Homeಮುಖಪುಟತನ್ನ ಜಾತಿಯವರನ್ನು ರಕ್ಷಿಸಲು ಆದಿತ್ಯನಾಥ್ ನನ್ನ ಮೇಲೆ ಸುಳ್ಳು ಆರೋಪ ಮಾಡಿದ್ದಾರೆ: ಚಂದ್ರಶೇಖರ್ ಆಜಾದ್

ತನ್ನ ಜಾತಿಯವರನ್ನು ರಕ್ಷಿಸಲು ಆದಿತ್ಯನಾಥ್ ನನ್ನ ಮೇಲೆ ಸುಳ್ಳು ಆರೋಪ ಮಾಡಿದ್ದಾರೆ: ಚಂದ್ರಶೇಖರ್ ಆಜಾದ್

ಈ ಬಗ್ಗೆ ಉತ್ತರಪ್ರದೇಶ ಸರ್ಕಾರ ತನಿಖೆಗೆ ಆದೇಶಿಸಲಿ. ನನ್ನ ಬಳಿ ಕೇವಲ 1 ಲಕ್ಷ ಪತ್ತೆಯಾದರೂ ನಾನು ರಾಜಕೀಯ ತೊರೆಯುತ್ತೇನೆ. ಇಲ್ಲಿದಿದ್ದಲ್ಲಿ, ಆದಿತ್ಯನಾಥ್ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಬೇಕು

- Advertisement -
- Advertisement -

ಹತ್ರಾಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಯೋಗಿ ಆದಿತ್ಯನಾಥ್ ನೀಡಿದ್ದ ಹೇಳಿಕೆಗೆ ಪ್ರತಿಯಾಗಿ, “ಯೋಗಿ ಆದಿತ್ಯನಾಥ್ ತನ್ನ ಜಾತಿಯವರನ್ನು ರಕ್ಷಿಸಲು ನನ್ನ ಮೇಲೆ ಆರೋಪಿಸಿದ್ದಾರೆ” ಎಂದು ಭೀಮ್ ಆರ್ಮಿಯ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಹೇಳಿದ್ದಾರೆ.

“ರಾಜ್ಯದಲ್ಲಿ ಜಾತಿ ಹಿಂಸಾಚಾರ ಭುಗಿಲೇಳುವಂತೆ ಮಾಡಲು ಕೆಲವು ಸಂಘಟನೆಗಳಿಗೆ ಹಣ ಹರಿದು ಬರುತ್ತಿದೆ” ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇತ್ತೀಚೆಗೆ ಹೇಳಿದ್ದರು.

ಇದನ್ನೂ ಓದಿ: ಪ್ರಭುತ್ವಕ್ಕೆ “ಚಂದ್ರಶೇಖರ್‌ ಆಝಾದ್ ರಾವಣ್” ಎಂದರೆ ಆತಂಕ ಯಾಕೆ?

ಇದನ್ನು ತೀವ್ರವಾಗಿ ಖಂಡಿಸಿರುವ ಚಂದ್ರಶೇಖರ್ ಆಜಾದ್, “ಈ ಬಗ್ಗೆ ಉತ್ತರಪ್ರದೇಶ ಸರ್ಕಾರ ತನಿಖೆಗೆ ಆದೇಶಿಸಲಿ. ನನ್ನ ಬಳಿ ಕೇವಲ 1 ಲಕ್ಷ ಪತ್ತೆಯಾದರೂ ನಾನು ರಾಜಕೀಯ ತೊರೆಯುತ್ತೇನೆ. ಇಲ್ಲಿದಿದ್ದಲ್ಲಿ, ಆದಿತ್ಯನಾಥ್ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಬೇಕು. ನನ್ನ ಜೀವನವನ್ನು ಸಮಾಜಕ್ಕೆ ಅರ್ಪಿಸಿದ್ದೇನೆ. ನನ್ನ ಖರ್ಚನ್ನು ಸಮಾಜವೇ ಭರಿಸುತ್ತದೆ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಯೋಗಿಯ ರಾಮರಾಜ್ಯ ದಲಿತರ ಪಾಲಿಗೆ ಸ್ಮಶಾನವಾಗಿದೆ : ಚಂದ್ರಶೇಖರ್‌ ರಾವಣ್‌

“ಉತ್ತರಪ್ರದೇಶದಲ್ಲಿ ನ್ಯಾಯದ ಪರ ದನಿಯೆತ್ತಿದರೆ ಅದನ್ನು ಅಂತರಾಷ್ಟ್ರೀಯ ಸಂಚು ಎಂದು ಕರೆಯಲಾಗುತ್ತದೆ. ದಲಿತರಿಗೆ ನ್ಯಾಯ ಕೊಡಿ ಎಂದು ಹೋರಾಡುತ್ತಿರುವುದಕ್ಕೆ ಸರ್ಕಾರ ಹೆದರುತ್ತಿದೆ ಎಂಬುದನ್ನು ಇದು ತೋರಿಸುತ್ತಿದೆ. ಅವರ ಪ್ರಕಾರ ದಲಿತರ ಜೀವನ ಅಗ್ಗವಾಗಿದೆ. ಹತ್ರಾಸ್ ಆರೋಪಿಗಳು ಯೋಗಿಯವರ ಜಾತಿಯವರಾಗಿದ್ದು, ಅವರನ್ನು ಉಳಿಸಬೇಕೆಂದು ನಮ್ಮ ಮೇಲೆ ಆರೋಪಿಸಿದ್ದಾರೆ” ಎಂದು ಮತ್ತೊಂದು ಟ್ವೀಟ್ ಮಾಡಿದ್ದಾರೆ.

ಸೆಪ್ಟೆಂಬರ್ 14 ರಂದು ತನ್ನ ಗ್ರಾಮದ ನಾಲ್ಕು ಮೇಲ್ಜಾತಿಯವರಿಂದ ಹಲ್ಲೆ ಮತ್ತು ಸಾಮೂಹಿಕ ಅತ್ಯಾಚಾರಕ್ಕೆ ಒಳಗಾದ ಗಂಭೀರ ಗಾಯಗಳಿಂದಾಗಿ ದಲಿತ ಯುವತಿ ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.

ಇದನ್ನೂ ಓದಿ: ಬಹುಜನರಿಗೆ ಬಂದೂಕು ನೀಡಿ: ಹತ್ರಾಸ್‌ಗೆ ಹೊರಟ ಭೀಮ್ ಆರ್ಮಿ ಮುಖ್ಯಸ್ಥ ಆಜಾದ್

ಇದರ ನಂತರ ಯುಪಿ ಪೊಲೀಸರು ಯುವತಿಯ ಶವವನ್ನು ತೆಗೆದುಕೊಂಡು ಹತ್ರಾಸ್‌ಗೆ ಕೊಂಡೊಯ್ದಿದ್ದರು, ಶವವನ್ನು ಮನೆಗೆ ಕೊಂಡೊಯ್ಯಲು ಅನುಮತಿ ನೀಡುವಂತೆ ಆಕೆಯ ಕುಟುಂಬ ಪರಿಪರಿಯಾಗಿ ಬೇಡಿಕೊಂಡರು ಕೂಡಾ ಅದಕ್ಕೆ ಸಮ್ಮತಿಸದ ಪೊಲೀಸರು ಮನೆಯವರನ್ನು ಬಂಧಿಸಿ ಮಧ್ಯರಾತ್ರಿಯೇ ಶವವನ್ನು ಸುಟ್ಟಿದ್ದರು. ಈ ದೃಶ್ಯವನ್ನು ರಾಷ್ಟ್ರೀಯ ಸುದ್ದಿ ಮಾಧ್ಯಮಗಳು ವರದಿ ಮಾಡಿದ್ದವು.

ಈ ಪ್ರಕರಣ ನಡೆದಾಗಿನಿಂದ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್‌ ಆಜಾದ್ ಸಂತ್ರಸ್ತೆಗೆ ನ್ಯಾಯಕ್ಕಾಗಿ ಆಗ್ರಹಿಸಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ರಾಜೀನಾಮೆ ನೀಡಬೇಕು ಎಂದು ದೆಹಲಿಯಲ್ಲಿ ಪ್ರತಿಭಟನೆ ನಡೆಸಿದ್ದರು. ಈ ಮೊದಲೇ ಅವರು ಸಂತ್ರಸ್ತ ಕುಟುಂಬವನ್ನು ಭೇಟಿಯಾಗಲು ಪ್ರಯತ್ನಿಸಿದರೂ ಸಹ ಪೊಲೀಸರು ಅವಕಾಶ ನೀಡದೇ ಅವರನ್ನು ಕೆಲ ಸಮಯದ ಗೃಹಬಂಧನದಲ್ಲಿಟ್ಟಿದ್ದರು. ನಂತರ ಆಜಾದ್ ಹತ್ರಾಸ್‌ಗೆ ಭೇಟಿ ನೀಡಿ, ಸಂತ್ರಸ್ತ ಕುಟುಂಬಕ್ಕೆ ಸಾಂತ್ವನ ಹೇಳಿದ್ದರು.

ಇದನ್ನೂ ಓದಿ: ಹತ್ರಾಸ್‌‌ ಅತ್ಯಾಚಾರ: ಸಂತ್ರಸ್ಥೆಯ ತಂದೆಗೆ ಧಮಕಿ ಹಾಕುತ್ತಿರುವ ಜಿಲ್ಲಾಧಿಕಾರಿ ವಿಡಿಯೋ ವೈರಲ್‌

“ಸಂವಿಧಾನದ ವಾಸಿಸುವ ಹಕ್ಕನ್ನು ಉಲ್ಲೇಖಿಸಿ, ಸರ್ಕಾರಗಳು ದಲಿತರ ರಕ್ಷಣೆ ಮಾಡುವುಲ್ಲಿ ವಿಫಲವಾಗಿವೆ. ಹಾಗಾಗಿ ದೇಶದ ಹಿಂದುಳಿದ ವರ್ಗಗಳಿಗೆ ಬಂದೂಕು ಪರವಾನಗಿ ನೀಡಬೇಕು. ನಮ್ಮನ್ನು ನಾವೇ ರಕ್ಷಿಸಿಕೊಳ್ಳುತ್ತೇವೆ” ಎಂದು ಈ ಹಿಂದೆ ಟ್ವೀಟ್ ಮಾಡಿದ್ದರು.

ಹತ್ರಾಸ್‌ಗೆ ಪ್ರತಿಪಕ್ಷಗಳ ನಾಯಕರು, ಮಾಧ್ಯಮಗಳು ಯಾರಿಗೂ ಪ್ರವೇಶ ನೀಡದಂತೆ 144 ಸೆಕ್ಷನ್ ಜಾರಿ ಮಾಡಲಾಗಿತ್ತು. ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್ ನಾಯಕರ ಭೇಟಿಯನ್ನು ತಡೆಯಲಾಗಿತ್ತು. ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿಯವರನ್ನು ಬಂಧಿಸಿ, ಬಿಡುಗಡೆ ಮಾಡಿದ್ದರು. ಎಫ್‌ಐಆರ್‌ ಕೂಡ ದಾಖಲಿಸಲಾಗಿದೆ. ಇವುಗಳ ವಿರುದ್ಧ ದೇಶದ ಜನ ಆಕ್ರೋಶ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ 5ಕ್ಕಿಂತ ಕಡಿಗೆ ಜನರ ಗುಂಪಿಗೆ ಹತ್ರಾಸ್ ಭೇಟಿಗೆ ಅವಕಾಶ ನೀಡಲಾಗಿದೆ.


ಇದನ್ನೂ ಓದಿ: ಹತ್ರಾಸ್‌: ಸಂತ್ರಸ್ಥೆಯ ಗುಪ್ತಾಂಗದಲ್ಲಿ ಆಳವಾದ ಗಾಯವಿದೆ; ಫೋರೆನ್ಸಿಕ್ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...