Homeಮುಖಪುಟನಿನ್ನೆಯ ಡಿಸ್‌ಲೈಕ್ ದಾಖಲೆ ಮುರಿದ ಪ್ರಧಾನಿ ಮೋದಿಯವರ ಮತ್ತೊಂದು ವೀಡಿಯೋ!!!

ನಿನ್ನೆಯ ಡಿಸ್‌ಲೈಕ್ ದಾಖಲೆ ಮುರಿದ ಪ್ರಧಾನಿ ಮೋದಿಯವರ ಮತ್ತೊಂದು ವೀಡಿಯೋ!!!

ಇಂದಿನ ವಿಡಿಯೋ 2.9 ಸಾವಿರ ಲೈಕ್ ಪಡೆದಿದ್ದರೇ, 24 ಸಾವಿರ ಡಿಸ್‌ಲೈಕ್ ಪಡೆಯುವ ಮೂಲಕ ನಿನ್ನೆಯ ವಿಡಿಯೋದ ದಾಖಲೆ ಮುರಿದಿದೆ.

- Advertisement -
- Advertisement -

ಪ್ರಧಾನಿ ಮೋದಿಯವರ ವಿಡಿಯೋಗಳಿಗೆ ಇನ್ನಿಲ್ಲದಂತೆ ಡಿಸ್‌ಲೈಕ್‌ಗಳು ಬರುತ್ತಲೇ ಇವೆ. ಇಂದಿನ ಬೀದಿ ಬದಿ ಪ್ಯಾಪಾರಿಗಳ ಜೊತೆಗಿನ ಇಂದಿನ ಸಂವಾದಕ್ಕೂ ಜನಸಾಮಾನ್ಯರು ಡಿಸ್‌ಲೈಕ್ ಒತ್ತುವ ಮೂಲಕ ನಿನ್ನೆಯ ದಾಖಲೆ ಮುರಿದು ಪ್ರತಿರೋಧ ತೋರಿದ್ದಾರೆ.

ಮಧ್ಯಪ್ರದೇಶದಲ್ಲಿರುವ, ಪ್ರಧಾನ ಮಂತ್ರಿ ಬೀದಿ ಬದಿ ಪ್ಯಾಪಾರಿಗಳ ಆತ್ಮನಿರ್ಭರ ನಿಧಿ ಯೋಜನೆಯ ಫಲಾನುಭವಿಗಳೊಂದಿಗೆ ವಿಡಿಯೊ ಕಾನ್ಫರೆನ್ಸ್‌ ಮೂಲಕ ಸಂವಾದ ನಡೆಸಿದರು. ಈ ವೇಳೆ ಪ್ರಧಾನ ಮಂತ್ರಿ ಕಚೇರಿಯ ಅಧಿಕೃತ  ಯೂಟ್ಯೂಬ್ ಚಾನೆಲ್ ಮತ್ತು ಭಾರತೀಯ ಜನತಾ ಪಾರ್ಟಿಯ ಚಾನೆಲ್‌ಗಳಲ್ಲಿ ಈ ವಿಡಿಯೋ ಪ್ರಸಾರ ಮಾಡಲಾಗಿದೆ.

ಭಾರತೀಯ ಜನತಾ ಪಾರ್ಟಿಯ ಯೂಟ್ಯೂಬ್ ಚಾನೆಲ್‌ನಲ್ಲಿ ಪ್ರಸಾರವಾದ ಇಂದಿನ ವಿಡಿಯೋ ಕೇವಲ 7 ಗಂಟೆಗಳಲ್ಲಿ, ಈ ವರದಿ ತಯಾರಿಸುವ ವೇಳೆಗೆ 2.9 ಸಾವಿರ ಲೈಕ್ ಪಡೆದಿದ್ದರೆ, 24 ಸಾವಿರ ಡಿಸ್‌ಲೈಕ್ ಪಡೆಯುವ ಮೂಲಕ ನಿನ್ನೆಯ ವಿಡಿಯೋದ ದಾಖಲೆ ಮುರಿದಿದೆ. ಪ್ರತಿ ದಿನಕ್ಕೂ ಪ್ರಧಾನಿಯವರ ವಿಡಿಯೋಗಳಿಗೆ ಡಿಸ್‌ಲೈಕ್ ಮಾಡುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಲೇ ಇದೆ.

ಇದನ್ನೂ ಓದಿ: ಮೋದಿಯವರ ಯಾವ ವಿಡಿಯೋ ಸಹ ಬಿಡುತ್ತಿಲ್ಲ: ಇಂದೂ ಡಿಸ್‌ಲೈಕ್‌ಗಳ ಸುರಿಮಳೆ!

“ಸಂವಾದದಲ್ಲಿ ಪ್ರಧಾನಿ ಮೋದಿ ಆನ್‌ಲೈನ್‌ ಡೆಲಿವರಿ ವ್ಯವಸ್ಥೆಯನ್ನು ಅಳವಡಿಸಿಕೊಳ್ಳಲು ಬೀದಿಬದಿ ವ್ಯಾಪಾರಿಗಳು ಮುಂದೆ ಬರಬೇಕು. ದೊಡ್ಡ ರೆಸ್ಟೋರೆಂಟ್‌ಗಳಂತೆ ಬೀದಿಬದಿ ಆಹಾರ ತಯಾರಿಸಿ ಮಾರಾಟ ಮಾಡುವವರಿಗೂ ಆನ್‌ಲೈನ್ ಡೆಲಿವರಿ ವ್ಯವಸ್ಥೆಯಂಥ ವೇದಿಕೆ ಕಲ್ಪಿಸುವ ಪ್ರಯತ್ನ ನಡೆದಿದೆ” ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಗ್ವಾಲಿಯರ್‌ನ ಅರ್ಚನಾ ಶರ್ಮಾ, ಇಂದೋರ್‌ ಜಿಲ್ಲೆಯ ಸಾಂವೇರ್‌ನ ಬೀದಿಬದಿ ವ್ಯಾಪಾರಿ ಛಗನ್‌ಲಾಲ್‌ ಮತ್ತು ಆತನ ಪತ್ನಿ ಮತ್ತು ರೈಸೆನ್‌ ಜಿಲ್ಲೆಯ ತರಕಾರಿ ವ್ಯಾಪಾರಿ ದಲ್ಚಂದ್‌ ಎಂಬುವರೊಡನೆ ಸಂವಾದ ನಡೆಸಿದರು. ಎರಡು ತಿಂಗಳ ಅವಧಿಯಲ್ಲಿ ಲಕ್ಷಕ್ಕೂ ಅಧಿಕ ವ್ಯಾಪಾರಿಗಳು ಈ ಯೋಜನೆ ಲಾಭ ಪಡೆದಿದ್ದಾರೆ ಎಂದು ತಿಳಿಸಿದರು.

ಈ ಬಾರಿಯ ಆಗಸ್ಟ್ 30ರ ಮನ್ ಕಿ ಬಾತ್‌ ಕಾರ್ಯಕ್ರಮಕ್ಕೆ ತೀವ್ರ ವಿರೋಧ ವ್ಯಕ್ತವಾಗಿ ಹತ್ತು ಲಕ್ಷಕ್ಕೂ ಡಿಸ್‌ಲೈಕ್ ಗಳಿಸಿ, ದಾಖಲೆ ಬರೆದಿತ್ತು. ಅಲ್ಲಿಂದಿಚೀಗೆ ಮೋದಿಯವರ ಯಾವ ವಿಡಿಯೋವನ್ನೂ ಸಹ ಬಿಡದ ಜಾಲತಾಣಿಗರು ಡಿಸ್‌ಲೈಕ್‌ ಸುರಿಮಳೆ ಮುಂದುವರೆಸಿದ್ದಾರೆ.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...