HomeಮುಖಪುಟYes Bank ಪತನ ಅಂತ್ಯವೋ, ಆರಂಭವೋ?

Yes Bank ಪತನ ಅಂತ್ಯವೋ, ಆರಂಭವೋ?

- Advertisement -
- Advertisement -

ಈಗಾಗಲೇ ನಿಮಗೆಲ್ಲ ತಿಳಿದಿರುವ ಹಾಗೆ Yes Bank ಪತನದ ಹಾದಿ ಹಿಡಿದಿದ್ದು ಆ ಬ್ಯಾಂಕಿನಲ್ಲಿ ಡಿಪಾಜಿಟ್ ಇಟ್ಟಿದ್ದ ಗ್ರಾಹಕರ ಹಣವನ್ನು ರಕ್ಷಿಸಲು ಮತ್ತು Yes Bankನ್ನು ಪೂರ್ಣ ಮುಳುಗಡೆಯಿಂದ ರಕ್ಷಿಸಲು ಪಬ್ಲಿಕ್ ಸೆಕ್ಟರ್ ಬ್ಯಾಂಕಾದ SBI, ಯೆಸ್ ಬ್ಯಾಂಕಿನ 49% ಶೇರುಗಳನ್ನು 2450 ಹೂಡಿಕೆ ಮಾಡಿ ಕೊಳ್ಳುವಂತೆ RBI ಮಾಡಿದೆ.

ಆದರೆ, ಯೆಸ್ ಬ್ಯಾಂಕನ್ನು ಈ ಕ್ರೈಸಿಸ್‍ನಿಂದ ಪಾರು (bail out) ಮಾಡಲು ಕನಿಷ್ಟ 21,000 ಕೋಟಿ ರೂಪಾಯಿಗಳ ಅವಶ್ಯಕತೆ ಇತ್ತು. ಆದರೆ, ಈಗ SBI ಹೂಡಿಕೆ ಮಾಡಿರುವುದು ಕೇವಲ 2450 ಕೋಟಿ ರೂಪಾಯಿಗಳು. ಆದ್ದರಿಂದ RBIನ ಈ ನಡೆ ಗ್ರಾಹಕರ ಡಿಪಾಜಿಟ್ ಹಣದ ರಕ್ಷಣೆ ಯಾವ ಮಟ್ಟದಲ್ಲಿ ಮಾಡಲಿದೆ ಎಂದು ಕಾಯ್ದು ನೋಡಬೇಕಾಗಿದೆ.

ಬಹುತೇಕ ಕಡೆಯ ಹದಿನೈದು ವರ್ಷಗಳಲ್ಲಿ ಒಂದು ಖಾಸಗಿ ಬ್ಯಾಂಕನ್ನು ಪತನದಿಂದ ರಕ್ಷಿಸಲು ಸರ್ಕಾರ ಮುಂದಾಗಿದ್ದು ಇದೇ ಮೊದಲು.

ಈ ಹಿನ್ನೆಲೆಯಲ್ಲಿ ಯೆಸ್ ಬ್ಯಾಂಕಿನ ಪತನಕ್ಕೆ ಕಾರಣಗಳೇನು ಎಂಬುದನ್ನು ಸಂಕ್ಷಿಪ್ತವಾಗಿ ನೋಡುತ್ತ, ಈ ಬ್ಯಾಂಕಿಂಗ್ ಕ್ಷೇತ್ರದ ಈ ರೀತಿಯ ಪತನದ ಕತೆ ಇಲ್ಲಿಗೇ ಮುಗಿಯಲಿದೆಯೇ ಅತವಾ ಮುಂದುವರೆಯಲಿದೆಯೇ ನೋಡೋಣ.

ಯಾವುದೇ ಬ್ಯಾಂಕಿನ ವ್ಯವಹಾರ ಸರಳವಾಗಿ ಗ್ರಾಹಕರಿಂದ ಡಿಪಾಜಿಟ್ಟುಗಳನ್ನು ಕಡಿಮೆ ಬಡ್ಡಿದರದಲ್ಲಿ ಇರಿಸಿಕೊಂಡು, ಆ ಡಿಪಾಜಿಟ್ ಹಣವನ್ನು ಹೆಚ್ಚಿನ ಬಡ್ಡಿದರಕ್ಕೆ ಸಾಲವಾಗಿ ಅವಶ್ಯಕತೆಯುಳ್ಳ ಗ್ರಾಹಕರಿಗೆ ಕೊಟ್ಟು ಲಾಭ ಗಳಿಸುವುದು.

ಆದರೆ ಸಾಲವಾಗಿ ಕೊಟ್ಟ ಹಣ ವಾಪಸ್ ಬರದೇ ಇದ್ದಾಗ ಬ್ಯಾಂಕುಗಳು ತೊಂದರೆಗೆ ಸಿಲುಕಿ ನಷ್ಟ ಅನುಭವಿಸಬೇಕಾಗುತ್ತದೆ. ಈ ರೀತಿ ಕನಿಷ್ಟ ತೊಂಬತ್ತು ದಿನ ಕೊಟ್ಟ ಸಾಲದ ಕಂತು ವಾಪಸ್ ಬರದೇ ಇದ್ದಾಗ ಅಂತ ಸಾಲವನ್ನು ಕೆಟ್ಟ ಸಾಲ (Bad loans) ಎಂದು ಕರೆಯಲಾಗುತ್ತದೆ. ಈ ಕೆಟ್ಟ ಸಾಲಗಳ ಸಂಖ್ಯೆ ಮತ್ತು ಮೌಲ್ಯ ಹೆಚ್ಚಾದಷ್ಟೂ ಬ್ಯಾಂಕುಗಳು ಸಂಕಷ್ಟಕ್ಕೆ ಸಿಲುಕುತ್ತವೆ.

ಆಗ ಅಂತಹ ಬ್ಯಾಂಕಿನಲ್ಲಿ ಕಷ್ಟಪಟ್ಟು ಉಳಿಸಿದ ಹಣವನ್ನು ಡಿಪಾಜಿಟ್ ಇಟ್ಟಿರುವವರೂ ಸಂಕಷ್ಟಕ್ಕೆ ಸಿಲುಕುತ್ತಾರೆ ಮತ್ತು ಬ್ಯಾಂಕಿಂಗ್ ವ್ಯವಸ್ಥೆಯ ಮೇಲೆ ನಂಬಿಕೆಯನ್ನು ಕಳೆದುಕೊಳ್ಳುತ್ತಾರೆ. ಇದು ಇಡೀ ದೇಶದ ಆರ್ಥಿಕತೆಯ ಮೇಲೆ ಭಾರೀ ನಕಾರಾತ್ಮಕ ಪರಿಣಾಮ ಬೀರುತ್ತದೆ.

ಇದೇರೀತಿ ಯೆಸ್ ಬ್ಯಾಂಕ್ ಕೂಡ ಕೆಟ್ಟ ಸಾಲದ ಸುಳಿಗೆ ಸಿಲುಕಿತ್ತು. ಈ ರೀತಿ ಸಾಲ ತೆಗೆದುಕೊಂಡು ವಾಪಸ್ ಕೊಡದಿರುವವರು ಬಹುತೇಕ ಕಾರ್ಪೊರೇಟ್ ಕಂಪನಿಗಳವರಾಗಿರುತ್ತಾರೆ ಮತ್ತು ಯೆಸ್ ಬ್ಯಾಂಕ್ ಕೊಟ್ಟ ಸಾಲದಲ್ಲಿ ಸುಮಾರು 63% ರಷ್ಟನ್ನು ಕಾರ್ಪೊರೇಟ್ ಕಂಪನಿಗಳಿಗೇ (ಅಥವಾ ಕಾರ್ಪೊರೇಟ್ ವ್ಯಕ್ತಿಗಳಿಗೆ) ಕೊಡಲಾಗಿತ್ತು. ಬ್ಯಾಂಕುಗಳ NPA ಯನ್ನೂ ಒಂದು ಪ್ರಮುಖ ವಿಷಯ ಮಾಡಿ ಅಧಿಕಾರಕ್ಕೆ ಬಂದ ಈ ಸರ್ಕಾರದ ಅವಧಿಯಲ್ಲಿಯೇ ಯೆಸ್ ಬ್ಯಾಂಕ್ ಕೊಟ್ಟ ಸಾಲ 400% ( 2014 ರಿಂದ 2019 ರವರೆಗೆ 55000 ಕೋಟಿಯಿಂದ 241000 ಕೋಟಿ) ರಷ್ಟು ಏರಿಕೆಯಾಗಿದೆ ಎಂಬ ವಿಷಯ ಈ ರೀತಿಯ ಕೆಟ್ಟ ಸಾಲಗಳ ನೀಡುವಿಕೆ ಸರ್ಕಾರಕ್ಕೆ ಅರಿವಿದ್ದೂ ನಡೆಯುತ್ತದೆ ಎಂಬುದನ್ನು ಸ್ಪಷ್ಟವಾಗಿ ತಿಳಿಸುತ್ತದೆ.

ಹಾಗೆಯೇ ಈ ರೀತಿಯ ಸಾಲ ಪಡೆದವರಲ್ಲಿ ಅನೇಕರು ಸರ್ಕಾರಕ್ಕೆ ( ಯಾವುದೇ ಸರ್ಕಾರವಿದ್ದಾಗಲೂ) ಆಪ್ತರಾಗಿರುವವರು ಎಂಬುದು ಈ ವ್ಯವಹಾರದ ಮತ್ತೊಂದು ಮುಖವನ್ನು ನಮಗೆ ತೆರೆದು ತೋರಿಸುತ್ತದೆ.

ಈ ಯೆಸ್ ಬ್ಯಾಂಕಿನ ಒಟ್ಟಾರೆ NPA ಪ್ರಮಾಣ ಅದು ಕೊಟ್ಟಿರುವ ಒಟ್ಟು ಸಾಲದ 8% ಗಳಷ್ಟು ಮಾತ್ರ ( ಈ ಪ್ರಮಾಣ 2% ಗಿಂತ ಹೆಚ್ಚಿದ್ದರೆ ಅಂತ ಬ್ಯಾಂಕ್ ವ್ಯವಹಾರ ಅನಾರೋಗ್ಯಕರವಾಗಿದೆಯೆಂದು ಹೇಳಲಾಗುತ್ತದೆ). ಇಷ್ಟು ಕೆಟ್ಟ ಸಾಲದ ಹೊರೆಯಿಂದಾಗಿ ಯೆಸ್ ಬ್ಯಾಂಕ್ ತನ್ನ ಡಿಪಾಜಿಟ್‍ದಾರರಿಗೆಹಣ ಹಿಂದುರಿಗಿಸಲಾರದ ಸ್ಥಿತಿಗೆ ತಲುಪಿತ್ತು.

ಹಾಗೆ ನೋಡಿದರೆ, ನಮ್ಮ ಹಲವು ಪಬ್ಲಿಕ್ ಸೆಕ್ಟರ್ ಬ್ಯಾಂಕುಗಳ NPA ಪ್ರಮಾಣ ಶೇ ಹತ್ತಕಿಂತ ಹೆಚ್ಚಿದೆ. ಶೇ. ಹತ್ತಕ್ಕಿಂತ ಹೆಚ್ಚು ಓPಂ ಹೊಂದಿರುವ ಒಟ್ಟು ಹದಿನೇಳು ಬ್ಯಾಂಕುಗಳಲ್ಲಿ ಹದಿನಾರು ಬ್ಯಾಂಕುಗಳು ಪಬ್ಲಿಕ್ ಸೆಕ್ಟರ್ ಬ್ಯಾಂಕ್‍ಗಳೇ ಆಗಿವೆ. IDBI, UCO Bank, IOB ಗಳ NPA ಪ್ರಮಾಣ 20% ಗಿಂತ ಹೆಚ್ಚಿದೆ.

ಹಾಗಿದ್ದರೆ, ನಮ್ಮ ಪಬ್ಲಿಕ್ ಸೆಕ್ಟರ್ ಬ್ಯಾಂಕುಗಳು ಇಂಥಾ ಸ್ಥಿತಿಯಲ್ಲಿ ಗ್ರಾಹಕರ ಡಿಪಾಜಿಟ್ ಹಣಕ್ಕೆ ಬಡ್ಡಿ ಕೊಡಲು ಮತ್ತು ವಾಪಸ್ ಮಾಡಲು ಹೇಗೆ ಸಾಧ್ಯವಾಗುತ್ತಿದೆ ಎಂದು ನೋಡೋಣ. ನಿಮಗೆ ನೆನಪಿರುವ ಹಾಗೆ 2016-17 ಮತ್ತು 2017-18 ರಲ್ಲಿ ಕೇಂದ್ರ ಸರ್ಕಾರ ಬಜೆಟ್‍ನಲ್ಲಿ ಒಟ್ಟು 50000 ಕೋಟಿ ರೂಪಾಯಿಗಳನ್ನು ಪಬ್ಲಿಕ್ ಸೆಕ್ಟರ್ ಬ್ಯಾಂಕುಗಳಿಗೆ ಕೊಟ್ಟಿದೆ. ಇದರಿಂದಾಗಿ ಭಾರೀ ಓPಂಯ ಹೊರತಾಗಿಯೂ ಈ ಬ್ಯಾಂಕುಗಳು ಒಂದು ಮಟ್ಟಿಗೆ ಉಸಿರಾಡಲು ಸಾಧ್ಯವಾಗಿದೆ.

ಆದರೆ, ಸರ್ಕಾರ ಬ್ಯಾಂಕುಗಳಿಗೆ ಕೊಟ್ಟ ಈ ಹಣ ನಮ್ಮೆಲ್ಲರ ತೆರಿಗೆಯ ಹಣ. ಇದನ್ನು ರಸ್ತೆಗೋ, ಶಾಲೆಗೋ ಉಪಯೋಗಿಸುವ ಬದಲು ಸರ್ಕಾರ ಬ್ಯಾಂಕುಗಳಿಗೆ ಕೊಟ್ಟಿದೆ.

ಇದರಿಂದ ಒಂದು ಕಡೆ ಅಭಿವೃದ್ಧಿ ಕುಂಠಿತವಾದರೆ ಮತ್ತೊಂದೆಡೆ ದೇಶದ ವಿತ್ತೀಯ ಕೊರತೆಯೂ ಹೆಚ್ಚುತ್ತದೆ(ಈ ಹಣ ಸರ್ಕಾರದ ಖರ್ಚಿನಡಿ ಬರುವುದರಿಂದ).

ಒಟ್ಟಿನಲ್ಲಿ ಬ್ಯಾಂಕುಗಳು ಮಾಡುವ ತಪ್ಪಿಗೆ (ಈ ತಪ್ಪಿನಲ್ಲಿ ಇದನ್ನು ತಡೆಯುವುದಿರಲಿ ಪರೋಕ್ಷವಾಗಿ ಪ್ರೋತ್ಸಾಹಿಸುವ ಕಾರಣಕ್ಕೆ ಸರ್ಕಾರದ ಪಾಲು ದೊಡ್ಡದಿದೆ) ನಮ್ಮ ತೆರಿಗೆ ದುಡ್ಡು ಪೋಲಾಗುತ್ತಿದೆಯಷ್ಟೇ ಅಲ್ಲದೆ ನಮ್ಮೆಲ್ಲರ ಮೇಲೂ ಹೆಚ್ಚೆಚ್ಚು ಸಾಲದ ಹೊರೆ ಬೀಳುತ್ತಿದೆ.

ಹೀಗೆ NPA ಗೆ ಸಿಲುಕಿದ ಪಬ್ಲಿಕ್ ಸೆಕ್ಟರ್ ಬ್ಯಾಂಕುಗಳನ್ನು ಕಾಪಾಡಲು ಮತ್ತು NPA ಯಿಂದಾಗುವ ವಿತ್ತೀಯ ಕೊರತೆಯಿಂದ ತಕ್ಷಣ ಪಾರಾಗಲು ಸರ್ಕಾರ ಅಕ್ಟೋಬರ್ 2017 ರಿಂದ Recapitalization bonds ಅನ್ನು ಬಿಡುಗಡೆ ಮಾಡಿತು. ಬ್ಯಾಂಕುಗಳು ತಮ್ಮ ಡಿಪಾಜಿಟ್ ಹಣದಿಂದ Recapitalization bond ಗಳನ್ನು ಖರೀದಿಸಬೇಕು. ಅ ಹಣವನ್ನು ಭಾರೀ ಸಂಕಷ್ಟದಲ್ಲಿರುವ ಬ್ಯಾಂಕುಗಳಿಗೆ ಸರ್ಕಾರ ವಿತರಿಸುತ್ತದೆ.

ಈ ರೀತಿಯಾಗಿ ಇಲ್ಲಿಯತನಕ ಒಟ್ಟು 250000 ಕೋಟಿಗಳಷ್ಟು ಬೆಲೆಯ ಬಾಂಡುಗಳನ್ನು ವಿವಿಧ ಬ್ಯಾಂಕುಗಳು ಖರೀದಿಸಿವೆ. ಅಂದರೆ ನಮ್ಮ ಡಿಪಾಜಿಟ್ ಹಣದಿಂದಲೇ ಬ್ಯಾಂಕುಗಳನ್ನು NPA ಸುಳಿಯಿಂದ ಮೇಲೆತ್ತುವ ಕೆಲಸಕ್ಕೆ ಸರ್ಕಾರ ಕೈಹಾಕಿತು. ಇದರಿಂದ ಸರ್ಕಾರ ಬಜೆಟಲ್ಲಿ ಬ್ಯಾಂಕುಗಳಿಗೆ ಕೊಡುವ ಹಣವನ್ನು ತಪ್ಪಿಸಿ ಅದರಿಂದಾವಾಗುವಷ್ಟು ವಿತ್ತೀಯ ಕೊರತೆಯಿಂದ ತಕ್ಷಣಕ್ಕೆ ಪಾರಾಗುವ ಯತ್ನ ಮಾಡಿತು.

ಆದರೆ, ಈ ಬಾಂಡುಗಳನ್ನು ಖರೀದಿಸಿದ ಹಣಕ್ಕೆ ಸರ್ಕಾರ ವಾರ್ಷಿಕ 6 – 8% ಬಡ್ಡಿ ಕೊಡಬೇಕಿದೆ. ಈ ಬಡ್ಡಿಯೂ ಒಂದು ಮಟ್ಟಿಗೆ ವಿತ್ತೀಯ ಕೊರತೆ ಹೆಚ್ಚಿಸಲಿದೆ. ಅದಲ್ಲದೆ ಈ ಬಾಂಡುಗಳು ಮುಂದೆ ಹತ್ತರಿಂದ ಹದಿನೈದು ವರ್ಷಗಳಲ್ಲಿ ಮೆಚ್ಯೂರ್ ಆದಾಗ ಅಷ್ಟೂ ಹಣವನ್ನು ಸರ್ಕಾರ ಬಡ್ಡಿ ಸಮೇತ ಹಿಂದಿರುಗಿಸಬೇಕಾಗುತ್ತದೆ.

ಅಂದರೆ, ಮುಂದಿನ ಹತ್ತು ಹದಿನೈದು ವರ್ಷಗಳಲ್ಲಿ ಹತ್ತಾರು ಲಕ್ಷ ಕೋಟಿಗಳಷ್ಟು ಹೊರೆ ಒಟ್ಟಿಗೆ ಬೀಳಲಿದ್ದು, ಸರ್ಕಾರದ ಈ ಕ್ರಮ ಬ್ಯಾಂಕಿಂಗ್ ಪತನವನ್ನು ಮುಂದೂಡುಲಷ್ಟೇ ಶಕ್ತವಾಗಲಿದೆ. ಈ ಮುಂದೂಡಲ್ಪಟ್ಟದ್ದು ಮುಂದಿನ ಹತ್ತು ವರ್ಷಗಳಲ್ಲಿ ಈಗಿನದಕ್ಕಿಂತ ಭಾರೀ ಸಮಸ್ಯೆಯಾಗಿ ಎರಗುವ ಎಲ್ಲ ಸಾಧ್ಯತೆಗಳೂ ಇವೆ.

ಪಬ್ಲಿಕ್ ಸೆಕ್ಟರ್ ಬ್ಯಾಂಕುಗಳೇ ಹೆಚ್ಚಿನ NPA ಹೊಂದಿರುವುದನ್ನು (ಕೆಲವು ಶೇ ಇಪ್ಪತ್ತಕಿಂತ ಹೆಚ್ಚು) ನೋಡಿದಾಗ ಮತ್ತು ಸರ್ಕಾರದ ಕ್ರಮಗಳು ಕೇವಲ ತಾತ್ಕಾಲಿಕವಾಗಿರುವಾಗ ಈ ಯೆಸ್ ಬ್ಯಾಂಕ್ ಬಿಕ್ಕಟ್ಟು ಅಂತ್ಯವಲ್ಲ, ಆರಂಭ ಎಂದು ಯಾರಿಗಾದರೂ ಗೊತ್ತಾಗುತ್ತದೆ.

ಕೊನೆಯದಾಗಿ, ಒಂದು ದೇಶದ ಅಭಿವೃದ್ಧಿಯಲ್ಲಿ ಬ್ಯಾಂಕುಗಳ ಪಾತ್ರದ ಅರಿವಿರುವವರಿಗೆ ನಮ್ಮ ಬ್ಯಾಂಕುಗಳ ಪರಿಹಾರವಾಗದ NPA ಬಿಕ್ಕಟ್ಟನ್ನು ನೋಡಿದಾಗ ನಮಗೆ ಬೇರೆಯದೇ ಅಭಿವೃದ್ದಿ ಮಾದರಿಯ ಅವಶ್ಯಕತೆ ಇದೆಯೆಂಬುದು ಸುಸ್ಪಷ್ಟವಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...