HomeಮುಖಪುಟYes! ದೆ ಆರ್ ಅನ್‍ಬೀಟಬಲ್!! ಪ್ರಪಂಚವೇ ಬೆಚ್ಚಿಬೀಳುವಂತೆ ಡ್ಯಾನ್ಸ್‌ ಮಾಡಿದ ಸ್ಲಂ ಯುವಜನರ ತಂಡ..

Yes! ದೆ ಆರ್ ಅನ್‍ಬೀಟಬಲ್!! ಪ್ರಪಂಚವೇ ಬೆಚ್ಚಿಬೀಳುವಂತೆ ಡ್ಯಾನ್ಸ್‌ ಮಾಡಿದ ಸ್ಲಂ ಯುವಜನರ ತಂಡ..

- Advertisement -
- Advertisement -

ಅಮೆರಿಕಾ ಗಾಟ್ ಟ್ಯಾಲೆಂಟ್’ (AGT) ರಿಯಾಲಿಟಿ ಶೋನಲ್ಲಿ ಭಾಗವಹಿಸಿದ್ದ ಮುಂಬೈನ 28 ಬಾಲಕ ಬಾಲಕಿಯರು ತಮ್ಮ ಡ್ಯಾನ್ಸ್ ಪ್ರದರ್ಶನದಲ್ಲಿ ಟ್ರೋಫಿಯನ್ನು ಗೆದ್ದು ಅಮೆರಿಕನ್ನರನ್ನು ಮಾತ್ರವಲ್ಲ ಪ್ರಪಂಚವನ್ನೇ ಬೆಚ್ಚಿ ಬೀಳಿಸಿದ್ದಾರೆ.

ಇಡೀ ವಿಶ್ವವೇ ನಿಬ್ಬೆರಗಾಗುವಂತೆ ಮಾಡುವ ಅಮೆರಿಕಾ ಗಾಟ್ ಟ್ಯಾಲೆಂಟ್ ರಿಯಾಲಿಟಿ ಶೋ ಸ್ಪರ್ಧೆಯಲ್ಲಿ ಭಾಗವಹಿಸಿ ಹೃದಯವೇ ನಿಂತುಹೋಗುವಂತಹ ಡ್ಯಾನ್ಸ್ ಪ್ರದರ್ಶನ ನೀಡಿ ರಿಯಾಲಿಟಿ ಶೋ ಟ್ರೋಫಿ ಗೆದ್ದಿರುವ ಈ ಯುವಜನರು ಪ್ರಪಂಚದ ಗಮನ ಸೆಳೆದಿದ್ದಾರೆ.

ಯಾರು ಈ “ವಿ ಅನ್‍ಬೀಟಬಲ್”

ವಿ ಅನ್‍ಬೀಟಬಲ್ ತಂಡ ಮುಂಬೈನ ಹಲವಾರು ಸ್ಲಂಗಳಲ್ಲಿ ವಾಸಿಸುವ ಯುವಜನರ ತಂಡ. ಮುಂಬೈನ ಸ್ಲಂಗಳಲ್ಲಿ ದುಸ್ತರವಾದ ಬದುಕು. ಕುಡಿಯಲು ಶುದ್ಧ ನೀರು ಸಿಗದೆ, ಕಾಲು ಚಾಚಿ ಮಲಗುವಷ್ಟು ಜಾಗವೂ ಇಲ್ಲದೆ, ಚಿಕ್ಕ ಶೆಡ್ಡುಗಳಂತಹ ಮನೆಗಳಲ್ಲಿ ಬದುಕುವ ಜನರ ಅಲ್ಲಿನ ನೋವುಗಳನ್ನು ಅನುಭವಿಸುತ್ತಾ ಬೆಳೆಯುತ್ತಿದ್ದ ಈ 28 ಯುವಜನರ ತಂಡವೇ ವಿ ಅನ್ಬೀಟಬಲ್.

ಮುಂಬೈನ ಸ್ಲಂಗಳಲ್ಲಿ ವಾಸಿಸುತ್ತಿರುವ 12ರಿಂದ 27ವಯಸ್ಸಿನವರೆಗಿನ ಬಾಲಕಬಾಲಕಿಯರು ಅವರು. “ಸ್ಲಂಗಳು ಅತ್ಯಂತ ಜನನಿಬಿಡವಾಗಿವೆ, ಕೊಳಕಾಗಿರುತ್ತದೆ, ಸೂಕ್ತ ವಿದ್ಯುತ್ ಸೌಲಭ್ಯ ಅಲ್ಲಿಲ್ಲ, ಒಂದೊಂದು ಸಣ್ಣ ಕೋಣೆಯಲ್ಲಿ 10 ಜನ ಇರಬೇಕಾಗುತ್ತದೆ, ಅಲ್ಲಿ ಬದುಕು ಉಳಿಸಿಕೊಳ್ಳುವುದೇ ಸವಾಲಿನ ಕೆಲಸ. ಇಂತಹ ಕಷ್ಟದ ಬದುಕಿನಲ್ಲಿ ಅವರು ಪ್ರಾರ್ಥಿಸುತ್ತಿದ್ದದ್ದು ಉತ್ತಮವಾದ, ಸ್ವಾವಲಂಬಿ-ಸ್ವಾಭಿಮಾನದ ಘನತೆಯ ಬದುಕಿಗಾಗಿ. ಆದರೆ ಆ ಯುವಜನರಿಗೆ ಸ್ಲಂಗಳಲ್ಲಿ ಸಿಗುತ್ತಿದ್ದ ಅವಕಾಶವೇ ಕಡಿಮೆ.., ಆದರೂ, ಬೆಳಗ್ಗೆಯಿಂದ ಸಂಜೆಯವರೆಗೂ ಹೊಟ್ಟೆಪಾಡಿಗಾಗಿ ದುಡಿಯುತ್ತಿದ್ದ ಈ ಯುವಜನರು, ಸಂಜೆಯ ಸಮಯದಲ್ಲಿ ಒಟ್ಟಿಗೆ ಸೇರಿ ಡ್ಯಾನ್ಸ್ ಮಾಡುತ್ತಾ ತಮ್ಮೆಲ್ಲರ ಮನಸ್ಸಿನ ಮಾನಸಿಕ ದುಗುಡ, ತಳಮಳ, ಬದುಕಿನ ಮೇಲಿನ ಆಕ್ರೋಶವನ್ನು ಕಳೆದುಕೊಂಡು, ಮನಸ್ಸನ್ನು ಹಗುರ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು.

ಈ 28 ಯುವಜನರ ತಂಡ ತಾವು ಒಟ್ಟುಗೂಡಿ ಡ್ಯಾನ್ಸ್ ಮಾಡುವ ಸಂದರ್ಭದಲ್ಲಿ ತಮ್ಮ ಡ್ಯಾನ್ಸಿನ ಸ್ಕಿಲ್ಲನ್ನು ಮತ್ತಷ್ಟು ಹೆಚ್ಚಿಸಿಕೊಳ್ಳಲು ಯೂಟ್ಯೂಬ್‌ನಲ್ಲಿ ನಾನಾ ರೀತಿಯ ಶೋಗಳನ್ನು ನೋಡುತ್ತಿದ್ದರು. ಡ್ಯಾನ್ಸ್ ಬಗ್ಗೆ ತುಡಿತ ಹೊಂದಿದ್ದ ಈ ಯುವಜನರ ಕಣ್ಣಿಗೆ ಕಂಡದ್ದು ‘ಅಮೆರಿಕಾ ಗಾಟ್ ಟ್ಯಾಲೆಂಟ್’ ರಿಯಾಲಿಟಿ ಶೋ. ಆ ಕಾರ್ಯಕ್ರಮವನ್ನು ನೋಡುವಾಗ ಆ ಯುವ ಮನಸ್ಸುಗಳಲ್ಲಿ ಮೂಡಿದ್ದು ನಾವು ಒಂದು ದಿನ ಅಲ್ಲಿಗೆ ಹೋಗಬಹುದಾ ಎಂಬ ಕನಸು. ಆ ಕನಸಿನ್ನು ನನಸಾಗಿಸಿಕೊಳ್ಳುವತ್ತ ಹೆಜ್ಜೆ ಹಾಕಿದ್ದ ಆ ತಂಡ ’ವಿ ಅನ್‍ಬೀಟಬಲ್’ ಹೆಸರನ್ನಿಟ್ಟುಕೊಂಡು ‘ಅಮೆರಿಕಾ ಗಾಟ್ ಟ್ಯಾಲೆಂಟ್’ ವೇದಿಯ ಮೇಲೇರಿ ತಮ್ಮ ಕನಸನ್ನ ನನಸಾಗಿಸಿಕೊಂಡಿದ್ದಾರೆ.

ವಿ ಅನ್‍ಬೀಟಬಲ್ ಗೆಲುವಿನ ಹಾದಿ!

V Unbeatable ಎಂಬ ಡ್ಯಾನ್ಸ್ ತಂಡ ಕಟ್ಟಿಕೊಂಡು ವಾರಗಳ ಕಾಲ ತಾಲೀಮು ನಡೆಸಿಕೊಂಡು ಎನ್‍ಬಿಸಿ ರಿಯಾಲಿಟಿ ಟಿವಿ ನಡೆಸುವ ‘ಅಮೆರಿಕ ಗಾಟ್ ಟ್ಯಾಲೆಂಟ್’ (AGT) ಕಾರ್ಯಕ್ರಮದ ವೇದಿಕೆಯಲ್ಲಿ ಅವರು ಬಂದು ನಿಂತಾಗ ತಮ್ಮೆದುರು ತೀರ್ಪುಗಾರರಾಗಿ ಕುಳಿತ ಸೈಮನ್ ಕೌವೆಲ್, ಹೌವೀ ಮಂಡೆಲ್, ಗ್ಯಾಬ್ರಿಯೆಲ್ ಯೂನಿಯನ್ ಮತ್ತು ಜ್ಯೂಲಿಯನ್ ಹೌ ಅವರಿಗಾಗಲೀ, ಪ್ರೇಕ್ಷಕರಿಗಾಗಲೀ ಆ ಕಂದು ಬಣ್ಣದ ಹುಡುಗರು ಏನು ಮಾಡಲಿದ್ದಾರೆ ಎಂಬ ಊಹೆಯೂ ಇರಲಿಲ್ಲ.

ಶೋ ಆರಂಭದ ಮೊದಲ ದಿನ, ವಿಶಾಲ್ ದಾದ್ಲಾನಿಯ “ಮಲ್ಹಾರಿ” ಹಾಡಿಗೆ ಹುಡುಗರು ಮಾಡುವ ಡ್ಯಾನ್ಸ್ ಕೆಲ ನಿಮಿಷಗಳ ಕಾಲ ಎಲ್ಲರ ಎದೆಬಡಿತ ಹೆಚ್ಚಿಸುತ್ತದೆ. ಅದರಲ್ಲೂ ಸಣ್ಣ ಹುಡುಗರನ್ನು ಎತ್ತಿ ಹಾರಿಸುವ ಕೆಲವು ದೃಶ್ಯಗಳಂತೂ ಮೈ ಜುಮ್ ಎನಿಸಿದ್ದವು. ಬೊಂಬುಗಳನ್ನು ತಂದು ನಿಲ್ಲಿಸಿ ಅದರ ಮೇಲೆ ಕಾಲ್ಬೆರಳ ತುದಿಯಲ್ಲಿ ನಡೆದು, ನೆಗೆದು ತೋರಿಸುವ ದೃಶ್ಯಗಳಂತೂ ಚೇತೋಹಾರಿಯಾಗಿದ್ದವು.

ಆ ದೃಶ್ಯಗಳನ್ನು ನೋಡಿದರೆ, ಅಂತಹ ಪ್ರದರ್ಶನಗಳನ್ನು ಚೀನಾದ ತಂಡಗಳು ಮಾತ್ರ ನೀಡಲು ಸಾಧ್ಯ, ಮತ್ತಾರೂ ಮಾಡಲಾರರು ಎನ್ನುವಂತಿದ್ದವು. ಅಂತಹ ನೃತ್ಯವನ್ನು ಸೂಕ್ತ ತರಬೇತಿ ಸಿಕ್ಕಿದರೆ ಭಾರತದಲ್ಲಿ ವಾಸಿಸುವ ಸ್ಲಂ ಮಕ್ಕಳೂ ಸಹ ಅಸಾಧ್ಯವಾದುದನ್ನು ಸಾಧಿಸಿ ಜಗತ್ತೇ ನಿಬ್ಬೆರಗಾಗುವಂತೆ ಮಾಡಬಲ್ಲರು ಎಂಬುದನ್ನು ವಿ ಅನ್ ಬೀಟಬಲ್ ತಂಡ ತೋರಿಸಿದೆ.

ಅಂದು ರಿಯಾಲಿಟಿ ಶೋ ವೇದಿಕೆ ಮೇಲೆ ನಿಂತ ಈ ಯುವಜನರನ್ನು ಅಮೆರಿಕಾ ಗಾಟ್ ಟ್ಯಾಲೆಂಟ್ ವಿನ್ನರ್ಸ್ ಪಟ್ಟಿಯಲ್ಲಿ ಸೇರಿದರೆ ನಿಮ್ಮ ಭವಿಷ್ಯಕ್ಕೆ ಏನು ಲಾಭ ಎಂದು ಜಡ್ಜ್ ಗ್ಯಾಬ್ರಿಯೆಲ್ ಕೇಳಿದ್ದಕ್ಕೆ ಮುಂಬೈ ಹುಡುಗ, “ಗೆಲುವು ಸಾಧಿಸಿದ್ದು ವಿ ಅನ್ ಬೀಟಬಲ್” ಎಂದು ಇಡೀ ಜಗತ್ತಿಗೆ ತಿಳಿಯಬೇಕೆಂದು ನಾವು ಬಯಸುತ್ತೇವೆ. ಇಂದು ಇಲ್ಲಿ ಸಿಕ್ಕಿರುವ ಅವಕಾಶ ನಮ್ಮ ಬದುಕನ್ನು ಬದಲಿಸಬಹುದು ಎಂಬ ಕನಸು ಹೊತ್ತು ಎಲ್ಲರೂ ಇಲ್ಲಿದ್ದೇವೆ ಎಂದು ಹೇಳಿದ್ದ.

ತಮ್ಮೆಲ್ಲರ ಕನಸನ್ನು ನನಸಾಗಿಸಿಕೊಂಡು ಅಮೆರಿಕಾ ಗಾಟ್ ಟ್ಯಾಲೆಂಟ್ ವೇದಿಕೆ ಏರಿದ್ದಷ್ಟೇ ಅಲ್ಲದೆ, ಈ ಶೋನ ಟ್ರೋಫಿಯನ್ನೂ ಗೆದ್ದು, ತಾವು ಬಯಸಿದ್ದ ಸಾಧನೆಯನ್ನು ಮಾಡಿ ಇಂದು ತಾವು ಗೆದ್ದಿದ್ದೇವೆಂದು ಆ 28 ಜನರ ತಂಡ ಇಡೀ ಜಗತ್ತಿಗೆ ಸಾರಿದ್ದಾರೆ.

ಇದು ಕೇವಲ ಮುಂಬೈನ ಸ್ಲಂ ಯುವಜನರ ಕತೆ ಅಷ್ಟೇ ಅಲ್ಲ, ಇಂತಹ ಎಲೆ ಮರೆಯ ಪ್ರತಿಭೆಗಳು ಈ ದೇಶದ ಅಸಮಾನತೆ ಮತ್ತು ಅವಕಾಶ ವಂಚನೆಯಿಂದಾಗಿ ತೆರೆಮರೆಯಲ್ಲೇ ಹುದುಗಿ ಹೋಗುತ್ತಿವೆ. ಕೆಲವು ವರ್ಷಗಳ ಹಿಂದೆ ಮಂಡ್ಯ ನಗರದ ಸ್ಲಂ ಹುಡುಗರೂ ಸಹ ಇಂತಹುದೇ ಡ್ಯಾನ್ಸ್ ತಂಡ ಕಟ್ಟಿಕೊಂಡಿದ್ದರು, ಉತ್ತರ ಕರ್ನಾಟಕದ ಬೀದರ್ ನಗರದ ಸ್ಲಂಗಳಲ್ಲಿಯೂ ಅಲೆಮಾರಿ ಸಮುದಾಯಗಳ ಹುಡುಗರು ಅದ್ಭುತ ಡ್ಯಾನ್ಸ್ ತಂಡಗಳನ್ನು ಕಟ್ಟಿಕೊಂಡಿದ್ದರು. ದೇಶದ ಸ್ಲಂಗಳಲ್ಲಿ/ಹಳ್ಳಿಗಳಲ್ಲಿ ಅಡಗಿರುವ ಈ ಸುಪ್ತ ಪ್ರತಿಭೆಗಳಿಗೆ ಸರಿಯಾದ ವೇದಿಕೆ ಸಿಕ್ಕಿದ್ದೇ ಆದಲ್ಲಿ ಭಾರತೀಯ ಯುವಜನರ ಹೊಸ ಯಶೋಗಾಥೆಯನ್ನು ಬರೆಯುವುದರಲ್ಲಿ ಸಂಶಯವೇ ಇಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...