Homeಮುಖಪುಟರಾಹುಲ್, ತೇಜಸ್ವಿ, ಅಖಿಲೇಶ್, ‘ಪಪ್ಪು, ತಪ್ಪು, ಅಕ್ಕು’ ಗಾಂಧಿಯವರ ಮೂರು ಹೊಸ ಮಂಗಗಳು ಎಂದ ಯೋಗಿ...

ರಾಹುಲ್, ತೇಜಸ್ವಿ, ಅಖಿಲೇಶ್, ‘ಪಪ್ಪು, ತಪ್ಪು, ಅಕ್ಕು’ ಗಾಂಧಿಯವರ ಮೂರು ಹೊಸ ಮಂಗಗಳು ಎಂದ ಯೋಗಿ ಆದಿತ್ಯನಾಥ್

- Advertisement -
- Advertisement -

ಇಂಡಿಯಾ ಬ್ಲಾಕ್ ನಾಯಕರನ್ನು ‘ಪಪ್ಪು’, ‘ತಪ್ಪು’ ಮತ್ತು ‘ಅಕ್ಕು’ ಮಹಾತ್ಮಾ ಗಾಂಧಿಯವರ ಮೂರು ಹೊಸ ಮಂಗಗಳು” ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಟೀಕಿಸಿದರು. 

2025ನೇ ಸಾಲಿನ ಬಿಹಾರ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಹಾರದ ದರ್ಭಾಂಗದಲ್ಲಿ ಸೋಮವಾರ ನಡೆದ ಸಾರ್ವಜನಿಕ ರ್ಯಾಲಿಯಲ್ಲಿ ಮಾತನಾಡಿದ ಅವರು, ಬಿಹಾರದಲ್ಲಿ ಕಾಂಗ್ರೆಸ್, ಆರ್‌ಜೆಡಿ ಮತ್ತು ಎಸ್‌ಪಿ ‘ಕ್ರಿಮಿನಲ್‌ಗಳನ್ನು ಅಪ್ಪಿಕೊಳ್ಳುತ್ತಿವೆ’, ಒಳನುಸುಳುವವರು ರಾಜ್ಯದ ಭದ್ರತೆಯೊಂದಿಗೆ ರಾಜಿ ಮಾಡಿಕೊಳ್ಳಲು ಅವಕಾಶ ಮಾಡಿಕೊಡುತ್ತಿದ್ದಾರೆ ಎಂದು ಆರೋಪಿಸಿದರು.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಆರ್‌ಜೆಡಿಯ ತೇಜಸ್ವಿ ಯಾದವ್ ಮತ್ತು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಅವರನ್ನು ಅಪಹಾಸ್ಯ ಮಾಡಿದ ಅವರು, “‘ಪಪ್ಪು’, ‘ತಪ್ಪು’ ಮತ್ತು ‘ಅಕ್ಕು’ ಮಹಾತ್ಮ ಗಾಂಧಿಯವರ ಮೂರು ಹೊಸ ಮಂಗಗಳು” ಎಂದು ಹೇಳಿದರು. 

“ಇವರು ಜಾತಿಯ ಹೆಸರಿನಲ್ಲಿ ಜನರನ್ನು ವಿಭಜಿಸುವ ಮತ್ತು ಗಲಭೆಗಳನ್ನು ಸೃಷ್ಟಿಸುವ ಜನರು”, ಆರ್‌ಜೆಡಿ-ಕಾಂಗ್ರೆಸ್ ಆಡಳಿತದಲ್ಲಿ ಬಡವರಿಗೆ ಸಿಗಬೇಕಾದ ಪಡಿತರವನ್ನು ರಾಜ್ಯದಲ್ಲಿ ಲೂಟಿ ಮಾಡಲಾಗಿದೆ ಎಂದು ಆರೋಪಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೋಂದಣಿಯಾಗದ ಆರ್‌ಎಸ್‌ಎಸ್ ಮುಖ್ಯಸ್ಥರಿಗೆ ಪ್ರಧಾನಿಗೆ ಸಮನಾದ ಪ್ರೋಟೋಕಾಲ್ ಏಕೆ?..ಪ್ರಿಯಾಂಕ್ ಖರ್ಗೆ

ತನ್ನದು ನೋಂದಾಯಿತ ಸಂಸ್ಥೆಯಲ್ಲ ಎಂದು ಆರ್‌ಎಸ್‌ಎಸ್ ಲಿಖಿತ ರೂಪದಲ್ಲಿ ಅಧಿಕೃತವಾಗಿ ತಿಳಿಸಿದೆ. ನೋಂದಾಯಿಸದ ಸಂಸ್ಥೆಯೊಂದರ ಮುಖ್ಯಸ್ಥರು ಪ್ರಧಾನಿ ಮತ್ತು ಗೃಹ ಸಚಿವರಿಗೆ ಸಮಾನವಾಗಿ ಅಡ್ವಾನ್ಸಡ್‌ ಸೆಕ್ಯುರಿಟಿ ಲಿಯಾಸನ್ ಪ್ರೋಟೋಕಾಲ್ ಏಕೆ ಪಡೆಯುತ್ತಾರೆ? ಎಂದು...

ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಜಾಮೀನು ಅರ್ಜಿ : ನ.6ಕ್ಕೆ ವಿಚಾರಣೆ ಮುಂದೂಡಿಕೆ

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್, ಮೀರಾನ್ ಹೈದರ್, ಗುಲ್ಫಿಶಾ ಫಾತಿಮಾ, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಂ ಖಾನ್ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಸುಪ್ರೀಂ...

ಶಬರಿಮಲೆ ಬೇಸ್ ಕ್ಯಾಂಪ್‌ನಲ್ಲಿ ₹ 6.12 ಕೋಟಿ ವೆಚ್ಚದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸಲಿರುವ ಕೇರಳ ಸರ್ಕಾರ

ಪತ್ತನಂತಿಟ್ಟ: ಶಬರಿಮಲೆ ಸಮೀಪದ ನಿಲಕ್ಕಲ್‌ನಲ್ಲಿ ₹ 6.12ಕೋಟಿ ವೆಚ್ಚದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಲಾಗುವುದು ಎಂದು ಕೇರಳ ಆರೋಗ್ಯ ಇಲಾಖೆ ಸೋಮವಾರ ಪ್ರಕಟಣೆಯಲ್ಲಿ ತಿಳಿಸಿದೆ.  ಶಬರಿಮಲೆ ತೀರ್ಥಯಾತ್ರೆ ಆರಂಭವಾಗುವ ಕೆಲವೇ ದಿನಗಳ ಮೊದಲು...

ಭೀಕರ ಅಪಘಾತದಲ್ಲಿ ಮೂವರು ಸಹೋದರಿಯರು ಸಾವು : ದುರಂತ ಸ್ಥಳದಲ್ಲಿ ಹೆತ್ತವರ ಆಕ್ರಂದನ

"ದಯವಿಟ್ಟು ನಮ್ಮ ಮಕ್ಕಳನ್ನು ವಾಪಸ್ ತಂದುಕೊಡಿ" ಎಂದು ತೆಲಂಗಾಣ ಅಪಘಾತದ ಸ್ಥಳದಲ್ಲಿ ನೆರೆದಿದ್ದ ಸಾವಿರಾರು ಜನರ ಮುಂದೆ ಮೂವರು ಹೆಣ್ಣು ಮಕ್ಕಳನ್ನು ಕಳೆದುಕೊಂಡ ಹೆತ್ತವರ ಆಕ್ರಂದನ ಹೃದಯ ವಿದ್ರಾವಕವಾಗಿತ್ತು ಎಂದು ವರದಿಗಳು ಹೇಳಿವೆ. ಇಂದು...

ತನ್ನನ್ನು ಹೈಕೋರ್ಟ್ ನ್ಯಾಯಾಧೀಶನಾಗಿ ನೇಮಿಸಲು ನಿರ್ದೇಶಿಸುವಂತೆ ಕೋರಿದ ವ್ಯಕ್ತಿ : ವ್ಯವಸ್ಥೆಯ ಅಣಕ ಎಂದ ಸುಪ್ರೀಂ ಕೋರ್ಟ್

ತನ್ನನ್ನು ತೆಲಂಗಾಣ ಹೈಕೋರ್ಟ್ ನ್ಯಾಯಾಧೀಶನಾಗಿ ನೇಮಿಸುವಂತೆ ನಿರ್ದೇಶನ ನೀಡಲು ಕೋರಿ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಸೋಮವಾರ (ನ.3) ನಿರಾಕರಿಸಿದ್ದು, "ಇದು ವ್ಯವಸ್ಥೆಯ ಅಣಕ" ಎಂದಿದೆ. ಸಿಜೆಐ ಬಿ.ಆರ್ ಗವಾಯಿ...

ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ: ಸಿಎಂ ಸಿದ್ದರಾಮಯ್ಯ

ಮೈಸೂರು: ಬಿಹಾರದಲ್ಲಿನ ಅಧಿಕಾರ ವಿರೋಧಿ ಅಲೆ ಹಾಗೂ ಬಿಜೆಪಿಯ ಭ್ರಷ್ಟ ಹಾಗೂ ದುರಾಡಳಿತದ ಅಂಶಗಳು ಪ್ರಮುಖವಾಗಲಿದ್ದು, ಈ ಬಾರಿಯ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಜಯಸಾಧಿಸುವ ಭರವಸೆಯಿದೆ ಎಂದು ಮುಖ್ಯಮಂತ್ರಿ...

ಕಾಲೇಜು ವಿದ್ಯಾರ್ಥಿನಿಯನ್ನು ಅಪಹರಿಸಿ ಲೈಂಗಿಕ ಕಿರುಕುಳ : ಆರೋಪಿಗಳ ಪತ್ತೆಗೆ 7 ತಂಡ ರಚನೆ

ಮೂವರು ವ್ಯಕ್ತಿಗಳು ಕಾಲೇಜು ವಿದ್ಯಾರ್ಥಿನಿಯನ್ನು ಅಪಹರಿಸಿ ಲೈಂಗಿಕ ಕಿರುಕುಳ ನೀಡಿದ ಆಘಾತಕಾರಿ ಘಟನೆ ಕೊಯಮತ್ತೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಳಿಕ ಭಾನುವಾರ (ನ.2) ತಡರಾತ್ರಿ ನಡೆದಿದೆ. ಮಧುರೈ ಮೂಲದ ವಿದ್ಯಾರ್ಥಿನಿ ಕೊಯಮತ್ತೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದರು....

ಉತ್ತರ ಪ್ರದೇಶ| ಮಥುರಾದಲ್ಲಿ 10 ವರ್ಷದ ದಲಿತ ಬಾಲಕಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ಹಳ್ಳಿಯೊಂದರಲ್ಲಿ 10 ವರ್ಷದ ದಲಿತ ಬಾಲಕಿಯ ಮೇಲೆ ಅತ್ಯಾಚಾರ ನಡೆದಿದೆ ಎಂದು ಪೊಲೀಸರು ಭಾನುವಾರ (ನವೆಂಬರ್ 2, 2025) ತಿಳಿಸಿದ್ದಾರೆ. ಶನಿವಾರ (ನವೆಂಬರ್ 1, 2025), ಸಂತ್ರಸ್ತ ಬಾಲಕಿ...

ಕಣ್ಣೂರ್ | ಬೆಂಗಳೂರಿನ ಮೂವರು ವಿದ್ಯಾರ್ಥಿಗಳು ಸಮುದ್ರದಲ್ಲಿ ಮುಳುಗಿ ಸಾವು

ಕೇರಳದ ಕಣ್ಣೂರಿನ ಪಯ್ಯಂಬಲಂ ಬೀಚ್‌ಗೆ ಪ್ರವಾಸಕ್ಕೆ ತೆರಳಿದ ಕರ್ನಾಟಕದ ಮೂವರು ವಿದ್ಯಾರ್ಥಿಗಳು ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಭಾನುವಾರ (ನ.2) ನಡೆದಿದೆ. ಹಾಸನ ಜಿಲ್ಲೆಯ ಹೊಳೆನರಸೀಪುರದ ಅಫ್ನಾನ್ ಅಹ್ಮದ್ (26), ಬೀದರ್‌ನ ಮೊಹಮ್ಮದ್ ರೆಹಾನುದ್ದೀನ್...

ಶಿಮ್ಲಾ: ದಲಿತ ಬಾಲಕನ ಮೇಲೆ ಹಲ್ಲೆ ನಡೆಸಿ, ಪ್ಯಾಂಟ್‌ನಲ್ಲಿ ಚೇಳು ಬಿಟ್ಟ ಶಾಲಾ ಶಿಕ್ಷಕರು; ಮೂವರ ವಿರುದ್ಧ ಪ್ರಕರಣ ದಾಖಲು

ಎಂಟು ವರ್ಷದ ದಲಿತ ಬಾಲಕನ ಮೇಲೆ ಹಲ್ಲೆ ನಡೆಸಿ, ಆತನ ಪ್ಯಾಂಟ್‌ನಲ್ಲಿ ಚೇಳು ಬಿಟ್ಟಿದ್ದಕ್ಕಾಗಿ ಹಿಮಾಚಲ ಪ್ರದೇಶದ ಶಿಮ್ಲಾದ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯ ಸೇರಿದಂತೆ ಮೂವರು ಶಿಕ್ಷಕರ ವಿರುದ್ಧ ಭಾನುವಾರ ಪ್ರಕರಣ ದಾಖಲಿಸಲಾಗಿದೆ...