಿಕೆ ಎಂಬ ನೆಪವೊಡ್ಡಿ ಯೆಮೆನ್‍ನ ಮೇಲೆ ಯುದ್ಧ ಸಾರಿತು. ಈಗ ನಾವು ಅವರ ತೈಲ ಕ್ಷೇತ್ರಗಳ ಮೇಲೆ ದಾಳಿ ನಡೆಸಿದಾಗ, ಅವರು ಯೆಮೆನನ್ನು ಬಿಟ್ಟು ಬೇರೆಯವರು ಇದನ್ನು ಮಾಡಿದ್ದಾರೆ ಎಂದು ದೂರಿದಾಗ ಆಶ್ಚರ್ಯವಾಗುತ್ತದೆ. ಇದು ಅವರ ಹೇಡಿತನವನ್ನು ತೋರಿಸುತ್ತದೆ” ಎಂದು ಹೌಥಿಗಳ ಅತ್ಯುನ್ನತ ರಾಜಕೀಯ ಮಂಡಳಿಯ ಸದಸ್ಯ ಮೊಹಮ್ಮದ್ ಅಲ್-ಬುಖೈತಿ ಹೇಳಿದ್ದಾರೆ.

ಇರಾನ್ ಮತ್ತು ನಂತರದಲ್ಲಿ ವೆನೆಜ್ಯೂಯೆಲಾ ವಿರುದ್ಧ ಅಮೆರಿಕದ ಏಕಪಕ್ಷೀಯ ಮತ್ತು ಕಾನೂನುಬಾಹಿರ ದಿಗ್ಬಂಧನ ಕಳೆದ ನವೆಂಬರ್‍ನಿಂದಲೇ ಜಾರಿಗೆ ಬಂದಿದೆ. ಅಲ್ಲಿಂದ ನಂತರ ಈ ಎರಡು ಬಿಕ್ಕಟ್ಟುಗಳು ಪ್ರಪಂಚವನ್ನು ಈಗಾಗಲೇ ತೈಲ ಮಾರುಕಟ್ಟೆಯ ಅಸ್ಥಿರತೆಯತ್ತ ತಳ್ಳಿವೆ. ಭಾರತವು ಅಮೆರಿಕದ ಒತ್ತಡಕ್ಕೆ ಮಣಿದು, ಏಪ್ರಿಲ್ 2019ರಿಂದ ಇರಾನಿನಿಂದ ತೈಲ ಖರೀದಿಯನ್ನು ನಿಲ್ಲಿಸಿತು. ಸೌದಿಯಿಂದಲೇ ಹೆಚ್ಚು ಆಮದು ಮಾಡಿಕೊಳ್ಳುತ್ತಿತ್ತು. ಆದುದರಿಂದ, ಒಂದು ಕಡೆ ಸೌದಿ ತೈಲದ ಕುರಿತ ಅಮೆರಿಕದ ಸುಳ್ಳು ಭರವಸೆ ಮತ್ತು ಇನ್ನೊಂದು ಕಡೆ ಇರಾನಿಗೆ ಭಾರತ ಕೈಕೊಟ್ಟ ಪರಿಣಾಮವಾಗಿ ಈ ಬಿಕ್ಕಟ್ಟಿನಿಂದ ಭಾರತವು ಗರಿಷ್ಟ ಬಾಧಿತವಾಗಲಿದೆ. ಭಾರತದ ಜನರು ತೈಲ ಬೆಲೆ ಹೆಚ್ಚಳದ ಜೊತೆಗೆ, ಅದರ ಪರಿಣಾಮವಾಗಿ ಉಂಟಾಗುವ ಸರಕು ಬೆಲೆಯೇರಿಕೆಯ ಪರಿಣಾಮವನ್ನೂ ಎದುರಿಸಲಿದ್ದಾರೆ. ಮೋದಿ ಮತ್ತವರ ಮಂತ್ರಿಗಳನ್ನು ಈ ಕುರಿತ ಪ್ರಶ್ನೆಗಳಿಂದ ರಕ್ಷಿಸಲು ಅತಿರೇಕದ ಉಡಾಫೆಗಳಲ್ಲಿ ಹೆಚ್ಚಳವನ್ನೂ ನಾವು ಕಾಣಬಹುದು.

ಒಟ್ಟಾರೆ ಆರ್ಥಿಕತೆಯು ಕುಂಠಿತಗೊಳ್ಳುತ್ತಿರುವ, ಬೆಳವಣಿಗೆಯ ಸೂಚ್ಯಂಕಗಳು ಕುಸಿಯುತ್ತಿರುವ ಮತ್ತು ಭಾರೀ ಪ್ರಮಾಣದಲ್ಲಿ ನಿರುದ್ಯೋಗ ಹೆಚ್ಚಿರುವ ಈ ಹೊತ್ತಿನಲ್ಲಿ ಭಾರತಕ್ಕೆ ಈ ತೈಲ ಬೆಲೆ ಏರಿಕೆಯು ಉರಿಯುವ ಬೆಂಕಿಗೆ ಪೆಟ್ರೋಲ್ ಸುರಿದಂತಾಗಬಹುದು!

  • ಭರತ್ ಹೆಬ್ಬಾಳ್
    ಅನುವಾದ: ನಿಖಿಲ್ ಕೋಲ್ಪೆ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...