Homeಮುಖಪುಟಕಣ್ಣೆದುರಿಗೆ ತಂದೆಯನ್ನು ಕೊಂದವರ ಹೆಸರನ್ನೇ ಮಕ್ಕಳಿಗಿರಿಸಿದ ದೇವೇಂದ್ರ ಯಾದವ್

ಕಣ್ಣೆದುರಿಗೆ ತಂದೆಯನ್ನು ಕೊಂದವರ ಹೆಸರನ್ನೇ ಮಕ್ಕಳಿಗಿರಿಸಿದ ದೇವೇಂದ್ರ ಯಾದವ್

- Advertisement -
- Advertisement -

1936 ರ ಸಮಯ. ಈಗಿನ ಹರಿಯಾಣಾದ ಹಿಸಾರ್ ಎನ್ನುವ ಪಟ್ಟಣದಲ್ಲಿ ರಾಮ್ ಸಿಂಗ್ ಒಂದು ಶಾಲೆಯ ಶಿಕ್ಷಕರಾಗಿದ್ದರು. ಸ್ವಾತಂತ್ರಪೂರ್ವದ ಸಮಯ. ಅಲ್ಲಲ್ಲಿ ಕೋಮು ದಳ್ಳುರಿಗಳು ನಡೆಯುತ್ತಿದ್ದವು. ರಾಮ್‍ಸಿಂಗ್ ಅವರು ಶಿಕ್ಷಕರಾಗಿದ್ದ ಶಾಲೆಗೆ ಕೋಮು ಗಲಭೆಯನ್ನೆಬ್ಬಿಸುತ್ತ ಮುಸಲ್ಮಾನರ ಗುಂಪೊಂದು ಬಂದು ಅಲ್ಲಿದ್ದ ಮಕ್ಕಳನ್ನು ತಮ್ಮ ವಶಕ್ಕೆ ನೀಡಬೇಕೆಂದು ಆದೇಶಿಸಿದರು. ಮಕ್ಕಳನ್ನು ಮುಟ್ಟೂಕಿಂತ ಮುಂಚೆ ಮೊದಲು ನನ್ನನ್ನು ನೋಡಿಕೊಳ್ಳಿ ಎಂದು ತಮ್ಮ ಕರ್ತವ್ಯ ಪಾಲಿಸಿದರು ರಾಮ್‍ಸಿಂಗ್. ಆಗ ಅವರ ಕುತ್ತಿಗೆಯನ್ನು ಕುಡಗೋಲಿನಿಂದ ಸೀಳಿದರು ಆ ಗಲಭೆಕೋರರು. ಈ ಘಟನೆಯನ್ನು ನೋಡುತ್ತ ನಿಂತವರಲ್ಲಿ  ಏಳು ವರ್ಷದ ಒಬ್ಬ ಬಾಲಕ ದೇವೇಂದ್ರ ಸಿಂಗ್, ಕೊಲೆಗೀಡಾದ ಶಿಕ್ಷಕ ರಾಮ್‍ಸಿಂಗ್ ಅವರ ಪುತ್ರ.

ತನ್ನ ಕಣ್ಣೆದುರಿಗೆ ಆದ ತನ್ನ ತಂದೆಯ ಕೊಲೆಯಿಂದ ಆ ಬಾಲಕನ ಮೇಲೆ ಏನೆಲ್ಲ ಪರಿಣಾಮ ಬೀರಿತೋ ಏನೋ. ತನ್ನ ತಂದೆಯನ್ನು ತನ್ನ ಕಣ್ಣೆದುರಿಗೇ ಕೊಂದ ಮುಸಲ್ಮಾನರನ್ನು ದ್ವೇಷಿಸಲು ಅವರಿಗೆ ಸಾಕಷ್ಟು ಕಾರಣಗಳಿದ್ದವು. ಆದರೆ ಆ ಬಾಲಕ ಬೆಳೆಯುತ್ತಿರುವ ಸಮಯ ಸ್ವಾತಂತ್ರ ಸಂಗ್ರಾಮದ ಸಮಯ. ಗಾಂಧೀಜಿಯವರ ಸತ್ಯಾಗ್ರಹಗಳ, ಹಿಂದು ಮುಸ್ಲಿಂ ಏಕತೆಗಾಗಿ ಜೀವ ತೇಯುತ್ತಿದ್ದ ಸಮಯ. ‘ನಾನೊಬ್ಬ ಹಿಂದು ಆಗಲಿ, ಮುಸಲ್ಮಾನನಾಗಲಿ ಆಗುವುದಿಲ್ಲ, ನಾನು ಆಗುವುದು ಒಬ್ಬ ಮನುಷ್ಯ’ ಎನ್ನುವ ಮಾತುಗಳನ್ನು ಕೇಳಿದ ದೇವೇಂದ್ರ ಸಿಂಗ್, ತಮ್ಮ ಜೀವನದಲ್ಲಿ ದ್ವೇಷವು ಪರಿಣಾಮ ಬೀರಲು ಅವಕಾಶ ನೀಡಲಿಲ್ಲ.

ಮುಂದೆ ಬೆಳೆದು ಅರ್ಥಶಾಸ್ತ್ರದ ಪ್ರಾಧ್ಯಾಪಕರಾದ ದೇವೇಂದ್ರ ಸಿಂಗ್, ತಮ್ಮ ಮಕ್ಕಳಿಗೆ ಮುಸ್ಲಿಂ ಹೆಸರುಗಳನ್ನು ನೀಡಲು ನಿರ್ಧರಿಸಿದರು. ತನ್ನ ತಂದೆಯನ್ನು ತನ್ನೆದುರಿಗೆ ಕೊಂದ ಸಮುದಾಯದವರ ಹೆಸರನ್ನು ನೀಡಲು ನಿರ್ಧರಿಸಿದರು. ಮೊದಲ ಮಗುವಿಗೆ ನಜ್ಮಾ ಎಂದು ಹೆಸರಿಡುವಾಗ ಅವರ ಹೆಂಡತಿ, ‘ಮಗಳಿಗೆ ಬೇಡ, ಮುಂದೆ ಗಂಡು ಮಗುವಾದಾಗ ಈ ಪ್ರಯೋಗವನ್ನು ಮಾಡುವ, ಹೆಣ್ಣು ಮಗಳ ಮೇಲೆ ಬೇಡ, ಮುಂದೆ ಮದುವೆಗೆ ಸಮಸ್ಯೆಯಾಗುತ್ತೆ’ ಎಂದರು. ಹಾಗಾಗಿ ಆ ಹೆಣ್ಣು ಮಗುವಿಗೆ ನೀಲಂ ಎಂದು ನಾಮಕರಣ ಮಾಡಲಾಯಿತು. ನಂತರ ಗಂಡು ಮಗುವಾದಾಗ ಸಲೀಂ ಎನ್ನುವ ಹೆಸರನ್ನಿಟ್ಟರು.

ರಾಜಸ್ಥಾನದ ಒಂದು ಹಳ್ಳಿಯಲ್ಲಿ ಶಾಲೆಗೆ ಹೋಗುತ್ತಿದ್ದ ಆ ಬಾಲಕನ ಶಾಲೆಯಲ್ಲಿ ಯಾವ ಮುಸಲ್ಮಾನ ಮಕ್ಕಳೂ ಇರಲಿಲ್ಲ. ಹಾಗಾಗಿ ಎಲ್ಲ ಮಕ್ಕಳಿಗೂ ಇವನ ಬಗ್ಗೆ ಕುತೂಹಲ. ‘ನೀನ್ಯಾರು, ನಿನ್ನನ್ನು ದತ್ತು ತೆಗೆದುಕೊಂಡಿದ್ದಾರಾ? ಮುಸಲ್ಮಾನರು ಹೇಗಿರುತ್ತಾರೆ?’ ಎಂದೆಲ್ಲಾ ಪೀಡಿಸಲಾರಂಭಿಸಿದರು. ತಂದೆ ದೇವೇಂದ್ರ ಜಾತ್ಯತೀತತೆಯ ಬಗ್ಗೆ ಆ ಪುಟ್ಟ ಮಗು ಸಲೀಂನಿಗೆ ಏನೆಲ್ಲಾ ಹೇಳಿದರೂ ಅವನಿಗೆ ತಲೆಬುಡ ಅರ್ಥವಾಗಲಿಲ್ಲ. ಒಂದು ದಿನ ಮನೆಗೆ ಬಂದು, ‘ಇಲ್ಲ ನನ್ನ ಹೆಸರನ್ನು ಬದಲಾಯಿಸಿ, ಇಲ್ಲವಾದರೆ ಇನ್ನು ಮುಂದೆ ನಾನು ಶಾಲೆಗೆ ಹೋಗೂದಿಲ್ಲ’ ಎಂದು ಘೋಷಿಸಿದರು. ಆಗ ಸಲೀಂ ಅಂತ ಇದ್ದ ಹೆಸರು ಯೋಗೇಂದ್ರ ಯಾದವ್ ಎಂದಾಯಿತು.

ಈ ಘಟನೆಯ ಬಗ್ಗೆ ಯಾಕೆ ಹೇಳಬೇಕಾಯಿತು?

2014 ರಲ್ಲಿ ಯೋಗೇಂದ್ರ ಯಾದವ ಅವರು, ಹರಿಯಾಣದ ಗುರುಗ್ರಾಮದಲ್ಲಿ ಚುನಾವಣೆಗೆ ನಿಂತಾಗ ಬಿಜೆಪಿಯವರು ಒಂದು ಪತ್ರಿಕಾಗೋಷ್ಠಿ ನಡೆಸಿದರು. ಅಲ್ಲಿ ಯೋಗೇಂದ್ರ ಯಾದವ ಅವರು ತಮ್ಮ ನಿಜವಾದ ಹೆಸರು ಸಲೀಂ ಎಂದು ಹೇಳಿಕೊಂಡು, ಅದರ ಆಧಾರದ ಮೇಲೆ ಮತಯಾಚಿಸುತ್ತಿದ್ದಾರೆ ಎಂದು ಆರೋಪಿಸಿದರು. ಆಗ ಯೋಗೇಂದ್ರ ಯಾದವ ಅವರು, ತಾವು ಹಾಗೆ ಮಾಡಿದ ಒಂದೇ ಒಂದು ಸಾಕ್ಷ್ಯವನ್ನು ಒದಗಿಸಿ ತಾನು ರಾಜಕೀಯದಿಂದ ನಿವೃತ್ತನಾಗುವೆ ಎಂದು ಘೋಷಿಸಿದರು ಮತ್ತು ಆ ಮಾತನ್ನು ಪುನರುಚ್ಛಿಸುತ್ತಲೇ ಇದ್ದಾರೆ. ಮೊನ್ನೆ ಇಂಡಿಯಾ ಟುಡೇಯ ಸಂವಾದವೊಂದರಲ್ಲಿ ಜಾತ್ಯತೀತತೆಯ ಬಗ್ಗೆ ಮಾತನಾಡಿದಾಗ ಬಿಜೆಪಿಯ ಅಮಿತ್ ಮಾಳವಿಯ ಅವರು ಯೋಗೇಂದ್ರ ಯಾದವ ಅವರಿಗೆ ಇದರ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ, ಚುನಾವಣೆಯ ಸಮಯದಲ್ಲಿ ತಮ್ಮ ಮುಸ್ಲಿಂ ಹೆಸರಿನ ಆಧಾರದ ಮೇಲೆ ರಾಜಕೀಯ ಮಾಡಿದ್ದಾರೆ ಎಂದು ಹೇಳಿದಾಗ, ಯೋಗೇಂದ್ರ ಯಾದವ ಅವರಿಗೆ ಈ ಎಲ್ಲ ಕಥೆಯನ್ನು ಮತ್ತೊಮ್ಮೆ ಹೇಳಬೇಕಾಯಿತು.

ಅಮಿತ್ ಮಾಳವೀಯ ನಂತಹ ವ್ಯಕ್ತಿಗೆ ಇಂತಹ ಸೂಕ್ಷ್ಮಗಳನ್ನು ಅರ್ಥಮಾಡಿಕೊಳ್ಳುವ ಸಾಮಥ್ರ್ಯ ಇಲ್ಲ ಎಂದು ಹೇಳಿ, ತಾವು ತಮ್ಮ ಮುಸ್ಲಿಂ ಹೆಸರಲ್ಲಿ ಮತಯಾಚನೆ ಮಾಡಿದ ಆರೋಪ ನಿಜವಾಗಿದ್ದಲ್ಲಿ, ಸಾಕ್ಷ್ಯ ಒದಗಿಸಿ ಇಲ್ಲವಾದರೆ ಸುಮ್ಮನಿರಿ (‘ಶಟ್ ಅಪ್’) ಎಂದು ಗುಡುಗಿದರು. ಬಿಜೆಪಿಯವರು ಸಾಕ್ಷ್ಯವನ್ನು ಒದಗಿಸುವ ಯಾವುದೇ ಪ್ರಯತ್ನ ಮಾಡಿಲ್ಲ. ಇನ್ನು ಮುಂದೆಯೂ ಇಂತಹ ಆರೋಪವನ್ನು ಮಾಡುವದಿಲ್ಲ ಎಂದು ಹೇಳಲಾಗುವುದಿಲ್ಲ. ಆದರೆ ಅವರು ಮಾತನಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ಅವರ ಮತ್ತು ತಂದೆಯ ಮೇಲೆ ಮೆಚ್ಚುಗೆಯ ಮಹಾಪೂರವೇ ಹರಿದುಬಂದಿದೆ. ನೀವೂ ಆ ವಿಡಿಯೋ ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮತ ಉಳಿಸಿ ಎಂದು ಜನ ಬೇಡಿಕೊಳ್ಳುವಂತೆ ಮಾಡಬೇಡಿ’: ಇದು ನನ್ನ ವೈಯಕ್ತಿಕ ಸಮಸ್ಯೆ ಅಲ್ಲ, ಇಡೀ ದೇಶದ ಸಮಸ್ಯೆ: ಬಹುಭಾಷಾ ನಟ ಪ್ರಕಾಶ್ ರಾಜ್

ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವಿಧಾನದ ಬಗ್ಗೆ ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಕರೆದಿದ್ದ ಮಹತ್ವದ ಪತ್ರಿಕಾಗೋಷ್ಠಿ ಆಗಸ್ಟ್ 14, 2026ರಂದು ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ...

‘ನಲ್ಸಾರ್’ ವಿದ್ಯಾರ್ಥಿಗಳ ವೃತ್ತಿಜೀವನಕ್ಕೆ ಅಡ್ಡಬಂದ BCI ನಡೆಗೆ CJI ಗರಂ

ಹೈದರಾಬಾದ್‌ನ 'ನಲ್ಸಾರ್' (NALSAR) ಕಾನೂನು ವಿಶ್ವವಿದ್ಯಾಲಯದ ಪದವೀಧರರ ಸನ್ನದು (ಎನ್‌ರೋಲ್‌ಮೆಂಟ್) ನೋಂದಣಿಯನ್ನು ಅಮಾನತಿನಲ್ಲಿಡುವಂತೆ ಬಾರ್ ಕೌನ್ಸಿಲ್ ಆಫ್ ಇಂಡಿಯಾ (BCI) ನೀಡಿದ್ದ ವಿವಾದಾತ್ಮಕ ನಿರ್ದೇಶನದ ವಿರುದ್ಧ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್,...

ಉತ್ತರ ಪ್ರದೇಶದಲ್ಲಿ ಮುಸ್ಲಿಮರ ಮೇಲಿನ ದೌರ್ಜನ್ಯ: ಯೋಗಿ ಆದಿತ್ಯನಾಥ್ ಸೇರಿ 8 ಅಧಿಕಾರಿಗಳ ನಿರ್ಬಂಧಕ್ಕೆ ಕೆನಡಾ ಮಾನವ ಹಕ್ಕುಗಳ ಸಂಸ್ಥೆ ಆಗ್ರಹ

ಉತ್ತರ ಪ್ರದೇಶದಲ್ಲಿ ಮುಸ್ಲಿಂ ಅಲ್ಪಸಂಖ್ಯಾತ ಸಮುದಾಯವನ್ನು ಗುರಿಯಾಗಿಸಿಕೊಂಡು ನಿರಂತರವಾಗಿ ನಡೆಸಲಾಗುತ್ತಿರುವ ಮಾನವ ಹಕ್ಕುಗಳ ಉಲ್ಲಂಘನೆ ಹಾಗೂ ರಾಜ್ಯ ಬೆಂಬಲಿತ ದೌರ್ಜನ್ಯಗಳನ್ನು ಖಂಡಿಸಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಎಂಟು ಪ್ರಮುಖ...

SIR: ಬೆಂಗಳೂರಿನ ಸರ್ವಜ್ಞನಗರದ ಒಂದೇ ಬೂತ್‌ನಲ್ಲಿ ಶೇ.93.71ರಷ್ಟು ಮತದಾರರ ಹೆಸರು ನಾಪತ್ತೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಹೆಸರಿನಲ್ಲಿ ರಾಜಧಾನಿ ಬೆಂಗಳೂರಿನ ಸರ್ವಜ್ಞನಗರ ಕ್ಷೇತ್ರದ ಒಂದೇ ಮತಗಟ್ಟೆಯಲ್ಲಿ ಬರೋಬ್ಬರಿ ಶೇ. 93.71ರಷ್ಟು ಮತದಾರರ ಹೆಸರುಗಳನ್ನು ಮತಪಟ್ಟಿಯಿಂದ ತೆಗೆಯಲಾಗಿದೆ ಎಂಬ ಆಘಾತಕಾರಿ ಸಂಗತಿಯೊಂದು...

ASDDO ಪಟ್ಟಿ ಸಾರ್ವಜನಿಕ ಪ್ರಕಟಣೆ ಬಗ್ಗೆ ಚುನಾವಣಾ ಆಯೋಗ ನಿರ್ಲಕ್ಷ್ಯ! ಆರೋಪ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಬರೋಬ್ಬರಿ 1.08 ಕೋಟಿ ಮತದಾರರ ಹೆಸರನ್ನು ಎಎಸ್‌ಡಿಡಿಒ (ASDDO) ಪಟ್ಟಿಗೆ ಸೇರಿಸಿ ಆತಂಕ ಸೃಷ್ಟಿಸಿದ್ದ ಚುನಾವಣಾ ಆಯೋಗ, ಈಗ ಆ ಪಟ್ಟಿಯ ಸಾರ್ವಜನಿಕ ಪ್ರಕಟಣೆಯ...

SIR: 62 ವರ್ಷದ ಜೀವಂತ ವ್ಯಕ್ತಿಯನ್ನು ‘ಮೃತ’ ಎಂದು ಪಟ್ಟಿ ಮಾಡಿದ ಆಯೋಗದ ಕುತಂತ್ರ ಬಯಲು

ರಾಜ್ಯಾದ್ಯಂತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಜಾಪ್ರಭುತ್ವದ ಮೂಲ ಆಶಯಕ್ಕೇ ಮಾರಕವಾಗಿ ಪರಿಣಮಿಸುತ್ತಿದೆ. ದೋಷಮುಕ್ತ ಪಟ್ಟಿ ಸಿದ್ಧಪಡಿಸುವ ನೆಪದಲ್ಲಿ ಚುನಾವಣಾ ಆಯೋಗವು ಬರೋಬ್ಬರಿ 1.08 ಕೋಟಿ ಮತದಾರರನ್ನು...

‘ಸಿದ್ದಾರ್ಥ ವಿಹಾರ ಟ್ರಸ್ಟ್’ ನ ದಾಖಲೆ ನೀಡುತ್ತೇನೆ: ಆರ್‌ಎಸ್‌ಎಸ್, ರಾಮಮಂದಿರದ ಲೆಕ್ಕ ನೀಡಲು ಸಿದ್ಧವಿದ್ದೀರಾ?: ಬಿಜೆಪಿ ಆರೋಪಕ್ಕೆ ಪ್ರಿಯಾಂಕ್ ಖರ್ಗೆ ಸವಾಲು

ಬೆಂಗಳೂರು: ‘ಸಿದ್ದಾರ್ಥ ವಿಹಾರ ಟ್ರಸ್ಟ್‌’ ವಿರುದ್ಧ ಭೂ ಅಕ್ರಮದ ಆರೋಪ ಮಾಡಿ ತಮ್ಮ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದ ಬಿಜೆಪಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ನೇರ...

ಕ್ಯೂಬಾ ಎಂದರೆ ಫಿಡೆಲ್, ಅಮೆರಿಕದ ಕುತಂತ್ರದ ವಿರುದ್ಧ ಪುಟ್ಟ ರಾಷ್ಟ್ರ ಕ್ಯೂಬಾದ ಸುದೀರ್ಘ ಕ್ರಾಂತಿ

ಆಗಸ್ಟ್ 13, 2026 ರಂದು ಕ್ಯೂಬಾ ತನ್ನ ಕ್ರಾಂತಿಕಾರಿ ನಾಯಕ, ಕಮಾಂಡರ್-ಇನ್-ಚೀಫ್ ಫಿಡೆಲ್ ಕ್ಯಾಸ್ಟ್ರೋ ರೂಜ್ ಅವರ ಜನ್ಮ ಶತಮಾನೋತ್ಸವವನ್ನು ಆಚರಿಸುತ್ತಿದೆ. ಐದು ದಶಕಗಳ ಕಾಲ ದೇಶವನ್ನು ಮುನ್ನಡೆಸಿದ ನಾಯಕನ ಶಾಶ್ವತ ಸಿದ್ಧಾಂತಗಳು...

‘ರೋಹಿತ್ ಕಾಯ್ದೆ’ ಜಾರಿಗೆ ಆಗ್ರಹ: ಚಾಲ್ತಿಯಲ್ಲಿರುವ ಅಧಿವೇಶನದಲ್ಲೇ ವಿಧೇಯಕ ಮಂಡಿಸಲು ಸರ್ಕಾರಕ್ಕೆ ‘ರೋಹಿತ್ ಕಾಯ್ದೆಗಾಗಿ ಜನಾಂದೋಲನ’ ಸಂಘಟನೆ ಒತ್ತಾಯ

ಬೆಂಗಳೂರು: ದೇಶದ ಉನ್ನತ ಶಿಕ್ಷಣ ಸಂಸ್ಥೆಗಳು ಹಾಗೂ ವಿಶ್ವವಿದ್ಯಾಲಯಗಳಲ್ಲಿ ದಲಿತ ಮತ್ತು ಆದಿವಾಸಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಾಂಸ್ಥಿಕ ಜಾತಿ ತಾರತಮ್ಯ, ಕಿರುಕುಳ ಹಾಗೂ ವಂಚನೆಯನ್ನು ತಡೆಗಟ್ಟಲು ಅತ್ಯಂತ ನಿರ್ಣಾಯಕವಾಗಿರುವ 'ಕರ್ನಾಟಕ ರೋಹಿತ್ ವೇಮುಲಾ...

SIR: ತೆಲಂಗಾಣ ಸರ್ಕಾರ ಮತದಾರರಿಗೆ ನೀಡಿದ್ದ FRC ಯನ್ನು , ನಿರಾಕರಿಸಿದ ಕೇಂದ್ರ ಚುನಾವಣಾ ಆಯೋಗ

ಮತದಾರರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ತೆಲಂಗಾಣ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿದ್ದ ‘ಫ್ಯಾಮಿಲಿ ರಿಜಿಸ್ಟರ್ ಸರ್ಟಿಫಿಕೇಟ್’ (FRC) ಅನ್ನು ಮತದಾರರ ದಾಖಲೆಯನ್ನಾಗಿ ಸ್ವೀಕರಿಸಲು ಕೇಂದ್ರ ಚುನಾವಣಾ ಆಯೋಗ ನಿರಾಕರಿಸಿದೆ. FRC...