Homeಅಂತರಾಷ್ಟ್ರೀಯದೊಡ್ಡ ಶ್ರೀಮಂತ ಸೌದಿಯನ್ನು ಸೋಲಿಸುತ್ತಿರುವ ಪುಟ್ಟ ಬಡ ರಾಷ್ಟ್ರ ಯೆಮೆನ್

ದೊಡ್ಡ ಶ್ರೀಮಂತ ಸೌದಿಯನ್ನು ಸೋಲಿಸುತ್ತಿರುವ ಪುಟ್ಟ ಬಡ ರಾಷ್ಟ್ರ ಯೆಮೆನ್

ಇರಾನ್ ಹೌಥಿಗಳ ಮೂಲಕ ಗಳಿಸಿರುವ ದಾಳಿಯ ಶಕ್ತಿಯು ಮುಂದೆ ಈಗ ಮುಂದುವರೆಯುತ್ತಿರುವ ಸಿರಿಯಾ, ಲೆಬನಾನ್ ಮತ್ತು ಇರಾಕ್ ಯುದ್ಧಗಳಲ್ಲಿ ಪಾಲುದಾರರಾಗಿರುವ ಇಸ್ರೇಲ್ ಮತ್ತು ಟರ್ಕಿಯನ್ನು ಎಚ್ಚರಿಕೆಯ ಸ್ಥಿತಿಯಲ್ಲಿ ಇಡಲಿದೆ.

- Advertisement -
- Advertisement -

ಯೆಮೆನ್ ಎಂಬ ಪುಟ್ಟ ರಾಷ್ಟ್ರದ ಮೇಲೆ ಹೇರಿದ ಯುದ್ಧದಲ್ಲಿ ಸೌದಿ ಅರೇಬಿಯಾ ಸೋಲುತ್ತಿರುವುದು ಮಾತ್ರವಲ್ಲ; ತನ್ನ ಮಿತ್ರರ ಬೆಂಬಲವನ್ನೂ ಕಳೆದುಕೊಳ್ಳುತ್ತಿದೆ ಎಂದು ಇತ್ತೀಚಿಗಿನ ಬೆಳವಣಿಗೆಗಳು ತೋರಿಸುತ್ತವೆ. ಸೌದಿಯ ಆಡಳಿತದ ವಿರುದ್ಧ ಹುಟ್ಟಿಕೊಂಡ ಹೌಥಿ ಅಥವಾ ಅನ್ಸಾರ್ ಅಲ್ಲಾಹ್ ಚಳವಳಿಯು ಎರಡು ದಶಕಗಳ ಯುದ್ಧದ ಬಳಿಕ ಸೌದಿಯನ್ನು ಮಂಡಿಯೂರುವಂತೆ ಮಾಡಿದೆ. ಪ್ರಪಂಚದ ಅತ್ಯಂತ ಬಡ ದೇಶಗಳಲ್ಲಿ ಒಂದಾದ ಯೆಮೆನ್ ಪ್ರಪಂಚದ ಅತ್ಯಂತ ಶ್ರೀಮಂತ ದೇಶವಾದ ಸೌದಿ ಅರೇಬಿಯಾವನ್ನು ಮಣಿಸಿರುವುದು ಇತ್ತೀಚಿನ ಕಾಲದಲ್ಲಿ ಕುತೂಹಲಕ್ಕೆ ಎಡೆಮಾಡಿಕೊಟ್ಟಿರುವ ವಿಷಯವಾಗಿದೆ.

ಇತ್ತೀಚಿನ ತಿಂಗಳುಗಳಲ್ಲಿ ಹೌಥಿಗಳು ತಮ್ಮ ಸರಣಿ ದಾಳಿಗಳ ಮೂಲಕ ಸೌದಿ ಅರೇಬಿಯಾದ ಯಾವುದೇ ಜಾಗಕ್ಕೆ ತಾವು ಪ್ರವೇಶಿಸಿಬಲ್ಲೆವು ಮತ್ತು ಅಲ್ಲಿ ದಾಳಿ ನಡೆಸಿ ಆ ದೇಶದ ಆರ್ಥಿಕತೆಯನ್ನು ಸ್ತಬ್ಧಗೊಳಿಸಲು ಶಕ್ತರಿದ್ದೇವೆ ಎಂಬುದನ್ನು ತೋರಿಸಿಕೊಟ್ಟಿದ್ದಾರೆ. ಈ ದಾಳಿಗಳಿಂದ ಸೌದಿಯ ರಾಜಧಾನಿ ರಿಯಾದ್ ಮತ್ತು ಆ ದೇಶದ ಎಲ್ಲಾ ತೈಲ ಕ್ಷೇತ್ರಗಳು ಮಾತ್ರವಲ್ಲ, ನೆರೆಯ ದುಬೈಯ ಅತ್ಯಂತ ವ್ಯವಸ್ಥಿತವಾಗಿರುವ ವಿಮಾನ ನಿಲ್ದಾಣ ಕೂಡಾ ತಮ್ಮ ದಾಳಿಯ ವ್ಯಾಪ್ತಿಯಲ್ಲಿವೆ ಎಂದವರು ಸಾಬೀತುಮಾಡಿದ್ದಾರೆ.

ಈ ಪ್ರದೇಶದಲ್ಲಿ ಅಮೆರಿಕದ ಪ್ರಭಾವದ ವಿರುದ್ದ ಇರಾನಿನ ಪ್ರತಿರೋಧ ಕಾರ್ಯತಂತ್ರದ ಭಾಗವಾಗಿ ಶಿಯಾ ಹೌಥಿಗಳು ಹುಟ್ಟಿಕೊಂಡಿದ್ದರು. ಭಾರೀ ಸಾವುನೋವು ಮತ್ತು ಅತ್ಯಂತ ದೊಡ್ಡ ಮಾನವ ನಿರ್ಮಿತ ದುರಂತದ ನಡುವೆಯೂ ಯೆಮೆನ್ ಮೇಲೆ ಸೌದಿಯ ದಾಳಿಯನ್ನು ನಿಯಂತ್ರಿಸಲು ಮಾತ್ರವಲ್ಲ, ಅದನ್ನು ಮಿತ್ರರಾಷ್ಟ್ರಗಳಿಂದ ಪ್ರತ್ಯೇಕಿಸಲು ಅವರೀಗ ಶಕ್ತರಾಗಿದ್ದಾರೆ. ಈಗ ನೋಡಲು ಉಳಿದಿರುವುದೇನೆಂದರೆ, ಸಂಧಾನದ ಮೇಜಿನಲ್ಲಿ ಸೌದಿ ಅರೇಬಿಯಾವು ಎಷ್ಟರ ಮಟ್ಟಿಗೆ ಈ ಯುದ್ಧವನ್ನು ಕೊನೆಗೊಳಿಸಲು ಬಯಸಿದೆ ಎಂಬುದು. ಸ್ಥಳೀಯವಾಗಿ ಸೌದಿಯ ಮಿತ್ರಪಕ್ಷಗಳಲ್ಲಿ ಮುಖ್ಯವಾಗಿರುವುದು ಯುಎಇ ಮಾತ್ರ. ಯುಎಸ್‍ಎ, ಯುಕೆ, ಫ್ರಾನ್ಸ್ ಮತ್ತು ಕೆನಡಾಗಳು ಅದಕ್ಕೆ ಶಸ್ತ್ರಾಸ್ತ್ರಗಳನ್ನು ಒದಗಿಸುತ್ತಿವೆ.

ವಿಶ್ವಸಂಸ್ಥೆಯು ಜಗತ್ತಿನ ಅತ್ಯಂತ ದೊಡ್ಡ ಮಾನವ ನಿರ್ಮಿತ ದುರಂತವೆಂದು ಬಣ್ಣಿಸಿರುವ ಯೆಮೆನ್ ಅಂತರ್ಯುದ್ಧದ ಬೆಂಕಿಗೆ 2015ರಲ್ಲಿ ಅಂದಿನ ರಾಜಕುಮಾರ ಮೊಹಮ್ಮದ್ ಬಿನ್ ಸಲ್ಮಾನ್ ಎಣ್ಣೆ ಸುರಿದಿದ್ದರು. ಈ ತನಕ ಸೌದಿ ಮಿತ್ರಕೂಟವು 10,000ದಷ್ಟು ಯೆಮೆನ್ ಪ್ರಜೆಗಳನ್ನು ಕೊಂದಿದೆ. ಅದರಲ್ಲಿ 1,000ದಷ್ಟು ಮಕ್ಕಳು. 30 ಲಕ್ಷಕ್ಕೂ ಹೆಚ್ಚು ಯೆಮೆನಿಗಳು ತಮ್ಮದೇ ದೇಶದಲ್ಲಿ ನಿರಾಶ್ರಿತರಾಗಿದ್ದಾರೆ. 1.7 ಕೋಟಿ ಜನಸಂಖ್ಯೆಯಲ್ಲಿ ಅರ್ಧದಷ್ಟು ಮಂದಿಗೆ ಆಹಾರವಾಗಲೀ, ಕುಡಿಯುವ ನೀರಾಗಲೀ ಸರಿಯಾಗಿ ಸಿಗುತ್ತಿಲ್ಲ. ಇದಕ್ಕೆ ಪ್ರಮುಖ ಕಾರಣ ಯೆಮೆನಿನ ಜನರಿಗೆ ಅಗತ್ಯ ವಸ್ತುಗಳ ಪೂರೈಕೆಯ ಮೇಲೆ ದಿಗ್ಬಂಧನ ವಿಧಿಸಿ ಉಂಟುಮಾಡಿದ ಮಾನವ ನಿರ್ಮಿತ ಬರ.

ಸೌದಿಗಳು ಯೆಮೆನಿ ಜನರ ಮೇಲೆ ಯದ್ವಾತದ್ವವಾಗಿ ಬಾಂಬ್‍ದಾಳಿ ನಡೆಸಿ, ಆ ದೇಶದ ಶಾಲೆಗಳು, ಆಸ್ಪತ್ರೆಗಳಂತಹಾ ಮೂಲಭೂತ ಸೌಕರ್ಯಗಳನ್ನು, ರಾಜಧಾನಿ ಸಾನಾವನ್ನು ಮತ್ತು ಪುರಾತನ ಸಾಂಸ್ಕೃತಿಕ ನಗರವಾದ ಸಾದ್ಹಾವನ್ನು ನಾಶ ಮಾಡಿದ್ದರು. 50 ಲಕ್ಷಕ್ಕಿಂತಲೂ ಹೆಚ್ಚು ಯೆಮೆನಿ ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದು, ಹಸಿವಿನ ಸಾವನ್ನು ಎದುರಿಸುತ್ತಿದ್ದಾರೆ.

ಇರಾನ್ ವಿರುದ್ಧದ ಯುಎಸ್‍ಎಯ ದ್ವೇಷದ ಪರಿಣಾಮವಾಗಿ ಹೌಥಿಗಳು ಅಂತರ್ಖಂಡ ಕ್ಷಿಪಣಿಗಳೂ ಸೇರಿದಂತೆ ತಮ್ಮ ಶಸ್ತ್ರಾಸ್ತ್ರ ಬಲವನ್ನು ಪಡೆದುಕೊಂಡಿದ್ದಾರೆಂಬುದನ್ನು ಇತ್ತೀಚಿನ ಬೆಳವಣಿಗೆಗಳ ಮೂಲಕ ತೋರಿಸಿದ್ದಾರೆ. ಕಳೆದ ಎರಡು ತಿಂಗಳುಗಳಲ್ಲಿ ಸೌದಿಯ ಅಭಾ ವಿಮಾನ ನಿಲ್ದಾಣದ ಮೇಲೆ ಎರಡು ಬಾರಿ ದಾಳಿ ನಡೆಸಿದ್ದಾರೆ. ಆಗಸ್ಟ್ 17ರಂದು ಸೌದಿ ಅರೇಬಿಯಾದ ತೀರಾ ಒಳಗಿರುವ ತೈಲಬಾವಿಗಳ ಮೇಲೂ ದಾಳಿಯನ್ನು ನಡೆಸಿದ್ದಾರೆ. ಸೌದಿಯ ಮಿತ್ರರಾಷ್ಟ್ರ ಸಂಯುಕ್ತ ಅರಬ್ ಗಣರಾಜ್ಯ (ಯುಎಇ)ದಲ್ಲಿ ಯೆಮೆನ್‍ನಿಂದ 1250 ಕಿ.ಮೀ.ನಷ್ಟು ದೂರ ಇರುವ ಸಾಯ್ಬಾ ತೈಲಕ್ಷೇತ್ರದ ಮೇಲೆ ದಾಳಿ ನಡೆಸಿ ತಮ್ಮ ಶಕ್ತಿಯನ್ನು ತೋರಿಸಿದ್ದಾರೆ.

ಕಳೆದ ತಿಂಗಳು ಬಂದರು ನಗರ ಏಡನ್‍ನನ್ನು ಗೆದ್ದ ಬಳಿಕ ಸೌದಿಯ ಮಿತ್ರ ಯುಎಇ, ಮಿತ್ರಕೂಟದಿಂದ ಹೊರಬಂದಿದೆ. ಏಡನ್ ಸುನ್ನಿಗಳು ಬಹುಸಂಖ್ಯಾತರಾಗಿರುವ ನಗರ. ಅದನ್ನು ಯೆಮೆನಿ ಜನರ ಇಚ್ಛೆಗೆ ವಿರುದ್ಧವಾಗಿ ಎಷ್ಟು ಕಾಲ ಹಿಡಿದಿಟ್ಟುಕೊಳ್ಳಬಹುದು ಎಂಬುದನ್ನು ಮುಂದೆ ನೋಡಬೇಕಷ್ಟೆ.

ಸೌದಿ ಮತ್ತು ಅದರ ಮಿತ್ರ ಪಕ್ಷಗಳು ಯೆಮೆನಿಗಿಂತ ಹೆಚ್ಚು ಶಕ್ತಿಶಾಲಿ ಮತ್ತು ದುಬಾರಿ ಶಸ್ತ್ರಾಸ್ತ್ರಗಳನ್ನು ಹೊಂದಿದ್ದರೂ, ಹೌಥಿಗಳು ಇತ್ತೀಚೆಗೆ ಪಡೆದುಕೊಂಡಿರುವ ಶಸ್ತ್ರಾಸ್ತ್ರಗಳಿಂದ ಸೌದಿಯು ತಮ್ಮನ್ನು ರಕ್ಷಿಸಿಕೊಳ್ಳಲು ವಿಫಲರಾಗಿದ್ದಾರೆ. ಈ ಶಸ್ತ್ರಾಸ್ತ್ರಗಳನ್ನು ಯುಎಸ್‍ಎಯ ತೀವ್ರವಾದ ಆರ್ಥಿಕ ದಿಗ್ಬಂಧನದ ಹೊರತಾಗಿಯೂ ಇರಾನ್ ಅಭಿವೃದ್ಧಿಪಡಿಸಿದೆ. 2010ರಲ್ಲಿ ಯುಎಸ್‍ಎಯ ‘ಸ್ಟೆಲ್ತ್’ ಡ್ರೋನ್ ಒಂದನ್ನು ವಶಕ್ಕೆ ತೆಗೆದುಕೊಂಡ ಮೇಲೆ, ಇರಾನ್ ತನ್ನ ಸುತ್ತ 1500 ಕಿ.ಮೀ. ವ್ಯಾಪ್ತಿಯಲ್ಲಿ ಕಾವಲಿರಿಸುವ ಡ್ರೋನ್ ತಯಾರಿಸುವ ಕಾರ್ಯಕ್ರಮದಲ್ಲಿ ಯಶಸ್ವಿಯಾಯಿತು.

ಯುಎಸ್‍ಎ ತನ್ನ ಮಿತ್ರ ಪಕ್ಷಗಳ ಜೊತೆಗೂಡಿ ಈ ಪ್ರದೇಶದಲ್ಲಿ ನಡೆಸಿದ ಎಲ್ಲಾ ಯುದ್ಧಗಳು- 2001ರಲ್ಲಿ ಅಫಘಾನಿಸ್ತಾನ, 2003ರಲ್ಲಿ ಇರಾಕ್, 2006ರಲ್ಲಿ ಲೆಬನಾನ್, 2011ರಲ್ಲಿ ಸಿರಿಯಾ, 2014ರಲ್ಲಿ ಮತ್ತೆ ಇರಾಕ್, 2015ರಲ್ಲಿ ಯೆಮೆನ್-ಇವೆಲ್ಲವೂ ಅನುದ್ದೇಶಿತವಾಗಿ ಇರಾನ್ ಮತ್ತು ಅದರ ಮಿತ್ರ ಪಕ್ಷಗಳನ್ನು ಗಟ್ಟಿಗೊಳಿಸಿವೆ. ಇರಾನ್ ಹೌಥಿಗಳ ಮೂಲಕ ಗಳಿಸಿರುವ ದಾಳಿಯ ಶಕ್ತಿಯು ಮುಂದೆ ಈಗ ಮುಂದುವರೆಯುತ್ತಿರುವ ಸಿರಿಯಾ, ಲೆಬನಾನ್ ಮತ್ತು ಇರಾಕ್ ಯುದ್ಧಗಳಲ್ಲಿ ಪಾಲುದಾರರಾಗಿರುವ ಇಸ್ರೇಲ್ ಮತ್ತು ಟರ್ಕಿಯನ್ನು ಎಚ್ಚರಿಕೆಯ ಸ್ಥಿತಿಯಲ್ಲಿ ಇಡಲಿದೆ.

ಈಗ ಸೌದಿಯು ರಾಜಕೀಯವಾದ ಶಾಂತಿ ಸಂಧಾನಕ್ಕೆ ಒಪ್ಪಬೇಕಾದ ಅನಿವಾರ್ಯತೆಗೆ ಸಿಕ್ಕಿದೆ. ಪರಿಹಾರಧನ ನೀಡಬೇಕೆಂಬ ಯೆಮೆನ್ ಬೇಡಿಕೆಗೂ ಬಲಬರಲಿದೆ. ಆದರೆ, ಈಗಾಗಲೇ ಕಚ್ಚಾ ತೈಲದ ಬೆಲೆ ಕುಸಿತದಿಂದಾಗಿ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಸೌದಿ ಅರೇಬಿಯಾ ಈ ಯುದ್ಧವನ್ನು ಮುಂದುವರಿಸುವುದು ಕಾರ್ಯಸಾಧುವಲ್ಲ ಎಂಬ ಲಕ್ಷಣಗಳು ಈಗಾಗಲೇ ಕಂಡುಬರುತ್ತಿರುವುದರಿಂದಾಗಿ ಹೌಥಿಗಳ ಬೇಡಿಕೆಗಳಿಗೆ ಒಪ್ಪದೇ ಬೇರೆ ದಾರಿಯಿಲ್ಲ.

ಯುದ್ಧ ಮತ್ತು ಪ್ರತಿದಾಳಿಯ ಮುಖಾಂತರ ಹೌಥಿಗಳು ಸಾಧಿಸಿರುವ ಈ ಗೆಲುವಿನಿಂದಲಾದರೂ, ಆ ಜಾಗದಲ್ಲಿ ಶಾಂತಿ ನೆಲೆಸಿದರೆ ಮನುಕುಲ ಸ್ವಲ್ಪವಾದರೂ ನಿಟ್ಟುಸಿರೆಳೆಯಬಹುದು. ಇಲ್ಲವಾದರೆ, ಮತ್ತಷ್ಟು ರಕ್ತಪಾತ ಹಾಗೂ ಅನಿಶ್ಚಿತತೆ ಆ ಭಾಗವನ್ನು ಕಾಡುವುದರಲ್ಲಿ ಸಂದೇಹವೇ ಇಲ್ಲ.

ಅನುವಾದ: ನಿಖಿಲ್ ಕೋಲ್ಪೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...