Homeಮುಖಪುಟಟರ್ಕಿಯಿಂದ ಭಾರತಕ್ಕೆ ತೆರಳುತ್ತಿದ್ದ ಹಡಗನ್ನು ಅಪಹರಿಸಿದ ಯಮನ್‌ನ ಬಂಡುಕೋರರು

ಟರ್ಕಿಯಿಂದ ಭಾರತಕ್ಕೆ ತೆರಳುತ್ತಿದ್ದ ಹಡಗನ್ನು ಅಪಹರಿಸಿದ ಯಮನ್‌ನ ಬಂಡುಕೋರರು

- Advertisement -
- Advertisement -

ಟರ್ಕಿಯಿಂದ ಭಾರತಕ್ಕೆ ತೆರಳುತ್ತಿದ್ದ ಸರಕು ಹಡಗನ್ನು ಭಾನುವಾರ ಯಮನ್‌ನ ಹೌತಿ ಬಂಡುಕೋರರು ಕೆಂಪು ಸಮುದ್ರದಲ್ಲಿ ಅಪಹರಿಸಿದ್ದಾರೆ. ಹಡಗಿನ 25 ಸಿಬ್ಬಂದಿಯನ್ನು ಒತ್ತೆಯಾಳಾಗಿ ಇರಿಸಿಕೊಳ್ಳಲಾಗಿದೆ ಎಂದು ಅಸೋಸಿಯೇಟೆಡ್ ಪ್ರೆಸ್ ವರದಿ ಮಾಡಿದೆ.

ಇಸ್ರೇಲ್‌ನೊಂದಿಗಿನ ಭಾರತ ಸಂಪರ್ಕ ಹೊಂದಿದೆ ಎನ್ನುವ ಕಾರಣಕ್ಕೆ ಇರಾನ್ ಬೆಂಬಲಿತ ಹೌತಿ ಬಂಡುಕೋರರು ಹಡಗನ್ನು ವಶಪಡಿಸಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಗಾಜಾದ ಮೇಲೆ ಇಸ್ರೇಲ್‌ ನಡೆಸುತ್ತಿರುವ ದಾಳಿಯನ್ನು ನಿಲ್ಲಿಸುವವರೆಗೂ ಅಂತರರಾಷ್ಟ್ರೀಯ ನೀರಿನಲ್ಲಿ ಇಸ್ರೇಲಿಗಳಿಗೆ ಸಂಪರ್ಕ ಹೊಂದಿದ ಅಥವಾ ಒಡೆತನದ ಹಡಗುಗಳನ್ನು ಗುರಿಯಾಗಿಸುವುದನ್ನು ಮುಂದುವರಿಸುತ್ತೇವೆ ಎಂದು ಅವರು ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿದ ಹೌತಿಗಳ ಮುಖ್ಯ ಸಮಾಲೋಚಕ ಮತ್ತು ವಕ್ತಾರ ಮೊಹಮ್ಮದ್ ಅಬ್ದುಲ್-ಸಲಾಮ್, ”ಇಸ್ರೇಲಿ ಹಡಗುಗಳನ್ನು ಅಪಹರಿಸುವ ಮೂಲಕ ಯಮನ್ ಸಶಸ್ತ್ರ ಪಡೆಗಳ ಗಂಭೀರತೆಯನ್ನು ಸಾಬೀತುಪಡಿಸುವ ಪ್ರಾಯೋಗಿಕ ಹೆಜ್ಜೆಯನ್ನು ಇಟ್ಟಿವೆ.. ಇದು ಆರಂಭ” ಎಂದು ಹೇಳಿದ್ದಾರೆ.

ಇಸ್ರೇಲಿ ರಕ್ಷಣಾ ಪಡೆ ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, ”ದಕ್ಷಿಣ ಕೆಂಪು ಸಮುದ್ರದಲ್ಲಿ ಯಮನ್ ಬಳಿ ಹೌತಿಗಳು ಸರಕು ಹಡಗನ್ನು ಅಪಹರಿಸಿದ್ದು ಜಾಗತಿಕ ಪರಿಣಾಮದ ಅತ್ಯಂತ ಗಂಭೀರ ಘಟನೆಯಾಗಿದೆ.
ಹಡಗು ಭಾರತಕ್ಕೆ ಹೋಗುವ ಮಾರ್ಗದಲ್ಲಿ ಟರ್ಕಿಯಿಂದ ಹೊರಟಿತು, ಇಸ್ರೇಲಿಗಳು ಸೇರಿದಂತೆ ವಿವಿಧ ರಾಷ್ಟ್ರಗಳ ನಾಗರಿಕರು ಹಡಗಿನಲ್ಲಿ ಇದ್ದರು. ಇದು ಇಸ್ರೇಲಿ ಹಡಗು ಅಲ್ಲ” ಎಂದು ಹೇಳಿಕೊಂಡಿದೆ.

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಕಚೇರಿಯು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, ”ಅಂತರಾಷ್ಟ್ರೀಯ ಹಡಗಿನ ಮೇಲೆ ಇರಾನ್ ದಾಳಿಯನ್ನು ಇಸ್ರೇಲ್ ತೀವ್ರವಾಗಿ ಖಂಡಿಸುತ್ತದೆ” ಎಂದು ಹೇಳಿದೆ.

”ಬ್ರಿಟಿಷ್ ಕಂಪನಿಯ ಒಡೆತನದ ಮತ್ತು ಜಪಾನಿನ ಸಂಸ್ಥೆಯಿಂದ ನಿರ್ವಹಿಸಲ್ಪಡುವ ಹಡಗನ್ನು ಇರಾನ್ ಮಾರ್ಗದರ್ಶನದೊಂದಿಗೆ ಯೆಮೆನೈಟ್ ಹೌತಿ ಮಿಲಿಟಿಯಾ ಹೈಜಾಕ್ ಮಾಡಿದೆ” ಎಂದು ಹೇಳಿದೆ.

ಗಾಜಾದ ಮೇಲೆ ಇಸ್ರೇಲ್‌ ನಡೆಸುತ್ತಿರುವ ಯುದ್ಧ ಏಳನೇ ವಾರಕ್ಕೆ ಕಾಲಿಟ್ಟಿರುವ ಸಂದರ್ಭದಲ್ಲಿ ಈ ಅಪಹರಣ ಸಂಭವಿಸಿದೆ. ಇಲ್ಲಿಯವರೆಗೆ, ಇಸ್ರೇಲಿ ಪಡೆಗಳ ನಿರಂತರ ವಾಯು ಮತ್ತು ನೆಲದ ದಾಳಿಯಲ್ಲಿ 13,000 ಕ್ಕೂ ಹೆಚ್ಚು ಪ್ಯಾಲೆಸ್ಟೀನಿಯಾದವರು ಸಾವಿಗೀಡಾಗಿದ್ದಾರೆ ಎಂದು ಅಲ್ ಜಜೀರಾ ವರದಿ ಮಾಡಿದೆ.

ಇದನ್ನೂ ಓದಿ: ಯಮನ್‌ನಲ್ಲಿ ಗಲ್ಲು ಶಿಕ್ಷೆಗೆ ಗುರಿಯಾದ ಭಾರತೀಯ ನರ್ಸ್‌ನ್ನು ರಕ್ಷಿಸಲು ತಾಯಿಯ ಪರದಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...