Homeಮುಖಪುಟನಿನ್ನೆಯ ಡಿಸ್‌ಲೈಕ್ ದಾಖಲೆ ಮುರಿದ ಪ್ರಧಾನಿ ಮೋದಿಯವರ ಮತ್ತೊಂದು ವೀಡಿಯೋ!!!

ನಿನ್ನೆಯ ಡಿಸ್‌ಲೈಕ್ ದಾಖಲೆ ಮುರಿದ ಪ್ರಧಾನಿ ಮೋದಿಯವರ ಮತ್ತೊಂದು ವೀಡಿಯೋ!!!

ಇಂದಿನ ವಿಡಿಯೋ 2.9 ಸಾವಿರ ಲೈಕ್ ಪಡೆದಿದ್ದರೇ, 24 ಸಾವಿರ ಡಿಸ್‌ಲೈಕ್ ಪಡೆಯುವ ಮೂಲಕ ನಿನ್ನೆಯ ವಿಡಿಯೋದ ದಾಖಲೆ ಮುರಿದಿದೆ.

- Advertisement -
- Advertisement -

ಪ್ರಧಾನಿ ಮೋದಿಯವರ ವಿಡಿಯೋಗಳಿಗೆ ಇನ್ನಿಲ್ಲದಂತೆ ಡಿಸ್‌ಲೈಕ್‌ಗಳು ಬರುತ್ತಲೇ ಇವೆ. ಇಂದಿನ ಬೀದಿ ಬದಿ ಪ್ಯಾಪಾರಿಗಳ ಜೊತೆಗಿನ ಇಂದಿನ ಸಂವಾದಕ್ಕೂ ಜನಸಾಮಾನ್ಯರು ಡಿಸ್‌ಲೈಕ್ ಒತ್ತುವ ಮೂಲಕ ನಿನ್ನೆಯ ದಾಖಲೆ ಮುರಿದು ಪ್ರತಿರೋಧ ತೋರಿದ್ದಾರೆ.

ಮಧ್ಯಪ್ರದೇಶದಲ್ಲಿರುವ, ಪ್ರಧಾನ ಮಂತ್ರಿ ಬೀದಿ ಬದಿ ಪ್ಯಾಪಾರಿಗಳ ಆತ್ಮನಿರ್ಭರ ನಿಧಿ ಯೋಜನೆಯ ಫಲಾನುಭವಿಗಳೊಂದಿಗೆ ವಿಡಿಯೊ ಕಾನ್ಫರೆನ್ಸ್‌ ಮೂಲಕ ಸಂವಾದ ನಡೆಸಿದರು. ಈ ವೇಳೆ ಪ್ರಧಾನ ಮಂತ್ರಿ ಕಚೇರಿಯ ಅಧಿಕೃತ  ಯೂಟ್ಯೂಬ್ ಚಾನೆಲ್ ಮತ್ತು ಭಾರತೀಯ ಜನತಾ ಪಾರ್ಟಿಯ ಚಾನೆಲ್‌ಗಳಲ್ಲಿ ಈ ವಿಡಿಯೋ ಪ್ರಸಾರ ಮಾಡಲಾಗಿದೆ.

ಭಾರತೀಯ ಜನತಾ ಪಾರ್ಟಿಯ ಯೂಟ್ಯೂಬ್ ಚಾನೆಲ್‌ನಲ್ಲಿ ಪ್ರಸಾರವಾದ ಇಂದಿನ ವಿಡಿಯೋ ಕೇವಲ 7 ಗಂಟೆಗಳಲ್ಲಿ, ಈ ವರದಿ ತಯಾರಿಸುವ ವೇಳೆಗೆ 2.9 ಸಾವಿರ ಲೈಕ್ ಪಡೆದಿದ್ದರೆ, 24 ಸಾವಿರ ಡಿಸ್‌ಲೈಕ್ ಪಡೆಯುವ ಮೂಲಕ ನಿನ್ನೆಯ ವಿಡಿಯೋದ ದಾಖಲೆ ಮುರಿದಿದೆ. ಪ್ರತಿ ದಿನಕ್ಕೂ ಪ್ರಧಾನಿಯವರ ವಿಡಿಯೋಗಳಿಗೆ ಡಿಸ್‌ಲೈಕ್ ಮಾಡುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಲೇ ಇದೆ.

ಇದನ್ನೂ ಓದಿ: ಮೋದಿಯವರ ಯಾವ ವಿಡಿಯೋ ಸಹ ಬಿಡುತ್ತಿಲ್ಲ: ಇಂದೂ ಡಿಸ್‌ಲೈಕ್‌ಗಳ ಸುರಿಮಳೆ!

“ಸಂವಾದದಲ್ಲಿ ಪ್ರಧಾನಿ ಮೋದಿ ಆನ್‌ಲೈನ್‌ ಡೆಲಿವರಿ ವ್ಯವಸ್ಥೆಯನ್ನು ಅಳವಡಿಸಿಕೊಳ್ಳಲು ಬೀದಿಬದಿ ವ್ಯಾಪಾರಿಗಳು ಮುಂದೆ ಬರಬೇಕು. ದೊಡ್ಡ ರೆಸ್ಟೋರೆಂಟ್‌ಗಳಂತೆ ಬೀದಿಬದಿ ಆಹಾರ ತಯಾರಿಸಿ ಮಾರಾಟ ಮಾಡುವವರಿಗೂ ಆನ್‌ಲೈನ್ ಡೆಲಿವರಿ ವ್ಯವಸ್ಥೆಯಂಥ ವೇದಿಕೆ ಕಲ್ಪಿಸುವ ಪ್ರಯತ್ನ ನಡೆದಿದೆ” ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಗ್ವಾಲಿಯರ್‌ನ ಅರ್ಚನಾ ಶರ್ಮಾ, ಇಂದೋರ್‌ ಜಿಲ್ಲೆಯ ಸಾಂವೇರ್‌ನ ಬೀದಿಬದಿ ವ್ಯಾಪಾರಿ ಛಗನ್‌ಲಾಲ್‌ ಮತ್ತು ಆತನ ಪತ್ನಿ ಮತ್ತು ರೈಸೆನ್‌ ಜಿಲ್ಲೆಯ ತರಕಾರಿ ವ್ಯಾಪಾರಿ ದಲ್ಚಂದ್‌ ಎಂಬುವರೊಡನೆ ಸಂವಾದ ನಡೆಸಿದರು. ಎರಡು ತಿಂಗಳ ಅವಧಿಯಲ್ಲಿ ಲಕ್ಷಕ್ಕೂ ಅಧಿಕ ವ್ಯಾಪಾರಿಗಳು ಈ ಯೋಜನೆ ಲಾಭ ಪಡೆದಿದ್ದಾರೆ ಎಂದು ತಿಳಿಸಿದರು.

ಈ ಬಾರಿಯ ಆಗಸ್ಟ್ 30ರ ಮನ್ ಕಿ ಬಾತ್‌ ಕಾರ್ಯಕ್ರಮಕ್ಕೆ ತೀವ್ರ ವಿರೋಧ ವ್ಯಕ್ತವಾಗಿ ಹತ್ತು ಲಕ್ಷಕ್ಕೂ ಡಿಸ್‌ಲೈಕ್ ಗಳಿಸಿ, ದಾಖಲೆ ಬರೆದಿತ್ತು. ಅಲ್ಲಿಂದಿಚೀಗೆ ಮೋದಿಯವರ ಯಾವ ವಿಡಿಯೋವನ್ನೂ ಸಹ ಬಿಡದ ಜಾಲತಾಣಿಗರು ಡಿಸ್‌ಲೈಕ್‌ ಸುರಿಮಳೆ ಮುಂದುವರೆಸಿದ್ದಾರೆ.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...