HomeಮುಖಪುಟYes! ದೆ ಆರ್ ಅನ್‍ಬೀಟಬಲ್!! ಪ್ರಪಂಚವೇ ಬೆಚ್ಚಿಬೀಳುವಂತೆ ಡ್ಯಾನ್ಸ್‌ ಮಾಡಿದ ಸ್ಲಂ ಯುವಜನರ ತಂಡ..

Yes! ದೆ ಆರ್ ಅನ್‍ಬೀಟಬಲ್!! ಪ್ರಪಂಚವೇ ಬೆಚ್ಚಿಬೀಳುವಂತೆ ಡ್ಯಾನ್ಸ್‌ ಮಾಡಿದ ಸ್ಲಂ ಯುವಜನರ ತಂಡ..

- Advertisement -
- Advertisement -

ಅಮೆರಿಕಾ ಗಾಟ್ ಟ್ಯಾಲೆಂಟ್’ (AGT) ರಿಯಾಲಿಟಿ ಶೋನಲ್ಲಿ ಭಾಗವಹಿಸಿದ್ದ ಮುಂಬೈನ 28 ಬಾಲಕ ಬಾಲಕಿಯರು ತಮ್ಮ ಡ್ಯಾನ್ಸ್ ಪ್ರದರ್ಶನದಲ್ಲಿ ಟ್ರೋಫಿಯನ್ನು ಗೆದ್ದು ಅಮೆರಿಕನ್ನರನ್ನು ಮಾತ್ರವಲ್ಲ ಪ್ರಪಂಚವನ್ನೇ ಬೆಚ್ಚಿ ಬೀಳಿಸಿದ್ದಾರೆ.

ಇಡೀ ವಿಶ್ವವೇ ನಿಬ್ಬೆರಗಾಗುವಂತೆ ಮಾಡುವ ಅಮೆರಿಕಾ ಗಾಟ್ ಟ್ಯಾಲೆಂಟ್ ರಿಯಾಲಿಟಿ ಶೋ ಸ್ಪರ್ಧೆಯಲ್ಲಿ ಭಾಗವಹಿಸಿ ಹೃದಯವೇ ನಿಂತುಹೋಗುವಂತಹ ಡ್ಯಾನ್ಸ್ ಪ್ರದರ್ಶನ ನೀಡಿ ರಿಯಾಲಿಟಿ ಶೋ ಟ್ರೋಫಿ ಗೆದ್ದಿರುವ ಈ ಯುವಜನರು ಪ್ರಪಂಚದ ಗಮನ ಸೆಳೆದಿದ್ದಾರೆ.

ಯಾರು ಈ “ವಿ ಅನ್‍ಬೀಟಬಲ್”

ವಿ ಅನ್‍ಬೀಟಬಲ್ ತಂಡ ಮುಂಬೈನ ಹಲವಾರು ಸ್ಲಂಗಳಲ್ಲಿ ವಾಸಿಸುವ ಯುವಜನರ ತಂಡ. ಮುಂಬೈನ ಸ್ಲಂಗಳಲ್ಲಿ ದುಸ್ತರವಾದ ಬದುಕು. ಕುಡಿಯಲು ಶುದ್ಧ ನೀರು ಸಿಗದೆ, ಕಾಲು ಚಾಚಿ ಮಲಗುವಷ್ಟು ಜಾಗವೂ ಇಲ್ಲದೆ, ಚಿಕ್ಕ ಶೆಡ್ಡುಗಳಂತಹ ಮನೆಗಳಲ್ಲಿ ಬದುಕುವ ಜನರ ಅಲ್ಲಿನ ನೋವುಗಳನ್ನು ಅನುಭವಿಸುತ್ತಾ ಬೆಳೆಯುತ್ತಿದ್ದ ಈ 28 ಯುವಜನರ ತಂಡವೇ ವಿ ಅನ್ಬೀಟಬಲ್.

ಮುಂಬೈನ ಸ್ಲಂಗಳಲ್ಲಿ ವಾಸಿಸುತ್ತಿರುವ 12ರಿಂದ 27ವಯಸ್ಸಿನವರೆಗಿನ ಬಾಲಕಬಾಲಕಿಯರು ಅವರು. “ಸ್ಲಂಗಳು ಅತ್ಯಂತ ಜನನಿಬಿಡವಾಗಿವೆ, ಕೊಳಕಾಗಿರುತ್ತದೆ, ಸೂಕ್ತ ವಿದ್ಯುತ್ ಸೌಲಭ್ಯ ಅಲ್ಲಿಲ್ಲ, ಒಂದೊಂದು ಸಣ್ಣ ಕೋಣೆಯಲ್ಲಿ 10 ಜನ ಇರಬೇಕಾಗುತ್ತದೆ, ಅಲ್ಲಿ ಬದುಕು ಉಳಿಸಿಕೊಳ್ಳುವುದೇ ಸವಾಲಿನ ಕೆಲಸ. ಇಂತಹ ಕಷ್ಟದ ಬದುಕಿನಲ್ಲಿ ಅವರು ಪ್ರಾರ್ಥಿಸುತ್ತಿದ್ದದ್ದು ಉತ್ತಮವಾದ, ಸ್ವಾವಲಂಬಿ-ಸ್ವಾಭಿಮಾನದ ಘನತೆಯ ಬದುಕಿಗಾಗಿ. ಆದರೆ ಆ ಯುವಜನರಿಗೆ ಸ್ಲಂಗಳಲ್ಲಿ ಸಿಗುತ್ತಿದ್ದ ಅವಕಾಶವೇ ಕಡಿಮೆ.., ಆದರೂ, ಬೆಳಗ್ಗೆಯಿಂದ ಸಂಜೆಯವರೆಗೂ ಹೊಟ್ಟೆಪಾಡಿಗಾಗಿ ದುಡಿಯುತ್ತಿದ್ದ ಈ ಯುವಜನರು, ಸಂಜೆಯ ಸಮಯದಲ್ಲಿ ಒಟ್ಟಿಗೆ ಸೇರಿ ಡ್ಯಾನ್ಸ್ ಮಾಡುತ್ತಾ ತಮ್ಮೆಲ್ಲರ ಮನಸ್ಸಿನ ಮಾನಸಿಕ ದುಗುಡ, ತಳಮಳ, ಬದುಕಿನ ಮೇಲಿನ ಆಕ್ರೋಶವನ್ನು ಕಳೆದುಕೊಂಡು, ಮನಸ್ಸನ್ನು ಹಗುರ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು.

ಈ 28 ಯುವಜನರ ತಂಡ ತಾವು ಒಟ್ಟುಗೂಡಿ ಡ್ಯಾನ್ಸ್ ಮಾಡುವ ಸಂದರ್ಭದಲ್ಲಿ ತಮ್ಮ ಡ್ಯಾನ್ಸಿನ ಸ್ಕಿಲ್ಲನ್ನು ಮತ್ತಷ್ಟು ಹೆಚ್ಚಿಸಿಕೊಳ್ಳಲು ಯೂಟ್ಯೂಬ್‌ನಲ್ಲಿ ನಾನಾ ರೀತಿಯ ಶೋಗಳನ್ನು ನೋಡುತ್ತಿದ್ದರು. ಡ್ಯಾನ್ಸ್ ಬಗ್ಗೆ ತುಡಿತ ಹೊಂದಿದ್ದ ಈ ಯುವಜನರ ಕಣ್ಣಿಗೆ ಕಂಡದ್ದು ‘ಅಮೆರಿಕಾ ಗಾಟ್ ಟ್ಯಾಲೆಂಟ್’ ರಿಯಾಲಿಟಿ ಶೋ. ಆ ಕಾರ್ಯಕ್ರಮವನ್ನು ನೋಡುವಾಗ ಆ ಯುವ ಮನಸ್ಸುಗಳಲ್ಲಿ ಮೂಡಿದ್ದು ನಾವು ಒಂದು ದಿನ ಅಲ್ಲಿಗೆ ಹೋಗಬಹುದಾ ಎಂಬ ಕನಸು. ಆ ಕನಸಿನ್ನು ನನಸಾಗಿಸಿಕೊಳ್ಳುವತ್ತ ಹೆಜ್ಜೆ ಹಾಕಿದ್ದ ಆ ತಂಡ ’ವಿ ಅನ್‍ಬೀಟಬಲ್’ ಹೆಸರನ್ನಿಟ್ಟುಕೊಂಡು ‘ಅಮೆರಿಕಾ ಗಾಟ್ ಟ್ಯಾಲೆಂಟ್’ ವೇದಿಯ ಮೇಲೇರಿ ತಮ್ಮ ಕನಸನ್ನ ನನಸಾಗಿಸಿಕೊಂಡಿದ್ದಾರೆ.

ವಿ ಅನ್‍ಬೀಟಬಲ್ ಗೆಲುವಿನ ಹಾದಿ!

V Unbeatable ಎಂಬ ಡ್ಯಾನ್ಸ್ ತಂಡ ಕಟ್ಟಿಕೊಂಡು ವಾರಗಳ ಕಾಲ ತಾಲೀಮು ನಡೆಸಿಕೊಂಡು ಎನ್‍ಬಿಸಿ ರಿಯಾಲಿಟಿ ಟಿವಿ ನಡೆಸುವ ‘ಅಮೆರಿಕ ಗಾಟ್ ಟ್ಯಾಲೆಂಟ್’ (AGT) ಕಾರ್ಯಕ್ರಮದ ವೇದಿಕೆಯಲ್ಲಿ ಅವರು ಬಂದು ನಿಂತಾಗ ತಮ್ಮೆದುರು ತೀರ್ಪುಗಾರರಾಗಿ ಕುಳಿತ ಸೈಮನ್ ಕೌವೆಲ್, ಹೌವೀ ಮಂಡೆಲ್, ಗ್ಯಾಬ್ರಿಯೆಲ್ ಯೂನಿಯನ್ ಮತ್ತು ಜ್ಯೂಲಿಯನ್ ಹೌ ಅವರಿಗಾಗಲೀ, ಪ್ರೇಕ್ಷಕರಿಗಾಗಲೀ ಆ ಕಂದು ಬಣ್ಣದ ಹುಡುಗರು ಏನು ಮಾಡಲಿದ್ದಾರೆ ಎಂಬ ಊಹೆಯೂ ಇರಲಿಲ್ಲ.

ಶೋ ಆರಂಭದ ಮೊದಲ ದಿನ, ವಿಶಾಲ್ ದಾದ್ಲಾನಿಯ “ಮಲ್ಹಾರಿ” ಹಾಡಿಗೆ ಹುಡುಗರು ಮಾಡುವ ಡ್ಯಾನ್ಸ್ ಕೆಲ ನಿಮಿಷಗಳ ಕಾಲ ಎಲ್ಲರ ಎದೆಬಡಿತ ಹೆಚ್ಚಿಸುತ್ತದೆ. ಅದರಲ್ಲೂ ಸಣ್ಣ ಹುಡುಗರನ್ನು ಎತ್ತಿ ಹಾರಿಸುವ ಕೆಲವು ದೃಶ್ಯಗಳಂತೂ ಮೈ ಜುಮ್ ಎನಿಸಿದ್ದವು. ಬೊಂಬುಗಳನ್ನು ತಂದು ನಿಲ್ಲಿಸಿ ಅದರ ಮೇಲೆ ಕಾಲ್ಬೆರಳ ತುದಿಯಲ್ಲಿ ನಡೆದು, ನೆಗೆದು ತೋರಿಸುವ ದೃಶ್ಯಗಳಂತೂ ಚೇತೋಹಾರಿಯಾಗಿದ್ದವು.

ಆ ದೃಶ್ಯಗಳನ್ನು ನೋಡಿದರೆ, ಅಂತಹ ಪ್ರದರ್ಶನಗಳನ್ನು ಚೀನಾದ ತಂಡಗಳು ಮಾತ್ರ ನೀಡಲು ಸಾಧ್ಯ, ಮತ್ತಾರೂ ಮಾಡಲಾರರು ಎನ್ನುವಂತಿದ್ದವು. ಅಂತಹ ನೃತ್ಯವನ್ನು ಸೂಕ್ತ ತರಬೇತಿ ಸಿಕ್ಕಿದರೆ ಭಾರತದಲ್ಲಿ ವಾಸಿಸುವ ಸ್ಲಂ ಮಕ್ಕಳೂ ಸಹ ಅಸಾಧ್ಯವಾದುದನ್ನು ಸಾಧಿಸಿ ಜಗತ್ತೇ ನಿಬ್ಬೆರಗಾಗುವಂತೆ ಮಾಡಬಲ್ಲರು ಎಂಬುದನ್ನು ವಿ ಅನ್ ಬೀಟಬಲ್ ತಂಡ ತೋರಿಸಿದೆ.

ಅಂದು ರಿಯಾಲಿಟಿ ಶೋ ವೇದಿಕೆ ಮೇಲೆ ನಿಂತ ಈ ಯುವಜನರನ್ನು ಅಮೆರಿಕಾ ಗಾಟ್ ಟ್ಯಾಲೆಂಟ್ ವಿನ್ನರ್ಸ್ ಪಟ್ಟಿಯಲ್ಲಿ ಸೇರಿದರೆ ನಿಮ್ಮ ಭವಿಷ್ಯಕ್ಕೆ ಏನು ಲಾಭ ಎಂದು ಜಡ್ಜ್ ಗ್ಯಾಬ್ರಿಯೆಲ್ ಕೇಳಿದ್ದಕ್ಕೆ ಮುಂಬೈ ಹುಡುಗ, “ಗೆಲುವು ಸಾಧಿಸಿದ್ದು ವಿ ಅನ್ ಬೀಟಬಲ್” ಎಂದು ಇಡೀ ಜಗತ್ತಿಗೆ ತಿಳಿಯಬೇಕೆಂದು ನಾವು ಬಯಸುತ್ತೇವೆ. ಇಂದು ಇಲ್ಲಿ ಸಿಕ್ಕಿರುವ ಅವಕಾಶ ನಮ್ಮ ಬದುಕನ್ನು ಬದಲಿಸಬಹುದು ಎಂಬ ಕನಸು ಹೊತ್ತು ಎಲ್ಲರೂ ಇಲ್ಲಿದ್ದೇವೆ ಎಂದು ಹೇಳಿದ್ದ.

ತಮ್ಮೆಲ್ಲರ ಕನಸನ್ನು ನನಸಾಗಿಸಿಕೊಂಡು ಅಮೆರಿಕಾ ಗಾಟ್ ಟ್ಯಾಲೆಂಟ್ ವೇದಿಕೆ ಏರಿದ್ದಷ್ಟೇ ಅಲ್ಲದೆ, ಈ ಶೋನ ಟ್ರೋಫಿಯನ್ನೂ ಗೆದ್ದು, ತಾವು ಬಯಸಿದ್ದ ಸಾಧನೆಯನ್ನು ಮಾಡಿ ಇಂದು ತಾವು ಗೆದ್ದಿದ್ದೇವೆಂದು ಆ 28 ಜನರ ತಂಡ ಇಡೀ ಜಗತ್ತಿಗೆ ಸಾರಿದ್ದಾರೆ.

ಇದು ಕೇವಲ ಮುಂಬೈನ ಸ್ಲಂ ಯುವಜನರ ಕತೆ ಅಷ್ಟೇ ಅಲ್ಲ, ಇಂತಹ ಎಲೆ ಮರೆಯ ಪ್ರತಿಭೆಗಳು ಈ ದೇಶದ ಅಸಮಾನತೆ ಮತ್ತು ಅವಕಾಶ ವಂಚನೆಯಿಂದಾಗಿ ತೆರೆಮರೆಯಲ್ಲೇ ಹುದುಗಿ ಹೋಗುತ್ತಿವೆ. ಕೆಲವು ವರ್ಷಗಳ ಹಿಂದೆ ಮಂಡ್ಯ ನಗರದ ಸ್ಲಂ ಹುಡುಗರೂ ಸಹ ಇಂತಹುದೇ ಡ್ಯಾನ್ಸ್ ತಂಡ ಕಟ್ಟಿಕೊಂಡಿದ್ದರು, ಉತ್ತರ ಕರ್ನಾಟಕದ ಬೀದರ್ ನಗರದ ಸ್ಲಂಗಳಲ್ಲಿಯೂ ಅಲೆಮಾರಿ ಸಮುದಾಯಗಳ ಹುಡುಗರು ಅದ್ಭುತ ಡ್ಯಾನ್ಸ್ ತಂಡಗಳನ್ನು ಕಟ್ಟಿಕೊಂಡಿದ್ದರು. ದೇಶದ ಸ್ಲಂಗಳಲ್ಲಿ/ಹಳ್ಳಿಗಳಲ್ಲಿ ಅಡಗಿರುವ ಈ ಸುಪ್ತ ಪ್ರತಿಭೆಗಳಿಗೆ ಸರಿಯಾದ ವೇದಿಕೆ ಸಿಕ್ಕಿದ್ದೇ ಆದಲ್ಲಿ ಭಾರತೀಯ ಯುವಜನರ ಹೊಸ ಯಶೋಗಾಥೆಯನ್ನು ಬರೆಯುವುದರಲ್ಲಿ ಸಂಶಯವೇ ಇಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...