Homeಅಂತರಾಷ್ಟ್ರೀಯಯೆಮೆನ್‌: ಮಾರುಕಟ್ಟೆ ಮತ್ತು ವಸತಿ ಸಮುಚ್ಚಯದ ಮೇಲಿನ ಅಮೆರಿಕದ ವಾಯುದಾಳಿಗೆ 12 ಮಂದಿ ಸಾವು: ಹೌತಿ...

ಯೆಮೆನ್‌: ಮಾರುಕಟ್ಟೆ ಮತ್ತು ವಸತಿ ಸಮುಚ್ಚಯದ ಮೇಲಿನ ಅಮೆರಿಕದ ವಾಯುದಾಳಿಗೆ 12 ಮಂದಿ ಸಾವು: ಹೌತಿ ಬಂಡುಕೋರರು 

- Advertisement -
- Advertisement -

ಯೆಮೆನ್ ರಾಜಧಾನಿಯ ಮೇಲೆ ನಡೆದ ಅಮೆರಿಕದ ವಾಯುದಾಳಿಯಲ್ಲಿ 12 ಜನರು ಸಾವನ್ನಪ್ಪಿದ್ದಾರೆ ಮತ್ತು 30 ಜನರು ಗಾಯಗೊಂಡಿದ್ದಾರೆ ಎಂದು ಹೌತಿ ಬಂಡುಕೋರರು ಸೋಮವಾರ ಮುಂಜಾನೆ ತಿಳಿಸಿದ್ದಾರೆ.

ಸನಾದ ಶುಬ್ ಜಿಲ್ಲೆಯ ಫರ್ವಾ ನೆರೆಹೊರೆಯ ಮಾರುಕಟ್ಟೆ ಮತ್ತು ವಸತಿ ಸಮುಚ್ಚಯದ ಮೇಲೆ “ಅಮೆರಿಕದ ಶತ್ರು ಪಡೆ” ರಾತ್ರೋರಾತ್ರಿ ನಡೆಸಿದ ವಾಯುದಾಳಿಯ ಪರಿಣಾಮವಾಗಿ 12 ಮಂದಿ ಮೃತಪಟ್ಟಿದ್ದಾರೆ ಎಂದು ಹೌತಿ ನಡೆಸುತ್ತಿರುವ ಸಬಾ ಸುದ್ದಿ ಸಂಸ್ಥೆ ಸಚಿವಾಲಯವನ್ನು ಉಲ್ಲೇಖಿಸಿದೆ.

ಭಾನುವಾರ ತಡರಾತ್ರಿ ಅಮ್ರಾನ್, ಮಧ್ಯ ಪ್ರಾಂತ್ಯ ಮಾರಿಬ್, ಪಶ್ಚಿಮದಲ್ಲಿ ಹೊಡೈಡಾ ಮತ್ತು ಉತ್ತರದಲ್ಲಿ ಹೌತಿ ಕೋಟೆ ಸಾದಾ ಮತ್ತು ಇತರ ಕಡೆ ಈ ವಾಯು ದಾಳಿಗಳು ವರದಿಯಾಗಿವೆ ಎಂದು ಸಬಾ ಸುದ್ದಿ ಸಂಸ್ಥೆ ಹೇಳಿದೆ.

ಕೊಲ್ಲಿಯಲ್ಲಿ ಅಂತರರಾಷ್ಟ್ರೀಯ ಹಡಗು ಸಾಗಣೆಯ ಮೇಲಿನ ದಾಳಿಗಳು ಮತ್ತು ಇಸ್ರೇಲ್ ಮೇಲಿನ ದಾಳಿಗಳನ್ನು ನಿಲ್ಲಿಸಲು ಯುಎಸ್ ಮಿಲಿಟರಿ ಕಳೆದ ಒಂದು ತಿಂಗಳಿನಿಂದ ಬಹುತೇಕ ದೈನಂದಿನ ದಾಳಿಗಳನ್ನು ನಡೆಸುತ್ತಿದೆ. ರಾಸ್ ಇಸ್ಸಾ ತೈಲ ಬಂದರಿನ ಮೇಲೆ ಗುರುವಾರ ನಡೆದ ದಾಳಿಯಲ್ಲಿ ಕನಿಷ್ಠ 74 ಜನರು ಸಾವನ್ನಪ್ಪಿದರು ಮತ್ತು 171 ಜನರು ಗಾಯಗೊಂಡಿದ್ದಾರೆ ಎಂದು ಹೌತಿಗಳು ತಿಳಿಸಿದ್ದಾರೆ.

ಟೆಹ್ರಾನ್‌ನ ವೇಗವಾಗಿ ಮುಂದುವರಿಯುತ್ತಿರುವ ಪರಮಾಣು ಕಾರ್ಯಕ್ರಮದ ಕುರಿತು ಅಮೆರಿಕ ಮತ್ತು ಇರಾನ್ ನಡುವೆ ರೋಮ್‌ನಲ್ಲಿ ಮಾತುಕತೆಗಳು ಪುನರಾರಂಭವಾದ ನಂತರ ಈ ದಾಳಿಗಳು ನಡೆದಿವೆ.

ಸೋಮವಾರದಂದು ಹೌತಿಗಳು ಒಂದು ಹೇಳಿಕೆಯಲ್ಲಿ “ನಮ್ಮ ದೇಶದ ಮೇಲೆ ಅಮೆರಿಕದ ಆಕ್ರಮಣ ಮತ್ತು ನಮ್ಮ ಜನರ ಮೇಲೆ ಅದು ನಡೆಸಿದ ಹತ್ಯಾಕಾಂಡಗಳಿಗೆ” ಪ್ರತಿಕ್ರಿಯೆಯಾಗಿ ಕೆಂಪು ಸಮುದ್ರದಲ್ಲಿ ಅಮೆರಿಕದ ವಿಮಾನವಾಹಕ ನೌಕೆಯ ಮೇಲೆ ಮತ್ತು ಅರೇಬಿಯನ್ ಸಮುದ್ರದಲ್ಲಿ ಮತ್ತೊಂದು ಕ್ರೂಸ್ ಕ್ಷಿಪಣಿ ಮತ್ತು ಡ್ರೋನ್ ದಾಳಿಗಳನ್ನು ನಡೆಸಿದ್ದೇವೆ ಎಂದು ಹೇಳಿದ್ದಾರೆ.

ಇಲ್ಲಿಯವರೆಗೆ ಅಮೆರಿಕದ ಹಡಗುಗಳ ಮೇಲೆ ಯಾವುದೇ ದಾಳಿಗಳು ವರದಿಯಾಗಿಲ್ಲ.

ಯೆಮೆನ್ ಮೇಲೆ ಅಮೆರಿಕದ ಇತ್ತೀಚಿನ ದಾಳಿಗಳಿಂದ ತಾನು “ಗಂಭೀರವಾಗಿ ಕಳವಳಗೊಂಡಿದ್ದೇನೆ” ಎಂದು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಶನಿವಾರ ಹೇಳಿದ್ದರು. ಅವರು ಇಸ್ರೇಲ್ ಮತ್ತು ಗಲ್ಫ್ ಹಡಗು ಸಾಗಣೆಯ ಮೇಲೆ ಕ್ಷಿಪಣಿ ದಾಳಿಯನ್ನು ನಿಲ್ಲಿಸುವಂತೆ ಹೌತಿಗಳಿಗೆ ಕರೆ ನೀಡಿದರು.

ಅಕ್ಟೋಬರ್ 7, 2023ರಂದು ಹಮಾಸ್ ದಕ್ಷಿಣ ಇಸ್ರೇಲ್ ಮೇಲೆ ದಾಳಿ ಮಾಡಿದ ನಂತರ ಹೌತಿಗಳು ಇಸ್ರೇಲ್ ಮತ್ತು ಗಲ್ಫ್ ಹಡಗು ಸಾಗಣೆ ಮಾರ್ಗಗಳ ಮೇಲೆ ಕ್ಷಿಪಣಿ ದಾಳಿಯನ್ನು ಪ್ರಾರಂಭಿಸಿದರು. ಹಮಾಸ್ ಶುಕ್ರವಾರದಂದು ಇಸ್ರೇಲ್ ಮೇಲೆ ಕೊನೆಯ ಬಾರಿಗೆ ಬ್ಯಾಲಿಸ್ಟಿಕ್ ಕ್ಷಿಪಣಿಯನ್ನು ಉಡಾಯಿಸಿದೆ. ಇದು ಮಧ್ಯ ಇಸ್ರೇಲ್ ಮತ್ತು ಜೆರುಸಲೆಮ್‌ನಾದ್ಯಂತ ಸೈರನ್‌ಗಳನ್ನು ಮೊಳಗಿಸಿದೆ. ಇಸ್ರೇಲ್ ಕ್ಷಿಪಣಿಯನ್ನು ತಡೆಹಿಡಿದಿದೆ ಎಂದು ಅದು ಹೇಳಿದೆ.

ನವೆಂಬರ್ 2023ರಿಂದ ಜನವರಿ 2025ರವರೆಗೆ ಹೌತಿಗಳು ಕೆಂಪು ಸಮುದ್ರ ಮತ್ತು ಅರೇಬಿಯನ್ ಸಮುದ್ರದಲ್ಲಿ ಸಂಚರಿಸುತ್ತಿದ್ದ 100ಕ್ಕೂ ಹೆಚ್ಚು ವ್ಯಾಪಾರಿ ಹಡಗುಗಳನ್ನು ಕ್ಷಿಪಣಿಗಳು ಮತ್ತು ಡ್ರೋನ್‌ಗಳೊಂದಿಗೆ ಗುರಿಯಾಗಿಸಿಕೊಂಡಿವೆ. ಅವುಗಳಲ್ಲಿ ಎರಡು ಹಡಗು ಮುಳುಗಿ ನಾಲ್ವರು ನಾವಿಕರು ಸಾವನ್ನಪ್ಪಿದ್ದರು. ಇದು ಪ್ರಮುಖ ಕಾರಿಡಾರ್ ಮೂಲಕ ವ್ಯಾಪಾರದ ಹರಿವನ್ನು ಬಹಳವಾಗಿ ಕಡಿಮೆ ಮಾಡಿದೆ, ಇದು ಸಾಮಾನ್ಯವಾಗಿ $1 ಟ್ರಿಲಿಯನ್ ಸರಕುಗಳನ್ನು ಅದರ ಮೂಲಕ ಸಾಗಿಸುತ್ತದೆ. ಹೌತಿಗಳು ಅಮೆರಿಕದ ಯುದ್ಧನೌಕೆಗಳನ್ನು ಗುರಿಯಾಗಿಸಿಕೊಂಡು ದಾಳಿಗಳನ್ನು ಸಹ ಪ್ರಾರಂಭಿಸಿದೆ. ಆದರೆ ಇದು ಇದುವರೆಗೆ ಯಶಸ್ವಿಯಾಗಿಲ್ಲ.

ಯೆಮೆನ್ ಮೇಲೆ ಅಮೆರಿಕ ದಾಳಿಗಳು ಜನವರಿ 2024ರಲ್ಲಿ ಪ್ರಾರಂಭವಾದವು. ಈ ವರ್ಷ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಧಿಕಾರ ವಹಿಸಿಕೊಂಡಾಗಿನಿಂದ ಈ ದಾಳಿಗಳನ್ನು ಹೆಚ್ಚಿಸಲಾಗಿದೆ. ಯುಎಸ್ ಮಿಲಿಟರಿಯ ಸೆಂಟ್ರಲ್ ಕಮಾಂಡ್ ದಾಳಿಯ ಕುರಿತು ಪ್ರಶ್ನೆಗಳಿಗೆ ಉತ್ತರಿಸಲು ಅಥವಾ ಅದರ ಅಭಿಯಾನದಿಂದ ನಾಗರಿಕ ಸಾವುನೋವುಗಳನ್ನು ಚರ್ಚಿಸಲು ನಿರಾಕರಿಸಿದೆ.

ಒಂದು ತಿಂಗಳಿನಿಂದ ಅಮೆರಿಕ ನಡೆಸುತ್ತಿರುವ ವೈಮಾನಿಕ ದಾಳಿಯ ಸಂಖ್ಯೆಯನ್ನು ನಿರ್ಣಯಿಸುವುದು ಕಷ್ಟಕರವಾಗಿದೆ. ಏಕೆಂದರೆ ಅದು ಮಿಲಿಟರಿ ದಾಳಿಯ ಬಗ್ಗೆ ಮಾಹಿತಿಯನ್ನು ಬಿಡುಗಡೆ ಮಾಡುತ್ತಿಲ್ಲ. ಅದರಲ್ಲಿ ಏನು ಗುರಿಯಾಗಿಸಲಾಗಿದೆ ಮತ್ತು ಎಷ್ಟು ಜನರು ಕೊಲ್ಲಲ್ಪಟ್ಟಿದ್ದಾರೆ ಎಂಬ ಮಾಹಿತಿ ಪಡೆಯಲು ಕಷ್ಟವಾಗುತ್ತಿದೆ.

ಏತನ್ಮಧ್ಯೆ, ಹೌತಿಗಳು ದಾಳಿಗೊಳಗಾದ ಪ್ರದೇಶಗಳಿಗೆ ಪ್ರವೇಶವನ್ನು ಕಟ್ಟುನಿಟ್ಟಾಗಿ ನಿಯಂತ್ರಿಸುತ್ತಾರೆ ಮತ್ತು ದಾಳಿಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪ್ರಕಟಿಸುವುದಿಲ್ಲ, ಅವುಗಳಲ್ಲಿ ಹಲವು ಮಿಲಿಟರಿ ಮತ್ತು ಭದ್ರತಾ ತಾಣಗಳನ್ನು ಗುರಿಯಾಗಿರಿಸಿಕೊಂಡಿರಬಹುದು.

ಏ.26ರಂದು ದಾವಣಗೆರೆಯಲ್ಲಿ ಬೃಹತ್ ‘ಸಂವಿಧಾನ ಸಂರಕ್ಷಕರ ಸಮಾವೇಶ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...