Homeಮುಖಪುಟಯೋಗಿ ಜಾಹೀರಾತಿನಲ್ಲಿ ಕೊಲ್ಕತ್ತದ ಎಂಎಎ ಪ್ಲೈಓವರ್ ಫೋಟೋ; ಪುಂಡ ಯೋಗಿ ಎಂದ ಮೊಯಿತ್ರ

ಯೋಗಿ ಜಾಹೀರಾತಿನಲ್ಲಿ ಕೊಲ್ಕತ್ತದ ಎಂಎಎ ಪ್ಲೈಓವರ್ ಫೋಟೋ; ಪುಂಡ ಯೋಗಿ ಎಂದ ಮೊಯಿತ್ರ

- Advertisement -
- Advertisement -

ಕೊಲ್ಕತ್ತದ ಎಂಎಎ ಪ್ಲೈಓವರ್ ಫೋಟೋವನ್ನು ಬಳಸಿ ಉತ್ತರ ಪ್ರದೇಶ ಸರ್ಕಾರ ನೀಡಿರುವ ಜಾಹೀರಾತು  ಟ್ರೋಲಿಗರಿಗೆ ಆಹಾರವಾಗಿದೆ.

‘ದಿ ಸಂಡೇ ಎಕ್ಸ್‌ಪ್ರೆಸ್‌’ ಪತ್ರಿಕೆಯ ಮೊದಲ ಪುಟದಲ್ಲಿ ಪ್ರಕಟವಾಗಿರುವ ಜಾಹೀರಾತಿನ ಫೋಟೋವನ್ನು ಹಂಚಿಕೊಂಡು “ಪುಂಡ ಯೋಗಿ” (Thuggy Yogi) ಎಂದು ಕರೆದಿರುವ ತೃಣಮೂಲ ಕಾಂಗ್ರೆಸ್ ಲೋಕಸಭಾ ಸದಸ್ಯರಾದ ಮಹುವ ಮೊಯಿತ್ರ, “ನಿಮ್ಮ ಆತ್ಮವನ್ನು ಬದಲಿಸಿಕೊಳ್ಳಿ ಕನಿಷ್ಠ ನಿಮ್ಮ ಜಾಹೀರಾತು ಏಜೆನ್ಸಿಯನ್ನಾದರೂ ಬದಲಿಸಿ” ಎಂದು ಕುಟುಕಿದ್ದಾರೆ. “ನನ್ನ ವಿರುದ್ಧ ನೋಯ್ಡಾದಲ್ಲಿ ಎಫ್‌ಐಆರ್‌ ದಾಖಲಾಗುವುದನ್ನು ಎದುರು ನೋಡುತ್ತಿದ್ದೇನೆ” ಎಂದಿದ್ದಾರೆ ಮೊಯಿತ್ರ.

ಫ್ಯಾಕ್ಟ್ ಚೆಕ್ ಟ್ವಿಟರ್‌ ಖಾತೆಯು ಪ್ರತಿಕ್ರಿಯಿಸಿದ್ದು, “ಯೋಗಿ ಆದಿತ್ಯನಾಥ ಅವರೇ, ಪಶ್ಚಿಮ ಬಂಗಾಳ ಅಭಿವೃದ್ಧಿಯನ್ನು ನಿಮ್ಮ ಜಾಹೀರಾತಿನಲ್ಲಿ ಕಾಣಲು ಖುಷಿಯಾಗುತ್ತಿದೆ. ಐಟಿಸಿ ಕಡೆಗೆ ತೆರಳಲಿರುವ ಎಂಎಎ ಫ್ಲೈಓವರ್‌ನ ಸ್ಟಾಕ್ ಫೋಟೋವನ್ನು ಜಾಹೀರಾತಿನಲ್ಲಿ ಬಳಸಲಾಗಿದೆ” ಎಂದಿದೆ.

ಸುಮಿತ್ರ ಮುಜುಂದಾರ್ ಎಂಬುವರು ಟ್ವೀಟ್ ಮಾಡಿದ್ದು, ಯೂಪಿ ಮಾದರಿಯನ್ನು ತೋರಿಸಲು ಕೊಲ್ಕತ್ತ ಫೋಟೋವನ್ನು ಬಳಸಲಾಗಿದೆ. ಪಾರದಾರ್ಶಕ ಯೂಪಿ ಎಂದರೆ ಇತರ ರಾಜ್ಯಗಳ ಅಭಿವೃದ್ಧಿಯ ಫೋಟೋಗಳನ್ನು ಕದ್ದು, ಪತ್ರಿಕೆಗೆ ಜಾಹೀರಾತು ನೀಡುವುದಾಗಿದೆ” ಎಂದಿದ್ದಾರೆ.

ಇದನ್ನೂ ಓದಿ: ಯೋಗಿ ಸರ್ಕಾರ ಟೀಕಿಸಿದ್ದ ಮಾಜಿ ರಾಜ್ಯಪಾಲರ ಮೇಲೆ ದೇಶದ್ರೋಹ ಪ್ರಕರಣ!

“ಎಂಎಎ ಫ್ಲೈಓವರ್‌” (MAA flyover) ಎಂದು ಗೂಗಲ್ ಮಾಡಿದರೆ, ಕೊಲ್ಕತ್ತದಲ್ಲಿರುವ ಈ ಮೇಲ್ಸೇತುವೆಯ ಕುರಿತು ವರದಿಯಾಗಿರುವ ಸುದ್ದಿಗಳನ್ನು ನೋಡಬಹುದು.

ಜಾಹೀರಾತು ಕುರಿತು ಸ್ಪಷ್ಟನೆ ನೀಡಿರುವ ಇಂಡಿಯನ್ ಎಕ್ಸಪ್ರೆಸ್ ಸಂಸ್ಥೆಯು, “ಸಂಸ್ಥೆಯ ಮಾರ್ಕೆಟಿಂಗ್ ವಿಭಾಗದಿಂದಾಗಿರುವ ತಪ್ಪು ಇದು. ಇದಕ್ಕಾಗಿ ತೀವ್ರ ವಿಷಾದಿಸುತ್ತೇವೆ. ಪತ್ರಿಕೆಯ ಎಲ್ಲ ಡಿಜಿಟಲ್ ಆವೃತ್ತಿಗಳಿಂದ ಈ ಫೋಟೋವನ್ನು ಅಳಿಸಿಹಾಕುತ್ತೇವೆ” ಎಂದು ಟ್ವೀಟ್ ಮಾಡಿದೆ.

ಇದನ್ನೂ ಓದಿ: LPG ಬೆಲೆ ಮತ್ತೆ ಹೆಚ್ಚಳ: ಆಕ್ರೋಶ ವ್ಯಕ್ತಪಡಿಸಿದ ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಎಷ್ಟೋ ವರ್ಷಗಳ ಅನುಭವ ಮತ್ತು ದಕ್ಷ ಕೆಲಸಗಾರರನ್ನು ಹೊಂದಿರುವ ಇಂಡಿಯನ್ ಎಕ್ಸ್ ಪ್ರೆಸ್ ಈ ರೀತಿಯ ಬ್ಲಂಡರ್ ಮಾಡಲು ಸಾಧ್ಯವೇ? ಯಾರ ಒತ್ತಡದಲ್ಲಿ ಇದ್ದಾರೆ, ಇಂಡಿಯನ್ ಎಕ್ಸ್ ಪ್ರೆಸ್ ನವರು?

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...