HomeಮುಖಪುಟYes Bank ಪತನ ಅಂತ್ಯವೋ, ಆರಂಭವೋ?

Yes Bank ಪತನ ಅಂತ್ಯವೋ, ಆರಂಭವೋ?

- Advertisement -
- Advertisement -

ಈಗಾಗಲೇ ನಿಮಗೆಲ್ಲ ತಿಳಿದಿರುವ ಹಾಗೆ Yes Bank ಪತನದ ಹಾದಿ ಹಿಡಿದಿದ್ದು ಆ ಬ್ಯಾಂಕಿನಲ್ಲಿ ಡಿಪಾಜಿಟ್ ಇಟ್ಟಿದ್ದ ಗ್ರಾಹಕರ ಹಣವನ್ನು ರಕ್ಷಿಸಲು ಮತ್ತು Yes Bankನ್ನು ಪೂರ್ಣ ಮುಳುಗಡೆಯಿಂದ ರಕ್ಷಿಸಲು ಪಬ್ಲಿಕ್ ಸೆಕ್ಟರ್ ಬ್ಯಾಂಕಾದ SBI, ಯೆಸ್ ಬ್ಯಾಂಕಿನ 49% ಶೇರುಗಳನ್ನು 2450 ಹೂಡಿಕೆ ಮಾಡಿ ಕೊಳ್ಳುವಂತೆ RBI ಮಾಡಿದೆ.

ಆದರೆ, ಯೆಸ್ ಬ್ಯಾಂಕನ್ನು ಈ ಕ್ರೈಸಿಸ್‍ನಿಂದ ಪಾರು (bail out) ಮಾಡಲು ಕನಿಷ್ಟ 21,000 ಕೋಟಿ ರೂಪಾಯಿಗಳ ಅವಶ್ಯಕತೆ ಇತ್ತು. ಆದರೆ, ಈಗ SBI ಹೂಡಿಕೆ ಮಾಡಿರುವುದು ಕೇವಲ 2450 ಕೋಟಿ ರೂಪಾಯಿಗಳು. ಆದ್ದರಿಂದ RBIನ ಈ ನಡೆ ಗ್ರಾಹಕರ ಡಿಪಾಜಿಟ್ ಹಣದ ರಕ್ಷಣೆ ಯಾವ ಮಟ್ಟದಲ್ಲಿ ಮಾಡಲಿದೆ ಎಂದು ಕಾಯ್ದು ನೋಡಬೇಕಾಗಿದೆ.

ಬಹುತೇಕ ಕಡೆಯ ಹದಿನೈದು ವರ್ಷಗಳಲ್ಲಿ ಒಂದು ಖಾಸಗಿ ಬ್ಯಾಂಕನ್ನು ಪತನದಿಂದ ರಕ್ಷಿಸಲು ಸರ್ಕಾರ ಮುಂದಾಗಿದ್ದು ಇದೇ ಮೊದಲು.

ಈ ಹಿನ್ನೆಲೆಯಲ್ಲಿ ಯೆಸ್ ಬ್ಯಾಂಕಿನ ಪತನಕ್ಕೆ ಕಾರಣಗಳೇನು ಎಂಬುದನ್ನು ಸಂಕ್ಷಿಪ್ತವಾಗಿ ನೋಡುತ್ತ, ಈ ಬ್ಯಾಂಕಿಂಗ್ ಕ್ಷೇತ್ರದ ಈ ರೀತಿಯ ಪತನದ ಕತೆ ಇಲ್ಲಿಗೇ ಮುಗಿಯಲಿದೆಯೇ ಅತವಾ ಮುಂದುವರೆಯಲಿದೆಯೇ ನೋಡೋಣ.

ಯಾವುದೇ ಬ್ಯಾಂಕಿನ ವ್ಯವಹಾರ ಸರಳವಾಗಿ ಗ್ರಾಹಕರಿಂದ ಡಿಪಾಜಿಟ್ಟುಗಳನ್ನು ಕಡಿಮೆ ಬಡ್ಡಿದರದಲ್ಲಿ ಇರಿಸಿಕೊಂಡು, ಆ ಡಿಪಾಜಿಟ್ ಹಣವನ್ನು ಹೆಚ್ಚಿನ ಬಡ್ಡಿದರಕ್ಕೆ ಸಾಲವಾಗಿ ಅವಶ್ಯಕತೆಯುಳ್ಳ ಗ್ರಾಹಕರಿಗೆ ಕೊಟ್ಟು ಲಾಭ ಗಳಿಸುವುದು.

ಆದರೆ ಸಾಲವಾಗಿ ಕೊಟ್ಟ ಹಣ ವಾಪಸ್ ಬರದೇ ಇದ್ದಾಗ ಬ್ಯಾಂಕುಗಳು ತೊಂದರೆಗೆ ಸಿಲುಕಿ ನಷ್ಟ ಅನುಭವಿಸಬೇಕಾಗುತ್ತದೆ. ಈ ರೀತಿ ಕನಿಷ್ಟ ತೊಂಬತ್ತು ದಿನ ಕೊಟ್ಟ ಸಾಲದ ಕಂತು ವಾಪಸ್ ಬರದೇ ಇದ್ದಾಗ ಅಂತ ಸಾಲವನ್ನು ಕೆಟ್ಟ ಸಾಲ (Bad loans) ಎಂದು ಕರೆಯಲಾಗುತ್ತದೆ. ಈ ಕೆಟ್ಟ ಸಾಲಗಳ ಸಂಖ್ಯೆ ಮತ್ತು ಮೌಲ್ಯ ಹೆಚ್ಚಾದಷ್ಟೂ ಬ್ಯಾಂಕುಗಳು ಸಂಕಷ್ಟಕ್ಕೆ ಸಿಲುಕುತ್ತವೆ.

ಆಗ ಅಂತಹ ಬ್ಯಾಂಕಿನಲ್ಲಿ ಕಷ್ಟಪಟ್ಟು ಉಳಿಸಿದ ಹಣವನ್ನು ಡಿಪಾಜಿಟ್ ಇಟ್ಟಿರುವವರೂ ಸಂಕಷ್ಟಕ್ಕೆ ಸಿಲುಕುತ್ತಾರೆ ಮತ್ತು ಬ್ಯಾಂಕಿಂಗ್ ವ್ಯವಸ್ಥೆಯ ಮೇಲೆ ನಂಬಿಕೆಯನ್ನು ಕಳೆದುಕೊಳ್ಳುತ್ತಾರೆ. ಇದು ಇಡೀ ದೇಶದ ಆರ್ಥಿಕತೆಯ ಮೇಲೆ ಭಾರೀ ನಕಾರಾತ್ಮಕ ಪರಿಣಾಮ ಬೀರುತ್ತದೆ.

ಇದೇರೀತಿ ಯೆಸ್ ಬ್ಯಾಂಕ್ ಕೂಡ ಕೆಟ್ಟ ಸಾಲದ ಸುಳಿಗೆ ಸಿಲುಕಿತ್ತು. ಈ ರೀತಿ ಸಾಲ ತೆಗೆದುಕೊಂಡು ವಾಪಸ್ ಕೊಡದಿರುವವರು ಬಹುತೇಕ ಕಾರ್ಪೊರೇಟ್ ಕಂಪನಿಗಳವರಾಗಿರುತ್ತಾರೆ ಮತ್ತು ಯೆಸ್ ಬ್ಯಾಂಕ್ ಕೊಟ್ಟ ಸಾಲದಲ್ಲಿ ಸುಮಾರು 63% ರಷ್ಟನ್ನು ಕಾರ್ಪೊರೇಟ್ ಕಂಪನಿಗಳಿಗೇ (ಅಥವಾ ಕಾರ್ಪೊರೇಟ್ ವ್ಯಕ್ತಿಗಳಿಗೆ) ಕೊಡಲಾಗಿತ್ತು. ಬ್ಯಾಂಕುಗಳ NPA ಯನ್ನೂ ಒಂದು ಪ್ರಮುಖ ವಿಷಯ ಮಾಡಿ ಅಧಿಕಾರಕ್ಕೆ ಬಂದ ಈ ಸರ್ಕಾರದ ಅವಧಿಯಲ್ಲಿಯೇ ಯೆಸ್ ಬ್ಯಾಂಕ್ ಕೊಟ್ಟ ಸಾಲ 400% ( 2014 ರಿಂದ 2019 ರವರೆಗೆ 55000 ಕೋಟಿಯಿಂದ 241000 ಕೋಟಿ) ರಷ್ಟು ಏರಿಕೆಯಾಗಿದೆ ಎಂಬ ವಿಷಯ ಈ ರೀತಿಯ ಕೆಟ್ಟ ಸಾಲಗಳ ನೀಡುವಿಕೆ ಸರ್ಕಾರಕ್ಕೆ ಅರಿವಿದ್ದೂ ನಡೆಯುತ್ತದೆ ಎಂಬುದನ್ನು ಸ್ಪಷ್ಟವಾಗಿ ತಿಳಿಸುತ್ತದೆ.

ಹಾಗೆಯೇ ಈ ರೀತಿಯ ಸಾಲ ಪಡೆದವರಲ್ಲಿ ಅನೇಕರು ಸರ್ಕಾರಕ್ಕೆ ( ಯಾವುದೇ ಸರ್ಕಾರವಿದ್ದಾಗಲೂ) ಆಪ್ತರಾಗಿರುವವರು ಎಂಬುದು ಈ ವ್ಯವಹಾರದ ಮತ್ತೊಂದು ಮುಖವನ್ನು ನಮಗೆ ತೆರೆದು ತೋರಿಸುತ್ತದೆ.

ಈ ಯೆಸ್ ಬ್ಯಾಂಕಿನ ಒಟ್ಟಾರೆ NPA ಪ್ರಮಾಣ ಅದು ಕೊಟ್ಟಿರುವ ಒಟ್ಟು ಸಾಲದ 8% ಗಳಷ್ಟು ಮಾತ್ರ ( ಈ ಪ್ರಮಾಣ 2% ಗಿಂತ ಹೆಚ್ಚಿದ್ದರೆ ಅಂತ ಬ್ಯಾಂಕ್ ವ್ಯವಹಾರ ಅನಾರೋಗ್ಯಕರವಾಗಿದೆಯೆಂದು ಹೇಳಲಾಗುತ್ತದೆ). ಇಷ್ಟು ಕೆಟ್ಟ ಸಾಲದ ಹೊರೆಯಿಂದಾಗಿ ಯೆಸ್ ಬ್ಯಾಂಕ್ ತನ್ನ ಡಿಪಾಜಿಟ್‍ದಾರರಿಗೆಹಣ ಹಿಂದುರಿಗಿಸಲಾರದ ಸ್ಥಿತಿಗೆ ತಲುಪಿತ್ತು.

ಹಾಗೆ ನೋಡಿದರೆ, ನಮ್ಮ ಹಲವು ಪಬ್ಲಿಕ್ ಸೆಕ್ಟರ್ ಬ್ಯಾಂಕುಗಳ NPA ಪ್ರಮಾಣ ಶೇ ಹತ್ತಕಿಂತ ಹೆಚ್ಚಿದೆ. ಶೇ. ಹತ್ತಕ್ಕಿಂತ ಹೆಚ್ಚು ಓPಂ ಹೊಂದಿರುವ ಒಟ್ಟು ಹದಿನೇಳು ಬ್ಯಾಂಕುಗಳಲ್ಲಿ ಹದಿನಾರು ಬ್ಯಾಂಕುಗಳು ಪಬ್ಲಿಕ್ ಸೆಕ್ಟರ್ ಬ್ಯಾಂಕ್‍ಗಳೇ ಆಗಿವೆ. IDBI, UCO Bank, IOB ಗಳ NPA ಪ್ರಮಾಣ 20% ಗಿಂತ ಹೆಚ್ಚಿದೆ.

ಹಾಗಿದ್ದರೆ, ನಮ್ಮ ಪಬ್ಲಿಕ್ ಸೆಕ್ಟರ್ ಬ್ಯಾಂಕುಗಳು ಇಂಥಾ ಸ್ಥಿತಿಯಲ್ಲಿ ಗ್ರಾಹಕರ ಡಿಪಾಜಿಟ್ ಹಣಕ್ಕೆ ಬಡ್ಡಿ ಕೊಡಲು ಮತ್ತು ವಾಪಸ್ ಮಾಡಲು ಹೇಗೆ ಸಾಧ್ಯವಾಗುತ್ತಿದೆ ಎಂದು ನೋಡೋಣ. ನಿಮಗೆ ನೆನಪಿರುವ ಹಾಗೆ 2016-17 ಮತ್ತು 2017-18 ರಲ್ಲಿ ಕೇಂದ್ರ ಸರ್ಕಾರ ಬಜೆಟ್‍ನಲ್ಲಿ ಒಟ್ಟು 50000 ಕೋಟಿ ರೂಪಾಯಿಗಳನ್ನು ಪಬ್ಲಿಕ್ ಸೆಕ್ಟರ್ ಬ್ಯಾಂಕುಗಳಿಗೆ ಕೊಟ್ಟಿದೆ. ಇದರಿಂದಾಗಿ ಭಾರೀ ಓPಂಯ ಹೊರತಾಗಿಯೂ ಈ ಬ್ಯಾಂಕುಗಳು ಒಂದು ಮಟ್ಟಿಗೆ ಉಸಿರಾಡಲು ಸಾಧ್ಯವಾಗಿದೆ.

ಆದರೆ, ಸರ್ಕಾರ ಬ್ಯಾಂಕುಗಳಿಗೆ ಕೊಟ್ಟ ಈ ಹಣ ನಮ್ಮೆಲ್ಲರ ತೆರಿಗೆಯ ಹಣ. ಇದನ್ನು ರಸ್ತೆಗೋ, ಶಾಲೆಗೋ ಉಪಯೋಗಿಸುವ ಬದಲು ಸರ್ಕಾರ ಬ್ಯಾಂಕುಗಳಿಗೆ ಕೊಟ್ಟಿದೆ.

ಇದರಿಂದ ಒಂದು ಕಡೆ ಅಭಿವೃದ್ಧಿ ಕುಂಠಿತವಾದರೆ ಮತ್ತೊಂದೆಡೆ ದೇಶದ ವಿತ್ತೀಯ ಕೊರತೆಯೂ ಹೆಚ್ಚುತ್ತದೆ(ಈ ಹಣ ಸರ್ಕಾರದ ಖರ್ಚಿನಡಿ ಬರುವುದರಿಂದ).

ಒಟ್ಟಿನಲ್ಲಿ ಬ್ಯಾಂಕುಗಳು ಮಾಡುವ ತಪ್ಪಿಗೆ (ಈ ತಪ್ಪಿನಲ್ಲಿ ಇದನ್ನು ತಡೆಯುವುದಿರಲಿ ಪರೋಕ್ಷವಾಗಿ ಪ್ರೋತ್ಸಾಹಿಸುವ ಕಾರಣಕ್ಕೆ ಸರ್ಕಾರದ ಪಾಲು ದೊಡ್ಡದಿದೆ) ನಮ್ಮ ತೆರಿಗೆ ದುಡ್ಡು ಪೋಲಾಗುತ್ತಿದೆಯಷ್ಟೇ ಅಲ್ಲದೆ ನಮ್ಮೆಲ್ಲರ ಮೇಲೂ ಹೆಚ್ಚೆಚ್ಚು ಸಾಲದ ಹೊರೆ ಬೀಳುತ್ತಿದೆ.

ಹೀಗೆ NPA ಗೆ ಸಿಲುಕಿದ ಪಬ್ಲಿಕ್ ಸೆಕ್ಟರ್ ಬ್ಯಾಂಕುಗಳನ್ನು ಕಾಪಾಡಲು ಮತ್ತು NPA ಯಿಂದಾಗುವ ವಿತ್ತೀಯ ಕೊರತೆಯಿಂದ ತಕ್ಷಣ ಪಾರಾಗಲು ಸರ್ಕಾರ ಅಕ್ಟೋಬರ್ 2017 ರಿಂದ Recapitalization bonds ಅನ್ನು ಬಿಡುಗಡೆ ಮಾಡಿತು. ಬ್ಯಾಂಕುಗಳು ತಮ್ಮ ಡಿಪಾಜಿಟ್ ಹಣದಿಂದ Recapitalization bond ಗಳನ್ನು ಖರೀದಿಸಬೇಕು. ಅ ಹಣವನ್ನು ಭಾರೀ ಸಂಕಷ್ಟದಲ್ಲಿರುವ ಬ್ಯಾಂಕುಗಳಿಗೆ ಸರ್ಕಾರ ವಿತರಿಸುತ್ತದೆ.

ಈ ರೀತಿಯಾಗಿ ಇಲ್ಲಿಯತನಕ ಒಟ್ಟು 250000 ಕೋಟಿಗಳಷ್ಟು ಬೆಲೆಯ ಬಾಂಡುಗಳನ್ನು ವಿವಿಧ ಬ್ಯಾಂಕುಗಳು ಖರೀದಿಸಿವೆ. ಅಂದರೆ ನಮ್ಮ ಡಿಪಾಜಿಟ್ ಹಣದಿಂದಲೇ ಬ್ಯಾಂಕುಗಳನ್ನು NPA ಸುಳಿಯಿಂದ ಮೇಲೆತ್ತುವ ಕೆಲಸಕ್ಕೆ ಸರ್ಕಾರ ಕೈಹಾಕಿತು. ಇದರಿಂದ ಸರ್ಕಾರ ಬಜೆಟಲ್ಲಿ ಬ್ಯಾಂಕುಗಳಿಗೆ ಕೊಡುವ ಹಣವನ್ನು ತಪ್ಪಿಸಿ ಅದರಿಂದಾವಾಗುವಷ್ಟು ವಿತ್ತೀಯ ಕೊರತೆಯಿಂದ ತಕ್ಷಣಕ್ಕೆ ಪಾರಾಗುವ ಯತ್ನ ಮಾಡಿತು.

ಆದರೆ, ಈ ಬಾಂಡುಗಳನ್ನು ಖರೀದಿಸಿದ ಹಣಕ್ಕೆ ಸರ್ಕಾರ ವಾರ್ಷಿಕ 6 – 8% ಬಡ್ಡಿ ಕೊಡಬೇಕಿದೆ. ಈ ಬಡ್ಡಿಯೂ ಒಂದು ಮಟ್ಟಿಗೆ ವಿತ್ತೀಯ ಕೊರತೆ ಹೆಚ್ಚಿಸಲಿದೆ. ಅದಲ್ಲದೆ ಈ ಬಾಂಡುಗಳು ಮುಂದೆ ಹತ್ತರಿಂದ ಹದಿನೈದು ವರ್ಷಗಳಲ್ಲಿ ಮೆಚ್ಯೂರ್ ಆದಾಗ ಅಷ್ಟೂ ಹಣವನ್ನು ಸರ್ಕಾರ ಬಡ್ಡಿ ಸಮೇತ ಹಿಂದಿರುಗಿಸಬೇಕಾಗುತ್ತದೆ.

ಅಂದರೆ, ಮುಂದಿನ ಹತ್ತು ಹದಿನೈದು ವರ್ಷಗಳಲ್ಲಿ ಹತ್ತಾರು ಲಕ್ಷ ಕೋಟಿಗಳಷ್ಟು ಹೊರೆ ಒಟ್ಟಿಗೆ ಬೀಳಲಿದ್ದು, ಸರ್ಕಾರದ ಈ ಕ್ರಮ ಬ್ಯಾಂಕಿಂಗ್ ಪತನವನ್ನು ಮುಂದೂಡುಲಷ್ಟೇ ಶಕ್ತವಾಗಲಿದೆ. ಈ ಮುಂದೂಡಲ್ಪಟ್ಟದ್ದು ಮುಂದಿನ ಹತ್ತು ವರ್ಷಗಳಲ್ಲಿ ಈಗಿನದಕ್ಕಿಂತ ಭಾರೀ ಸಮಸ್ಯೆಯಾಗಿ ಎರಗುವ ಎಲ್ಲ ಸಾಧ್ಯತೆಗಳೂ ಇವೆ.

ಪಬ್ಲಿಕ್ ಸೆಕ್ಟರ್ ಬ್ಯಾಂಕುಗಳೇ ಹೆಚ್ಚಿನ NPA ಹೊಂದಿರುವುದನ್ನು (ಕೆಲವು ಶೇ ಇಪ್ಪತ್ತಕಿಂತ ಹೆಚ್ಚು) ನೋಡಿದಾಗ ಮತ್ತು ಸರ್ಕಾರದ ಕ್ರಮಗಳು ಕೇವಲ ತಾತ್ಕಾಲಿಕವಾಗಿರುವಾಗ ಈ ಯೆಸ್ ಬ್ಯಾಂಕ್ ಬಿಕ್ಕಟ್ಟು ಅಂತ್ಯವಲ್ಲ, ಆರಂಭ ಎಂದು ಯಾರಿಗಾದರೂ ಗೊತ್ತಾಗುತ್ತದೆ.

ಕೊನೆಯದಾಗಿ, ಒಂದು ದೇಶದ ಅಭಿವೃದ್ಧಿಯಲ್ಲಿ ಬ್ಯಾಂಕುಗಳ ಪಾತ್ರದ ಅರಿವಿರುವವರಿಗೆ ನಮ್ಮ ಬ್ಯಾಂಕುಗಳ ಪರಿಹಾರವಾಗದ NPA ಬಿಕ್ಕಟ್ಟನ್ನು ನೋಡಿದಾಗ ನಮಗೆ ಬೇರೆಯದೇ ಅಭಿವೃದ್ದಿ ಮಾದರಿಯ ಅವಶ್ಯಕತೆ ಇದೆಯೆಂಬುದು ಸುಸ್ಪಷ್ಟವಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...