HomeಮುಖಪುಟYes! ದೆ ಆರ್ ಅನ್‍ಬೀಟಬಲ್!! ಪ್ರಪಂಚವೇ ಬೆಚ್ಚಿಬೀಳುವಂತೆ ಡ್ಯಾನ್ಸ್‌ ಮಾಡಿದ ಸ್ಲಂ ಯುವಜನರ ತಂಡ..

Yes! ದೆ ಆರ್ ಅನ್‍ಬೀಟಬಲ್!! ಪ್ರಪಂಚವೇ ಬೆಚ್ಚಿಬೀಳುವಂತೆ ಡ್ಯಾನ್ಸ್‌ ಮಾಡಿದ ಸ್ಲಂ ಯುವಜನರ ತಂಡ..

- Advertisement -
- Advertisement -

ಅಮೆರಿಕಾ ಗಾಟ್ ಟ್ಯಾಲೆಂಟ್’ (AGT) ರಿಯಾಲಿಟಿ ಶೋನಲ್ಲಿ ಭಾಗವಹಿಸಿದ್ದ ಮುಂಬೈನ 28 ಬಾಲಕ ಬಾಲಕಿಯರು ತಮ್ಮ ಡ್ಯಾನ್ಸ್ ಪ್ರದರ್ಶನದಲ್ಲಿ ಟ್ರೋಫಿಯನ್ನು ಗೆದ್ದು ಅಮೆರಿಕನ್ನರನ್ನು ಮಾತ್ರವಲ್ಲ ಪ್ರಪಂಚವನ್ನೇ ಬೆಚ್ಚಿ ಬೀಳಿಸಿದ್ದಾರೆ.

ಇಡೀ ವಿಶ್ವವೇ ನಿಬ್ಬೆರಗಾಗುವಂತೆ ಮಾಡುವ ಅಮೆರಿಕಾ ಗಾಟ್ ಟ್ಯಾಲೆಂಟ್ ರಿಯಾಲಿಟಿ ಶೋ ಸ್ಪರ್ಧೆಯಲ್ಲಿ ಭಾಗವಹಿಸಿ ಹೃದಯವೇ ನಿಂತುಹೋಗುವಂತಹ ಡ್ಯಾನ್ಸ್ ಪ್ರದರ್ಶನ ನೀಡಿ ರಿಯಾಲಿಟಿ ಶೋ ಟ್ರೋಫಿ ಗೆದ್ದಿರುವ ಈ ಯುವಜನರು ಪ್ರಪಂಚದ ಗಮನ ಸೆಳೆದಿದ್ದಾರೆ.

ಯಾರು ಈ “ವಿ ಅನ್‍ಬೀಟಬಲ್”

ವಿ ಅನ್‍ಬೀಟಬಲ್ ತಂಡ ಮುಂಬೈನ ಹಲವಾರು ಸ್ಲಂಗಳಲ್ಲಿ ವಾಸಿಸುವ ಯುವಜನರ ತಂಡ. ಮುಂಬೈನ ಸ್ಲಂಗಳಲ್ಲಿ ದುಸ್ತರವಾದ ಬದುಕು. ಕುಡಿಯಲು ಶುದ್ಧ ನೀರು ಸಿಗದೆ, ಕಾಲು ಚಾಚಿ ಮಲಗುವಷ್ಟು ಜಾಗವೂ ಇಲ್ಲದೆ, ಚಿಕ್ಕ ಶೆಡ್ಡುಗಳಂತಹ ಮನೆಗಳಲ್ಲಿ ಬದುಕುವ ಜನರ ಅಲ್ಲಿನ ನೋವುಗಳನ್ನು ಅನುಭವಿಸುತ್ತಾ ಬೆಳೆಯುತ್ತಿದ್ದ ಈ 28 ಯುವಜನರ ತಂಡವೇ ವಿ ಅನ್ಬೀಟಬಲ್.

ಮುಂಬೈನ ಸ್ಲಂಗಳಲ್ಲಿ ವಾಸಿಸುತ್ತಿರುವ 12ರಿಂದ 27ವಯಸ್ಸಿನವರೆಗಿನ ಬಾಲಕಬಾಲಕಿಯರು ಅವರು. “ಸ್ಲಂಗಳು ಅತ್ಯಂತ ಜನನಿಬಿಡವಾಗಿವೆ, ಕೊಳಕಾಗಿರುತ್ತದೆ, ಸೂಕ್ತ ವಿದ್ಯುತ್ ಸೌಲಭ್ಯ ಅಲ್ಲಿಲ್ಲ, ಒಂದೊಂದು ಸಣ್ಣ ಕೋಣೆಯಲ್ಲಿ 10 ಜನ ಇರಬೇಕಾಗುತ್ತದೆ, ಅಲ್ಲಿ ಬದುಕು ಉಳಿಸಿಕೊಳ್ಳುವುದೇ ಸವಾಲಿನ ಕೆಲಸ. ಇಂತಹ ಕಷ್ಟದ ಬದುಕಿನಲ್ಲಿ ಅವರು ಪ್ರಾರ್ಥಿಸುತ್ತಿದ್ದದ್ದು ಉತ್ತಮವಾದ, ಸ್ವಾವಲಂಬಿ-ಸ್ವಾಭಿಮಾನದ ಘನತೆಯ ಬದುಕಿಗಾಗಿ. ಆದರೆ ಆ ಯುವಜನರಿಗೆ ಸ್ಲಂಗಳಲ್ಲಿ ಸಿಗುತ್ತಿದ್ದ ಅವಕಾಶವೇ ಕಡಿಮೆ.., ಆದರೂ, ಬೆಳಗ್ಗೆಯಿಂದ ಸಂಜೆಯವರೆಗೂ ಹೊಟ್ಟೆಪಾಡಿಗಾಗಿ ದುಡಿಯುತ್ತಿದ್ದ ಈ ಯುವಜನರು, ಸಂಜೆಯ ಸಮಯದಲ್ಲಿ ಒಟ್ಟಿಗೆ ಸೇರಿ ಡ್ಯಾನ್ಸ್ ಮಾಡುತ್ತಾ ತಮ್ಮೆಲ್ಲರ ಮನಸ್ಸಿನ ಮಾನಸಿಕ ದುಗುಡ, ತಳಮಳ, ಬದುಕಿನ ಮೇಲಿನ ಆಕ್ರೋಶವನ್ನು ಕಳೆದುಕೊಂಡು, ಮನಸ್ಸನ್ನು ಹಗುರ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು.

ಈ 28 ಯುವಜನರ ತಂಡ ತಾವು ಒಟ್ಟುಗೂಡಿ ಡ್ಯಾನ್ಸ್ ಮಾಡುವ ಸಂದರ್ಭದಲ್ಲಿ ತಮ್ಮ ಡ್ಯಾನ್ಸಿನ ಸ್ಕಿಲ್ಲನ್ನು ಮತ್ತಷ್ಟು ಹೆಚ್ಚಿಸಿಕೊಳ್ಳಲು ಯೂಟ್ಯೂಬ್‌ನಲ್ಲಿ ನಾನಾ ರೀತಿಯ ಶೋಗಳನ್ನು ನೋಡುತ್ತಿದ್ದರು. ಡ್ಯಾನ್ಸ್ ಬಗ್ಗೆ ತುಡಿತ ಹೊಂದಿದ್ದ ಈ ಯುವಜನರ ಕಣ್ಣಿಗೆ ಕಂಡದ್ದು ‘ಅಮೆರಿಕಾ ಗಾಟ್ ಟ್ಯಾಲೆಂಟ್’ ರಿಯಾಲಿಟಿ ಶೋ. ಆ ಕಾರ್ಯಕ್ರಮವನ್ನು ನೋಡುವಾಗ ಆ ಯುವ ಮನಸ್ಸುಗಳಲ್ಲಿ ಮೂಡಿದ್ದು ನಾವು ಒಂದು ದಿನ ಅಲ್ಲಿಗೆ ಹೋಗಬಹುದಾ ಎಂಬ ಕನಸು. ಆ ಕನಸಿನ್ನು ನನಸಾಗಿಸಿಕೊಳ್ಳುವತ್ತ ಹೆಜ್ಜೆ ಹಾಕಿದ್ದ ಆ ತಂಡ ’ವಿ ಅನ್‍ಬೀಟಬಲ್’ ಹೆಸರನ್ನಿಟ್ಟುಕೊಂಡು ‘ಅಮೆರಿಕಾ ಗಾಟ್ ಟ್ಯಾಲೆಂಟ್’ ವೇದಿಯ ಮೇಲೇರಿ ತಮ್ಮ ಕನಸನ್ನ ನನಸಾಗಿಸಿಕೊಂಡಿದ್ದಾರೆ.

ವಿ ಅನ್‍ಬೀಟಬಲ್ ಗೆಲುವಿನ ಹಾದಿ!

V Unbeatable ಎಂಬ ಡ್ಯಾನ್ಸ್ ತಂಡ ಕಟ್ಟಿಕೊಂಡು ವಾರಗಳ ಕಾಲ ತಾಲೀಮು ನಡೆಸಿಕೊಂಡು ಎನ್‍ಬಿಸಿ ರಿಯಾಲಿಟಿ ಟಿವಿ ನಡೆಸುವ ‘ಅಮೆರಿಕ ಗಾಟ್ ಟ್ಯಾಲೆಂಟ್’ (AGT) ಕಾರ್ಯಕ್ರಮದ ವೇದಿಕೆಯಲ್ಲಿ ಅವರು ಬಂದು ನಿಂತಾಗ ತಮ್ಮೆದುರು ತೀರ್ಪುಗಾರರಾಗಿ ಕುಳಿತ ಸೈಮನ್ ಕೌವೆಲ್, ಹೌವೀ ಮಂಡೆಲ್, ಗ್ಯಾಬ್ರಿಯೆಲ್ ಯೂನಿಯನ್ ಮತ್ತು ಜ್ಯೂಲಿಯನ್ ಹೌ ಅವರಿಗಾಗಲೀ, ಪ್ರೇಕ್ಷಕರಿಗಾಗಲೀ ಆ ಕಂದು ಬಣ್ಣದ ಹುಡುಗರು ಏನು ಮಾಡಲಿದ್ದಾರೆ ಎಂಬ ಊಹೆಯೂ ಇರಲಿಲ್ಲ.

ಶೋ ಆರಂಭದ ಮೊದಲ ದಿನ, ವಿಶಾಲ್ ದಾದ್ಲಾನಿಯ “ಮಲ್ಹಾರಿ” ಹಾಡಿಗೆ ಹುಡುಗರು ಮಾಡುವ ಡ್ಯಾನ್ಸ್ ಕೆಲ ನಿಮಿಷಗಳ ಕಾಲ ಎಲ್ಲರ ಎದೆಬಡಿತ ಹೆಚ್ಚಿಸುತ್ತದೆ. ಅದರಲ್ಲೂ ಸಣ್ಣ ಹುಡುಗರನ್ನು ಎತ್ತಿ ಹಾರಿಸುವ ಕೆಲವು ದೃಶ್ಯಗಳಂತೂ ಮೈ ಜುಮ್ ಎನಿಸಿದ್ದವು. ಬೊಂಬುಗಳನ್ನು ತಂದು ನಿಲ್ಲಿಸಿ ಅದರ ಮೇಲೆ ಕಾಲ್ಬೆರಳ ತುದಿಯಲ್ಲಿ ನಡೆದು, ನೆಗೆದು ತೋರಿಸುವ ದೃಶ್ಯಗಳಂತೂ ಚೇತೋಹಾರಿಯಾಗಿದ್ದವು.

ಆ ದೃಶ್ಯಗಳನ್ನು ನೋಡಿದರೆ, ಅಂತಹ ಪ್ರದರ್ಶನಗಳನ್ನು ಚೀನಾದ ತಂಡಗಳು ಮಾತ್ರ ನೀಡಲು ಸಾಧ್ಯ, ಮತ್ತಾರೂ ಮಾಡಲಾರರು ಎನ್ನುವಂತಿದ್ದವು. ಅಂತಹ ನೃತ್ಯವನ್ನು ಸೂಕ್ತ ತರಬೇತಿ ಸಿಕ್ಕಿದರೆ ಭಾರತದಲ್ಲಿ ವಾಸಿಸುವ ಸ್ಲಂ ಮಕ್ಕಳೂ ಸಹ ಅಸಾಧ್ಯವಾದುದನ್ನು ಸಾಧಿಸಿ ಜಗತ್ತೇ ನಿಬ್ಬೆರಗಾಗುವಂತೆ ಮಾಡಬಲ್ಲರು ಎಂಬುದನ್ನು ವಿ ಅನ್ ಬೀಟಬಲ್ ತಂಡ ತೋರಿಸಿದೆ.

ಅಂದು ರಿಯಾಲಿಟಿ ಶೋ ವೇದಿಕೆ ಮೇಲೆ ನಿಂತ ಈ ಯುವಜನರನ್ನು ಅಮೆರಿಕಾ ಗಾಟ್ ಟ್ಯಾಲೆಂಟ್ ವಿನ್ನರ್ಸ್ ಪಟ್ಟಿಯಲ್ಲಿ ಸೇರಿದರೆ ನಿಮ್ಮ ಭವಿಷ್ಯಕ್ಕೆ ಏನು ಲಾಭ ಎಂದು ಜಡ್ಜ್ ಗ್ಯಾಬ್ರಿಯೆಲ್ ಕೇಳಿದ್ದಕ್ಕೆ ಮುಂಬೈ ಹುಡುಗ, “ಗೆಲುವು ಸಾಧಿಸಿದ್ದು ವಿ ಅನ್ ಬೀಟಬಲ್” ಎಂದು ಇಡೀ ಜಗತ್ತಿಗೆ ತಿಳಿಯಬೇಕೆಂದು ನಾವು ಬಯಸುತ್ತೇವೆ. ಇಂದು ಇಲ್ಲಿ ಸಿಕ್ಕಿರುವ ಅವಕಾಶ ನಮ್ಮ ಬದುಕನ್ನು ಬದಲಿಸಬಹುದು ಎಂಬ ಕನಸು ಹೊತ್ತು ಎಲ್ಲರೂ ಇಲ್ಲಿದ್ದೇವೆ ಎಂದು ಹೇಳಿದ್ದ.

ತಮ್ಮೆಲ್ಲರ ಕನಸನ್ನು ನನಸಾಗಿಸಿಕೊಂಡು ಅಮೆರಿಕಾ ಗಾಟ್ ಟ್ಯಾಲೆಂಟ್ ವೇದಿಕೆ ಏರಿದ್ದಷ್ಟೇ ಅಲ್ಲದೆ, ಈ ಶೋನ ಟ್ರೋಫಿಯನ್ನೂ ಗೆದ್ದು, ತಾವು ಬಯಸಿದ್ದ ಸಾಧನೆಯನ್ನು ಮಾಡಿ ಇಂದು ತಾವು ಗೆದ್ದಿದ್ದೇವೆಂದು ಆ 28 ಜನರ ತಂಡ ಇಡೀ ಜಗತ್ತಿಗೆ ಸಾರಿದ್ದಾರೆ.

ಇದು ಕೇವಲ ಮುಂಬೈನ ಸ್ಲಂ ಯುವಜನರ ಕತೆ ಅಷ್ಟೇ ಅಲ್ಲ, ಇಂತಹ ಎಲೆ ಮರೆಯ ಪ್ರತಿಭೆಗಳು ಈ ದೇಶದ ಅಸಮಾನತೆ ಮತ್ತು ಅವಕಾಶ ವಂಚನೆಯಿಂದಾಗಿ ತೆರೆಮರೆಯಲ್ಲೇ ಹುದುಗಿ ಹೋಗುತ್ತಿವೆ. ಕೆಲವು ವರ್ಷಗಳ ಹಿಂದೆ ಮಂಡ್ಯ ನಗರದ ಸ್ಲಂ ಹುಡುಗರೂ ಸಹ ಇಂತಹುದೇ ಡ್ಯಾನ್ಸ್ ತಂಡ ಕಟ್ಟಿಕೊಂಡಿದ್ದರು, ಉತ್ತರ ಕರ್ನಾಟಕದ ಬೀದರ್ ನಗರದ ಸ್ಲಂಗಳಲ್ಲಿಯೂ ಅಲೆಮಾರಿ ಸಮುದಾಯಗಳ ಹುಡುಗರು ಅದ್ಭುತ ಡ್ಯಾನ್ಸ್ ತಂಡಗಳನ್ನು ಕಟ್ಟಿಕೊಂಡಿದ್ದರು. ದೇಶದ ಸ್ಲಂಗಳಲ್ಲಿ/ಹಳ್ಳಿಗಳಲ್ಲಿ ಅಡಗಿರುವ ಈ ಸುಪ್ತ ಪ್ರತಿಭೆಗಳಿಗೆ ಸರಿಯಾದ ವೇದಿಕೆ ಸಿಕ್ಕಿದ್ದೇ ಆದಲ್ಲಿ ಭಾರತೀಯ ಯುವಜನರ ಹೊಸ ಯಶೋಗಾಥೆಯನ್ನು ಬರೆಯುವುದರಲ್ಲಿ ಸಂಶಯವೇ ಇಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...