Homeಅಂತರಾಷ್ಟ್ರೀಯಯೆಮೆನ್‌: ಮಾರುಕಟ್ಟೆ ಮತ್ತು ವಸತಿ ಸಮುಚ್ಚಯದ ಮೇಲಿನ ಅಮೆರಿಕದ ವಾಯುದಾಳಿಗೆ 12 ಮಂದಿ ಸಾವು: ಹೌತಿ...

ಯೆಮೆನ್‌: ಮಾರುಕಟ್ಟೆ ಮತ್ತು ವಸತಿ ಸಮುಚ್ಚಯದ ಮೇಲಿನ ಅಮೆರಿಕದ ವಾಯುದಾಳಿಗೆ 12 ಮಂದಿ ಸಾವು: ಹೌತಿ ಬಂಡುಕೋರರು 

- Advertisement -
- Advertisement -

ಯೆಮೆನ್ ರಾಜಧಾನಿಯ ಮೇಲೆ ನಡೆದ ಅಮೆರಿಕದ ವಾಯುದಾಳಿಯಲ್ಲಿ 12 ಜನರು ಸಾವನ್ನಪ್ಪಿದ್ದಾರೆ ಮತ್ತು 30 ಜನರು ಗಾಯಗೊಂಡಿದ್ದಾರೆ ಎಂದು ಹೌತಿ ಬಂಡುಕೋರರು ಸೋಮವಾರ ಮುಂಜಾನೆ ತಿಳಿಸಿದ್ದಾರೆ.

ಸನಾದ ಶುಬ್ ಜಿಲ್ಲೆಯ ಫರ್ವಾ ನೆರೆಹೊರೆಯ ಮಾರುಕಟ್ಟೆ ಮತ್ತು ವಸತಿ ಸಮುಚ್ಚಯದ ಮೇಲೆ “ಅಮೆರಿಕದ ಶತ್ರು ಪಡೆ” ರಾತ್ರೋರಾತ್ರಿ ನಡೆಸಿದ ವಾಯುದಾಳಿಯ ಪರಿಣಾಮವಾಗಿ 12 ಮಂದಿ ಮೃತಪಟ್ಟಿದ್ದಾರೆ ಎಂದು ಹೌತಿ ನಡೆಸುತ್ತಿರುವ ಸಬಾ ಸುದ್ದಿ ಸಂಸ್ಥೆ ಸಚಿವಾಲಯವನ್ನು ಉಲ್ಲೇಖಿಸಿದೆ.

ಭಾನುವಾರ ತಡರಾತ್ರಿ ಅಮ್ರಾನ್, ಮಧ್ಯ ಪ್ರಾಂತ್ಯ ಮಾರಿಬ್, ಪಶ್ಚಿಮದಲ್ಲಿ ಹೊಡೈಡಾ ಮತ್ತು ಉತ್ತರದಲ್ಲಿ ಹೌತಿ ಕೋಟೆ ಸಾದಾ ಮತ್ತು ಇತರ ಕಡೆ ಈ ವಾಯು ದಾಳಿಗಳು ವರದಿಯಾಗಿವೆ ಎಂದು ಸಬಾ ಸುದ್ದಿ ಸಂಸ್ಥೆ ಹೇಳಿದೆ.

ಕೊಲ್ಲಿಯಲ್ಲಿ ಅಂತರರಾಷ್ಟ್ರೀಯ ಹಡಗು ಸಾಗಣೆಯ ಮೇಲಿನ ದಾಳಿಗಳು ಮತ್ತು ಇಸ್ರೇಲ್ ಮೇಲಿನ ದಾಳಿಗಳನ್ನು ನಿಲ್ಲಿಸಲು ಯುಎಸ್ ಮಿಲಿಟರಿ ಕಳೆದ ಒಂದು ತಿಂಗಳಿನಿಂದ ಬಹುತೇಕ ದೈನಂದಿನ ದಾಳಿಗಳನ್ನು ನಡೆಸುತ್ತಿದೆ. ರಾಸ್ ಇಸ್ಸಾ ತೈಲ ಬಂದರಿನ ಮೇಲೆ ಗುರುವಾರ ನಡೆದ ದಾಳಿಯಲ್ಲಿ ಕನಿಷ್ಠ 74 ಜನರು ಸಾವನ್ನಪ್ಪಿದರು ಮತ್ತು 171 ಜನರು ಗಾಯಗೊಂಡಿದ್ದಾರೆ ಎಂದು ಹೌತಿಗಳು ತಿಳಿಸಿದ್ದಾರೆ.

ಟೆಹ್ರಾನ್‌ನ ವೇಗವಾಗಿ ಮುಂದುವರಿಯುತ್ತಿರುವ ಪರಮಾಣು ಕಾರ್ಯಕ್ರಮದ ಕುರಿತು ಅಮೆರಿಕ ಮತ್ತು ಇರಾನ್ ನಡುವೆ ರೋಮ್‌ನಲ್ಲಿ ಮಾತುಕತೆಗಳು ಪುನರಾರಂಭವಾದ ನಂತರ ಈ ದಾಳಿಗಳು ನಡೆದಿವೆ.

ಸೋಮವಾರದಂದು ಹೌತಿಗಳು ಒಂದು ಹೇಳಿಕೆಯಲ್ಲಿ “ನಮ್ಮ ದೇಶದ ಮೇಲೆ ಅಮೆರಿಕದ ಆಕ್ರಮಣ ಮತ್ತು ನಮ್ಮ ಜನರ ಮೇಲೆ ಅದು ನಡೆಸಿದ ಹತ್ಯಾಕಾಂಡಗಳಿಗೆ” ಪ್ರತಿಕ್ರಿಯೆಯಾಗಿ ಕೆಂಪು ಸಮುದ್ರದಲ್ಲಿ ಅಮೆರಿಕದ ವಿಮಾನವಾಹಕ ನೌಕೆಯ ಮೇಲೆ ಮತ್ತು ಅರೇಬಿಯನ್ ಸಮುದ್ರದಲ್ಲಿ ಮತ್ತೊಂದು ಕ್ರೂಸ್ ಕ್ಷಿಪಣಿ ಮತ್ತು ಡ್ರೋನ್ ದಾಳಿಗಳನ್ನು ನಡೆಸಿದ್ದೇವೆ ಎಂದು ಹೇಳಿದ್ದಾರೆ.

ಇಲ್ಲಿಯವರೆಗೆ ಅಮೆರಿಕದ ಹಡಗುಗಳ ಮೇಲೆ ಯಾವುದೇ ದಾಳಿಗಳು ವರದಿಯಾಗಿಲ್ಲ.

ಯೆಮೆನ್ ಮೇಲೆ ಅಮೆರಿಕದ ಇತ್ತೀಚಿನ ದಾಳಿಗಳಿಂದ ತಾನು “ಗಂಭೀರವಾಗಿ ಕಳವಳಗೊಂಡಿದ್ದೇನೆ” ಎಂದು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಶನಿವಾರ ಹೇಳಿದ್ದರು. ಅವರು ಇಸ್ರೇಲ್ ಮತ್ತು ಗಲ್ಫ್ ಹಡಗು ಸಾಗಣೆಯ ಮೇಲೆ ಕ್ಷಿಪಣಿ ದಾಳಿಯನ್ನು ನಿಲ್ಲಿಸುವಂತೆ ಹೌತಿಗಳಿಗೆ ಕರೆ ನೀಡಿದರು.

ಅಕ್ಟೋಬರ್ 7, 2023ರಂದು ಹಮಾಸ್ ದಕ್ಷಿಣ ಇಸ್ರೇಲ್ ಮೇಲೆ ದಾಳಿ ಮಾಡಿದ ನಂತರ ಹೌತಿಗಳು ಇಸ್ರೇಲ್ ಮತ್ತು ಗಲ್ಫ್ ಹಡಗು ಸಾಗಣೆ ಮಾರ್ಗಗಳ ಮೇಲೆ ಕ್ಷಿಪಣಿ ದಾಳಿಯನ್ನು ಪ್ರಾರಂಭಿಸಿದರು. ಹಮಾಸ್ ಶುಕ್ರವಾರದಂದು ಇಸ್ರೇಲ್ ಮೇಲೆ ಕೊನೆಯ ಬಾರಿಗೆ ಬ್ಯಾಲಿಸ್ಟಿಕ್ ಕ್ಷಿಪಣಿಯನ್ನು ಉಡಾಯಿಸಿದೆ. ಇದು ಮಧ್ಯ ಇಸ್ರೇಲ್ ಮತ್ತು ಜೆರುಸಲೆಮ್‌ನಾದ್ಯಂತ ಸೈರನ್‌ಗಳನ್ನು ಮೊಳಗಿಸಿದೆ. ಇಸ್ರೇಲ್ ಕ್ಷಿಪಣಿಯನ್ನು ತಡೆಹಿಡಿದಿದೆ ಎಂದು ಅದು ಹೇಳಿದೆ.

ನವೆಂಬರ್ 2023ರಿಂದ ಜನವರಿ 2025ರವರೆಗೆ ಹೌತಿಗಳು ಕೆಂಪು ಸಮುದ್ರ ಮತ್ತು ಅರೇಬಿಯನ್ ಸಮುದ್ರದಲ್ಲಿ ಸಂಚರಿಸುತ್ತಿದ್ದ 100ಕ್ಕೂ ಹೆಚ್ಚು ವ್ಯಾಪಾರಿ ಹಡಗುಗಳನ್ನು ಕ್ಷಿಪಣಿಗಳು ಮತ್ತು ಡ್ರೋನ್‌ಗಳೊಂದಿಗೆ ಗುರಿಯಾಗಿಸಿಕೊಂಡಿವೆ. ಅವುಗಳಲ್ಲಿ ಎರಡು ಹಡಗು ಮುಳುಗಿ ನಾಲ್ವರು ನಾವಿಕರು ಸಾವನ್ನಪ್ಪಿದ್ದರು. ಇದು ಪ್ರಮುಖ ಕಾರಿಡಾರ್ ಮೂಲಕ ವ್ಯಾಪಾರದ ಹರಿವನ್ನು ಬಹಳವಾಗಿ ಕಡಿಮೆ ಮಾಡಿದೆ, ಇದು ಸಾಮಾನ್ಯವಾಗಿ $1 ಟ್ರಿಲಿಯನ್ ಸರಕುಗಳನ್ನು ಅದರ ಮೂಲಕ ಸಾಗಿಸುತ್ತದೆ. ಹೌತಿಗಳು ಅಮೆರಿಕದ ಯುದ್ಧನೌಕೆಗಳನ್ನು ಗುರಿಯಾಗಿಸಿಕೊಂಡು ದಾಳಿಗಳನ್ನು ಸಹ ಪ್ರಾರಂಭಿಸಿದೆ. ಆದರೆ ಇದು ಇದುವರೆಗೆ ಯಶಸ್ವಿಯಾಗಿಲ್ಲ.

ಯೆಮೆನ್ ಮೇಲೆ ಅಮೆರಿಕ ದಾಳಿಗಳು ಜನವರಿ 2024ರಲ್ಲಿ ಪ್ರಾರಂಭವಾದವು. ಈ ವರ್ಷ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಧಿಕಾರ ವಹಿಸಿಕೊಂಡಾಗಿನಿಂದ ಈ ದಾಳಿಗಳನ್ನು ಹೆಚ್ಚಿಸಲಾಗಿದೆ. ಯುಎಸ್ ಮಿಲಿಟರಿಯ ಸೆಂಟ್ರಲ್ ಕಮಾಂಡ್ ದಾಳಿಯ ಕುರಿತು ಪ್ರಶ್ನೆಗಳಿಗೆ ಉತ್ತರಿಸಲು ಅಥವಾ ಅದರ ಅಭಿಯಾನದಿಂದ ನಾಗರಿಕ ಸಾವುನೋವುಗಳನ್ನು ಚರ್ಚಿಸಲು ನಿರಾಕರಿಸಿದೆ.

ಒಂದು ತಿಂಗಳಿನಿಂದ ಅಮೆರಿಕ ನಡೆಸುತ್ತಿರುವ ವೈಮಾನಿಕ ದಾಳಿಯ ಸಂಖ್ಯೆಯನ್ನು ನಿರ್ಣಯಿಸುವುದು ಕಷ್ಟಕರವಾಗಿದೆ. ಏಕೆಂದರೆ ಅದು ಮಿಲಿಟರಿ ದಾಳಿಯ ಬಗ್ಗೆ ಮಾಹಿತಿಯನ್ನು ಬಿಡುಗಡೆ ಮಾಡುತ್ತಿಲ್ಲ. ಅದರಲ್ಲಿ ಏನು ಗುರಿಯಾಗಿಸಲಾಗಿದೆ ಮತ್ತು ಎಷ್ಟು ಜನರು ಕೊಲ್ಲಲ್ಪಟ್ಟಿದ್ದಾರೆ ಎಂಬ ಮಾಹಿತಿ ಪಡೆಯಲು ಕಷ್ಟವಾಗುತ್ತಿದೆ.

ಏತನ್ಮಧ್ಯೆ, ಹೌತಿಗಳು ದಾಳಿಗೊಳಗಾದ ಪ್ರದೇಶಗಳಿಗೆ ಪ್ರವೇಶವನ್ನು ಕಟ್ಟುನಿಟ್ಟಾಗಿ ನಿಯಂತ್ರಿಸುತ್ತಾರೆ ಮತ್ತು ದಾಳಿಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪ್ರಕಟಿಸುವುದಿಲ್ಲ, ಅವುಗಳಲ್ಲಿ ಹಲವು ಮಿಲಿಟರಿ ಮತ್ತು ಭದ್ರತಾ ತಾಣಗಳನ್ನು ಗುರಿಯಾಗಿರಿಸಿಕೊಂಡಿರಬಹುದು.

ಏ.26ರಂದು ದಾವಣಗೆರೆಯಲ್ಲಿ ಬೃಹತ್ ‘ಸಂವಿಧಾನ ಸಂರಕ್ಷಕರ ಸಮಾವೇಶ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...

ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಎಸ್‌ಐಆರ್‌ ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...