Homeಮುಖಪುಟಬಿಹಾರ| ಕರಡು ಮತದಾರರ ಪಟ್ಟಿಯಲ್ಲಿ 'ಸತ್ತವರು' ಜೀವಂತ: ಯೋಗೇಂದ್ರ ಯಾದವ್ ಪ್ರತ್ಯಕ್ಷ ಸಾಕ್ಷಿಗಳೊಂದಿಗೆ ಸುಪ್ರೀಂ ಕೋರ್ಟ್‌ಗೆ

ಬಿಹಾರ| ಕರಡು ಮತದಾರರ ಪಟ್ಟಿಯಲ್ಲಿ ‘ಸತ್ತವರು’ ಜೀವಂತ: ಯೋಗೇಂದ್ರ ಯಾದವ್ ಪ್ರತ್ಯಕ್ಷ ಸಾಕ್ಷಿಗಳೊಂದಿಗೆ ಸುಪ್ರೀಂ ಕೋರ್ಟ್‌ಗೆ

- Advertisement -
- Advertisement -

ನವದೆಹಲಿ: ಬಿಹಾರದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision – SIR) ಪ್ರಕ್ರಿಯೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ವೇಳೆ, ಪ್ರಮುಖ ರಾಜಕೀಯ ವಿಶ್ಲೇಷಕ ಮತ್ತು ಕಾರ್ಯಕರ್ತ ಯೋಗೇಂದ್ರ ಯಾದವ್ ಅವರು ಸುಪ್ರೀಂ ಕೋರ್ಟ್ ಮುಂದೆ ಹಾಜರಾದರು. ಈ ವೇಳೆ, ಚುನಾವಣಾ ಆಯೋಗ (ECI)ವು ಕರಡು ಮತದಾರರ ಪಟ್ಟಿಯಲ್ಲಿ ಮೃತಪಟ್ಟಿದ್ದಾರೆ ಎಂದು ಘೋಷಿಸಿದ್ದ ಇಬ್ಬರು ವ್ಯಕ್ತಿಗಳನ್ನು ಅವರು ನ್ಯಾಯಾಲಯಕ್ಕೆ ಪರಿಚಯಿಸಿ, ಈ ಪ್ರಕ್ರಿಯೆಯು ಭಾರತದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಪ್ರಮಾಣದ ಮತದಾರರ ಹಕ್ಕು ರದ್ದತಿಗೆ ಕಾರಣವಾಗಲಿದೆ ಎಂದು ಗಂಭೀರ ಆರೋಪ ಮಾಡಿದರು.

‘ವಿನ್ಯಾಸದಲ್ಲಿನ ಲೋಪ’ ಎಂದು ಆರೋಪ

ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಜಾಯ್‌ಮಲ್ಯ ಬಾಗ್ಚಿ ಅವರಿದ್ದ ಪೀಠದ ಮುಂದೆ ವಾದ ಮಂಡಿಸಿದ ಯಾದವ್, ಈ ಪರಿಷ್ಕರಣೆಯಿಂದ ಮತದಾರರ ಪಟ್ಟಿಯಿಂದ ಹೊರಗುಳಿಯುವವರ ಸಂಖ್ಯೆ 65 ಲಕ್ಷಕ್ಕಿಂತ ಹೆಚ್ಚಾಗಿದ್ದು, ಒಂದು ಕೋಟಿಗೂ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಪ್ರತಿಪಾದಿಸಿದರು. ಈ ಪ್ರಕ್ರಿಯೆಯು ಕೇವಲ ಅನುಷ್ಠಾನದ ವೈಫಲ್ಯವಲ್ಲ, ಬದಲಾಗಿ ಅದರ ವಿನ್ಯಾಸದಲ್ಲಿನ ಲೋಪವಾಗಿದೆ ಎಂದು ಅವರು ಆರೋಪಿಸಿದರು. “SIR ಅನ್ನು ಎಲ್ಲಿ ಕೈಗೆತ್ತಿಕೊಂಡರೂ ಅದರ ಪರಿಣಾಮಗಳು ಇದೇ ರೀತಿ ಇರುತ್ತವೆ” ಎಂದು ಯಾದವ್ ಹೇಳಿದರು.

ಯಾದವ್ ಅವರ ವಾದವನ್ನು ಚುನಾವಣಾ ಆಯೋಗದ ಪರ ವಕೀಲ-ಹಿರಿಯ ವಕೀಲ ರಾಕೇಶ್ ದ್ವಿವೇದಿ ಅವರು ತೀವ್ರವಾಗಿ ವಿರೋಧಿಸಿದರು. ಯಾದವ್ ಅವರು “ನಾಟಕ” ಮಾಡುವ ಬದಲು, ಸಂತ್ರಸ್ತ ವ್ಯಕ್ತಿಗಳಿಗೆ ಮತದಾರರ ಪಟ್ಟಿಯನ್ನು ಸರಿಪಡಿಸಿಕೊಳ್ಳಲು ಸಹಾಯ ಮಾಡಬಹುದಿತ್ತು ಎಂದು ದ್ವಿವೇದಿ ಹೇಳಿದರು. ಆದರೆ, ಇದಕ್ಕೆ ಪ್ರತಿಕ್ರಿಯಿಸಿದ ಉನ್ನತ ನ್ಯಾಯಾಲಯವು, ಇದು “ಅಜಾಗರೂಕತೆಯಿಂದಾದ ದೋಷ” ಆಗಿರಬಹುದು ಮತ್ತು ಅದನ್ನು ಸರಿಪಡಿಸಬಹುದು ಎಂದು ಅಭಿಪ್ರಾಯಪಟ್ಟಿತು. ಸಾಮೂಹಿಕವಾಗಿ ಮತದಾರರನ್ನು ಹೊರಗಿಟ್ಟರೆ ನಾವು ಮಧ್ಯ ಪ್ರವೇಶಿಸುತ್ತೇವೆ ಎಂದು ಸುಪ್ರೀಂ ಕೋರ್ಟ್ ಈ ಹಿಂದೆ ನೀಡಿದ್ದ ಭರವಸೆಯನ್ನು ಯಾದವ್ ಈ ಸಂದರ್ಭದಲ್ಲಿ ಸ್ಮರಿಸಿದರು.

ಅಂಕಿಅಂಶಗಳ ಆಧಾರದ ಮೇಲೆ ವಾದ

ಯಾದವ್ ಅವರು ಜನಗಣತಿ ಆಧಾರಿತ ದತ್ತಾಂಶವನ್ನು ಮುಂದಿಟ್ಟು, ಬಿಹಾರದ ಒಟ್ಟು ವಯಸ್ಕರ ಜನಸಂಖ್ಯೆ 8.18 ಕೋಟಿ ಇರಬೇಕಿತ್ತು, ಆದರೆ ಮತದಾರರ ಪಟ್ಟಿಯಲ್ಲಿ 7.9 ಕೋಟಿ ಜನರು ಮಾತ್ರ ಇದ್ದಾರೆ ಎಂದು ವಾದಿಸಿದರು. ಇದರಿಂದ ಆರಂಭದಲ್ಲೇ 29 ಲಕ್ಷ ಜನರ ಕೊರತೆಯಿತ್ತು ಎಂದು ಅವರು ಗಮನಸೆಳೆದರು. ಯಾವುದೇ ಮತದಾರರ ಪಟ್ಟಿಯನ್ನು ಪರಿಶೀಲಿಸಲು ಇರುವ ಮೂರು ಪ್ರಮುಖ ಮಾನದಂಡಗಳಾದ ಪರಿಪೂರ್ಣತೆ, ನಿಖರತೆ ಮತ್ತು ಸಮಾನತೆ – ಇವುಗಳಲ್ಲಿ SIR ಸಂಪೂರ್ಣವಾಗಿ ವಿಫಲವಾಗಿದೆ ಎಂದು ಯಾದವ್ ಹೇಳಿದರು.

ಅಂತರರಾಷ್ಟ್ರೀಯ ದತ್ತಾಂಶಗಳನ್ನು ಉಲ್ಲೇಖಿಸಿ, ಮತದಾರರ ನೋಂದಣಿಯ ಜವಾಬ್ದಾರಿಯನ್ನು ಸರಕಾರದಿಂದ ವ್ಯಕ್ತಿಗಳ ಮೇಲೆ ವರ್ಗಾಯಿಸಿದಾಗ, ಅರ್ಹ ಮತದಾರರಲ್ಲಿ ಕನಿಷ್ಠ ಕಾಲು ಭಾಗದಷ್ಟು ಜನರು ಹೊರಗುಳಿಯುತ್ತಾರೆ, ಹೆಚ್ಚಾಗಿ ಬಡ ಮತ್ತು ಅಂಚಿನಲ್ಲಿರುವ ಸಮುದಾಯಗಳ ಜನರು ಈ ಪರಿಸ್ಥಿತಿಯನ್ನು ಎದುರಿಸುತ್ತಾರೆ ಎಂದು ಯಾದವ್ ವಿವರಿಸಿದರು. ಇದರ ಪರಿಣಾಮವಾಗಿ, ಬಿಹಾರದಲ್ಲಿ ಮತದಾರರ ಅರ್ಹತೆಯು ಶೇ. 97ರಿಂದ ಶೇ.88ಕ್ಕೆ ಇಳಿದಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.

ಇತಿಹಾಸದಲ್ಲೇ ಮೊದಲ ಬಾರಿಗೆ ‘ಶೂನ್ಯ ಸೇರ್ಪಡೆ’

ಯಾದವ್ ಅವರ ಪ್ರಕಾರ, SIR ಪ್ರಕ್ರಿಯೆಯಲ್ಲಿ ‘ತೀವ್ರ ರದ್ದುಗೊಳಿಸುವುದು’ ನಡೆಯುತ್ತಿದೆಯೇ ಹೊರತು, ಪರಿಷ್ಕರಣೆ ನಡೆಯುತ್ತಿಲ್ಲ. ಬಿಹಾರದ SIR ಇತಿಹಾಸದಲ್ಲೇ ಯಾವುದೇ ಹೊಸ ಸೇರ್ಪಡೆಗಳಿಲ್ಲದೆ ನಡೆದ ಮೊದಲ ಮತದಾರರ ಪಟ್ಟಿ ಪರಿಷ್ಕರಣೆ ಎಂದು ಅವರು ತಿಳಿಸಿದರು. ಈ ಪರಿಷ್ಕರಣೆಯಲ್ಲಿ 25 ಲಕ್ಷ ಪುರುಷರು ಮತ್ತು 31 ಲಕ್ಷ ಮಹಿಳೆಯರ ಹೆಸರುಗಳನ್ನು ರದ್ದುಗೊಳಿಸಲಾಗಿದೆ ಎಂದು ಅಂಕಿಅಂಶಗಳನ್ನು ನೀಡಿದ ಯಾದವ್, ಇದು ಮಹಿಳಾ ವಿರೋಧಿ ಪಕ್ಷಪಾತವನ್ನು ಸೂಚಿಸುತ್ತದೆ ಎಂದು ಹೇಳಿದರು. 2003ರಲ್ಲಿ ಮತದಾರರ ಪಟ್ಟಿಗಳನ್ನು ಕಂಪ್ಯೂಟರೀಕರಿಸಿದಾಗ, ಮನೆ-ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿತ್ತೇ ಹೊರತು, ಯಾವುದೇ ಅರ್ಜಿ ಅಥವಾ ದಾಖಲೆಗಳನ್ನು ಕೇಳಿರಲಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಅವಾಸ್ತವಿಕ ವೇಳಾಪಟ್ಟಿಗಳ ವಿರುದ್ಧ ಯಾದವ್ ವಾದ

ಚುನಾವಣಾ ಆಯೋಗದ ವೇಳಾಪಟ್ಟಿಯನ್ನೂ ಯಾದವ್ ಪ್ರಶ್ನಿಸಿದರು. ಒಟ್ಟು 7.24 ಕೋಟಿ ಅರ್ಜಿ ನಮೂನೆಗಳನ್ನು ಪರಿಶೀಲಿಸಬೇಕಿದ್ದು, ಪ್ರತಿ ಎಇಆರ್‌ಒ (ಸಹಾಯಕ ಚುನಾವಣಾ ನೋಂದಣಿ ಅಧಿಕಾರಿ)ಗೆ 3000 ಅರ್ಜಿ ನಮೂನೆಗಳ ಮಿತಿ ಇದೆ ಎಂದು ಅವರು ಹೇಳಿದರು. ತಮ್ಮ ಲೆಕ್ಕಾಚಾರದ ಪ್ರಕಾರ, ಚುನಾವಣಾ ಆಯೋಗದ ಗಡುವನ್ನು ಪೂರೈಸಲು ಪ್ರತಿ ಇಆರ್‌ಒ (ಚುನಾವಣಾ ನೋಂದಣಿ ಅಧಿಕಾರಿ) ಪ್ರತಿದಿನ 4678 ಅರ್ಜಿ ನಮೂನೆಗಳನ್ನು ಪರಿಶೀಲಿಸಬೇಕಾಗುತ್ತದೆ. ಜೊತೆಗೆ, ಅನುಮಾನಾಸ್ಪದ ಪ್ರಕರಣಗಳ ವಿಚಾರಣೆ ಮತ್ತು ಪ್ರವಾಹ ಬಿಕ್ಕಟ್ಟಿನಂತಹ ಇತರ ಕೆಲಸಗಳನ್ನೂ ಮಾಡಬೇಕಾಗುತ್ತದೆ, ಇದು ಅಸಾಧ್ಯವಾದ ಕಾರ್ಯ ಎಂದು ಅವರು ಪ್ರತಿಪಾದಿಸಿದರು.

ಈ ಪ್ರಕ್ರಿಯೆಯು ಮತದಾರರ ಸಾರ್ವತ್ರಿಕ ಹಕ್ಕು ಕಾಯಿದೆಯಲ್ಲಿ ಒಂದು “ಮಹತ್ವದ ಬದಲಾವಣೆ”ಯಾಗಿದ್ದು, ಇದರ ಪರಿಣಾಮವಾಗಿ ಇಡೀ ಹೊಣೆಗಾರಿಕೆ ಸರಕಾರದಿಂದ ವ್ಯಕ್ತಿಗಳ ಮೇಲೆ ವರ್ಗಾವಣೆಯಾಗಿದೆ ಎಂದು ಯಾದವ್ ಎಚ್ಚರಿಕೆ ನೀಡಿದರು. “ನಾವು ಭಾರತದಲ್ಲಿ ಮಾತ್ರವಲ್ಲದೆ, ವಿಶ್ವ ಇತಿಹಾಸದಲ್ಲೇ ಮತದಾರರ ಹಕ್ಕು ರದ್ದತಿಯ ಬಹುದೊಡ್ಡ ಕಾರ್ಯವನ್ನು ನೋಡುತ್ತಿದ್ದೇವೆ. ಇದು ಸಾರ್ವತ್ರಿಕ ವಯಸ್ಕ ಮತದಾನದ ಹಕ್ಕಿನಲ್ಲಿ ಮಹತ್ವದ ಬದಲಾವಣೆ ಆಗಿದೆ” ಎಂದು ಯಾದವ್ ಹೇಳುವ ಮೂಲಕ ವಾದವನ್ನು ಮುಕ್ತಾಯಗೊಳಿಸಿದರು. ವಿಚಾರಣೆಯನ್ನು ಬುಧವಾರದಂದು ಮುಂದುವರಿಸಲಾಗುವುದು ಎಂದು ನ್ಯಾಯಾಲಯ ತಿಳಿಸಿದೆ.

ಬಿಹಾರ ಮತದಾರರ ಪಟ್ಟಿ ಗೊಂದಲ: ಪೌರತ್ವಕ್ಕೆ ಆಧಾರ್ ಗುರುತಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...