Homeಚಳವಳಿʼಬಿಜೆಪಿ ಸೋಲಿಸಿ ಅಭಿಯಾನʼ: ಅಖಿಲ್‌ ಗೊಗೋಯ್ ಭೇಟಿಯಾದ ಯೋಗೇಂದ್ರ ಯಾದವ್

ʼಬಿಜೆಪಿ ಸೋಲಿಸಿ ಅಭಿಯಾನʼ: ಅಖಿಲ್‌ ಗೊಗೋಯ್ ಭೇಟಿಯಾದ ಯೋಗೇಂದ್ರ ಯಾದವ್

ಅಖಿಲ್‌ ಗೊಗೋಯ್ ವಿರುದ್ಧ ಅಭ್ಯರ್ಥಿಯನ್ನು ಕಣಕ್ಕಿಳಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಯೋಗೇಂದ್ರ ಯಾದವ್ ಕಾಂಗ್ರೆಸ್ ಪಕ್ಷಕ್ಕೆ ಮನವಿ ಮಾಡಿದ್ದಾರೆ

- Advertisement -
- Advertisement -

ಸ್ವರಾಜ್‌ ಇಂಡಿಯಾ ಅಧ್ಯಕ್ಷ ಯೋಗೇಂದ್ರ ಯಾದವ್‌ ಭಾನುವಾರ ಸಿಎಎ ವಿರೋಧಿ ಹೋರಾಟಗಾರ ಮತ್ತು ರೈಜೋರ್ ದಳ್ ಅಧ್ಯಕ್ಷ ಅಖಿಲ್‌ ಗೊಗೋಯ್ ಅವರನ್ನು ಭೇಟಿಯಾಗಿ ಅಸ್ಸಾಂನಲ್ಲಿರುವ ಆಡಳಿತಾರೂಢ ಬಿಜೆಪಿಯನ್ನು ಸೋಲಿಸುವಂತೆ ಜನರಲ್ಲಿ ಮನವಿ ಮಾಡಿದ್ದಾರೆ.

ಯೋಗೇಂದ್ರ ಯಾದವ್ ಮತ್ತು ಕಿಸಾನ್ ಸಂಘರ್ಷ ಸಮಿತಿ ನಾಯಕ ಸುನೀಲಂ ಅವರು ಆರ್‌ಟಿಐ ಕಾರ್ಯಕರ್ತ, ಸಿಎಎ ವಿರೋಧಿ ಹೋರಾಟಗಾರ, ಅಖಿಲ್‌ ಗೊಗೊಯ್ ಅವರನ್ನು ಗುವಾಹಟಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಭೇಟಿಯಾದರು.

ಅಖಿಲ್‌ ಗೋಗೋಯ್‌ ಸಿಎಎ ವಿರೋಧಿ ಹೋರಾಟದಲ್ಲಿ ಭಾಗಿಯಾಗಿ, ದೇಶದ್ರೋಹ ಪ್ರಕರಣದಲ್ಲಿ ಜೈಲಿನಲ್ಲಿದ್ದಾರೆ. ಅಲ್ಲದೇ ಅವರು ಅಸ್ಸಾಂನಲ್ಲಿ ಅಕ್ಟೋಬರ್‌ 2, 2020ರಲ್ಲಿ ತಮ್ಮದೆ ರೈಜೋರ್‌ ದಳ್‌ ಪಕ್ಷವನ್ನು ಸ್ಥಾಪಿಸಿದ್ದಾರೆ.

ಇದನ್ನೂ ಓದಿ: ಅಸ್ಸಾಂನ ಸಿಬ್ಸಾಗರ್‌ನಿಂದ ಸ್ಪರ್ಧಿಸಲಿರುವ ಸಿಎಎ ವಿರೋಧಿ ಹೋರಾಟಗಾರ ಅಖಿಲ್ ಗೊಗೊಯ್

ವಿವಾದಿತ ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳದ ಒಕ್ಕೂಟ ಸರ್ಕಾರದ ವಿರುದ್ಧ ಹೋರಾಟವನ್ನು ತೀವ್ರಗೊಳಿಸಿರುವ ರೈತ ನಾಯಕರು, ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಪ್ರಚಾರ ನಡೆಸುವುದಾಗಿ ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ಚುನಾವಣೆ ನಡೆಯಲಿರುವ ಅಸ್ಸಾಂನಲ್ಲಿ ಭಾನುವಾರ ರೈತ ಮುಖಂಡ ಯೋಗೇಂದ್ರ ಯಾದವ್‌, ಅಖಿಲ್‌ ಗೊಗೋಯ್‌ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

“ಅಖಿಲ್ ಗೊಗೋಯ್ ಮೊದಲ ಎರಡು ಹಂತಗಳಲ್ಲಿ 86 ಸ್ಥಾನಗಳಲ್ಲಿ 19 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದಾರೆ. ಬಿಜೆಪಿಯನ್ನು ಈ ಚುನಾವಣೆಯಲ್ಲಿ ಸೋಲುವಂತೆ ನೋಡಿಕೊಳ್ಳುವುದು ಅವರ ಗುರಿಯಾಗಿದೆ” ಎಂದು ಸ್ವರಾಜ್‌ ಇಂಡಿಯಾದ ಅಧ್ಯಕ್ಷ ಯೋಗೇಂದ್ರ ಯಾದವ್ ಹೇಳಿದ್ದಾರೆ.

“ಕೇಂದ್ರದ ಆಡಳಿತರೂಢ ಬಿಜೆಪಿ ರೈತರೊಂದಿಗೆ ನಡೆದುಕೊಂಡಿರುವ ರೀತಿಗೆ ಮತ್ತು ರೈತರ ಹಿತಾಸಕ್ತಿ, ಕಲ್ಯಾಣವನ್ನು ಕಡೆಗಣಿಸಿ ಅವರ ವಿರುದ್ಧದ ನಿರ್ಧಾರಗಳನ್ನು ತೆಗೆದುಕೊಂಡಿರುವುದಕ್ಕೆ ನಾವು ಬಿಜೆಪಿಯನ್ನು ಉಚ್ಛಾಟಿಸಬೇಕು ಎಂಬ ಒಂದು ಸಂದೇಶದೊಂದಿಗೆ ನಾವು ಬಂದಿದ್ದೇವೆ” ಎಂದು ಸಂಯುಕ್ತ ಕಿಸಾನ್ ಮೋರ್ಚಾ ನಾಯಕ ಹೇಳಿದ್ದಾರೆ.

ಇದನ್ನೂ ಓದಿ: ಬೆಳಗಾವಿ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿಯಿಂದ ಟಿಕೆಟ್ ಕೇಳಿದ್ದೇನೆ: ಪ್ರಮೋದ್ ಮುತಾಲಿಕ್

ʼಕಳೆದ ವರ್ಷ ಫೆಬ್ರವರಿಯಲ್ಲಿ ಗೊಗೋಯ್ ಅವರನ್ನು ಜೈಲಿನಲ್ಲಿ ಭೇಟಿಯಾಗಿದ್ದೆ. ಅಂದಿನಿಂದ ಅವರ ಆರೋಗ್ಯ ಸ್ಥಿತಿ ಗಣನೀಯವಾಗಿ ಹದಗೆಟ್ಟಿದೆ ಎಂದು ಯೋಗೇಂದ್ರ ಯಾದವ್ ಆತಂಕ ವ್ಯಕ್ತಪಡಿಸಿದ್ದಾರೆ.

“ಅವರು ಸಾಕಷ್ಟು ಮಾನಸಿಕ ಹಿಂಸೆಗೆ ಒಳಗಾಗಿದ್ದಾರೆ. ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದೆ. ಆದರೆ, ಸೈದ್ಧಾಂತಿಕ ಸ್ಪಷ್ಟತೆ, ಮಾನಸಿಕ ಸಂಕಲ್ಪ ಮತ್ತು ಅವರು ತೋರಿಸಿದ ಧೈರ್ಯವು ಎಲ್ಲರಿಗೂ ಒಂದು ಮಾದರಿಯಾಗಿದೆ” ಎಂದು ಯಾದವ್ ಹೇಳಿದ್ದಾರೆ.

ಇದು ಕ್ರಿಮಿನಲ್‌ ವಿಚಾರಣೆಯಲ್ಲ ಬದಲಿಗೆ ರಾಜಕೀಯ ವಿಚಾರಣೆ ಎಂದು ಆರೋಪಿಸಿರುವ ಯೋಗೇಂದ್ರ ಯಾದವ್‌, ಅಸ್ಸಾಂ ಚುನಾವಣೆಯ ಸಮಯದಲ್ಲಿ ಜನರೊಂದಿಗೆ ಬೆರೆಯಬಾರದು ಎಂದು ಗೊಗೋಯ್ ಅವರನ್ನು ಜೈಲಿಗೆ ಹಾಕಲಾಗಿದೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಅಸ್ಸಾಂ ಹೋರಾಟಗಾರ ಅಖಿಲ್ ಗೊಗೋಯ್ ಚಿತ್ರ ಬಿಡಿಸಿದ ಕಲಾವಿದರ ಬಂಧನ!

“ಅವರು ಪ್ರತಿನಿಧಿಸುವ ಜನರ ಧ್ವನಿಯನ್ನು ಮೌನಗೊಳಿಸಲು ಅವರ ವಿರುದ್ಧ ಸುಳ್ಳು ಪ್ರಕರಣಗಳನ್ನು ಹಾಕಲಾಗಿದೆ ಎಂಬುದು ಸ್ಪಷ್ಟವಾಗಿದೆ, ಆದರೆ ಈಗ ಚುನಾವಣೆಗಳು ನಡೆಯುತ್ತಿರುವುದರಿಂದ ರಾಜ್ಯದ ಜನರು ನಿರ್ಧಾರ ತೆಗೆದುಕೊಳ್ಳಬೇಕು” ಎಂದಿದ್ದಾರೆ.

ಗೊಗೋಯ್ ಅವರು ರಾಜಕೀಯದ ಬಗ್ಗೆ ಚರ್ಚಿಸಲು ಹೋಗಲಿಲ್ಲ. ಆದರೆ, ರೈತ ಹೋರಾಟದ ಬಗ್ಗೆ, ಅದರ ಪ್ರಗತಿ ಬಗ್ಗೆ ತಿಳಿಯಲು ಹೆಚ್ಚು ಆಸಕ್ತಿ ಹೊಂದಿದ್ದರು. ಜೊತೆಗೆ ಬಿಜೆಪಿಯನ್ನು ಸೋಲಿಸುವ ಅಗತ್ಯದ ಬಗ್ಗೆ ಬಹಳ ಸ್ಪಷ್ಟವಾಗಿದ್ದರು ಎಂದು ಯೋಗೇಂದ್ರ ಯಾದವ್‌ ತಿಳಿಸಿದ್ದಾರೆ.

ಇದೇ ವೇಳೆ ಅಖಿಲ್‌ ಗೊಗೋಯ್ ವಿರುದ್ಧ ಅಭ್ಯರ್ಥಿಯನ್ನು ಕಣಕ್ಕಿಳಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಅವರು ಕಾಂಗ್ರೆಸ್ ಪಕ್ಷಕ್ಕೆ ಮನವಿ ಮಾಡಿದ್ದಾರೆ. ಸಿಬ್ಸಾಗರ್ ಕ್ಷೇತ್ರದಿಂದ ಕಣಕ್ಕಿಳಿಯುತ್ತಿರುವ ಗೊಗೋಯ್ ಪರ ಪ್ರಚಾರಕ್ಕಾಗಿ ಸಿಬ್ಸಾಗರ್‌ಗೆ ಹೋಗುವುದಾಗಿ ಸುನೀಲಂ ಹೇಳಿದ್ದಾರೆ.

2019 ರ ಡಿಸೆಂಬರ್‌ನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ ಅಖಿಲ್‌ ಗೊಗೊಯ್ ವಿರುದ್ಧ ಕಠಿಣ ಯುಎಪಿಎ ವಿರುದ್ಧ ಪ್ರಕರಣ ದಾಖಲಾಗಿದ್ದು, ಅಂದಿನಿಂದ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಹೋರಾಟಗಾರ ಅಖಿಲ್‌ ಗೊಗೋಯ್ ಕೆಲವು ತಿಂಗಳ ಹಿಂದೆ ಕೊರೊನಾ ಸೋಂಕಿಗೆ ಒಳಗಾಗಿದ್ದರು. ಹೀಗಾಗಿ ಅವರನ್ನು ಗುವಾಹಟಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆ.

126 ಸದಸ್ಯರ ಅಸ್ಸಾಂ ವಿಧಾನಸಭೆಯ ಚುನಾವಣೆಗಳು ಮೂರು ಹಂತಗಳಲ್ಲಿ ನಡೆಯಲಿದೆ.


ಇದನ್ನೂ ಓದಿ: ‘ಭಾರತೀಯ ಸಂಪ್ರದಾಯಕ್ಕೆ ಸೆಕ್ಯುಲರಿಸಂ ಒಂದು ಬೆದರಿಕೆ’: ಯೋಗಿ ಆದಿತ್ಯನಾಥ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...