Homeಮುಖಪುಟಎನ್‌ಸಿಇಆರ್‌ಟಿ ಮುಖ್ಯ ಸಲಹೆಗಾರರ ಪಟ್ಟಿಯಿಂದ ತಮ್ಮ ಹೆಸರು ಕೈಬಿಡುವಂತೆ ಯೋಗೇಂದ್ರ ಯಾದವ್, ಸುಹಾಸ್ ಪಾಲ್ಶಿಕರ್ ಒತ್ತಾಯ

ಎನ್‌ಸಿಇಆರ್‌ಟಿ ಮುಖ್ಯ ಸಲಹೆಗಾರರ ಪಟ್ಟಿಯಿಂದ ತಮ್ಮ ಹೆಸರು ಕೈಬಿಡುವಂತೆ ಯೋಗೇಂದ್ರ ಯಾದವ್, ಸುಹಾಸ್ ಪಾಲ್ಶಿಕರ್ ಒತ್ತಾಯ

- Advertisement -
- Advertisement -

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿಯ (ಎನ್‌ಸಿಇಆರ್‌ಟಿ) ರಾಜ್ಯಶಾಸ್ತ್ರದ ಪಠ್ಯಗಳನ್ನು “ಗುರುತಿಸಲಾಗದಷ್ಟು ವಿರೂಪಗೊಳಿಸಲಾಗಿದೆ” ಹಾಗಾಗಿ ತಮ್ಮ ಹೆಸರನ್ನು ಮುಖ್ಯ ಸಲಹೆಗಾರರ ಮಂಡಳಿಯಿಂದ ಕೈಬಿಡುವಂತೆ ಶಿಕ್ಷಣ ತಜ್ಞ ಸುಹಾಸ್ ಪಾಲ್ಶಿಕರ್ ಮತ್ತು ರಾಜಕೀಯ ವಿಶ್ಲೇಷಕ ಯೋಗೇಂದ್ರ ಯಾದವ್ ಗುರುವಾರ ಒತ್ತಾಯಿಸಿದ್ದಾರೆ.

ಸ್ವರಾಜ್ ಅಭಿಯಾನದ ರಾಜಕೀಯ ಪಕ್ಷದ ಸಂಸ್ಥಾಪಕರಾದ ಪಾಲ್ಶಿಕರ್ ಮತ್ತು ಯಾದವ್ ಅವರನ್ನು 9 ರಿಂದ 12 ನೇ ತರಗತಿಯ NCERT ಯ ರಾಜ್ಯಶಾಸ್ತ್ರ ಪಠ್ಯಪುಸ್ತಕಗಳಿಗೆ ಮುಖ್ಯ ಸಲಹೆಗಾರರಾಗಿ ಹೆಸರು ಸೇರಿಸಲಾಗಿದೆ.

ಕರೋನವೈರಸ್ ಸಾಂಕ್ರಾಮಿಕ ರೋಗದಿಂದ ಮಕ್ಕಳಿಗೆ ಪಠ್ಯ ಹೊರೆಯಾಗಬಾರದೆಂದು ಕಡಿಮೆ ಮಾಡುವು ಉದ್ದೇಶದಿಂದ ಎನ್‌ಸಿಇಆರ್‌ಟಿಯು ಪಠ್ಯಪುಸ್ತಕಗಳನ್ನು ಪರಿಷ್ಕರಣೆ ಮಾಡಲಾಗಿದೆ. ಅದು ಭಾರತದ ಇತಿಹಾಸದ ಪ್ರಮುಖ ವಿವರಗಳನ್ನು ಕೈಬಿಟ್ಟಿದೆ.

ಮೋಹನ್‌ದಾಸ್ ಕರಮಚಂದ್ ಗಾಂಧಿ ಅವರನ್ನು ಹತ್ಯೆ ಮಾಡಲು ಹಿಂದೂ ಉಗ್ರಗಾಮಿಗಳು ನಡೆಸಿದ ಪ್ರಯತ್ನಗಳು ಮತ್ತು ಅವರ ಹತ್ಯೆಯ ನಂತರ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮೇಲೆ ವಿಧಿಸಲಾದ ನಿಷೇಧದ ಪ್ಯಾರಾಗಳನ್ನು ಎನ್‌ಸಿಇಆರ್‌ಟಿ ಪಠ್ಯದಿಂದ ಕೈಬಿಡಲಾಗಿದೆ.

ಇದನ್ನೂ ಓದಿ: ಪಠ್ಯಪುಸ್ತಕ ಪರಿಷ್ಕರಣೆ: 10ನೇ ತರಗತಿ ಪಠ್ಯದಿಂದ ‘ಪ್ರಜಾಪ್ರಭುತ್ವ’ ಪಾಠವನ್ನೇ ಕೈಬಿಟ್ಟ ಎನ್‌ಸಿಇಆರ್‌ಟಿ

ಕಳೆದ ವರ್ಷ, NCERT 2002ರ ಗುಜರಾತ್ ಗಲಭೆಗಳು, ಭಾರತದಲ್ಲಿ ಮೊಘಲ್ ಆಳ್ವಿಕೆ ಮತ್ತು 1975ರಲ್ಲಿ ಹೇರಲಾದ ರಾಷ್ಟ್ರವ್ಯಾಪಿ ತುರ್ತು ಪರಿಸ್ಥಿತಿಗೆ ಸಂಬಂಧಿಸಿದ ವಿಷಯವನ್ನು ಸಹ ಕೈಬಿಟ್ಟಿತು. ಈಗ NCERT ಪಠ್ಯಪುಸ್ತಕದಲ್ಲಿ ಗುಜರಾತ್ ಗಲಭೆಯ ಬಗ್ಗೆ ಯಾವುದೇ ಉಲ್ಲೇಖಗಳು ಇಲ್ಲದಂತಾಗಿದೆ.

ಎನ್‌ಸಿಇಆರ್‌ಟಿ ನಿರ್ದೇಶಕ ದಿನೇಶ್ ಸಕ್ಲಾನಿ ಅವರಿಗೆ ಗುರುವಾರ ಪಾಲ್ಶಿಕರ್ ಮತ್ತು ಯಾದವ್ ಅವರು ಪತ್ರ ಬರೆದಿದ್ದು, ”ತಮ್ಮ ಜೊತೆ ಯಾವುದೇ ಚರ್ಚೆನಡೆಸದೇ ಅಥವಾ ಪಠ್ಯ ಕೈಬಿಡುವ ವಿಚಾರ ತಿಳಿಸಿಲ್ಲ” ಎಂದು ಅವರು ಹೇಳಿದರು.

ಎನ್‌ಸಿಇಆರ್‌ಟಿಯು ಈ ರೀತಿ ಪಠ್ಯ ಕೈಬಿಡುವುದರ ಹಿಂದೆ ಯಾವುದೇ ಶೈಕ್ಷಣಿಕ ತಾರ್ಕಿಕತೆಯನ್ನು ನೋಡಲಾಗಿಲ್ಲ ಎಂದು ಪಾಲ್ಶಿಕರ್ ಮತ್ತು ಯಾದವ್ ಅವರು ಹೇಳಿದ್ದಾರೆ.

”ಪಠ್ಯಪುಸ್ತಕಗಳು ಪಕ್ಷಪಾತದ ರೀತಿಯಲ್ಲಿ ರೂಪಿಸಬಾರದು ಮತ್ತು ಸಮಾಜ ವಿಜ್ಞಾನದ ವಿದ್ಯಾರ್ಥಿಗಳಲ್ಲಿ ವಿಮರ್ಶೆ ಮತ್ತು ಪ್ರಶ್ನಿಸುವ ಮನೋಭಾವವನ್ನು ತಗ್ಗಿಸಬಾರದು” ಎಂದು ಪತ್ರದಲ್ಲಿ ಸೇರಿಸಲಾಗಿದೆ.

“ವಿರೂಪಗೊಂಡ ಮತ್ತು ಶೈಕ್ಷಣಿಕವಾಗಿ ಕಾರ್ಯನಿರ್ವಹಿಸದ ಪಠ್ಯಪುಸ್ತಕಗಳಿಗೆ” ತಮ್ಮ ಹೆಸರುಗಳನ್ನು ಮುಖ್ಯ ಸಲಹೆಗಾರರಾಗಿ ಉಲ್ಲೇಖಿಸಿರುವುದು “ಮುಜುಗರ” ಎಂದು ಶಿಕ್ಷಣತಜ್ಞ ಮತ್ತು ರಾಜಕೀಯ ವಿಶ್ಲೇಷಕರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...