Homeಮುಖಪುಟಕಣ್ಣೆದುರಿಗೆ ತಂದೆಯನ್ನು ಕೊಂದವರ ಹೆಸರನ್ನೇ ಮಕ್ಕಳಿಗಿರಿಸಿದ ದೇವೇಂದ್ರ ಯಾದವ್

ಕಣ್ಣೆದುರಿಗೆ ತಂದೆಯನ್ನು ಕೊಂದವರ ಹೆಸರನ್ನೇ ಮಕ್ಕಳಿಗಿರಿಸಿದ ದೇವೇಂದ್ರ ಯಾದವ್

- Advertisement -
- Advertisement -

1936 ರ ಸಮಯ. ಈಗಿನ ಹರಿಯಾಣಾದ ಹಿಸಾರ್ ಎನ್ನುವ ಪಟ್ಟಣದಲ್ಲಿ ರಾಮ್ ಸಿಂಗ್ ಒಂದು ಶಾಲೆಯ ಶಿಕ್ಷಕರಾಗಿದ್ದರು. ಸ್ವಾತಂತ್ರಪೂರ್ವದ ಸಮಯ. ಅಲ್ಲಲ್ಲಿ ಕೋಮು ದಳ್ಳುರಿಗಳು ನಡೆಯುತ್ತಿದ್ದವು. ರಾಮ್‍ಸಿಂಗ್ ಅವರು ಶಿಕ್ಷಕರಾಗಿದ್ದ ಶಾಲೆಗೆ ಕೋಮು ಗಲಭೆಯನ್ನೆಬ್ಬಿಸುತ್ತ ಮುಸಲ್ಮಾನರ ಗುಂಪೊಂದು ಬಂದು ಅಲ್ಲಿದ್ದ ಮಕ್ಕಳನ್ನು ತಮ್ಮ ವಶಕ್ಕೆ ನೀಡಬೇಕೆಂದು ಆದೇಶಿಸಿದರು. ಮಕ್ಕಳನ್ನು ಮುಟ್ಟೂಕಿಂತ ಮುಂಚೆ ಮೊದಲು ನನ್ನನ್ನು ನೋಡಿಕೊಳ್ಳಿ ಎಂದು ತಮ್ಮ ಕರ್ತವ್ಯ ಪಾಲಿಸಿದರು ರಾಮ್‍ಸಿಂಗ್. ಆಗ ಅವರ ಕುತ್ತಿಗೆಯನ್ನು ಕುಡಗೋಲಿನಿಂದ ಸೀಳಿದರು ಆ ಗಲಭೆಕೋರರು. ಈ ಘಟನೆಯನ್ನು ನೋಡುತ್ತ ನಿಂತವರಲ್ಲಿ  ಏಳು ವರ್ಷದ ಒಬ್ಬ ಬಾಲಕ ದೇವೇಂದ್ರ ಸಿಂಗ್, ಕೊಲೆಗೀಡಾದ ಶಿಕ್ಷಕ ರಾಮ್‍ಸಿಂಗ್ ಅವರ ಪುತ್ರ.

ತನ್ನ ಕಣ್ಣೆದುರಿಗೆ ಆದ ತನ್ನ ತಂದೆಯ ಕೊಲೆಯಿಂದ ಆ ಬಾಲಕನ ಮೇಲೆ ಏನೆಲ್ಲ ಪರಿಣಾಮ ಬೀರಿತೋ ಏನೋ. ತನ್ನ ತಂದೆಯನ್ನು ತನ್ನ ಕಣ್ಣೆದುರಿಗೇ ಕೊಂದ ಮುಸಲ್ಮಾನರನ್ನು ದ್ವೇಷಿಸಲು ಅವರಿಗೆ ಸಾಕಷ್ಟು ಕಾರಣಗಳಿದ್ದವು. ಆದರೆ ಆ ಬಾಲಕ ಬೆಳೆಯುತ್ತಿರುವ ಸಮಯ ಸ್ವಾತಂತ್ರ ಸಂಗ್ರಾಮದ ಸಮಯ. ಗಾಂಧೀಜಿಯವರ ಸತ್ಯಾಗ್ರಹಗಳ, ಹಿಂದು ಮುಸ್ಲಿಂ ಏಕತೆಗಾಗಿ ಜೀವ ತೇಯುತ್ತಿದ್ದ ಸಮಯ. ‘ನಾನೊಬ್ಬ ಹಿಂದು ಆಗಲಿ, ಮುಸಲ್ಮಾನನಾಗಲಿ ಆಗುವುದಿಲ್ಲ, ನಾನು ಆಗುವುದು ಒಬ್ಬ ಮನುಷ್ಯ’ ಎನ್ನುವ ಮಾತುಗಳನ್ನು ಕೇಳಿದ ದೇವೇಂದ್ರ ಸಿಂಗ್, ತಮ್ಮ ಜೀವನದಲ್ಲಿ ದ್ವೇಷವು ಪರಿಣಾಮ ಬೀರಲು ಅವಕಾಶ ನೀಡಲಿಲ್ಲ.

ಮುಂದೆ ಬೆಳೆದು ಅರ್ಥಶಾಸ್ತ್ರದ ಪ್ರಾಧ್ಯಾಪಕರಾದ ದೇವೇಂದ್ರ ಸಿಂಗ್, ತಮ್ಮ ಮಕ್ಕಳಿಗೆ ಮುಸ್ಲಿಂ ಹೆಸರುಗಳನ್ನು ನೀಡಲು ನಿರ್ಧರಿಸಿದರು. ತನ್ನ ತಂದೆಯನ್ನು ತನ್ನೆದುರಿಗೆ ಕೊಂದ ಸಮುದಾಯದವರ ಹೆಸರನ್ನು ನೀಡಲು ನಿರ್ಧರಿಸಿದರು. ಮೊದಲ ಮಗುವಿಗೆ ನಜ್ಮಾ ಎಂದು ಹೆಸರಿಡುವಾಗ ಅವರ ಹೆಂಡತಿ, ‘ಮಗಳಿಗೆ ಬೇಡ, ಮುಂದೆ ಗಂಡು ಮಗುವಾದಾಗ ಈ ಪ್ರಯೋಗವನ್ನು ಮಾಡುವ, ಹೆಣ್ಣು ಮಗಳ ಮೇಲೆ ಬೇಡ, ಮುಂದೆ ಮದುವೆಗೆ ಸಮಸ್ಯೆಯಾಗುತ್ತೆ’ ಎಂದರು. ಹಾಗಾಗಿ ಆ ಹೆಣ್ಣು ಮಗುವಿಗೆ ನೀಲಂ ಎಂದು ನಾಮಕರಣ ಮಾಡಲಾಯಿತು. ನಂತರ ಗಂಡು ಮಗುವಾದಾಗ ಸಲೀಂ ಎನ್ನುವ ಹೆಸರನ್ನಿಟ್ಟರು.

ರಾಜಸ್ಥಾನದ ಒಂದು ಹಳ್ಳಿಯಲ್ಲಿ ಶಾಲೆಗೆ ಹೋಗುತ್ತಿದ್ದ ಆ ಬಾಲಕನ ಶಾಲೆಯಲ್ಲಿ ಯಾವ ಮುಸಲ್ಮಾನ ಮಕ್ಕಳೂ ಇರಲಿಲ್ಲ. ಹಾಗಾಗಿ ಎಲ್ಲ ಮಕ್ಕಳಿಗೂ ಇವನ ಬಗ್ಗೆ ಕುತೂಹಲ. ‘ನೀನ್ಯಾರು, ನಿನ್ನನ್ನು ದತ್ತು ತೆಗೆದುಕೊಂಡಿದ್ದಾರಾ? ಮುಸಲ್ಮಾನರು ಹೇಗಿರುತ್ತಾರೆ?’ ಎಂದೆಲ್ಲಾ ಪೀಡಿಸಲಾರಂಭಿಸಿದರು. ತಂದೆ ದೇವೇಂದ್ರ ಜಾತ್ಯತೀತತೆಯ ಬಗ್ಗೆ ಆ ಪುಟ್ಟ ಮಗು ಸಲೀಂನಿಗೆ ಏನೆಲ್ಲಾ ಹೇಳಿದರೂ ಅವನಿಗೆ ತಲೆಬುಡ ಅರ್ಥವಾಗಲಿಲ್ಲ. ಒಂದು ದಿನ ಮನೆಗೆ ಬಂದು, ‘ಇಲ್ಲ ನನ್ನ ಹೆಸರನ್ನು ಬದಲಾಯಿಸಿ, ಇಲ್ಲವಾದರೆ ಇನ್ನು ಮುಂದೆ ನಾನು ಶಾಲೆಗೆ ಹೋಗೂದಿಲ್ಲ’ ಎಂದು ಘೋಷಿಸಿದರು. ಆಗ ಸಲೀಂ ಅಂತ ಇದ್ದ ಹೆಸರು ಯೋಗೇಂದ್ರ ಯಾದವ್ ಎಂದಾಯಿತು.

ಈ ಘಟನೆಯ ಬಗ್ಗೆ ಯಾಕೆ ಹೇಳಬೇಕಾಯಿತು?

2014 ರಲ್ಲಿ ಯೋಗೇಂದ್ರ ಯಾದವ ಅವರು, ಹರಿಯಾಣದ ಗುರುಗ್ರಾಮದಲ್ಲಿ ಚುನಾವಣೆಗೆ ನಿಂತಾಗ ಬಿಜೆಪಿಯವರು ಒಂದು ಪತ್ರಿಕಾಗೋಷ್ಠಿ ನಡೆಸಿದರು. ಅಲ್ಲಿ ಯೋಗೇಂದ್ರ ಯಾದವ ಅವರು ತಮ್ಮ ನಿಜವಾದ ಹೆಸರು ಸಲೀಂ ಎಂದು ಹೇಳಿಕೊಂಡು, ಅದರ ಆಧಾರದ ಮೇಲೆ ಮತಯಾಚಿಸುತ್ತಿದ್ದಾರೆ ಎಂದು ಆರೋಪಿಸಿದರು. ಆಗ ಯೋಗೇಂದ್ರ ಯಾದವ ಅವರು, ತಾವು ಹಾಗೆ ಮಾಡಿದ ಒಂದೇ ಒಂದು ಸಾಕ್ಷ್ಯವನ್ನು ಒದಗಿಸಿ ತಾನು ರಾಜಕೀಯದಿಂದ ನಿವೃತ್ತನಾಗುವೆ ಎಂದು ಘೋಷಿಸಿದರು ಮತ್ತು ಆ ಮಾತನ್ನು ಪುನರುಚ್ಛಿಸುತ್ತಲೇ ಇದ್ದಾರೆ. ಮೊನ್ನೆ ಇಂಡಿಯಾ ಟುಡೇಯ ಸಂವಾದವೊಂದರಲ್ಲಿ ಜಾತ್ಯತೀತತೆಯ ಬಗ್ಗೆ ಮಾತನಾಡಿದಾಗ ಬಿಜೆಪಿಯ ಅಮಿತ್ ಮಾಳವಿಯ ಅವರು ಯೋಗೇಂದ್ರ ಯಾದವ ಅವರಿಗೆ ಇದರ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ, ಚುನಾವಣೆಯ ಸಮಯದಲ್ಲಿ ತಮ್ಮ ಮುಸ್ಲಿಂ ಹೆಸರಿನ ಆಧಾರದ ಮೇಲೆ ರಾಜಕೀಯ ಮಾಡಿದ್ದಾರೆ ಎಂದು ಹೇಳಿದಾಗ, ಯೋಗೇಂದ್ರ ಯಾದವ ಅವರಿಗೆ ಈ ಎಲ್ಲ ಕಥೆಯನ್ನು ಮತ್ತೊಮ್ಮೆ ಹೇಳಬೇಕಾಯಿತು.

ಅಮಿತ್ ಮಾಳವೀಯ ನಂತಹ ವ್ಯಕ್ತಿಗೆ ಇಂತಹ ಸೂಕ್ಷ್ಮಗಳನ್ನು ಅರ್ಥಮಾಡಿಕೊಳ್ಳುವ ಸಾಮಥ್ರ್ಯ ಇಲ್ಲ ಎಂದು ಹೇಳಿ, ತಾವು ತಮ್ಮ ಮುಸ್ಲಿಂ ಹೆಸರಲ್ಲಿ ಮತಯಾಚನೆ ಮಾಡಿದ ಆರೋಪ ನಿಜವಾಗಿದ್ದಲ್ಲಿ, ಸಾಕ್ಷ್ಯ ಒದಗಿಸಿ ಇಲ್ಲವಾದರೆ ಸುಮ್ಮನಿರಿ (‘ಶಟ್ ಅಪ್’) ಎಂದು ಗುಡುಗಿದರು. ಬಿಜೆಪಿಯವರು ಸಾಕ್ಷ್ಯವನ್ನು ಒದಗಿಸುವ ಯಾವುದೇ ಪ್ರಯತ್ನ ಮಾಡಿಲ್ಲ. ಇನ್ನು ಮುಂದೆಯೂ ಇಂತಹ ಆರೋಪವನ್ನು ಮಾಡುವದಿಲ್ಲ ಎಂದು ಹೇಳಲಾಗುವುದಿಲ್ಲ. ಆದರೆ ಅವರು ಮಾತನಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ಅವರ ಮತ್ತು ತಂದೆಯ ಮೇಲೆ ಮೆಚ್ಚುಗೆಯ ಮಹಾಪೂರವೇ ಹರಿದುಬಂದಿದೆ. ನೀವೂ ಆ ವಿಡಿಯೋ ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...