Homeಚಳವಳಿʼಬಿಜೆಪಿ ಸೋಲಿಸಿ ಅಭಿಯಾನʼ: ಅಖಿಲ್‌ ಗೊಗೋಯ್ ಭೇಟಿಯಾದ ಯೋಗೇಂದ್ರ ಯಾದವ್

ʼಬಿಜೆಪಿ ಸೋಲಿಸಿ ಅಭಿಯಾನʼ: ಅಖಿಲ್‌ ಗೊಗೋಯ್ ಭೇಟಿಯಾದ ಯೋಗೇಂದ್ರ ಯಾದವ್

ಅಖಿಲ್‌ ಗೊಗೋಯ್ ವಿರುದ್ಧ ಅಭ್ಯರ್ಥಿಯನ್ನು ಕಣಕ್ಕಿಳಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಯೋಗೇಂದ್ರ ಯಾದವ್ ಕಾಂಗ್ರೆಸ್ ಪಕ್ಷಕ್ಕೆ ಮನವಿ ಮಾಡಿದ್ದಾರೆ

- Advertisement -
- Advertisement -

ಸ್ವರಾಜ್‌ ಇಂಡಿಯಾ ಅಧ್ಯಕ್ಷ ಯೋಗೇಂದ್ರ ಯಾದವ್‌ ಭಾನುವಾರ ಸಿಎಎ ವಿರೋಧಿ ಹೋರಾಟಗಾರ ಮತ್ತು ರೈಜೋರ್ ದಳ್ ಅಧ್ಯಕ್ಷ ಅಖಿಲ್‌ ಗೊಗೋಯ್ ಅವರನ್ನು ಭೇಟಿಯಾಗಿ ಅಸ್ಸಾಂನಲ್ಲಿರುವ ಆಡಳಿತಾರೂಢ ಬಿಜೆಪಿಯನ್ನು ಸೋಲಿಸುವಂತೆ ಜನರಲ್ಲಿ ಮನವಿ ಮಾಡಿದ್ದಾರೆ.

ಯೋಗೇಂದ್ರ ಯಾದವ್ ಮತ್ತು ಕಿಸಾನ್ ಸಂಘರ್ಷ ಸಮಿತಿ ನಾಯಕ ಸುನೀಲಂ ಅವರು ಆರ್‌ಟಿಐ ಕಾರ್ಯಕರ್ತ, ಸಿಎಎ ವಿರೋಧಿ ಹೋರಾಟಗಾರ, ಅಖಿಲ್‌ ಗೊಗೊಯ್ ಅವರನ್ನು ಗುವಾಹಟಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಭೇಟಿಯಾದರು.

ಅಖಿಲ್‌ ಗೋಗೋಯ್‌ ಸಿಎಎ ವಿರೋಧಿ ಹೋರಾಟದಲ್ಲಿ ಭಾಗಿಯಾಗಿ, ದೇಶದ್ರೋಹ ಪ್ರಕರಣದಲ್ಲಿ ಜೈಲಿನಲ್ಲಿದ್ದಾರೆ. ಅಲ್ಲದೇ ಅವರು ಅಸ್ಸಾಂನಲ್ಲಿ ಅಕ್ಟೋಬರ್‌ 2, 2020ರಲ್ಲಿ ತಮ್ಮದೆ ರೈಜೋರ್‌ ದಳ್‌ ಪಕ್ಷವನ್ನು ಸ್ಥಾಪಿಸಿದ್ದಾರೆ.

ಇದನ್ನೂ ಓದಿ: ಅಸ್ಸಾಂನ ಸಿಬ್ಸಾಗರ್‌ನಿಂದ ಸ್ಪರ್ಧಿಸಲಿರುವ ಸಿಎಎ ವಿರೋಧಿ ಹೋರಾಟಗಾರ ಅಖಿಲ್ ಗೊಗೊಯ್

ವಿವಾದಿತ ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳದ ಒಕ್ಕೂಟ ಸರ್ಕಾರದ ವಿರುದ್ಧ ಹೋರಾಟವನ್ನು ತೀವ್ರಗೊಳಿಸಿರುವ ರೈತ ನಾಯಕರು, ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಪ್ರಚಾರ ನಡೆಸುವುದಾಗಿ ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ಚುನಾವಣೆ ನಡೆಯಲಿರುವ ಅಸ್ಸಾಂನಲ್ಲಿ ಭಾನುವಾರ ರೈತ ಮುಖಂಡ ಯೋಗೇಂದ್ರ ಯಾದವ್‌, ಅಖಿಲ್‌ ಗೊಗೋಯ್‌ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

“ಅಖಿಲ್ ಗೊಗೋಯ್ ಮೊದಲ ಎರಡು ಹಂತಗಳಲ್ಲಿ 86 ಸ್ಥಾನಗಳಲ್ಲಿ 19 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದಾರೆ. ಬಿಜೆಪಿಯನ್ನು ಈ ಚುನಾವಣೆಯಲ್ಲಿ ಸೋಲುವಂತೆ ನೋಡಿಕೊಳ್ಳುವುದು ಅವರ ಗುರಿಯಾಗಿದೆ” ಎಂದು ಸ್ವರಾಜ್‌ ಇಂಡಿಯಾದ ಅಧ್ಯಕ್ಷ ಯೋಗೇಂದ್ರ ಯಾದವ್ ಹೇಳಿದ್ದಾರೆ.

“ಕೇಂದ್ರದ ಆಡಳಿತರೂಢ ಬಿಜೆಪಿ ರೈತರೊಂದಿಗೆ ನಡೆದುಕೊಂಡಿರುವ ರೀತಿಗೆ ಮತ್ತು ರೈತರ ಹಿತಾಸಕ್ತಿ, ಕಲ್ಯಾಣವನ್ನು ಕಡೆಗಣಿಸಿ ಅವರ ವಿರುದ್ಧದ ನಿರ್ಧಾರಗಳನ್ನು ತೆಗೆದುಕೊಂಡಿರುವುದಕ್ಕೆ ನಾವು ಬಿಜೆಪಿಯನ್ನು ಉಚ್ಛಾಟಿಸಬೇಕು ಎಂಬ ಒಂದು ಸಂದೇಶದೊಂದಿಗೆ ನಾವು ಬಂದಿದ್ದೇವೆ” ಎಂದು ಸಂಯುಕ್ತ ಕಿಸಾನ್ ಮೋರ್ಚಾ ನಾಯಕ ಹೇಳಿದ್ದಾರೆ.

ಇದನ್ನೂ ಓದಿ: ಬೆಳಗಾವಿ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿಯಿಂದ ಟಿಕೆಟ್ ಕೇಳಿದ್ದೇನೆ: ಪ್ರಮೋದ್ ಮುತಾಲಿಕ್

ʼಕಳೆದ ವರ್ಷ ಫೆಬ್ರವರಿಯಲ್ಲಿ ಗೊಗೋಯ್ ಅವರನ್ನು ಜೈಲಿನಲ್ಲಿ ಭೇಟಿಯಾಗಿದ್ದೆ. ಅಂದಿನಿಂದ ಅವರ ಆರೋಗ್ಯ ಸ್ಥಿತಿ ಗಣನೀಯವಾಗಿ ಹದಗೆಟ್ಟಿದೆ ಎಂದು ಯೋಗೇಂದ್ರ ಯಾದವ್ ಆತಂಕ ವ್ಯಕ್ತಪಡಿಸಿದ್ದಾರೆ.

“ಅವರು ಸಾಕಷ್ಟು ಮಾನಸಿಕ ಹಿಂಸೆಗೆ ಒಳಗಾಗಿದ್ದಾರೆ. ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದೆ. ಆದರೆ, ಸೈದ್ಧಾಂತಿಕ ಸ್ಪಷ್ಟತೆ, ಮಾನಸಿಕ ಸಂಕಲ್ಪ ಮತ್ತು ಅವರು ತೋರಿಸಿದ ಧೈರ್ಯವು ಎಲ್ಲರಿಗೂ ಒಂದು ಮಾದರಿಯಾಗಿದೆ” ಎಂದು ಯಾದವ್ ಹೇಳಿದ್ದಾರೆ.

ಇದು ಕ್ರಿಮಿನಲ್‌ ವಿಚಾರಣೆಯಲ್ಲ ಬದಲಿಗೆ ರಾಜಕೀಯ ವಿಚಾರಣೆ ಎಂದು ಆರೋಪಿಸಿರುವ ಯೋಗೇಂದ್ರ ಯಾದವ್‌, ಅಸ್ಸಾಂ ಚುನಾವಣೆಯ ಸಮಯದಲ್ಲಿ ಜನರೊಂದಿಗೆ ಬೆರೆಯಬಾರದು ಎಂದು ಗೊಗೋಯ್ ಅವರನ್ನು ಜೈಲಿಗೆ ಹಾಕಲಾಗಿದೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಅಸ್ಸಾಂ ಹೋರಾಟಗಾರ ಅಖಿಲ್ ಗೊಗೋಯ್ ಚಿತ್ರ ಬಿಡಿಸಿದ ಕಲಾವಿದರ ಬಂಧನ!

“ಅವರು ಪ್ರತಿನಿಧಿಸುವ ಜನರ ಧ್ವನಿಯನ್ನು ಮೌನಗೊಳಿಸಲು ಅವರ ವಿರುದ್ಧ ಸುಳ್ಳು ಪ್ರಕರಣಗಳನ್ನು ಹಾಕಲಾಗಿದೆ ಎಂಬುದು ಸ್ಪಷ್ಟವಾಗಿದೆ, ಆದರೆ ಈಗ ಚುನಾವಣೆಗಳು ನಡೆಯುತ್ತಿರುವುದರಿಂದ ರಾಜ್ಯದ ಜನರು ನಿರ್ಧಾರ ತೆಗೆದುಕೊಳ್ಳಬೇಕು” ಎಂದಿದ್ದಾರೆ.

ಗೊಗೋಯ್ ಅವರು ರಾಜಕೀಯದ ಬಗ್ಗೆ ಚರ್ಚಿಸಲು ಹೋಗಲಿಲ್ಲ. ಆದರೆ, ರೈತ ಹೋರಾಟದ ಬಗ್ಗೆ, ಅದರ ಪ್ರಗತಿ ಬಗ್ಗೆ ತಿಳಿಯಲು ಹೆಚ್ಚು ಆಸಕ್ತಿ ಹೊಂದಿದ್ದರು. ಜೊತೆಗೆ ಬಿಜೆಪಿಯನ್ನು ಸೋಲಿಸುವ ಅಗತ್ಯದ ಬಗ್ಗೆ ಬಹಳ ಸ್ಪಷ್ಟವಾಗಿದ್ದರು ಎಂದು ಯೋಗೇಂದ್ರ ಯಾದವ್‌ ತಿಳಿಸಿದ್ದಾರೆ.

ಇದೇ ವೇಳೆ ಅಖಿಲ್‌ ಗೊಗೋಯ್ ವಿರುದ್ಧ ಅಭ್ಯರ್ಥಿಯನ್ನು ಕಣಕ್ಕಿಳಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಅವರು ಕಾಂಗ್ರೆಸ್ ಪಕ್ಷಕ್ಕೆ ಮನವಿ ಮಾಡಿದ್ದಾರೆ. ಸಿಬ್ಸಾಗರ್ ಕ್ಷೇತ್ರದಿಂದ ಕಣಕ್ಕಿಳಿಯುತ್ತಿರುವ ಗೊಗೋಯ್ ಪರ ಪ್ರಚಾರಕ್ಕಾಗಿ ಸಿಬ್ಸಾಗರ್‌ಗೆ ಹೋಗುವುದಾಗಿ ಸುನೀಲಂ ಹೇಳಿದ್ದಾರೆ.

2019 ರ ಡಿಸೆಂಬರ್‌ನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ ಅಖಿಲ್‌ ಗೊಗೊಯ್ ವಿರುದ್ಧ ಕಠಿಣ ಯುಎಪಿಎ ವಿರುದ್ಧ ಪ್ರಕರಣ ದಾಖಲಾಗಿದ್ದು, ಅಂದಿನಿಂದ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಹೋರಾಟಗಾರ ಅಖಿಲ್‌ ಗೊಗೋಯ್ ಕೆಲವು ತಿಂಗಳ ಹಿಂದೆ ಕೊರೊನಾ ಸೋಂಕಿಗೆ ಒಳಗಾಗಿದ್ದರು. ಹೀಗಾಗಿ ಅವರನ್ನು ಗುವಾಹಟಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆ.

126 ಸದಸ್ಯರ ಅಸ್ಸಾಂ ವಿಧಾನಸಭೆಯ ಚುನಾವಣೆಗಳು ಮೂರು ಹಂತಗಳಲ್ಲಿ ನಡೆಯಲಿದೆ.


ಇದನ್ನೂ ಓದಿ: ‘ಭಾರತೀಯ ಸಂಪ್ರದಾಯಕ್ಕೆ ಸೆಕ್ಯುಲರಿಸಂ ಒಂದು ಬೆದರಿಕೆ’: ಯೋಗಿ ಆದಿತ್ಯನಾಥ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...