HomeಮುಖಪುಟYes Bank ಪತನ ಅಂತ್ಯವೋ, ಆರಂಭವೋ?

Yes Bank ಪತನ ಅಂತ್ಯವೋ, ಆರಂಭವೋ?

- Advertisement -
- Advertisement -

ಈಗಾಗಲೇ ನಿಮಗೆಲ್ಲ ತಿಳಿದಿರುವ ಹಾಗೆ Yes Bank ಪತನದ ಹಾದಿ ಹಿಡಿದಿದ್ದು ಆ ಬ್ಯಾಂಕಿನಲ್ಲಿ ಡಿಪಾಜಿಟ್ ಇಟ್ಟಿದ್ದ ಗ್ರಾಹಕರ ಹಣವನ್ನು ರಕ್ಷಿಸಲು ಮತ್ತು Yes Bankನ್ನು ಪೂರ್ಣ ಮುಳುಗಡೆಯಿಂದ ರಕ್ಷಿಸಲು ಪಬ್ಲಿಕ್ ಸೆಕ್ಟರ್ ಬ್ಯಾಂಕಾದ SBI, ಯೆಸ್ ಬ್ಯಾಂಕಿನ 49% ಶೇರುಗಳನ್ನು 2450 ಹೂಡಿಕೆ ಮಾಡಿ ಕೊಳ್ಳುವಂತೆ RBI ಮಾಡಿದೆ.

ಆದರೆ, ಯೆಸ್ ಬ್ಯಾಂಕನ್ನು ಈ ಕ್ರೈಸಿಸ್‍ನಿಂದ ಪಾರು (bail out) ಮಾಡಲು ಕನಿಷ್ಟ 21,000 ಕೋಟಿ ರೂಪಾಯಿಗಳ ಅವಶ್ಯಕತೆ ಇತ್ತು. ಆದರೆ, ಈಗ SBI ಹೂಡಿಕೆ ಮಾಡಿರುವುದು ಕೇವಲ 2450 ಕೋಟಿ ರೂಪಾಯಿಗಳು. ಆದ್ದರಿಂದ RBIನ ಈ ನಡೆ ಗ್ರಾಹಕರ ಡಿಪಾಜಿಟ್ ಹಣದ ರಕ್ಷಣೆ ಯಾವ ಮಟ್ಟದಲ್ಲಿ ಮಾಡಲಿದೆ ಎಂದು ಕಾಯ್ದು ನೋಡಬೇಕಾಗಿದೆ.

ಬಹುತೇಕ ಕಡೆಯ ಹದಿನೈದು ವರ್ಷಗಳಲ್ಲಿ ಒಂದು ಖಾಸಗಿ ಬ್ಯಾಂಕನ್ನು ಪತನದಿಂದ ರಕ್ಷಿಸಲು ಸರ್ಕಾರ ಮುಂದಾಗಿದ್ದು ಇದೇ ಮೊದಲು.

ಈ ಹಿನ್ನೆಲೆಯಲ್ಲಿ ಯೆಸ್ ಬ್ಯಾಂಕಿನ ಪತನಕ್ಕೆ ಕಾರಣಗಳೇನು ಎಂಬುದನ್ನು ಸಂಕ್ಷಿಪ್ತವಾಗಿ ನೋಡುತ್ತ, ಈ ಬ್ಯಾಂಕಿಂಗ್ ಕ್ಷೇತ್ರದ ಈ ರೀತಿಯ ಪತನದ ಕತೆ ಇಲ್ಲಿಗೇ ಮುಗಿಯಲಿದೆಯೇ ಅತವಾ ಮುಂದುವರೆಯಲಿದೆಯೇ ನೋಡೋಣ.

ಯಾವುದೇ ಬ್ಯಾಂಕಿನ ವ್ಯವಹಾರ ಸರಳವಾಗಿ ಗ್ರಾಹಕರಿಂದ ಡಿಪಾಜಿಟ್ಟುಗಳನ್ನು ಕಡಿಮೆ ಬಡ್ಡಿದರದಲ್ಲಿ ಇರಿಸಿಕೊಂಡು, ಆ ಡಿಪಾಜಿಟ್ ಹಣವನ್ನು ಹೆಚ್ಚಿನ ಬಡ್ಡಿದರಕ್ಕೆ ಸಾಲವಾಗಿ ಅವಶ್ಯಕತೆಯುಳ್ಳ ಗ್ರಾಹಕರಿಗೆ ಕೊಟ್ಟು ಲಾಭ ಗಳಿಸುವುದು.

ಆದರೆ ಸಾಲವಾಗಿ ಕೊಟ್ಟ ಹಣ ವಾಪಸ್ ಬರದೇ ಇದ್ದಾಗ ಬ್ಯಾಂಕುಗಳು ತೊಂದರೆಗೆ ಸಿಲುಕಿ ನಷ್ಟ ಅನುಭವಿಸಬೇಕಾಗುತ್ತದೆ. ಈ ರೀತಿ ಕನಿಷ್ಟ ತೊಂಬತ್ತು ದಿನ ಕೊಟ್ಟ ಸಾಲದ ಕಂತು ವಾಪಸ್ ಬರದೇ ಇದ್ದಾಗ ಅಂತ ಸಾಲವನ್ನು ಕೆಟ್ಟ ಸಾಲ (Bad loans) ಎಂದು ಕರೆಯಲಾಗುತ್ತದೆ. ಈ ಕೆಟ್ಟ ಸಾಲಗಳ ಸಂಖ್ಯೆ ಮತ್ತು ಮೌಲ್ಯ ಹೆಚ್ಚಾದಷ್ಟೂ ಬ್ಯಾಂಕುಗಳು ಸಂಕಷ್ಟಕ್ಕೆ ಸಿಲುಕುತ್ತವೆ.

ಆಗ ಅಂತಹ ಬ್ಯಾಂಕಿನಲ್ಲಿ ಕಷ್ಟಪಟ್ಟು ಉಳಿಸಿದ ಹಣವನ್ನು ಡಿಪಾಜಿಟ್ ಇಟ್ಟಿರುವವರೂ ಸಂಕಷ್ಟಕ್ಕೆ ಸಿಲುಕುತ್ತಾರೆ ಮತ್ತು ಬ್ಯಾಂಕಿಂಗ್ ವ್ಯವಸ್ಥೆಯ ಮೇಲೆ ನಂಬಿಕೆಯನ್ನು ಕಳೆದುಕೊಳ್ಳುತ್ತಾರೆ. ಇದು ಇಡೀ ದೇಶದ ಆರ್ಥಿಕತೆಯ ಮೇಲೆ ಭಾರೀ ನಕಾರಾತ್ಮಕ ಪರಿಣಾಮ ಬೀರುತ್ತದೆ.

ಇದೇರೀತಿ ಯೆಸ್ ಬ್ಯಾಂಕ್ ಕೂಡ ಕೆಟ್ಟ ಸಾಲದ ಸುಳಿಗೆ ಸಿಲುಕಿತ್ತು. ಈ ರೀತಿ ಸಾಲ ತೆಗೆದುಕೊಂಡು ವಾಪಸ್ ಕೊಡದಿರುವವರು ಬಹುತೇಕ ಕಾರ್ಪೊರೇಟ್ ಕಂಪನಿಗಳವರಾಗಿರುತ್ತಾರೆ ಮತ್ತು ಯೆಸ್ ಬ್ಯಾಂಕ್ ಕೊಟ್ಟ ಸಾಲದಲ್ಲಿ ಸುಮಾರು 63% ರಷ್ಟನ್ನು ಕಾರ್ಪೊರೇಟ್ ಕಂಪನಿಗಳಿಗೇ (ಅಥವಾ ಕಾರ್ಪೊರೇಟ್ ವ್ಯಕ್ತಿಗಳಿಗೆ) ಕೊಡಲಾಗಿತ್ತು. ಬ್ಯಾಂಕುಗಳ NPA ಯನ್ನೂ ಒಂದು ಪ್ರಮುಖ ವಿಷಯ ಮಾಡಿ ಅಧಿಕಾರಕ್ಕೆ ಬಂದ ಈ ಸರ್ಕಾರದ ಅವಧಿಯಲ್ಲಿಯೇ ಯೆಸ್ ಬ್ಯಾಂಕ್ ಕೊಟ್ಟ ಸಾಲ 400% ( 2014 ರಿಂದ 2019 ರವರೆಗೆ 55000 ಕೋಟಿಯಿಂದ 241000 ಕೋಟಿ) ರಷ್ಟು ಏರಿಕೆಯಾಗಿದೆ ಎಂಬ ವಿಷಯ ಈ ರೀತಿಯ ಕೆಟ್ಟ ಸಾಲಗಳ ನೀಡುವಿಕೆ ಸರ್ಕಾರಕ್ಕೆ ಅರಿವಿದ್ದೂ ನಡೆಯುತ್ತದೆ ಎಂಬುದನ್ನು ಸ್ಪಷ್ಟವಾಗಿ ತಿಳಿಸುತ್ತದೆ.

ಹಾಗೆಯೇ ಈ ರೀತಿಯ ಸಾಲ ಪಡೆದವರಲ್ಲಿ ಅನೇಕರು ಸರ್ಕಾರಕ್ಕೆ ( ಯಾವುದೇ ಸರ್ಕಾರವಿದ್ದಾಗಲೂ) ಆಪ್ತರಾಗಿರುವವರು ಎಂಬುದು ಈ ವ್ಯವಹಾರದ ಮತ್ತೊಂದು ಮುಖವನ್ನು ನಮಗೆ ತೆರೆದು ತೋರಿಸುತ್ತದೆ.

ಈ ಯೆಸ್ ಬ್ಯಾಂಕಿನ ಒಟ್ಟಾರೆ NPA ಪ್ರಮಾಣ ಅದು ಕೊಟ್ಟಿರುವ ಒಟ್ಟು ಸಾಲದ 8% ಗಳಷ್ಟು ಮಾತ್ರ ( ಈ ಪ್ರಮಾಣ 2% ಗಿಂತ ಹೆಚ್ಚಿದ್ದರೆ ಅಂತ ಬ್ಯಾಂಕ್ ವ್ಯವಹಾರ ಅನಾರೋಗ್ಯಕರವಾಗಿದೆಯೆಂದು ಹೇಳಲಾಗುತ್ತದೆ). ಇಷ್ಟು ಕೆಟ್ಟ ಸಾಲದ ಹೊರೆಯಿಂದಾಗಿ ಯೆಸ್ ಬ್ಯಾಂಕ್ ತನ್ನ ಡಿಪಾಜಿಟ್‍ದಾರರಿಗೆಹಣ ಹಿಂದುರಿಗಿಸಲಾರದ ಸ್ಥಿತಿಗೆ ತಲುಪಿತ್ತು.

ಹಾಗೆ ನೋಡಿದರೆ, ನಮ್ಮ ಹಲವು ಪಬ್ಲಿಕ್ ಸೆಕ್ಟರ್ ಬ್ಯಾಂಕುಗಳ NPA ಪ್ರಮಾಣ ಶೇ ಹತ್ತಕಿಂತ ಹೆಚ್ಚಿದೆ. ಶೇ. ಹತ್ತಕ್ಕಿಂತ ಹೆಚ್ಚು ಓPಂ ಹೊಂದಿರುವ ಒಟ್ಟು ಹದಿನೇಳು ಬ್ಯಾಂಕುಗಳಲ್ಲಿ ಹದಿನಾರು ಬ್ಯಾಂಕುಗಳು ಪಬ್ಲಿಕ್ ಸೆಕ್ಟರ್ ಬ್ಯಾಂಕ್‍ಗಳೇ ಆಗಿವೆ. IDBI, UCO Bank, IOB ಗಳ NPA ಪ್ರಮಾಣ 20% ಗಿಂತ ಹೆಚ್ಚಿದೆ.

ಹಾಗಿದ್ದರೆ, ನಮ್ಮ ಪಬ್ಲಿಕ್ ಸೆಕ್ಟರ್ ಬ್ಯಾಂಕುಗಳು ಇಂಥಾ ಸ್ಥಿತಿಯಲ್ಲಿ ಗ್ರಾಹಕರ ಡಿಪಾಜಿಟ್ ಹಣಕ್ಕೆ ಬಡ್ಡಿ ಕೊಡಲು ಮತ್ತು ವಾಪಸ್ ಮಾಡಲು ಹೇಗೆ ಸಾಧ್ಯವಾಗುತ್ತಿದೆ ಎಂದು ನೋಡೋಣ. ನಿಮಗೆ ನೆನಪಿರುವ ಹಾಗೆ 2016-17 ಮತ್ತು 2017-18 ರಲ್ಲಿ ಕೇಂದ್ರ ಸರ್ಕಾರ ಬಜೆಟ್‍ನಲ್ಲಿ ಒಟ್ಟು 50000 ಕೋಟಿ ರೂಪಾಯಿಗಳನ್ನು ಪಬ್ಲಿಕ್ ಸೆಕ್ಟರ್ ಬ್ಯಾಂಕುಗಳಿಗೆ ಕೊಟ್ಟಿದೆ. ಇದರಿಂದಾಗಿ ಭಾರೀ ಓPಂಯ ಹೊರತಾಗಿಯೂ ಈ ಬ್ಯಾಂಕುಗಳು ಒಂದು ಮಟ್ಟಿಗೆ ಉಸಿರಾಡಲು ಸಾಧ್ಯವಾಗಿದೆ.

ಆದರೆ, ಸರ್ಕಾರ ಬ್ಯಾಂಕುಗಳಿಗೆ ಕೊಟ್ಟ ಈ ಹಣ ನಮ್ಮೆಲ್ಲರ ತೆರಿಗೆಯ ಹಣ. ಇದನ್ನು ರಸ್ತೆಗೋ, ಶಾಲೆಗೋ ಉಪಯೋಗಿಸುವ ಬದಲು ಸರ್ಕಾರ ಬ್ಯಾಂಕುಗಳಿಗೆ ಕೊಟ್ಟಿದೆ.

ಇದರಿಂದ ಒಂದು ಕಡೆ ಅಭಿವೃದ್ಧಿ ಕುಂಠಿತವಾದರೆ ಮತ್ತೊಂದೆಡೆ ದೇಶದ ವಿತ್ತೀಯ ಕೊರತೆಯೂ ಹೆಚ್ಚುತ್ತದೆ(ಈ ಹಣ ಸರ್ಕಾರದ ಖರ್ಚಿನಡಿ ಬರುವುದರಿಂದ).

ಒಟ್ಟಿನಲ್ಲಿ ಬ್ಯಾಂಕುಗಳು ಮಾಡುವ ತಪ್ಪಿಗೆ (ಈ ತಪ್ಪಿನಲ್ಲಿ ಇದನ್ನು ತಡೆಯುವುದಿರಲಿ ಪರೋಕ್ಷವಾಗಿ ಪ್ರೋತ್ಸಾಹಿಸುವ ಕಾರಣಕ್ಕೆ ಸರ್ಕಾರದ ಪಾಲು ದೊಡ್ಡದಿದೆ) ನಮ್ಮ ತೆರಿಗೆ ದುಡ್ಡು ಪೋಲಾಗುತ್ತಿದೆಯಷ್ಟೇ ಅಲ್ಲದೆ ನಮ್ಮೆಲ್ಲರ ಮೇಲೂ ಹೆಚ್ಚೆಚ್ಚು ಸಾಲದ ಹೊರೆ ಬೀಳುತ್ತಿದೆ.

ಹೀಗೆ NPA ಗೆ ಸಿಲುಕಿದ ಪಬ್ಲಿಕ್ ಸೆಕ್ಟರ್ ಬ್ಯಾಂಕುಗಳನ್ನು ಕಾಪಾಡಲು ಮತ್ತು NPA ಯಿಂದಾಗುವ ವಿತ್ತೀಯ ಕೊರತೆಯಿಂದ ತಕ್ಷಣ ಪಾರಾಗಲು ಸರ್ಕಾರ ಅಕ್ಟೋಬರ್ 2017 ರಿಂದ Recapitalization bonds ಅನ್ನು ಬಿಡುಗಡೆ ಮಾಡಿತು. ಬ್ಯಾಂಕುಗಳು ತಮ್ಮ ಡಿಪಾಜಿಟ್ ಹಣದಿಂದ Recapitalization bond ಗಳನ್ನು ಖರೀದಿಸಬೇಕು. ಅ ಹಣವನ್ನು ಭಾರೀ ಸಂಕಷ್ಟದಲ್ಲಿರುವ ಬ್ಯಾಂಕುಗಳಿಗೆ ಸರ್ಕಾರ ವಿತರಿಸುತ್ತದೆ.

ಈ ರೀತಿಯಾಗಿ ಇಲ್ಲಿಯತನಕ ಒಟ್ಟು 250000 ಕೋಟಿಗಳಷ್ಟು ಬೆಲೆಯ ಬಾಂಡುಗಳನ್ನು ವಿವಿಧ ಬ್ಯಾಂಕುಗಳು ಖರೀದಿಸಿವೆ. ಅಂದರೆ ನಮ್ಮ ಡಿಪಾಜಿಟ್ ಹಣದಿಂದಲೇ ಬ್ಯಾಂಕುಗಳನ್ನು NPA ಸುಳಿಯಿಂದ ಮೇಲೆತ್ತುವ ಕೆಲಸಕ್ಕೆ ಸರ್ಕಾರ ಕೈಹಾಕಿತು. ಇದರಿಂದ ಸರ್ಕಾರ ಬಜೆಟಲ್ಲಿ ಬ್ಯಾಂಕುಗಳಿಗೆ ಕೊಡುವ ಹಣವನ್ನು ತಪ್ಪಿಸಿ ಅದರಿಂದಾವಾಗುವಷ್ಟು ವಿತ್ತೀಯ ಕೊರತೆಯಿಂದ ತಕ್ಷಣಕ್ಕೆ ಪಾರಾಗುವ ಯತ್ನ ಮಾಡಿತು.

ಆದರೆ, ಈ ಬಾಂಡುಗಳನ್ನು ಖರೀದಿಸಿದ ಹಣಕ್ಕೆ ಸರ್ಕಾರ ವಾರ್ಷಿಕ 6 – 8% ಬಡ್ಡಿ ಕೊಡಬೇಕಿದೆ. ಈ ಬಡ್ಡಿಯೂ ಒಂದು ಮಟ್ಟಿಗೆ ವಿತ್ತೀಯ ಕೊರತೆ ಹೆಚ್ಚಿಸಲಿದೆ. ಅದಲ್ಲದೆ ಈ ಬಾಂಡುಗಳು ಮುಂದೆ ಹತ್ತರಿಂದ ಹದಿನೈದು ವರ್ಷಗಳಲ್ಲಿ ಮೆಚ್ಯೂರ್ ಆದಾಗ ಅಷ್ಟೂ ಹಣವನ್ನು ಸರ್ಕಾರ ಬಡ್ಡಿ ಸಮೇತ ಹಿಂದಿರುಗಿಸಬೇಕಾಗುತ್ತದೆ.

ಅಂದರೆ, ಮುಂದಿನ ಹತ್ತು ಹದಿನೈದು ವರ್ಷಗಳಲ್ಲಿ ಹತ್ತಾರು ಲಕ್ಷ ಕೋಟಿಗಳಷ್ಟು ಹೊರೆ ಒಟ್ಟಿಗೆ ಬೀಳಲಿದ್ದು, ಸರ್ಕಾರದ ಈ ಕ್ರಮ ಬ್ಯಾಂಕಿಂಗ್ ಪತನವನ್ನು ಮುಂದೂಡುಲಷ್ಟೇ ಶಕ್ತವಾಗಲಿದೆ. ಈ ಮುಂದೂಡಲ್ಪಟ್ಟದ್ದು ಮುಂದಿನ ಹತ್ತು ವರ್ಷಗಳಲ್ಲಿ ಈಗಿನದಕ್ಕಿಂತ ಭಾರೀ ಸಮಸ್ಯೆಯಾಗಿ ಎರಗುವ ಎಲ್ಲ ಸಾಧ್ಯತೆಗಳೂ ಇವೆ.

ಪಬ್ಲಿಕ್ ಸೆಕ್ಟರ್ ಬ್ಯಾಂಕುಗಳೇ ಹೆಚ್ಚಿನ NPA ಹೊಂದಿರುವುದನ್ನು (ಕೆಲವು ಶೇ ಇಪ್ಪತ್ತಕಿಂತ ಹೆಚ್ಚು) ನೋಡಿದಾಗ ಮತ್ತು ಸರ್ಕಾರದ ಕ್ರಮಗಳು ಕೇವಲ ತಾತ್ಕಾಲಿಕವಾಗಿರುವಾಗ ಈ ಯೆಸ್ ಬ್ಯಾಂಕ್ ಬಿಕ್ಕಟ್ಟು ಅಂತ್ಯವಲ್ಲ, ಆರಂಭ ಎಂದು ಯಾರಿಗಾದರೂ ಗೊತ್ತಾಗುತ್ತದೆ.

ಕೊನೆಯದಾಗಿ, ಒಂದು ದೇಶದ ಅಭಿವೃದ್ಧಿಯಲ್ಲಿ ಬ್ಯಾಂಕುಗಳ ಪಾತ್ರದ ಅರಿವಿರುವವರಿಗೆ ನಮ್ಮ ಬ್ಯಾಂಕುಗಳ ಪರಿಹಾರವಾಗದ NPA ಬಿಕ್ಕಟ್ಟನ್ನು ನೋಡಿದಾಗ ನಮಗೆ ಬೇರೆಯದೇ ಅಭಿವೃದ್ದಿ ಮಾದರಿಯ ಅವಶ್ಯಕತೆ ಇದೆಯೆಂಬುದು ಸುಸ್ಪಷ್ಟವಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...