Homeಮುಖಪುಟತನ್ನ ಜಾತಿಯವರನ್ನು ರಕ್ಷಿಸಲು ಆದಿತ್ಯನಾಥ್ ನನ್ನ ಮೇಲೆ ಸುಳ್ಳು ಆರೋಪ ಮಾಡಿದ್ದಾರೆ: ಚಂದ್ರಶೇಖರ್ ಆಜಾದ್

ತನ್ನ ಜಾತಿಯವರನ್ನು ರಕ್ಷಿಸಲು ಆದಿತ್ಯನಾಥ್ ನನ್ನ ಮೇಲೆ ಸುಳ್ಳು ಆರೋಪ ಮಾಡಿದ್ದಾರೆ: ಚಂದ್ರಶೇಖರ್ ಆಜಾದ್

ಈ ಬಗ್ಗೆ ಉತ್ತರಪ್ರದೇಶ ಸರ್ಕಾರ ತನಿಖೆಗೆ ಆದೇಶಿಸಲಿ. ನನ್ನ ಬಳಿ ಕೇವಲ 1 ಲಕ್ಷ ಪತ್ತೆಯಾದರೂ ನಾನು ರಾಜಕೀಯ ತೊರೆಯುತ್ತೇನೆ. ಇಲ್ಲಿದಿದ್ದಲ್ಲಿ, ಆದಿತ್ಯನಾಥ್ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಬೇಕು

- Advertisement -
- Advertisement -

ಹತ್ರಾಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಯೋಗಿ ಆದಿತ್ಯನಾಥ್ ನೀಡಿದ್ದ ಹೇಳಿಕೆಗೆ ಪ್ರತಿಯಾಗಿ, “ಯೋಗಿ ಆದಿತ್ಯನಾಥ್ ತನ್ನ ಜಾತಿಯವರನ್ನು ರಕ್ಷಿಸಲು ನನ್ನ ಮೇಲೆ ಆರೋಪಿಸಿದ್ದಾರೆ” ಎಂದು ಭೀಮ್ ಆರ್ಮಿಯ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಹೇಳಿದ್ದಾರೆ.

“ರಾಜ್ಯದಲ್ಲಿ ಜಾತಿ ಹಿಂಸಾಚಾರ ಭುಗಿಲೇಳುವಂತೆ ಮಾಡಲು ಕೆಲವು ಸಂಘಟನೆಗಳಿಗೆ ಹಣ ಹರಿದು ಬರುತ್ತಿದೆ” ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇತ್ತೀಚೆಗೆ ಹೇಳಿದ್ದರು.

ಇದನ್ನೂ ಓದಿ: ಪ್ರಭುತ್ವಕ್ಕೆ “ಚಂದ್ರಶೇಖರ್‌ ಆಝಾದ್ ರಾವಣ್” ಎಂದರೆ ಆತಂಕ ಯಾಕೆ?

ಇದನ್ನು ತೀವ್ರವಾಗಿ ಖಂಡಿಸಿರುವ ಚಂದ್ರಶೇಖರ್ ಆಜಾದ್, “ಈ ಬಗ್ಗೆ ಉತ್ತರಪ್ರದೇಶ ಸರ್ಕಾರ ತನಿಖೆಗೆ ಆದೇಶಿಸಲಿ. ನನ್ನ ಬಳಿ ಕೇವಲ 1 ಲಕ್ಷ ಪತ್ತೆಯಾದರೂ ನಾನು ರಾಜಕೀಯ ತೊರೆಯುತ್ತೇನೆ. ಇಲ್ಲಿದಿದ್ದಲ್ಲಿ, ಆದಿತ್ಯನಾಥ್ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಬೇಕು. ನನ್ನ ಜೀವನವನ್ನು ಸಮಾಜಕ್ಕೆ ಅರ್ಪಿಸಿದ್ದೇನೆ. ನನ್ನ ಖರ್ಚನ್ನು ಸಮಾಜವೇ ಭರಿಸುತ್ತದೆ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಯೋಗಿಯ ರಾಮರಾಜ್ಯ ದಲಿತರ ಪಾಲಿಗೆ ಸ್ಮಶಾನವಾಗಿದೆ : ಚಂದ್ರಶೇಖರ್‌ ರಾವಣ್‌

“ಉತ್ತರಪ್ರದೇಶದಲ್ಲಿ ನ್ಯಾಯದ ಪರ ದನಿಯೆತ್ತಿದರೆ ಅದನ್ನು ಅಂತರಾಷ್ಟ್ರೀಯ ಸಂಚು ಎಂದು ಕರೆಯಲಾಗುತ್ತದೆ. ದಲಿತರಿಗೆ ನ್ಯಾಯ ಕೊಡಿ ಎಂದು ಹೋರಾಡುತ್ತಿರುವುದಕ್ಕೆ ಸರ್ಕಾರ ಹೆದರುತ್ತಿದೆ ಎಂಬುದನ್ನು ಇದು ತೋರಿಸುತ್ತಿದೆ. ಅವರ ಪ್ರಕಾರ ದಲಿತರ ಜೀವನ ಅಗ್ಗವಾಗಿದೆ. ಹತ್ರಾಸ್ ಆರೋಪಿಗಳು ಯೋಗಿಯವರ ಜಾತಿಯವರಾಗಿದ್ದು, ಅವರನ್ನು ಉಳಿಸಬೇಕೆಂದು ನಮ್ಮ ಮೇಲೆ ಆರೋಪಿಸಿದ್ದಾರೆ” ಎಂದು ಮತ್ತೊಂದು ಟ್ವೀಟ್ ಮಾಡಿದ್ದಾರೆ.

ಸೆಪ್ಟೆಂಬರ್ 14 ರಂದು ತನ್ನ ಗ್ರಾಮದ ನಾಲ್ಕು ಮೇಲ್ಜಾತಿಯವರಿಂದ ಹಲ್ಲೆ ಮತ್ತು ಸಾಮೂಹಿಕ ಅತ್ಯಾಚಾರಕ್ಕೆ ಒಳಗಾದ ಗಂಭೀರ ಗಾಯಗಳಿಂದಾಗಿ ದಲಿತ ಯುವತಿ ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.

ಇದನ್ನೂ ಓದಿ: ಬಹುಜನರಿಗೆ ಬಂದೂಕು ನೀಡಿ: ಹತ್ರಾಸ್‌ಗೆ ಹೊರಟ ಭೀಮ್ ಆರ್ಮಿ ಮುಖ್ಯಸ್ಥ ಆಜಾದ್

ಇದರ ನಂತರ ಯುಪಿ ಪೊಲೀಸರು ಯುವತಿಯ ಶವವನ್ನು ತೆಗೆದುಕೊಂಡು ಹತ್ರಾಸ್‌ಗೆ ಕೊಂಡೊಯ್ದಿದ್ದರು, ಶವವನ್ನು ಮನೆಗೆ ಕೊಂಡೊಯ್ಯಲು ಅನುಮತಿ ನೀಡುವಂತೆ ಆಕೆಯ ಕುಟುಂಬ ಪರಿಪರಿಯಾಗಿ ಬೇಡಿಕೊಂಡರು ಕೂಡಾ ಅದಕ್ಕೆ ಸಮ್ಮತಿಸದ ಪೊಲೀಸರು ಮನೆಯವರನ್ನು ಬಂಧಿಸಿ ಮಧ್ಯರಾತ್ರಿಯೇ ಶವವನ್ನು ಸುಟ್ಟಿದ್ದರು. ಈ ದೃಶ್ಯವನ್ನು ರಾಷ್ಟ್ರೀಯ ಸುದ್ದಿ ಮಾಧ್ಯಮಗಳು ವರದಿ ಮಾಡಿದ್ದವು.

ಈ ಪ್ರಕರಣ ನಡೆದಾಗಿನಿಂದ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್‌ ಆಜಾದ್ ಸಂತ್ರಸ್ತೆಗೆ ನ್ಯಾಯಕ್ಕಾಗಿ ಆಗ್ರಹಿಸಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ರಾಜೀನಾಮೆ ನೀಡಬೇಕು ಎಂದು ದೆಹಲಿಯಲ್ಲಿ ಪ್ರತಿಭಟನೆ ನಡೆಸಿದ್ದರು. ಈ ಮೊದಲೇ ಅವರು ಸಂತ್ರಸ್ತ ಕುಟುಂಬವನ್ನು ಭೇಟಿಯಾಗಲು ಪ್ರಯತ್ನಿಸಿದರೂ ಸಹ ಪೊಲೀಸರು ಅವಕಾಶ ನೀಡದೇ ಅವರನ್ನು ಕೆಲ ಸಮಯದ ಗೃಹಬಂಧನದಲ್ಲಿಟ್ಟಿದ್ದರು. ನಂತರ ಆಜಾದ್ ಹತ್ರಾಸ್‌ಗೆ ಭೇಟಿ ನೀಡಿ, ಸಂತ್ರಸ್ತ ಕುಟುಂಬಕ್ಕೆ ಸಾಂತ್ವನ ಹೇಳಿದ್ದರು.

ಇದನ್ನೂ ಓದಿ: ಹತ್ರಾಸ್‌‌ ಅತ್ಯಾಚಾರ: ಸಂತ್ರಸ್ಥೆಯ ತಂದೆಗೆ ಧಮಕಿ ಹಾಕುತ್ತಿರುವ ಜಿಲ್ಲಾಧಿಕಾರಿ ವಿಡಿಯೋ ವೈರಲ್‌

“ಸಂವಿಧಾನದ ವಾಸಿಸುವ ಹಕ್ಕನ್ನು ಉಲ್ಲೇಖಿಸಿ, ಸರ್ಕಾರಗಳು ದಲಿತರ ರಕ್ಷಣೆ ಮಾಡುವುಲ್ಲಿ ವಿಫಲವಾಗಿವೆ. ಹಾಗಾಗಿ ದೇಶದ ಹಿಂದುಳಿದ ವರ್ಗಗಳಿಗೆ ಬಂದೂಕು ಪರವಾನಗಿ ನೀಡಬೇಕು. ನಮ್ಮನ್ನು ನಾವೇ ರಕ್ಷಿಸಿಕೊಳ್ಳುತ್ತೇವೆ” ಎಂದು ಈ ಹಿಂದೆ ಟ್ವೀಟ್ ಮಾಡಿದ್ದರು.

ಹತ್ರಾಸ್‌ಗೆ ಪ್ರತಿಪಕ್ಷಗಳ ನಾಯಕರು, ಮಾಧ್ಯಮಗಳು ಯಾರಿಗೂ ಪ್ರವೇಶ ನೀಡದಂತೆ 144 ಸೆಕ್ಷನ್ ಜಾರಿ ಮಾಡಲಾಗಿತ್ತು. ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್ ನಾಯಕರ ಭೇಟಿಯನ್ನು ತಡೆಯಲಾಗಿತ್ತು. ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿಯವರನ್ನು ಬಂಧಿಸಿ, ಬಿಡುಗಡೆ ಮಾಡಿದ್ದರು. ಎಫ್‌ಐಆರ್‌ ಕೂಡ ದಾಖಲಿಸಲಾಗಿದೆ. ಇವುಗಳ ವಿರುದ್ಧ ದೇಶದ ಜನ ಆಕ್ರೋಶ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ 5ಕ್ಕಿಂತ ಕಡಿಗೆ ಜನರ ಗುಂಪಿಗೆ ಹತ್ರಾಸ್ ಭೇಟಿಗೆ ಅವಕಾಶ ನೀಡಲಾಗಿದೆ.


ಇದನ್ನೂ ಓದಿ: ಹತ್ರಾಸ್‌: ಸಂತ್ರಸ್ಥೆಯ ಗುಪ್ತಾಂಗದಲ್ಲಿ ಆಳವಾದ ಗಾಯವಿದೆ; ಫೋರೆನ್ಸಿಕ್ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...