Homeಚಳವಳಿʼಬಿಜೆಪಿ ಸೋಲಿಸಿ ಅಭಿಯಾನʼ: ಅಖಿಲ್‌ ಗೊಗೋಯ್ ಭೇಟಿಯಾದ ಯೋಗೇಂದ್ರ ಯಾದವ್

ʼಬಿಜೆಪಿ ಸೋಲಿಸಿ ಅಭಿಯಾನʼ: ಅಖಿಲ್‌ ಗೊಗೋಯ್ ಭೇಟಿಯಾದ ಯೋಗೇಂದ್ರ ಯಾದವ್

ಅಖಿಲ್‌ ಗೊಗೋಯ್ ವಿರುದ್ಧ ಅಭ್ಯರ್ಥಿಯನ್ನು ಕಣಕ್ಕಿಳಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಯೋಗೇಂದ್ರ ಯಾದವ್ ಕಾಂಗ್ರೆಸ್ ಪಕ್ಷಕ್ಕೆ ಮನವಿ ಮಾಡಿದ್ದಾರೆ

- Advertisement -
- Advertisement -

ಸ್ವರಾಜ್‌ ಇಂಡಿಯಾ ಅಧ್ಯಕ್ಷ ಯೋಗೇಂದ್ರ ಯಾದವ್‌ ಭಾನುವಾರ ಸಿಎಎ ವಿರೋಧಿ ಹೋರಾಟಗಾರ ಮತ್ತು ರೈಜೋರ್ ದಳ್ ಅಧ್ಯಕ್ಷ ಅಖಿಲ್‌ ಗೊಗೋಯ್ ಅವರನ್ನು ಭೇಟಿಯಾಗಿ ಅಸ್ಸಾಂನಲ್ಲಿರುವ ಆಡಳಿತಾರೂಢ ಬಿಜೆಪಿಯನ್ನು ಸೋಲಿಸುವಂತೆ ಜನರಲ್ಲಿ ಮನವಿ ಮಾಡಿದ್ದಾರೆ.

ಯೋಗೇಂದ್ರ ಯಾದವ್ ಮತ್ತು ಕಿಸಾನ್ ಸಂಘರ್ಷ ಸಮಿತಿ ನಾಯಕ ಸುನೀಲಂ ಅವರು ಆರ್‌ಟಿಐ ಕಾರ್ಯಕರ್ತ, ಸಿಎಎ ವಿರೋಧಿ ಹೋರಾಟಗಾರ, ಅಖಿಲ್‌ ಗೊಗೊಯ್ ಅವರನ್ನು ಗುವಾಹಟಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಭೇಟಿಯಾದರು.

ಅಖಿಲ್‌ ಗೋಗೋಯ್‌ ಸಿಎಎ ವಿರೋಧಿ ಹೋರಾಟದಲ್ಲಿ ಭಾಗಿಯಾಗಿ, ದೇಶದ್ರೋಹ ಪ್ರಕರಣದಲ್ಲಿ ಜೈಲಿನಲ್ಲಿದ್ದಾರೆ. ಅಲ್ಲದೇ ಅವರು ಅಸ್ಸಾಂನಲ್ಲಿ ಅಕ್ಟೋಬರ್‌ 2, 2020ರಲ್ಲಿ ತಮ್ಮದೆ ರೈಜೋರ್‌ ದಳ್‌ ಪಕ್ಷವನ್ನು ಸ್ಥಾಪಿಸಿದ್ದಾರೆ.

ಇದನ್ನೂ ಓದಿ: ಅಸ್ಸಾಂನ ಸಿಬ್ಸಾಗರ್‌ನಿಂದ ಸ್ಪರ್ಧಿಸಲಿರುವ ಸಿಎಎ ವಿರೋಧಿ ಹೋರಾಟಗಾರ ಅಖಿಲ್ ಗೊಗೊಯ್

ವಿವಾದಿತ ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳದ ಒಕ್ಕೂಟ ಸರ್ಕಾರದ ವಿರುದ್ಧ ಹೋರಾಟವನ್ನು ತೀವ್ರಗೊಳಿಸಿರುವ ರೈತ ನಾಯಕರು, ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಪ್ರಚಾರ ನಡೆಸುವುದಾಗಿ ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ಚುನಾವಣೆ ನಡೆಯಲಿರುವ ಅಸ್ಸಾಂನಲ್ಲಿ ಭಾನುವಾರ ರೈತ ಮುಖಂಡ ಯೋಗೇಂದ್ರ ಯಾದವ್‌, ಅಖಿಲ್‌ ಗೊಗೋಯ್‌ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

“ಅಖಿಲ್ ಗೊಗೋಯ್ ಮೊದಲ ಎರಡು ಹಂತಗಳಲ್ಲಿ 86 ಸ್ಥಾನಗಳಲ್ಲಿ 19 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದಾರೆ. ಬಿಜೆಪಿಯನ್ನು ಈ ಚುನಾವಣೆಯಲ್ಲಿ ಸೋಲುವಂತೆ ನೋಡಿಕೊಳ್ಳುವುದು ಅವರ ಗುರಿಯಾಗಿದೆ” ಎಂದು ಸ್ವರಾಜ್‌ ಇಂಡಿಯಾದ ಅಧ್ಯಕ್ಷ ಯೋಗೇಂದ್ರ ಯಾದವ್ ಹೇಳಿದ್ದಾರೆ.

“ಕೇಂದ್ರದ ಆಡಳಿತರೂಢ ಬಿಜೆಪಿ ರೈತರೊಂದಿಗೆ ನಡೆದುಕೊಂಡಿರುವ ರೀತಿಗೆ ಮತ್ತು ರೈತರ ಹಿತಾಸಕ್ತಿ, ಕಲ್ಯಾಣವನ್ನು ಕಡೆಗಣಿಸಿ ಅವರ ವಿರುದ್ಧದ ನಿರ್ಧಾರಗಳನ್ನು ತೆಗೆದುಕೊಂಡಿರುವುದಕ್ಕೆ ನಾವು ಬಿಜೆಪಿಯನ್ನು ಉಚ್ಛಾಟಿಸಬೇಕು ಎಂಬ ಒಂದು ಸಂದೇಶದೊಂದಿಗೆ ನಾವು ಬಂದಿದ್ದೇವೆ” ಎಂದು ಸಂಯುಕ್ತ ಕಿಸಾನ್ ಮೋರ್ಚಾ ನಾಯಕ ಹೇಳಿದ್ದಾರೆ.

ಇದನ್ನೂ ಓದಿ: ಬೆಳಗಾವಿ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿಯಿಂದ ಟಿಕೆಟ್ ಕೇಳಿದ್ದೇನೆ: ಪ್ರಮೋದ್ ಮುತಾಲಿಕ್

ʼಕಳೆದ ವರ್ಷ ಫೆಬ್ರವರಿಯಲ್ಲಿ ಗೊಗೋಯ್ ಅವರನ್ನು ಜೈಲಿನಲ್ಲಿ ಭೇಟಿಯಾಗಿದ್ದೆ. ಅಂದಿನಿಂದ ಅವರ ಆರೋಗ್ಯ ಸ್ಥಿತಿ ಗಣನೀಯವಾಗಿ ಹದಗೆಟ್ಟಿದೆ ಎಂದು ಯೋಗೇಂದ್ರ ಯಾದವ್ ಆತಂಕ ವ್ಯಕ್ತಪಡಿಸಿದ್ದಾರೆ.

“ಅವರು ಸಾಕಷ್ಟು ಮಾನಸಿಕ ಹಿಂಸೆಗೆ ಒಳಗಾಗಿದ್ದಾರೆ. ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದೆ. ಆದರೆ, ಸೈದ್ಧಾಂತಿಕ ಸ್ಪಷ್ಟತೆ, ಮಾನಸಿಕ ಸಂಕಲ್ಪ ಮತ್ತು ಅವರು ತೋರಿಸಿದ ಧೈರ್ಯವು ಎಲ್ಲರಿಗೂ ಒಂದು ಮಾದರಿಯಾಗಿದೆ” ಎಂದು ಯಾದವ್ ಹೇಳಿದ್ದಾರೆ.

ಇದು ಕ್ರಿಮಿನಲ್‌ ವಿಚಾರಣೆಯಲ್ಲ ಬದಲಿಗೆ ರಾಜಕೀಯ ವಿಚಾರಣೆ ಎಂದು ಆರೋಪಿಸಿರುವ ಯೋಗೇಂದ್ರ ಯಾದವ್‌, ಅಸ್ಸಾಂ ಚುನಾವಣೆಯ ಸಮಯದಲ್ಲಿ ಜನರೊಂದಿಗೆ ಬೆರೆಯಬಾರದು ಎಂದು ಗೊಗೋಯ್ ಅವರನ್ನು ಜೈಲಿಗೆ ಹಾಕಲಾಗಿದೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಅಸ್ಸಾಂ ಹೋರಾಟಗಾರ ಅಖಿಲ್ ಗೊಗೋಯ್ ಚಿತ್ರ ಬಿಡಿಸಿದ ಕಲಾವಿದರ ಬಂಧನ!

“ಅವರು ಪ್ರತಿನಿಧಿಸುವ ಜನರ ಧ್ವನಿಯನ್ನು ಮೌನಗೊಳಿಸಲು ಅವರ ವಿರುದ್ಧ ಸುಳ್ಳು ಪ್ರಕರಣಗಳನ್ನು ಹಾಕಲಾಗಿದೆ ಎಂಬುದು ಸ್ಪಷ್ಟವಾಗಿದೆ, ಆದರೆ ಈಗ ಚುನಾವಣೆಗಳು ನಡೆಯುತ್ತಿರುವುದರಿಂದ ರಾಜ್ಯದ ಜನರು ನಿರ್ಧಾರ ತೆಗೆದುಕೊಳ್ಳಬೇಕು” ಎಂದಿದ್ದಾರೆ.

ಗೊಗೋಯ್ ಅವರು ರಾಜಕೀಯದ ಬಗ್ಗೆ ಚರ್ಚಿಸಲು ಹೋಗಲಿಲ್ಲ. ಆದರೆ, ರೈತ ಹೋರಾಟದ ಬಗ್ಗೆ, ಅದರ ಪ್ರಗತಿ ಬಗ್ಗೆ ತಿಳಿಯಲು ಹೆಚ್ಚು ಆಸಕ್ತಿ ಹೊಂದಿದ್ದರು. ಜೊತೆಗೆ ಬಿಜೆಪಿಯನ್ನು ಸೋಲಿಸುವ ಅಗತ್ಯದ ಬಗ್ಗೆ ಬಹಳ ಸ್ಪಷ್ಟವಾಗಿದ್ದರು ಎಂದು ಯೋಗೇಂದ್ರ ಯಾದವ್‌ ತಿಳಿಸಿದ್ದಾರೆ.

ಇದೇ ವೇಳೆ ಅಖಿಲ್‌ ಗೊಗೋಯ್ ವಿರುದ್ಧ ಅಭ್ಯರ್ಥಿಯನ್ನು ಕಣಕ್ಕಿಳಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಅವರು ಕಾಂಗ್ರೆಸ್ ಪಕ್ಷಕ್ಕೆ ಮನವಿ ಮಾಡಿದ್ದಾರೆ. ಸಿಬ್ಸಾಗರ್ ಕ್ಷೇತ್ರದಿಂದ ಕಣಕ್ಕಿಳಿಯುತ್ತಿರುವ ಗೊಗೋಯ್ ಪರ ಪ್ರಚಾರಕ್ಕಾಗಿ ಸಿಬ್ಸಾಗರ್‌ಗೆ ಹೋಗುವುದಾಗಿ ಸುನೀಲಂ ಹೇಳಿದ್ದಾರೆ.

2019 ರ ಡಿಸೆಂಬರ್‌ನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ ಅಖಿಲ್‌ ಗೊಗೊಯ್ ವಿರುದ್ಧ ಕಠಿಣ ಯುಎಪಿಎ ವಿರುದ್ಧ ಪ್ರಕರಣ ದಾಖಲಾಗಿದ್ದು, ಅಂದಿನಿಂದ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಹೋರಾಟಗಾರ ಅಖಿಲ್‌ ಗೊಗೋಯ್ ಕೆಲವು ತಿಂಗಳ ಹಿಂದೆ ಕೊರೊನಾ ಸೋಂಕಿಗೆ ಒಳಗಾಗಿದ್ದರು. ಹೀಗಾಗಿ ಅವರನ್ನು ಗುವಾಹಟಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆ.

126 ಸದಸ್ಯರ ಅಸ್ಸಾಂ ವಿಧಾನಸಭೆಯ ಚುನಾವಣೆಗಳು ಮೂರು ಹಂತಗಳಲ್ಲಿ ನಡೆಯಲಿದೆ.


ಇದನ್ನೂ ಓದಿ: ‘ಭಾರತೀಯ ಸಂಪ್ರದಾಯಕ್ಕೆ ಸೆಕ್ಯುಲರಿಸಂ ಒಂದು ಬೆದರಿಕೆ’: ಯೋಗಿ ಆದಿತ್ಯನಾಥ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...