ಸುಪ್ರೀಂಕೋರ್ಟ್ನ ಮಾಜಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ವಿರುದ್ಧದ ಲೈಂಗಿಕ ಕಿರುಕುಳ ಆರೋಪಗಳ ಹಿಂದಿನ ಪಿತೂರಿಯನ್ನು ತಳ್ಳಿಹಾಕುವಂತಿಲ್ಲ ಎಂಬ ಸುಪ್ರೀಂ ಕೋರ್ಟ್ ಸಮಿತಿಯ ವರದಿಗೆ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಆಕ್ರೋಶ ವ್ಯಕ್ತಪಡಿಸಿದ್ದು, ‘ಹೌದು ಮೈಲಾರ್ಡ್, ಲೈಂಗಿಕ ದೌರ್ಜನ್ಯಕ್ಕೆ ಒಳಗಾದವರೆಲ್ಲಾ ಒಟ್ಟಾಗಿ ಸಂಚು ಹೂಡಿದರು’ ಎಂದು ಹೇಳಿದ್ದಾರೆ.
ಮಾಜಿ ನ್ಯಾಯಮೂರ್ತಿ ಗೂಗೋಯ್ ವಿರುದ್ದದ ಲೈಂಗಿಕ ಆರೋಪದ ಬಗ್ಗೆ ಸುಪ್ರೀಂಕೋರ್ಟ್ ತೀರ್ಪಿಗೆ, ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಮಹುವಾ ಮೊಯಿತ್ರಾ, “ನ್ಯಾಯಮೂರ್ತಿ ಗೊಗೊಯ್ ವಿರುದ್ಧದ ಆರೋಪಗಳನ್ನು ತನಿಖೆ ಮಾಡಲು ಸಮಿತಿ ರಚಿಸಿಲ್ಲ, ಆದರೆ ನ್ಯಾಯಾಧೀಶರ ಮೇಲೆ ಮಾಡಲಾದ ದೊಡ್ಡ ಪಿತೂರಿಯ ಬಗ್ಗೆ ತನಿಖೆ ನಡೆಸುವುದಾಗಿ ಸುಪ್ರೀಂಕೋರ್ಟ್ ಹೇಳಿದೆ. ಹೌದು ಮೈಲಾರ್ಡ್, ಲೈಂಗಿಕ ದೌರ್ಜನ್ಯಕ್ಕೆ ಒಳಗಾದವರೆಲ್ಲಾ ಒಟ್ಟಾಗಿ ಸಂಚು ಹೂಡಿದರು” ಎಂದು ಟ್ವೀಟ್ ಮಾಡಿ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ಗೊಗೊಯ್ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣ: ಪಿತೂರಿ ನಡೆದಿರಬಹುದು ಎಂದ ಸುಪ್ರೀಂ
SC says committee not set up to inquire into allegations against CJI Gogoi but to investigate a larger conspiracy to frame judges.
Yes MiLords, all victims of sexual harassment got together & cooked up this conspiracy.
— Mahua Moitra (@MahuaMoitra) February 18, 2021
ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ವಿರುದ್ಧ ಪಿತೂರಿ ನಡೆದಿದ್ದ ಸಾಧ್ಯತೆಯನ್ನು ತಳ್ಳಿಹಾಕಲಾಗುವುದಿಲ್ಲ ಎಂದು ಸುಪ್ರೀಂಕೋರ್ಟ್ ಇಂದು ಹೇಳಿದ್ದು, ಲೈಂಗಿಕ ಕಿರುಕುಳದ ಆರೋಪದ ನಂತರ ಆರಂಭಿಸಲಾಗಿದ್ದ ತನಿಖೆಯನ್ನು ಮುಕ್ತಾಯಗೊಳಿಸಿದೆ. ನ್ಯಾಯಮೂರ್ತಿ ಗೊಗೊಯ್ ಅವರ ಕಠಿಣ ನಿರ್ಧಾರಗಳ ಕಾರಣದಿಂದ ಇಂತಹ ಪಿತೂರಿ ಸಂಭವಿಸಿರಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿತ್ತು.
ನ್ಯಾಯಮೂರ್ತಿ ಎ.ಕೆ. ಪಟ್ನಾಯಕ್ ಸಲ್ಲಿಸಿದ ವರದಿಯಲ್ಲಿ ಇದನ್ನು ಉಲ್ಲೇಖಿಸಲಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಎರಡು ವರ್ಷಗಳ ಹಿಂದೆ ದೂರು ದಾಖಲಾಗಿದ್ದರಿಂದ ಹೆಚ್ಚಿನ ತನಿಖೆ ನಡೆಸುವ ಸಾಧ್ಯತೆ ಇಲ್ಲ ಮತ್ತು ಆದ್ದರಿಂದ ಪ್ರಕರಣವನ್ನು ಮುಚ್ಚಲಾಗಿದೆ ಎಂದು ಸುಪ್ರೀಂ ಕೋರ್ಟ್ ತಿಳಿಸಿತ್ತು.
ಇದನ್ನೂ ಓದಿ: ಪಂಜಾಬ್ ಚುನಾವಣೆ: ನನ್ನ ಕುಟುಂಬದವರ ಮತವೇ ನನಗೆ ಬಿದ್ದಿಲ್ಲ ಎಂದ ಬಿಜೆಪಿ ಅಭ್ಯರ್ಥಿ!