Homeಮುಖಪುಟಬಿಜೆಪಿ ನಾಯಕನ ಮನೆ ಉರುಳಿಸಿದ ಯೋಗಿ ಆದಿತ್ಯನಾಥ್ ಸರ್ಕಾರ: ಕಾರಣವೇನು?

ಬಿಜೆಪಿ ನಾಯಕನ ಮನೆ ಉರುಳಿಸಿದ ಯೋಗಿ ಆದಿತ್ಯನಾಥ್ ಸರ್ಕಾರ: ಕಾರಣವೇನು?

- Advertisement -
- Advertisement -

ನೋಯ್ಡಾದಲ್ಲಿ ಮಹಿಳೆಯೊಬ್ಬರ ಮೇಲೆ ಹಲ್ಲೆ ನಡೆಸಿದ, ಬಿಜೆಪಿ ನಾಯಕ ಎಂದು ಹೇಳಿಕೊಳ್ಳುವ ಶ್ರೀಕಾಂತ್ ತ್ಯಾಗಿ ಅವರ ಮನೆಯ ಒಂದು ಭಾಗವನ್ನು ಯೋಗಿ ಸರ್ಕಾರದ ಬುಲ್ಡೋಜರ್‌ಗಳು ಕೆಡವಿವೆ ಎಂದು ಎಎನ್‌ಐ ವರದಿ ಮಾಡಿದೆ.

ಗ್ರೀನ್‌ ಬೆಲ್ಟ್‌ಅನ್ನು ಅತಿಕ್ರಮಿಸಿದ ಆರೋಪದ ಮೇಲೆ ತ್ಯಾಗಿ ವಿರುದ್ಧ ನೋಯ್ಡಾ ಪ್ರಾಧಿಕಾರ ಮತ್ತು ಗೌತಮ್ ಬುದ್ಧ ನಗರ ಪೊಲೀಸರಿಗೆ 2019ರಲ್ಲಿ ಹೌಸಿಂಗ್ ಸೊಸೈಟಿಯ ನಿವಾಸಿಗಳು ದೂರು ನೀಡಿದ್ದರು.

ಅಕ್ಟೋಬರ್ 16, 2019ರಂದು, ನೋಯ್ಡಾ ಪ್ರಾಧಿಕಾರವು 15 ದಿನಗಳಲ್ಲಿ ಅತಿಕ್ರಮಣವನ್ನು ತೆರವು ಮಾಡುವಂತೆ ತ್ಯಾಗಿಗೆ ನೋಟಿಸ್ ನೀಡಿತ್ತು. ಆದಾಗ್ಯೂ ನೋಯ್ಡಾ ಪ್ರಾಧಿಕಾರವು ಕಳೆದ ವರ್ಷ ನೋಟಿಸ್ ಅನ್ನು ರದ್ದುಗೊಳಿಸಿದೆ ಎಂದು ತ್ಯಾಗಿ ಹೇಳಿಕೊಂಡಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸೋಮವಾರ ಬುಲ್ಡೋಜರ್‌ಗಳು ನೋಯ್ಡಾದ ಸೆಕ್ಟರ್ 93 ಬಿನಲ್ಲಿರುವ ಗ್ರ್ಯಾಂಡ್ ಓಮ್ಯಾಕ್ಸ್ ಸೊಸೈಟಿಯಲ್ಲಿರುವ ತ್ಯಾಗಿ ಅವರ ಮನೆಯ ಎರಡು ಗಾಜಿನ ಛಾವಣಿಗಳನ್ನು ಒಡೆದು ಹಾಕಿರುವುದಾಗಿ ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ.

ಬಹುಮಹಡಿ ವಸತಿ ಸಮುಚ್ಚಯದೊಳಗೆ ಮನೆ ಇರುವುದರಿಂದ ಬುಲ್ಡೋಜರ್‌ಗಳು ಹೆಚ್ಚಿನ ಪ್ರಮಾಣದಲ್ಲಿ ಧ್ವಂಸ ಮಾಡಲಾರದ ಕಾರಣ, ಅವರ ಮನೆಯ ಹಿಂದಿನ ಭಾಗದಲ್ಲಿನ ಮರದ ಫಲಕಗಳನ್ನು ಒಡೆಯಲು ಕಾರ್ಮಿಕರನ್ನು ಬಳಸಲಾಗಿದೆ.

“ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಇಡೀ ಪ್ರಕರಣವನ್ನು ಗಂಭೀರವಾಗಿ ಗಮನಿಸಿದ್ದಾರೆ. ಆರೋಪಿಗಳು ಸ್ವೇಚ್ಛೆಯಿಂದ ಇರಲು ನಾವು ಬಿಡುವುದಿಲ್ಲ” ಎಂದು ಯುಪಿ ಉಪ ಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಹೇಳಿದ್ದಾರೆ. ಕಾನೂನನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ತ್ಯಾಗಿ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 354 (ಯಾವುದೇ ಮಹಿಳೆಯ ಮೇಲೆ ಹಲ್ಲೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ತ್ಯಾಗಿ ತಲೆಮರೆಸಿಕೊಂಡಿದ್ದಾನೆ.

ಮಹಿಳೆಯೊಬ್ಬರಿಗೆ ಅಶ್ಲೀಲವಾಗಿ ನಿಂದಿಸಿ ಹಲ್ಲೆ ನಡೆಸಿದ್ದ ಶ್ರೀಕಾಂತ್‌ ತ್ಯಾಗಿ ಅವರನ್ನು ಬಂಧಿಸುವಂತೆ ರಾಷ್ಟ್ರೀಯ ಮಹಿಳಾ ಆಯೋಗ (ಎನ್‌ಸಿಡಬ್ಲ್ಯು) ಶನಿವಾರ ಹೇಳಿದೆ. ಆದರೆ ಆರೋಪಿಯು ಪರಾರಿಯಾಗಿದ್ದು, ಆತನ ಪತ್ತೆಗಾಗಿ ತಂಡವನ್ನು ರಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಎನ್‌ಸಿಡಬ್ಲ್ಯೂ ಅಧ್ಯಕ್ಷೆ ರೇಖಾ ಶರ್ಮಾ ಅವರು ಉತ್ತರ ಪ್ರದೇಶ ಡಿಜಿಪಿಗೆ ಪತ್ರ ಬರೆದು ಘಟನೆಯ ಬಗ್ಗೆ ನ್ಯಾಯಯುತ ಮತ್ತು ತ್ವರಿತ ತನಿಖೆಯನ್ನು ಖಚಿತಪಡಿಸಿಕೊಳ್ಳುವಂತೆ ಸೂಚಿಸಿದ್ದು, ದುಷ್ಕರ್ಮಿಯ ವಿರುದ್ಧ ಎಫ್‌ಐಆರ್ ದಾಖಲಿಸಿ ಅವನನ್ನು ಬಂಧಿಸುವಂತೆ ಕೋರಿದ್ದಾರೆ.

ಕಳೆದ ವಾರ ಮರಗಳನ್ನು ನೆಡುವುದನ್ನು ತಡೆಯಲು ಶ್ರೀಕಾಂತ್ ತ್ಯಾಗಿ ಪ್ರಯತ್ನಿಸಿದಾಗ ಮಹಿಳೆಯನ್ನು ನಿಂದಿಸುತ್ತಿರುವ ವಿಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿವೆ. ತ್ಯಾಗಿ ಮಹಿಳೆಯನ್ನು ತಳ್ಳುತ್ತಾನೆ. ಮತ್ತು ಆಕೆಯ ಪತಿಯನ್ನು ಅವಾಚ್ಯವಾಗಿ ನಿಂದಿಸುತ್ತಾನೆ.

ಇದನ್ನೂ ಓದಿರಿ: ಮಿತ್ರಪಕ್ಷ ಬಿಜೆಪಿ ಜೊತೆ ನಿತೀಶ್‌ ಮುನಿಸು: ಬಿಹಾರದಲ್ಲಿ ರಾಜಕೀಯ ಬಿಕ್ಕಟ್ಟು

ಅಪಾರ್ಟ್‌ಮೆಂಟ್‌ನ ಕಾಮನ್ ಏರಿಯಾ ಜಾಗವನ್ನು ಶ್ರಿಕಾಂತ್ ತ್ಯಾಗಿ ಅತಿಕ್ರಮಣ ಮಾಡಿದ್ದಾರೆ ಎಂದು ಮಹಿಳೆ ಆರೋಪಿಸಿದ್ದರು. ಈ ಕುರಿತು ಅಪಾರ್ಟ್‌ಮೆಂಟ್ ಆಡಳಿತ ಮಂಡಳಿಯ ಸದಸ್ಯರೊಂದಿಗೆ ಶ್ರೀಕಾಂತ್ ತ್ಯಾಗಿ ಬಳಿ ಚರ್ಚೆ ನಡೆಸುತ್ತಿದ್ದ ಸಂದರ್ಭದಲ್ಲಿ ಅಶ್ಲೀಲ ಶಬ್ದಗಳಿಂದ ಮಹಿಳೆಯನ್ನು ನಿಂದಿಸಿ ಹಲ್ಲೆ ನಡೆಸಿದ್ದನು.

ತ್ಯಾಗಿ ಬಿಜೆಪಿಯ ಕಿಸಾನ್ ಮೋರ್ಚಾದ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ಮತ್ತು ಆಡಳಿತ ಪಕ್ಷದ ಯುವ ಕಿಸಾನ್ ಸಮಿತಿಯ ರಾಷ್ಟ್ರೀಯ ಸಹ-ಸಂಯೋಜಕ ಎಂದು ಗುರುತಿಸಿಕೊಂಡಿದ್ದಾನೆ. ಆದರೆ, ಬಿಜೆಪಿ ನೋಯ್ಡಾ ಮಹಾನಗರ ಮುಖ್ಯಸ್ಥ ಮನೋಜ್ ಗುಪ್ತಾ ಅವರು ತ್ಯಾಗಿ ಆಡಳಿತ ಪಕ್ಷದ ಸದಸ್ಯನಲ್ಲ ಎಂದು ಹೇಳಿಕೊಂಡಿದ್ದಾರೆ.

ಇದರ ನಡುವೆ ಗ್ರ್ಯಾಂಡ್ ಓಮ್ಯಾಕ್ಸ್ ಸೊಸೈಟಿಯಲ್ಲಿ ಏಳು ಜನರು ಗಲಾಟೆ ಮಾಡಿದ ನಂತರ ನೋಯ್ಡಾ ಎರಡನೇ ಹಂತದ ಪೊಲೀಸ್ ಠಾಣೆಯ ಉಸ್ತುವಾರಿ ಸುಜಿತ್ ಉಪಾಧ್ಯಾಯ ಅವರನ್ನು ಸೋಮವಾರ ಅಮಾನತುಗೊಳಿಸಲಾಗಿದೆ ಎಂದು ನೋಯ್ಡಾ ಪೊಲೀಸ್ ಕಮಿಷನರ್ ಅಲೋಕ್ ಸಿಂಗ್ ಹೇಳಿದ್ದಾರೆ. ಏಳು ಮಂದಿಯನ್ನು ಬಂಧಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪೆಗಾಸಸ್ ಸ್ಪೈವೇರ್ ಬಳಸಿಕೋಂಡು ಆಶೀರವಾಣಿ ಮಾತಡುವ ಮಾಂತ್ರಿಕ ಮಂತೇಶ್ ಬಾಬು ಮತ್ತು ಪ್ರಸಾದ್ ಬಂಗಾರಿ ಮತ್ತು ನರಸಿಂಹ ಮೂರ್ತಿ ಇವರು ಹೆಣ್ಣು ಮಕ್ಕಳ ನ್ನು ನಿಂದಿಸುತ್ತಾರೆ ಹಾಗೆ ಅಶ್ಲೀಲ ವಾಗಿ ಮಾತಡುವುದು ತಡೆಯುವುದು ಹೇಗೆ ಮಾಂತ್ರಿಕ ತಂಡ ಬಂದ್ದು ಮೌಢ್ಯತೆ ಯನ್ನು ಜನರಿಗೆ ಮೀಸ್ ಗೈಡ್ ಮಾಡಿ ದುಡ್ಡು ಮಾಡಲೂ ಎಲ್ಲಾರಿಗೂ ಬುದ್ದಿ ಪರೀಕ್ಷೆ ಮಾಡುತ್ತಿನಿ ಅಂತಾ ದುಡ್ಡು ಮಾಡಲೂ ಶೋಷಣೆ ಮಾಡುವುದು ಭಯ ತರಿಸುವ ಆವ್ಯಾಕ್ತಾಮಾತು ಕಥೆ ಹಾಡುತ್ತಾ ಯಾರಿಗೂ ಪೆಗಾಸಸ್ ಸ್ಪೈವೇರ್ ಕಂಡುಹಿಡಿಯಕ್ಕೆ ಆಗಲ್ಲಾ ಅಂತಾ ಜನರನ್ನು ಅದರಲ್ಲೂ ದಲಿತ ಜನಾಂಗಕ್ಕೆ ಶೋಷಣೆ ಮಾಡುವುದು ಗುಲಾಮನಾಗೀ ADA Division C ಇಲ್ಲಾD ನಲ್ಲಿ ಕೆಲಸ ಮಾಡುತ್ತಾನೆ ಎಲ್ಲಾ ವ್ಯಭಿಚಾರ ಮಾಡುವ ಗ್ಯಾಂಗ್ ಮಾಂತ್ರಿಕ ರು ವರ್ಷ ದಿಂದ ಬಳಸುತ್ತಾರೆ ಚೀನದ ಟೇಕ್ನಾಲಾಜಿ 1986 ಸ್ಪೈವೇರ್ ಕಡಿಮೆ ಸಿಗ್ನಲ್ ಇತ್ತು ಇಗ ಹೇಚ್ಚು ಇದೆ ಸ್ಮಾರ್ಟ್ ಫೋನ್ ಇರುವುದರಿಂದ ಮತ್ತೆ ಹೋಸ ಪೆಗಾಸಸ್ ಸ್ಪೈವೇರ್ ಕರಿದಿ ಮಾಡಿದ್ದಾರೆ 2015 ರಿಂದ ಬಳಸುತ್ತಾರೆ ಮಾಂತ್ರಿಕ ಗ್ಯಾಂಗ್.

LEAVE A REPLY

Please enter your comment!
Please enter your name here

- Advertisment -

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...