Homeಅಂತರಾಷ್ಟ್ರೀಯಸೌದಿ ಮೇಲೆ ಯೆಮನ್ ದಾಳಿ: ಭಾರತದಲ್ಲಿ ಪೆಟ್ರೋಲ್ ಡೀಸೆಲ್ ದುಬಾರಿ

ಸೌದಿ ಮೇಲೆ ಯೆಮನ್ ದಾಳಿ: ಭಾರತದಲ್ಲಿ ಪೆಟ್ರೋಲ್ ಡೀಸೆಲ್ ದುಬಾರಿ

ಮೋದಿ ಅಧಿಕಾರಕ್ಕೆ ಬರುವುದಾದರೆ ಒಂದು ಲೀಟರ್ ಪೆಟ್ರೋಲಿಗೆ 100 ರೂ. ಬೇಕಾದರೂ ಕೊಡುತ್ತೇವೆ ಎಂಬ ಭಕ್ತರ ಭಂಡ ಭವಿಷ್ಯ ಸದ್ಯವೇ ನಿಜವಾಗುವ ಲಕ್ಷಣಗಳಿವೆ.

- Advertisement -
- Advertisement -

ಮೋದಿ ಅಧಿಕಾರಕ್ಕೆ ಬಂದಂದಿನಿಂದಲೂ ಅಂತರರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಛಾ ತೈಲದ ಬೆಲೆ ಕಡಿಮೆ ಇದ್ದುದರ ಹೊರತಾಗಿಯೂ ಸರಕಾರ ಭಾರತೀಯ ಗ್ರಾಹಕರಿಗೆ ದುಬಾರಿ ದರದಲ್ಲಿ ಪೆಟ್ರೋಲ್ ಮತ್ತು ಡೀಸೆಲನ್ನು ಮಾರುತ್ತಾ ಬಂದಿದೆ. ಅರ್ಧ ದಶಕಕಾಲದಿಂದಲೂ ದಾಖಲೆ ಪ್ರಮಾಣದಲ್ಲಿ ಕಡಿಮೆಯಿದ್ದ ಕಚ್ಛಾ ತೈಲದ ಬೆಲೆಯು ಸೌದಿ ಅರೇಬಿಯಾದಲ್ಲಿ ತೆರೆದುಕೊಳ್ಳುತ್ತಿರುವ ಇತ್ತೀಚಿನ ಬೆಳವಣಿಗೆಗಳ ಕಾರಣದಿಂದ ಭಾರೀ ಪ್ರಮಾಣದಲ್ಲಿ ಏರುವ ಸಾಧ್ಯತೆ ಇದೆ.

ಸೌದಿ ಅರೇಬಿಯಾದ ಅಬ್ಖೈಕ್ (ಪ್ರಪಂಚದಲ್ಲಿಯೇ ಅತೀದೊಡ್ಡ) ಮತ್ತು ಖುರೈಸ್‍ನಲ್ಲಿರುವ ಎರಡು ತೈಲ ಸಂಸ್ಕರಣಾ ಘಟಕಗಳ ಮೇಲೆ ಯೆಮೆನ್‍ನ ಹೌಥಿ ಬಂಡುಕೋರರು ಡ್ರೋನ್ ಮೂಲಕ ದಾಳಿ ನಡೆಸಿದ್ದಾರೆ. ಈ ದಾಳಿಗಳ ಪರಿಣಾಮವಾಗಿ ತೈಲಬೆಲೆ ದಾಖಲೆಯ 20 ಶೇಕಡಾ ನೆಗೆತ ಕಂಡಿದೆ. ಕೊಲ್ಲಿ ಯುದ್ಧದ ಸಂದರ್ಭದಲ್ಲಿ, ಅಂದರೆ, ಜನವರಿ 14, 1991ರ ನಂತರ ಇತಿಹಾಸದಲ್ಲಿಯೇ ಎರಡನೇ ಅತಿದೊಡ್ಡ ಪ್ರಮಾಣದ ಏರಿಕೆ ಇದಾಗಿದೆ. ತೈಲ ಬೆಲೆ ಈಗಿರುವ ಬ್ಯಾರಲ್‍ಗೆ 54 ಡಾಲರ್ ಮಟ್ಟದಿಂದ ಬ್ಯಾರಲ್‍ಗೆ 100 ಡಾಲರ್‍ಗೂ ಹೆಚ್ಚಿನ ಮಟ್ಟಕ್ಕೆ ಏರುವ ನಿರೀಕ್ಷೆ ಇದೆ.

ಸೆಪ್ಟೆಂಬರ್ 14ರಂದು ಯೆಮೆನಿ ಹೌಥಿ ಬಂಡುಕೋರರು ಹಾರಿಸಿದ ಡ್ರೋನ್ ಅಥವಾ ಕ್ರೂಸ್ ಕ್ಷಿಪಣಿಗಳಿಂದ ಅಬ್ಖೈಕ್‍ನಲ್ಲಿರುವ ಪ್ರಪಂಚದ ಅತ್ಯಂತ ದೊಡ್ಡ ತೈಲ ಸ್ಥಿರೀಕರಣ ಸೌಲಭ್ಯಕ್ಕೆ ಬೆಂಕಿ ಹತ್ತಿಕೊಂಡಿದೆ. ಸ್ಥಿರೀಕರಣವೆಂದರೆ, ಕಚ್ಛಾ ತೈಲವನ್ನು ಭಾಗಶಃ ಸಂಸ್ಕರಿಸಿ, ಅದರಲ್ಲಿ ಇರುವ ಹೈಡ್ರೋಜನ್ ಸಲ್ಫೈಡ್ ಅಂಶವನ್ನು ತೆಗೆದು, ಆವಿಯ ಒತ್ತಡವನ್ನು ಕಡಿಮೆ ಮಾಡುವ ಪ್ರಕ್ರಿಯೆ. ಇದರಿಂದ ಟ್ಯಾಂಕರ್ ಹಡಗುಗಳಲ್ಲಿ ತೈಲದ ಸಾಗಾಟ ಸುರಕ್ಷಿತವಾಗುತ್ತದೆ.

ಸೌದಿ ಸರಕಾರಿ ಸ್ವಾಮ್ಯದ ‘ಅರಾಮ್ಕೋ’ಗೆ ಸೇರಿದ ಈ ತೈಲ ಮತ್ತು ಅನಿಲ ಸಂಸ್ಕರಣಾ ಕೇಂದ್ರವು ಪ್ರಪಂಚದಲ್ಲಿಯೇ ಅತ್ಯಂತ ದೊಡ್ಡ ಘಟಕವಾಗಿದ್ದು, ಅದು ಪ್ರಪಂಚದ ಅತ್ಯಂತ ದೊಡ್ಡ ಸಾಂಪ್ರದಾಯಿಕ ತೈಲ ಕ್ಷೇತ್ರವಾದ ಘವರ್ ಕ್ಷೇತ್ರವನ್ನು ನಿರ್ವಹಿಸುತ್ತದೆ. ಅಲ್ಲದೆ ರಫ್ತು ಟರ್ಮಿನಲ್‍ಗಳಾದ ರಾಸ್ ತನುರಾ (ಪ್ರಪಂಚದಲ್ಲಿಯೇ ಅತ್ಯಂತ ದೊಡ್ಡ ಸಮುದ್ರ ಮಧ್ಯದ ತೈಲ ಲೋಡಿಂಗ್ ಸೌಲಭ್ಯ) ಮತ್ತು ಜುಆಯಿಮಾಗೆ ತೈಲ ಪೂರೈಸುತ್ತದೆ. ಅಬ್ಖೈಕ್ ಪ್ರತಿದಿನ 68 ಲಕ್ಷ ಬ್ಯಾರಲ್ ತೈಲ ಸಂಸ್ಕರಿಸುತ್ತದೆ. ಸೌದಿಯ ತೈಲ ಮತ್ತು ಅನಿಲ ಉತ್ಪಾದನೆಯ ಮೂರನೇ ಎರಡರಷ್ಟು ಭಾಗ ಈ ಘಟಕದ ಮೂಲಕವೇ ಸಾಗುತ್ತದೆ.


ದಾಳಿಯ ಎರಡನೇ ಗುರಿ – ದೇಶದ ಎರಡನೇ ಅತಿದೊಡ್ಡ ತೈಲ ಕ್ಷೇತ್ರದ ಬಳಿ ಇರುವ, ದಿನಕ್ಕೆ 18 ಲಕ್ಷ ಬ್ಯಾರಲ್ ತೈಲ ಸಂಸ್ಕರಿಸುವ ಖುರೈಸ್ ಘಟಕ. ಈ ಎರಡೂ ಘಟಕಗಳು ಯೆಮೆನ್‍ನಿಂದ 1000 ಕಿ.ಮೀ.ಗೂ ಹೆಚ್ಚು ದೂರದಲ್ಲಿವೆ. ಅಬ್ಖೈಕ್‍ನ 17 ಸ್ಥಳಗಳು ಉರಿಯುತ್ತಿವೆಯಾದರೂ, ಒಟ್ಟು ಎಷ್ಟು ಹಾನಿ, ನಾಶ ಸಂಭವಿಸಿದೆ ಎಂದು ಇನ್ನೂ ಸ್ಪಷ್ಟವಾಗಿಲ್ಲ.

ಪ್ರಪಂಚದ ಅತ್ಯಂತ ಬಡದೇಶಗಳಲ್ಲಿ ಒಂದಾಗಿರುವ ಯೆಮೆನ್, 2015ರಿಂದಲೂ ಸೌದಿ ಮತ್ತು ಯುಎಇ, ಪಾಶ್ಚಾತ್ಯ ಶಸ್ತ್ರಾಸ್ತ್ರಗಳ ಬೆಂಬಲದೊಂದಿಗೆ ನಡೆಸುತ್ತಿರುವ ಬರ್ಬರ ಯುದ್ಧವನ್ನು ಎದುರಿಸುತ್ತಿದೆ. ಹಾಗಾಗಿ ಅದಕ್ಕೆ ಪ್ರತಿರೋಧವಾಗಿ ಈ ದಾಳಿಗಳ ಹೊಣೆಯನ್ನು ಹೊತ್ತುಕೊಂಡಿದೆ. ಸೌದಿಯ ಬಾಂಬ್ ದಾಳಿ ಮತ್ತು ದಿಗ್ಬಂಧನದ ಪರಿಣಾಮವಾಗಿ ಯೆಮೆನ್‍ನ ಮೂರನೇ ಎರಡರಷ್ಟು ಪ್ರಜೆಗಳು ನಿರಾಶ್ರಿತರಾಗಿದ್ದು, ತೀವ್ರ ಅಪೌಷ್ಠಿಕತೆಯ ಹೊಸ್ತಿಲಲ್ಲಿದ್ದಾರೆ.

ಅಮೆರಿಕ ಪ್ರತಿಕ್ರಿಯೆ
ಇರಾನ್ ವಿರುದ್ಧದ ಅಮೆರಿಕ ಮತ್ತು ಸೌದಿ ನೇತೃತ್ವದ ಮಿತ್ರಕೂಟವು ಈ ಅವಕಾಶವನ್ನು ಇರಾನ್ ವಿರುದ್ಧ ದಾಳಿಯನ್ನು ಹೆಚ್ಚಿಸಲು ಬಳಸುತ್ತಿದೆ. ಯುಎಸ್‍ಎಯ ರಾಜ್ಯಾಂಗ ಕಾರ್ಯದರ್ಶಿ ಮೈಕ್ ಪೋಂಪಿಯೋ ನೇರವಾಗಿ ಇರಾನನ್ನು ಹೊಣೆ ಮಾಡಿದ್ದರೆ, ಅಧ್ಯಕ್ಷ ಟ್ರಂಪ್ ಇದನ್ನೇ ಎರಡು ಬಾರಿ ಟ್ವೀಟ್ ಮಾಡಿದ್ದಾರೆ. ಒಬ್ಬ ಸೆನೆಟರ್ ಅಂತೂ ಇರಾನಿನ ತೈಲಕ್ಷೇತ್ರಗಳ ಮೇಲೆ ಬಾಂಬ್ ದಾಳಿ ಮಾಡುವ ಸಲಹೆಯನ್ನೂ ನೀಡಿದ್ದಾರೆ. ಇರಾನಿನ ವಿದೇಶಾಂಗ ಮಂತ್ರಿ ಎಂ.ಜೆ. ಝರೀಫ್, ಪೋಂಪಿಯೋ ಆರೋಪವನ್ನು ಸಾರಾಸಗಟಾಗಿ ನಿರಾಕರಿಸಿದ್ದಾರೆ. ಹೌಥಿಗಳು ನಡೆಸಿದ ದಾಳಿಗೆ ಇರಾನನ್ನು ಹೊಣೆ ಮಾಡುವ ಮೂಲಕ ಯುಎಸ್‍ಎ ತನ್ನ ‘ಗರಿಷ್ಟ ಒತ್ತಡ’ದ ವಿಫಲ ಧೋರಣೆಯಿಂದ ಹಿಂದೆ ಸರಿದು, ‘ಗರಿಷ್ಟ ಸಂಚಿನ’ ಧೋರಣೆ ಅನುಸರಿಸುತ್ತಿದೆ ಎಂದು ಅವರು ಪ್ರತ್ಯಾರೋಪ ಮಾಡಿದ್ದಾರೆ.

ಸೌದಿಯ ಮೇಲಿನ ದಾಳಿಗಳ ಕುರಿತು ಆತಂಕ ವ್ಯಕ್ತಪಡಿಸಿರುವ ರಷ್ಯಾ ಮತ್ತು ಚೀನಾ, ಅವಸರದ ತೀರ್ಮಾನಗಳ ಕುರಿತು ಎಚ್ಚರಿಕೆ ನೀಡಿವೆ. ಯಾವುದೇ ತನಿಖೆ ಅಥವಾ ಸಾಕ್ಷ್ಯಾಧಾರಗಳು ಇಲ್ಲದೇ ಯುಎಸ್‍ಎಯ ಬಹಿರಂಗ ಮಿಲಿಟರಿ ಮಾತುಗಳು ಸ್ವೀಕಾರಾರ್ಹವಲ್ಲ ಎಂದು ಎರಡೂ ದೇಶಗಳ ವಿದೇಶಾಂಗ ಖಾತೆಗಳ ವಕ್ತಾರರು ಹೇಳಿಕೆ ನೀಡಿದ್ದಾರೆ. ರಷ್ಯಾದ ವಕ್ತಾರರು ಇನ್ನೂ ಮುಂದುವರಿದು, ಈ ದಾಳಿಗಳು ಯೆಮೆನ್‍ನಲ್ಲಿ ಮುಂದುವರಿಯುತ್ತಿರುವ ಬಿಕ್ಕಟ್ಟಿನ ನೇರ ಪರಿಣಾಮ’ ಎಂದು ಬಣ್ಣಿಸಿದ್ದಾರೆ.

“ಸೌದಿ ಅರೇಬಿಯಾ ನಮ್ಮ ಕ್ಷಿಪಣಿಗಳ ಖರೀದಿ ಪಟ್ಟಿಯು ಅದರ ಭದ್ರತೆಗೆ ಬೆದರಿಕೆ ಎಂಬ ನೆಪವೊಡ್ಡಿ ಯೆಮೆನ್‍ನ ಮೇಲೆ ಯುದ್ಧ ಸಾರಿತು. ಈಗ ನಾವು ಅವರ ತೈಲ ಕ್ಷೇತ್ರಗಳ ಮೇಲೆ ದಾಳಿ ನಡೆಸಿದಾಗ, ಅವರು ಯೆಮೆನನ್ನು ಬಿಟ್ಟು ಬೇರೆಯವರು ಇದನ್ನು ಮಾಡಿದ್ದಾರೆ ಎಂದು ದೂರಿದಾಗ ಆಶ್ಚರ್ಯವಾಗುತ್ತದೆ. ಇದು ಅವರ ಹೇಡಿತನವನ್ನು ತೋರಿಸುತ್ತದೆ” ಎಂದು ಹೌಥಿಗಳ ಅತ್ಯುನ್ನತ ರಾಜಕೀಯ ಮಂಡಳಿಯ ಸದಸ್ಯ ಮೊಹಮ್ಮದ್ ಅಲ್-ಬುಖೈತಿ ಹೇಳಿದ್ದಾರೆ.

ಇರಾನ್ ಮತ್ತು ನಂತರದಲ್ಲಿ ವೆನೆಜ್ಯೂಯೆಲಾ ವಿರುದ್ಧ ಅಮೆರಿಕದ ಏಕಪಕ್ಷೀಯ ಮತ್ತು ಕಾನೂನುಬಾಹಿರ ದಿಗ್ಬಂಧನ ಕಳೆದ ನವೆಂಬರ್‍ನಿಂದಲೇ ಜಾರಿಗೆ ಬಂದಿದೆ. ಅಲ್ಲಿಂದ ನಂತರ ಈ ಎರಡು ಬಿಕ್ಕಟ್ಟುಗಳು ಪ್ರಪಂಚವನ್ನು ಈಗಾಗಲೇ ತೈಲ ಮಾರುಕಟ್ಟೆಯ ಅಸ್ಥಿರತೆಯತ್ತ ತಳ್ಳಿವೆ. ಭಾರತವು ಅಮೆರಿಕದ ಒತ್ತಡಕ್ಕೆ ಮಣಿದು, ಏಪ್ರಿಲ್ 2019ರಿಂದ ಇರಾನಿನಿಂದ ತೈಲ ಖರೀದಿಯನ್ನು ನಿಲ್ಲಿಸಿತು. ಸೌದಿಯಿಂದಲೇ ಹೆಚ್ಚು ಆಮದು ಮಾಡಿಕೊಳ್ಳುತ್ತಿತ್ತು. ಆದುದರಿಂದ, ಒಂದು ಕಡೆ ಸೌದಿ ತೈಲದ ಕುರಿತ ಅಮೆರಿಕದ ಸುಳ್ಳು ಭರವಸೆ ಮತ್ತು ಇನ್ನೊಂದು ಕಡೆ ಇರಾನಿಗೆ ಭಾರತ ಕೈಕೊಟ್ಟ ಪರಿಣಾಮವಾಗಿ ಈ ಬಿಕ್ಕಟ್ಟಿನಿಂದ ಭಾರತವು ಗರಿಷ್ಟ ಬಾಧಿತವಾಗಲಿದೆ. ಭಾರತದ ಜನರು ತೈಲ ಬೆಲೆ ಹೆಚ್ಚಳದ ಜೊತೆಗೆ, ಅದರ ಪರಿಣಾಮವಾಗಿ ಉಂಟಾಗುವ ಸರಕು ಬೆಲೆಯೇರಿಕೆಯ ಪರಿಣಾಮವನ್ನೂ ಎದುರಿಸಲಿದ್ದಾರೆ. ಮೋದಿ ಮತ್ತವರ ಮಂತ್ರಿಗಳನ್ನು ಈ ಕುರಿತ ಪ್ರಶ್ನೆಗಳಿಂದ ರಕ್ಷಿಸಲು ಅತಿರೇಕದ ಉಡಾಫೆಗಳಲ್ಲಿ ಹೆಚ್ಚಳವನ್ನೂ ನಾವು ಕಾಣಬಹುದು.

ಒಟ್ಟಾರೆ ಆರ್ಥಿಕತೆಯು ಕುಂಠಿತಗೊಳ್ಳುತ್ತಿರುವ, ಬೆಳವಣಿಗೆಯ ಸೂಚ್ಯಂಕಗಳು ಕುಸಿಯುತ್ತಿರುವ ಮತ್ತು ಭಾರೀ ಪ್ರಮಾಣದಲ್ಲಿ ನಿರುದ್ಯೋಗ ಹೆಚ್ಚಿರುವ ಈ ಹೊತ್ತಿನಲ್ಲಿ ಭಾರತಕ್ಕೆ ಈ ತೈಲ ಬೆಲೆ ಏರಿಕೆಯು ಉರಿಯುವ ಬೆಂಕಿಗೆ ಪೆಟ್ರೋಲ್ ಸುರಿದಂತಾಗಬಹುದು!

  • ಭರತ್ ಹೆಬ್ಬಾಳ್
    ಅನುವಾದ: ನಿಖಿಲ್ ಕೋಲ್ಪೆ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...