Homeಅಂತರಾಷ್ಟ್ರೀಯದೊಡ್ಡ ಶ್ರೀಮಂತ ಸೌದಿಯನ್ನು ಸೋಲಿಸುತ್ತಿರುವ ಪುಟ್ಟ ಬಡ ರಾಷ್ಟ್ರ ಯೆಮೆನ್

ದೊಡ್ಡ ಶ್ರೀಮಂತ ಸೌದಿಯನ್ನು ಸೋಲಿಸುತ್ತಿರುವ ಪುಟ್ಟ ಬಡ ರಾಷ್ಟ್ರ ಯೆಮೆನ್

ಇರಾನ್ ಹೌಥಿಗಳ ಮೂಲಕ ಗಳಿಸಿರುವ ದಾಳಿಯ ಶಕ್ತಿಯು ಮುಂದೆ ಈಗ ಮುಂದುವರೆಯುತ್ತಿರುವ ಸಿರಿಯಾ, ಲೆಬನಾನ್ ಮತ್ತು ಇರಾಕ್ ಯುದ್ಧಗಳಲ್ಲಿ ಪಾಲುದಾರರಾಗಿರುವ ಇಸ್ರೇಲ್ ಮತ್ತು ಟರ್ಕಿಯನ್ನು ಎಚ್ಚರಿಕೆಯ ಸ್ಥಿತಿಯಲ್ಲಿ ಇಡಲಿದೆ.

- Advertisement -
- Advertisement -

ಯೆಮೆನ್ ಎಂಬ ಪುಟ್ಟ ರಾಷ್ಟ್ರದ ಮೇಲೆ ಹೇರಿದ ಯುದ್ಧದಲ್ಲಿ ಸೌದಿ ಅರೇಬಿಯಾ ಸೋಲುತ್ತಿರುವುದು ಮಾತ್ರವಲ್ಲ; ತನ್ನ ಮಿತ್ರರ ಬೆಂಬಲವನ್ನೂ ಕಳೆದುಕೊಳ್ಳುತ್ತಿದೆ ಎಂದು ಇತ್ತೀಚಿಗಿನ ಬೆಳವಣಿಗೆಗಳು ತೋರಿಸುತ್ತವೆ. ಸೌದಿಯ ಆಡಳಿತದ ವಿರುದ್ಧ ಹುಟ್ಟಿಕೊಂಡ ಹೌಥಿ ಅಥವಾ ಅನ್ಸಾರ್ ಅಲ್ಲಾಹ್ ಚಳವಳಿಯು ಎರಡು ದಶಕಗಳ ಯುದ್ಧದ ಬಳಿಕ ಸೌದಿಯನ್ನು ಮಂಡಿಯೂರುವಂತೆ ಮಾಡಿದೆ. ಪ್ರಪಂಚದ ಅತ್ಯಂತ ಬಡ ದೇಶಗಳಲ್ಲಿ ಒಂದಾದ ಯೆಮೆನ್ ಪ್ರಪಂಚದ ಅತ್ಯಂತ ಶ್ರೀಮಂತ ದೇಶವಾದ ಸೌದಿ ಅರೇಬಿಯಾವನ್ನು ಮಣಿಸಿರುವುದು ಇತ್ತೀಚಿನ ಕಾಲದಲ್ಲಿ ಕುತೂಹಲಕ್ಕೆ ಎಡೆಮಾಡಿಕೊಟ್ಟಿರುವ ವಿಷಯವಾಗಿದೆ.

ಇತ್ತೀಚಿನ ತಿಂಗಳುಗಳಲ್ಲಿ ಹೌಥಿಗಳು ತಮ್ಮ ಸರಣಿ ದಾಳಿಗಳ ಮೂಲಕ ಸೌದಿ ಅರೇಬಿಯಾದ ಯಾವುದೇ ಜಾಗಕ್ಕೆ ತಾವು ಪ್ರವೇಶಿಸಿಬಲ್ಲೆವು ಮತ್ತು ಅಲ್ಲಿ ದಾಳಿ ನಡೆಸಿ ಆ ದೇಶದ ಆರ್ಥಿಕತೆಯನ್ನು ಸ್ತಬ್ಧಗೊಳಿಸಲು ಶಕ್ತರಿದ್ದೇವೆ ಎಂಬುದನ್ನು ತೋರಿಸಿಕೊಟ್ಟಿದ್ದಾರೆ. ಈ ದಾಳಿಗಳಿಂದ ಸೌದಿಯ ರಾಜಧಾನಿ ರಿಯಾದ್ ಮತ್ತು ಆ ದೇಶದ ಎಲ್ಲಾ ತೈಲ ಕ್ಷೇತ್ರಗಳು ಮಾತ್ರವಲ್ಲ, ನೆರೆಯ ದುಬೈಯ ಅತ್ಯಂತ ವ್ಯವಸ್ಥಿತವಾಗಿರುವ ವಿಮಾನ ನಿಲ್ದಾಣ ಕೂಡಾ ತಮ್ಮ ದಾಳಿಯ ವ್ಯಾಪ್ತಿಯಲ್ಲಿವೆ ಎಂದವರು ಸಾಬೀತುಮಾಡಿದ್ದಾರೆ.

ಈ ಪ್ರದೇಶದಲ್ಲಿ ಅಮೆರಿಕದ ಪ್ರಭಾವದ ವಿರುದ್ದ ಇರಾನಿನ ಪ್ರತಿರೋಧ ಕಾರ್ಯತಂತ್ರದ ಭಾಗವಾಗಿ ಶಿಯಾ ಹೌಥಿಗಳು ಹುಟ್ಟಿಕೊಂಡಿದ್ದರು. ಭಾರೀ ಸಾವುನೋವು ಮತ್ತು ಅತ್ಯಂತ ದೊಡ್ಡ ಮಾನವ ನಿರ್ಮಿತ ದುರಂತದ ನಡುವೆಯೂ ಯೆಮೆನ್ ಮೇಲೆ ಸೌದಿಯ ದಾಳಿಯನ್ನು ನಿಯಂತ್ರಿಸಲು ಮಾತ್ರವಲ್ಲ, ಅದನ್ನು ಮಿತ್ರರಾಷ್ಟ್ರಗಳಿಂದ ಪ್ರತ್ಯೇಕಿಸಲು ಅವರೀಗ ಶಕ್ತರಾಗಿದ್ದಾರೆ. ಈಗ ನೋಡಲು ಉಳಿದಿರುವುದೇನೆಂದರೆ, ಸಂಧಾನದ ಮೇಜಿನಲ್ಲಿ ಸೌದಿ ಅರೇಬಿಯಾವು ಎಷ್ಟರ ಮಟ್ಟಿಗೆ ಈ ಯುದ್ಧವನ್ನು ಕೊನೆಗೊಳಿಸಲು ಬಯಸಿದೆ ಎಂಬುದು. ಸ್ಥಳೀಯವಾಗಿ ಸೌದಿಯ ಮಿತ್ರಪಕ್ಷಗಳಲ್ಲಿ ಮುಖ್ಯವಾಗಿರುವುದು ಯುಎಇ ಮಾತ್ರ. ಯುಎಸ್‍ಎ, ಯುಕೆ, ಫ್ರಾನ್ಸ್ ಮತ್ತು ಕೆನಡಾಗಳು ಅದಕ್ಕೆ ಶಸ್ತ್ರಾಸ್ತ್ರಗಳನ್ನು ಒದಗಿಸುತ್ತಿವೆ.

ವಿಶ್ವಸಂಸ್ಥೆಯು ಜಗತ್ತಿನ ಅತ್ಯಂತ ದೊಡ್ಡ ಮಾನವ ನಿರ್ಮಿತ ದುರಂತವೆಂದು ಬಣ್ಣಿಸಿರುವ ಯೆಮೆನ್ ಅಂತರ್ಯುದ್ಧದ ಬೆಂಕಿಗೆ 2015ರಲ್ಲಿ ಅಂದಿನ ರಾಜಕುಮಾರ ಮೊಹಮ್ಮದ್ ಬಿನ್ ಸಲ್ಮಾನ್ ಎಣ್ಣೆ ಸುರಿದಿದ್ದರು. ಈ ತನಕ ಸೌದಿ ಮಿತ್ರಕೂಟವು 10,000ದಷ್ಟು ಯೆಮೆನ್ ಪ್ರಜೆಗಳನ್ನು ಕೊಂದಿದೆ. ಅದರಲ್ಲಿ 1,000ದಷ್ಟು ಮಕ್ಕಳು. 30 ಲಕ್ಷಕ್ಕೂ ಹೆಚ್ಚು ಯೆಮೆನಿಗಳು ತಮ್ಮದೇ ದೇಶದಲ್ಲಿ ನಿರಾಶ್ರಿತರಾಗಿದ್ದಾರೆ. 1.7 ಕೋಟಿ ಜನಸಂಖ್ಯೆಯಲ್ಲಿ ಅರ್ಧದಷ್ಟು ಮಂದಿಗೆ ಆಹಾರವಾಗಲೀ, ಕುಡಿಯುವ ನೀರಾಗಲೀ ಸರಿಯಾಗಿ ಸಿಗುತ್ತಿಲ್ಲ. ಇದಕ್ಕೆ ಪ್ರಮುಖ ಕಾರಣ ಯೆಮೆನಿನ ಜನರಿಗೆ ಅಗತ್ಯ ವಸ್ತುಗಳ ಪೂರೈಕೆಯ ಮೇಲೆ ದಿಗ್ಬಂಧನ ವಿಧಿಸಿ ಉಂಟುಮಾಡಿದ ಮಾನವ ನಿರ್ಮಿತ ಬರ.

ಸೌದಿಗಳು ಯೆಮೆನಿ ಜನರ ಮೇಲೆ ಯದ್ವಾತದ್ವವಾಗಿ ಬಾಂಬ್‍ದಾಳಿ ನಡೆಸಿ, ಆ ದೇಶದ ಶಾಲೆಗಳು, ಆಸ್ಪತ್ರೆಗಳಂತಹಾ ಮೂಲಭೂತ ಸೌಕರ್ಯಗಳನ್ನು, ರಾಜಧಾನಿ ಸಾನಾವನ್ನು ಮತ್ತು ಪುರಾತನ ಸಾಂಸ್ಕೃತಿಕ ನಗರವಾದ ಸಾದ್ಹಾವನ್ನು ನಾಶ ಮಾಡಿದ್ದರು. 50 ಲಕ್ಷಕ್ಕಿಂತಲೂ ಹೆಚ್ಚು ಯೆಮೆನಿ ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದು, ಹಸಿವಿನ ಸಾವನ್ನು ಎದುರಿಸುತ್ತಿದ್ದಾರೆ.

ಇರಾನ್ ವಿರುದ್ಧದ ಯುಎಸ್‍ಎಯ ದ್ವೇಷದ ಪರಿಣಾಮವಾಗಿ ಹೌಥಿಗಳು ಅಂತರ್ಖಂಡ ಕ್ಷಿಪಣಿಗಳೂ ಸೇರಿದಂತೆ ತಮ್ಮ ಶಸ್ತ್ರಾಸ್ತ್ರ ಬಲವನ್ನು ಪಡೆದುಕೊಂಡಿದ್ದಾರೆಂಬುದನ್ನು ಇತ್ತೀಚಿನ ಬೆಳವಣಿಗೆಗಳ ಮೂಲಕ ತೋರಿಸಿದ್ದಾರೆ. ಕಳೆದ ಎರಡು ತಿಂಗಳುಗಳಲ್ಲಿ ಸೌದಿಯ ಅಭಾ ವಿಮಾನ ನಿಲ್ದಾಣದ ಮೇಲೆ ಎರಡು ಬಾರಿ ದಾಳಿ ನಡೆಸಿದ್ದಾರೆ. ಆಗಸ್ಟ್ 17ರಂದು ಸೌದಿ ಅರೇಬಿಯಾದ ತೀರಾ ಒಳಗಿರುವ ತೈಲಬಾವಿಗಳ ಮೇಲೂ ದಾಳಿಯನ್ನು ನಡೆಸಿದ್ದಾರೆ. ಸೌದಿಯ ಮಿತ್ರರಾಷ್ಟ್ರ ಸಂಯುಕ್ತ ಅರಬ್ ಗಣರಾಜ್ಯ (ಯುಎಇ)ದಲ್ಲಿ ಯೆಮೆನ್‍ನಿಂದ 1250 ಕಿ.ಮೀ.ನಷ್ಟು ದೂರ ಇರುವ ಸಾಯ್ಬಾ ತೈಲಕ್ಷೇತ್ರದ ಮೇಲೆ ದಾಳಿ ನಡೆಸಿ ತಮ್ಮ ಶಕ್ತಿಯನ್ನು ತೋರಿಸಿದ್ದಾರೆ.

ಕಳೆದ ತಿಂಗಳು ಬಂದರು ನಗರ ಏಡನ್‍ನನ್ನು ಗೆದ್ದ ಬಳಿಕ ಸೌದಿಯ ಮಿತ್ರ ಯುಎಇ, ಮಿತ್ರಕೂಟದಿಂದ ಹೊರಬಂದಿದೆ. ಏಡನ್ ಸುನ್ನಿಗಳು ಬಹುಸಂಖ್ಯಾತರಾಗಿರುವ ನಗರ. ಅದನ್ನು ಯೆಮೆನಿ ಜನರ ಇಚ್ಛೆಗೆ ವಿರುದ್ಧವಾಗಿ ಎಷ್ಟು ಕಾಲ ಹಿಡಿದಿಟ್ಟುಕೊಳ್ಳಬಹುದು ಎಂಬುದನ್ನು ಮುಂದೆ ನೋಡಬೇಕಷ್ಟೆ.

ಸೌದಿ ಮತ್ತು ಅದರ ಮಿತ್ರ ಪಕ್ಷಗಳು ಯೆಮೆನಿಗಿಂತ ಹೆಚ್ಚು ಶಕ್ತಿಶಾಲಿ ಮತ್ತು ದುಬಾರಿ ಶಸ್ತ್ರಾಸ್ತ್ರಗಳನ್ನು ಹೊಂದಿದ್ದರೂ, ಹೌಥಿಗಳು ಇತ್ತೀಚೆಗೆ ಪಡೆದುಕೊಂಡಿರುವ ಶಸ್ತ್ರಾಸ್ತ್ರಗಳಿಂದ ಸೌದಿಯು ತಮ್ಮನ್ನು ರಕ್ಷಿಸಿಕೊಳ್ಳಲು ವಿಫಲರಾಗಿದ್ದಾರೆ. ಈ ಶಸ್ತ್ರಾಸ್ತ್ರಗಳನ್ನು ಯುಎಸ್‍ಎಯ ತೀವ್ರವಾದ ಆರ್ಥಿಕ ದಿಗ್ಬಂಧನದ ಹೊರತಾಗಿಯೂ ಇರಾನ್ ಅಭಿವೃದ್ಧಿಪಡಿಸಿದೆ. 2010ರಲ್ಲಿ ಯುಎಸ್‍ಎಯ ‘ಸ್ಟೆಲ್ತ್’ ಡ್ರೋನ್ ಒಂದನ್ನು ವಶಕ್ಕೆ ತೆಗೆದುಕೊಂಡ ಮೇಲೆ, ಇರಾನ್ ತನ್ನ ಸುತ್ತ 1500 ಕಿ.ಮೀ. ವ್ಯಾಪ್ತಿಯಲ್ಲಿ ಕಾವಲಿರಿಸುವ ಡ್ರೋನ್ ತಯಾರಿಸುವ ಕಾರ್ಯಕ್ರಮದಲ್ಲಿ ಯಶಸ್ವಿಯಾಯಿತು.

ಯುಎಸ್‍ಎ ತನ್ನ ಮಿತ್ರ ಪಕ್ಷಗಳ ಜೊತೆಗೂಡಿ ಈ ಪ್ರದೇಶದಲ್ಲಿ ನಡೆಸಿದ ಎಲ್ಲಾ ಯುದ್ಧಗಳು- 2001ರಲ್ಲಿ ಅಫಘಾನಿಸ್ತಾನ, 2003ರಲ್ಲಿ ಇರಾಕ್, 2006ರಲ್ಲಿ ಲೆಬನಾನ್, 2011ರಲ್ಲಿ ಸಿರಿಯಾ, 2014ರಲ್ಲಿ ಮತ್ತೆ ಇರಾಕ್, 2015ರಲ್ಲಿ ಯೆಮೆನ್-ಇವೆಲ್ಲವೂ ಅನುದ್ದೇಶಿತವಾಗಿ ಇರಾನ್ ಮತ್ತು ಅದರ ಮಿತ್ರ ಪಕ್ಷಗಳನ್ನು ಗಟ್ಟಿಗೊಳಿಸಿವೆ. ಇರಾನ್ ಹೌಥಿಗಳ ಮೂಲಕ ಗಳಿಸಿರುವ ದಾಳಿಯ ಶಕ್ತಿಯು ಮುಂದೆ ಈಗ ಮುಂದುವರೆಯುತ್ತಿರುವ ಸಿರಿಯಾ, ಲೆಬನಾನ್ ಮತ್ತು ಇರಾಕ್ ಯುದ್ಧಗಳಲ್ಲಿ ಪಾಲುದಾರರಾಗಿರುವ ಇಸ್ರೇಲ್ ಮತ್ತು ಟರ್ಕಿಯನ್ನು ಎಚ್ಚರಿಕೆಯ ಸ್ಥಿತಿಯಲ್ಲಿ ಇಡಲಿದೆ.

ಈಗ ಸೌದಿಯು ರಾಜಕೀಯವಾದ ಶಾಂತಿ ಸಂಧಾನಕ್ಕೆ ಒಪ್ಪಬೇಕಾದ ಅನಿವಾರ್ಯತೆಗೆ ಸಿಕ್ಕಿದೆ. ಪರಿಹಾರಧನ ನೀಡಬೇಕೆಂಬ ಯೆಮೆನ್ ಬೇಡಿಕೆಗೂ ಬಲಬರಲಿದೆ. ಆದರೆ, ಈಗಾಗಲೇ ಕಚ್ಚಾ ತೈಲದ ಬೆಲೆ ಕುಸಿತದಿಂದಾಗಿ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಸೌದಿ ಅರೇಬಿಯಾ ಈ ಯುದ್ಧವನ್ನು ಮುಂದುವರಿಸುವುದು ಕಾರ್ಯಸಾಧುವಲ್ಲ ಎಂಬ ಲಕ್ಷಣಗಳು ಈಗಾಗಲೇ ಕಂಡುಬರುತ್ತಿರುವುದರಿಂದಾಗಿ ಹೌಥಿಗಳ ಬೇಡಿಕೆಗಳಿಗೆ ಒಪ್ಪದೇ ಬೇರೆ ದಾರಿಯಿಲ್ಲ.

ಯುದ್ಧ ಮತ್ತು ಪ್ರತಿದಾಳಿಯ ಮುಖಾಂತರ ಹೌಥಿಗಳು ಸಾಧಿಸಿರುವ ಈ ಗೆಲುವಿನಿಂದಲಾದರೂ, ಆ ಜಾಗದಲ್ಲಿ ಶಾಂತಿ ನೆಲೆಸಿದರೆ ಮನುಕುಲ ಸ್ವಲ್ಪವಾದರೂ ನಿಟ್ಟುಸಿರೆಳೆಯಬಹುದು. ಇಲ್ಲವಾದರೆ, ಮತ್ತಷ್ಟು ರಕ್ತಪಾತ ಹಾಗೂ ಅನಿಶ್ಚಿತತೆ ಆ ಭಾಗವನ್ನು ಕಾಡುವುದರಲ್ಲಿ ಸಂದೇಹವೇ ಇಲ್ಲ.

ಅನುವಾದ: ನಿಖಿಲ್ ಕೋಲ್ಪೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...