Homeಮುಖಪುಟ'ಯೋಗಿ ಆದಿತ್ಯನಾಥ್' ಅಲ್ಲ, ಅಜಯ್ ಮೋಹನ್ ಬಿಷ್ಠ್ ಎಂದು ಕರೆಯಿರಿ!

‘ಯೋಗಿ ಆದಿತ್ಯನಾಥ್’ ಅಲ್ಲ, ಅಜಯ್ ಮೋಹನ್ ಬಿಷ್ಠ್ ಎಂದು ಕರೆಯಿರಿ!

1988ರಲ್ಲಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ ಅಜಯ್ ಮೋಹನ್ ಬಿಷ್ಠ್, ತಮ್ಮ ಹೆಸರನ್ನು ಯೋಗಿ ಆದಿತ್ಯನಾಥ್‌ ಎಂದು ಮರು ನಾಮಕರಣ ಮಾಡಿಕೊಂಡರು.

- Advertisement -
- Advertisement -

ದೇಶದಾದ್ಯಂತ ಉತ್ತರಪ್ರದೇಶದ ಹತ್ರಾಸ್ ಅತ್ಯಾಚಾರ ಪ್ರಕರಣದ ವಿರುದ್ಧ ಖಂಡನೆ ವ್ಯಕ್ತವಾಗುತ್ತಿದೆ. ಈ ಪ್ರಕರಣವನ್ನು ಅಲ್ಲಿನ ಮುಖ್ಯಮಂತ್ರಿ ನಿಭಾಯಿಸುತ್ತಿರುವ ರೀತಿಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ, ಯುಪಿ ಮುಖ್ಯಮಂತ್ರಿಯವರ ಮೂಲ ಹೆಸರಿನ ಚರ್ಚೆಯೂ ಕೂಡ ಮುನ್ನೆಲೆಗೆ ಬಂದಿದೆ. ಯೋಗಿ ಎನಿಸಿಕೊಳ್ಳಲು ಅವರು ಲಾಯಕ್ಕಿಲ್ಲ, ‘ಅಜಯ್ ಮೋಹನ್ ಬಿಷ್ಠ್’ ಎಂದು ಅವರ ಮೂಲ ಹೆಸರನ್ನು ಕರೆಯಿರಿ ಎಂದು ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಉತ್ತರಪ್ರದೇಶ: ವಾರೆಂಟ್ ಇಲ್ಲದೆ ಶೋಧಿಸುವ, ಬಂಧಿಸುವ ವಿಶೇ‍ಷ ಭದ್ರತಾ ಪಡೆ (UPSSF) ಸ್ಥಾಪನೆ!

ಉತ್ತರ ಪ್ರದೇಶದ ಹತ್ರಾಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಅಜಯ್ ಮೋಹನ್ ಬಿಷ್ಠ್ ಸರ್ಕಾರದ ನಡವಳಿಕೆ ತೀವ್ರ ಟೀಕೆಗೆ ಒಳಗಾಗಿದೆ. ಮುಖ್ಯಮಂತ್ರಿ ತಮ್ಮ ಠಾಕೂರ್ ಜಾತಿಯ ಆರೋಪಿಗಳನ್ನು ರಕ್ಷಿಸಲು ಇಡೀ ಆಡಳಿತ ಯಂತ್ರಾಂಗವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಮತ್ತು ಸಂತ್ರಸ್ತ ಕುಟುಂಬವನ್ನೇ ಆರೋಪಿ ಸ್ಥಾನದಲ್ಲಿ ನಿಲ್ಲಿಸಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ.

ಉತ್ತರ ಪ್ರದೇಶದ ಮುಖ್ಯಮಂತ್ರಿಯನ್ನು "ಯೋಗಿ" ಎಂದೇಕೆ ಕರೆಯುತ್ತೀರಿ? ಅವನ ಮೂಲ ಹೆಸರಾದ ಅಜಯ ಮೋಹನ ಬಿಷ್ತ್ ಎಂದೇ ಕರೆಯಿರಿ! ಯಾವ ಸೀಮೆಯ ಯೋಗಿ ಆತ?

Posted by Nikhil Kolpe on Thursday, October 1, 2020

ಇದನ್ನೂ ಓದಿ:ದಲಿತ ಹೆಣ್ಣುಮಕ್ಕಳ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ, ಅತ್ಯಾಚಾರದ ಈ ಅಂಕಿ-ಅಂಶಗಳನ್ನು ನೋಡಿ: ನೀವೇ ಪ್ರಶ್ನಿಸಿಕೊಳ್ಳಿ

ಅಜಯ್ ಮೋಹನ್ ಬಿಷ್ಠ್ ತಮ್ಮ 21ನೇ ವಯಸ್ಸಿನಲ್ಲಿ ಗೋರಖನಾಥ ಮಠದ ಪ್ರಧಾನ ಅರ್ಚಕ ಮಹಂತ್ ಅವಿದ್ಯಾನಾಥ್ ಅವರ ಶಿಷ್ಯರಾಗಿ ಸೇರಿದ್ದರು. ರಾಜಕಾರಣಿಯೂ ಅರ್ಚರೂ ಆಗಿದ್ದ ಮಹಂತ್‌ ಅವಿದ್ಯಾನಾಥ್‌ ಗೋರಕ್‌ಪುರ್‌ ಲೋಕಸಭಾ ಕ್ಷೇತ್ರದ ಸಂಸದರೂ ಆಗಿದ್ದರು. 1996ರಲ್ಲಿ ನಡೆದ ಚುನಾವಣೆಯಲ್ಲಿ ಅಜಯ್ ಸಿಂಗ್ ಬಿಷ್ಠ್ ಅವರು ಮಹಂತ್ ಅವಿದ್ಯಾನಾಥ್ ಅವರ ಚುನಾವಣಾ ಪ್ರಚಾರವನ್ನು ನಿರ್ವಹಿಸುವ ಉಸ್ತುವಾರಿ ವಹಿಸಿಕೊಂಡು ರಾಜಕೀಯ ಪ್ರವೇಶಿದರು.

ನಂತರದಲ್ಲಿ, 1998 ರಲ್ಲಿ, ಮಹಂತ್‌ ಅವಿದ್ಯಾನಾಥ್ ಸಕ್ರಿಯ ರಾಜಕಾರಣದಿಂದ ನಿವೃತ್ತರಾದರು. ತಮ್ಮ ನಿವೃತ್ತಿಯ ಸಂದರ್ಭದಲ್ಲಿ ಅಜಯ್ ಮೋಹನ್ ಬಿಷ್ಠ್ ಅವರನ್ನು ತಮ್ಮ ಉತ್ತರಾಧಿಕಾರಿ ಎಂದು ಘೋಷಿಸಿದರು. ನಂತರ, 1988ರಲ್ಲಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ ಅಜಯ್ ಮೋಹನ್ ಬಿಷ್ಠ್, ತಮ್ಮ ಹೆಸರನ್ನು ಯೋಗಿ ಆದಿತ್ಯಾನಾಥ್‌ ಎಂದು ಮರು ನಾಮಕರಣ ಮಾಡಿಕೊಂಡರು.

ಈಗ ಇವರ ವಿರುದ್ಧ ಭಾರಿ ಟೀಕೆ ವ್ಯಕ್ತವಾಗುತ್ತಿದೆ. ಕಾರಣ ಉತ್ತರಪ್ರದೇಶದಲ್ಲಿ ಹೆಚ್ಚುತ್ತಿರುವ ಅಪರಾಧಗಳ ಸಂಖ್ಯೆ. ಅಜಯ್ ಮೋಹನ್ ಬಿಷ್ಠ್ ಅಧಿಕಾರ ವಹಿಸಿಕೊಂಡಾಗಿನಿಂದ ರಾಜ್ಯದಲ್ಲಿ ಅಪರಾಧಗಳ ಸಂಖ್ಯೆ ಹೆಚ್ಚಾಗಿದ್ದು, ಇದರ ನಿಯಂತ್ರಣಕ್ಕೆ ಯಾವುದೇ ಸೂಕ್ತ ಕ್ರಮಕೈಗೊಳ್ಳದಿರುವುದೇ ಆಗಿದೆ. ಇನ್ನು ರಾಷ್ಟ್ರೀಯ ಅಪರಾಧ ದಾಖಲೆ ವಿಭಾಗದ (NCRB) ವರದಿಯಂತೆ, ಗೃಹ ಸಚಿವಾಲಯ (MHA) ಬಿಡುಗಡೆ ಮಾಡಿದ ದತ್ತಾಂಶಗಳ ಪ್ರಕಾರ, 2019 ಏಪ್ರಿಲ್ 1 ರಿಂದ 2020 ಮಾರ್ಚ್‌ವರೆಗೆ, ಉತ್ತರ ಪ್ರದೇಶದಲ್ಲಿ ಅತಿ ಹೆಚ್ಚು ಲಾಕಪ್ ಡೆತ್‌ ಪ್ರಕರಣಗಳು ದಾಖಲಾಗಿದೆ.

Photo Courtesy: Dhruv Rathee Facebook

ಇದನ್ನೂ ಓದಿ: ಹತ್ರಾಸ್ ಗ್ಯಾಂಗ್ ರೇಪ್: ಉತ್ತರ ಪ್ರದೇಶದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ವಕೀಲರ ಒತ್ತಾಯ

ಮಹಿಳೆಯರು ಮತ್ತು ದಲಿತರು ಮತ್ತು ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯವಂತೂ ದಿನೇ ದಿನೇ ಹೆಚ್ಚುತ್ತಲೇ ಇದೆ. ಯೋಗಿಯ ರಾಮರಾಜ್ಯ ದಲಿತರ ಪಾಲಿಗೆ ಸ್ಮಶಾನವಾಗಿದೆ ಎಂದು ಭೀಮ್‌ ಆರ್ಮಿ ಸಂಸ್ಥಾಪಕ ಚಂದ್ರಶೇಖರ್‌ ಅಜಾದ್‌ ರಾವಣ್‌ ಇತ್ತೀಚೆಗೆ ಆರೋಪಿಸಿದ್ದರು. NCRB ಪ್ರಕಾರ ಕಳೆದ 3 ವರ್ಷಗಳಲ್ಲಿ ಮಹಿಳೆಯರ ಮೇಲೆ ಅದರಲ್ಲೂ ದಲಿತ ಮಹಿಳೆಯರ ಮೇಲೆ ಹಲ್ಲೆ, ಲೈಂಗಿಕ ಕಿರುಕುಳ, ಅತ್ಯಾಚಾರ ಮತ್ತು ಕೊಲೆ ಸೇರಿದಂತೆ ಅತಿ ಹೆಚ್ಚಿನ ಪ್ರಕರಣಗಳು ದಾಖಲಾಗುತ್ತಿವೆ. NCRB ದತ್ತಾಂಶಗಳ ಪ್ರಕಾರ 2018ರಲ್ಲಿ ಸುಮಾರು 4,322 ಅತ್ಯಾಚಾರ ಪ್ರಕರಣಗಳು ಉತ್ತರಪ್ರದೇಶದಲ್ಲಿ ವರದಿಯಾಗಿವೆ. ಇನ್ನು ದಾಖಲೆಗೆ ಸಿಗದ ಸಾವಿರಾರು ಪ್ರಕರಣಗಳಿವೆ. 2017 ರಲ್ಲಿ 59,445 ಮಹಿಲೆಯರ ವಿರುದ್ಧದ ಅಪರಾಧಗಳು ದಾಖಲಾಗಿದೆ. ಇದು ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಲೇ ಇದೆ ಎಂದು ಹಲವರು ಕಳವಳ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಲಾಕಪ್ ಡೆತ್: ಉತ್ತರ ಪ್ರದೇಶದಲ್ಲಿ ಅತಿಹೆಚ್ಚು ಪ್ರಕರಣ ದಾಖಲು!

ಉತ್ತರ ಪ್ರದೇಶ ಮಕ್ಕಳ ಮೇಲೆ ದೌರ್ಜನ್ಯದಲ್ಲಿ, ದಲಿತರ ಮೇಲಿನ ದೌರ್ಜನ್ಯದಲ್ಲಿ, ಮಹಿಳೆಯರ ಮೇಲಿನ ದೌರ್ಜನ್ಯದಲ್ಲಿ, ಹತ್ಯೆಗಳಲ್ಲಿ ಒಂದನೇ ಸ್ಥಾನದಲ್ಲಿದೆ ಎಂದು ಉಲ್ಲೇಖಿಸಿ, ಪ್ರದೇಶದ ಕಾನೂನು ಮತ್ತು ಸುವ್ಯವಸ್ಥೆಯೂ ಹದಗೆಟ್ಟಿದೆ ಎಂದು ಪ್ರಿಯಾಂಕಾ ಗಾಂಧಿ ಈ ಹಿಂದೆ ಆರೋಪಿಸಿದ್ದರು.

ದೇಶದ ಪ್ರತಿಯೊಂದು ರಾಜ್ಯದಲ್ಲಿಯೂ ಅಪರಾಧ ಪ್ರಕರಣಗಳು ದಾಖಲಾಗುತ್ತವೆ. ಆದರೆ ತನಗೆ ಬೇಕಾದವರ ವಿರುದ್ಧದ ಅಪರಾಧಗಳನ್ನು ಸರ್ಕಾರವೇ ಮುಚ್ಚಿಹಾಕುವಂತಹ ಅಪರೂಪದ ಘಟನೆಗಳು ಯುಪಿಯಂತಹ ರಾಜ್ಯದಲ್ಲಿ ಮಾತ್ರ ನಡೆಯುತ್ತವೆ.

ಇದನ್ನೂ ಓದಿ: ಉತ್ತರ ಪ್ರದೇಶದ ಅತ್ಯಾಚಾರ, ಕೊಲೆ, ಕಿರುಕುಳ ಪ್ರಕರಣಗಳಿಗೆ ಇನ್ನೊಂದು ಸೇರ್ಪಡೆ; ವೈದ್ಯಕೀಯ ವಿದ್ಯಾರ್ಥಿನಿ ಶವ ಪತ್ತೆ

ಇನ್ನು ಶಿಕ್ಷಣ ವ್ಯವಸ್ಥೆಯಲ್ಲಿ ಸೇಡಿನ ರಾಜಕಾರಣ ಮಾಡುತ್ತಿರುವ ಅಜಯ್ ಸಿಂಗ್ ಬಿಷ್ಠ್ ಸರ್ಕಾರ, ಕಾಂಗ್ರೆಸ್ ನಾಯಕರಿಗೆ ಸಂಬಂಧಿಸಿದ ಮತ್ತು ಸ್ವತಂತ್ರ ಚಳುವಳಿಗೆ ಸಂಬಂಧಿಸಿದ ಪಾಠಗಳನ್ನು ಪಠ್ಯದಿಂದ ಕೈಬಿಟ್ಟಿದೆ ಎಂಬ ಆರೋಪ ಎದುರಿಸುತ್ತಿದ್ದಾರೆ

ಇದನ್ನೂ ಓದಿ: ಉತ್ತರ ಪ್ರದೇಶ: ಬ್ರಾಹ್ಮಣರ ಬಗ್ಗೆ ಸದನಕ್ಕೆ ಪ್ರಶ್ನೆ ಕೇಳಿ ತಮ್ಮದೇ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಜೆಪಿ ಶಾಸಕ

ಇತ್ತೀಚೆಗೆ ನಕಲಿ ಎನ್‌ಕೌಂಟರ್‌ಗಳಲ್ಲಿ ಉತ್ತರಪ್ರದೇಶ ದೇಶದಲ್ಲಿಯೇ ಮೊದಲ ಸ್ಥಾನದಲ್ಲಿದ್ದು, ಇದಕ್ಕೆ ಸಂಬಂಧಿಸಿದಂತೆ NCRB ದತ್ತಾಂಶಗಳು ವಿವರವಾದ ದಾಖಲೆಯನ್ನು ನೀಡುತ್ತದೆ. ಉತ್ತರಪ್ರದೇಶದಲ್ಲಿ ಗೂಂಡಾಗಳಿಗೂ ಕೂಡ ರಕ್ಷಣೆ ಕೊಡಲಾಗುತ್ತಿದೆ ಎಂದು ಹಲವರು ಆರೋಪಿಸಿದ್ದು, ಉತ್ತರಪ್ರದೇಶವನ್ನು ಜಂಗಲ್‌ರಾಜ್/ಗೂಂಡಾರಾಜ್ ಎಂದು ವಿರೋಧ ಪಕ್ಷಗಳು ಅಣಕಿಸಿವೆ. ಕೆಲವು ತಿಂಗಳುಗಳ ಹಿಂದೆ ನಡೆದ 8 ಪೊಲೀಸರ ನರಮೇಧಕ್ಕೆ ಕಾರಣಕರ್ತನಾಗಿದ್ದ ವಿಕಾಸ್‌ದುಬೆಯನ್ನು ಬಂಧಿಸಿ ಕರೆದೊಯ್ಯವ ಮಾರ್ಗಮಧ್ಯೆ ಎನ್‌ಕೌಂಟರ್ ಮಾಡಲಾಗಿತ್ತು. ಇದನ್ನು ಪೊಲೀಸರು ಮತ್ತು ಸರ್ಕಾರ ಸೇರಿ ಮಾಡಿದ ಹತ್ಯೆ ಎಂದು ಹಲವರು ಆರೋಪಿಸಿದ್ದರು. ವಿಕಾಸ್ ದುಬೆ ಬಾಯಿ ಬಿಟ್ಟರೆ ಉತ್ತರಪ್ರದೇಶ ಸರ್ಕಾರಕ್ಕೆ ತೊಂದರೆಯಾಗುತ್ತದೆ ಎಂದು ಆತನನ್ನು ಕೊಲ್ಲಲಾಗಿದೆ ಎಂದೂ ಕೆಲವರು ಅಭಿಪ್ರಾಯಪಟ್ಟಿದ್ದರು.

ಇದನ್ನೂ ಓದಿ: ಗುಂಡು ಹಾರಿಸಿ ಉತ್ತರ ಪ್ರದೇಶ ಬಿಜೆಪಿ ಮುಖಂಡನ ಹತ್ಯೆ

ವಾಕ್ ಸ್ವಾತಂತ್ರಯಕ್ಕೆ ತೊಡಕುಂಟುಮಾಡುತ್ತಿರುವ ಯುಪಿ ಸರ್ಕಾರ ಪತ್ರಕರ್ತರ ಮೇಲೆ ಹಲ್ಲೆ ಮಾಡುತ್ತಿದೆ. ಹಲವು ಪತ್ರ ಕರ್ತರನ್ನು ಬಂಧಿಸಿದ್ದಕ್ಕಾಗಿ ಸುಪ್ರೀಂ ಕೋರ್ಟ್ ಈ ಹಿಂದೆ ಸರ್ಕಾರಕ್ಕೆ ನೋಟೀಸ್ ನೀಡಿತ್ತು.

ಈ ಮೇಲಿನ ಎಲ್ಲಾ ಕಾರಣಗಳಿಂದ ವಿಪಕ್ಷಗಳು ಸೇರಿದಂತೆ ಪ್ರಜ್ಞಾವಂತ ನಾಗರೀಕರು ಅಜಯ್ ಮೋಹನ್ ಬಿಷ್ಠ್ ರಾಜಿನಾಮೆ ನೀಡಬೇಕು ಎಂದು ಒತ್ತಾಯಿಸುತ್ತಿದ್ದಾರೆ. ಸರ್ಕಾರವನ್ನು ವಜಾಗೊಳಿಸಿ ರಾಷ್ಟ್ರಪತಿ ಆಳ್ವಿಕೆ ಹೇರುವಂತೆ ಒತ್ತಾಯಿಸುತ್ತಿದ್ದಾರೆ.

ಹಾಗಾಗಿ ಇದು ಅಯೋಗ್ಯ ಸರ್ಕಾರ ಎಂದು ಹೇಳಲು ಇಂತಹ ಸಾವಿರಾರು ಉದಾಹರಣೆಗಳನ್ನು ಕೊಡಬಹುದು. ಹಾಗಾಗಿ ಯುಪಿ ಮುಖ್ಯಮಂತ್ರಿಯನ್ನು ಯೋಗಿ ಆದಿತ್ಯನಾಥ್ ಎನ್ನುವುದಕ್ಕಿಂತ, ಅವರ ಮೂಲ ಹೆಸರಾದ ‘ಅಜಯ್ ಮೋಹನ್ ಬಿಷ್ಠ್ ಎಂದು ಕರೆಯುವುದು ಉತ್ತಮ ಎಂಬುದು ಹಲವರ ಅಭಿಪ್ರಾಯವಾಗಿದೆ.


ಇದನ್ನೂ ಓದಿ: ಹತ್ರಾಸ್ ಸಂತ್ರಸ್ತೆ ತನ್ನ ಅಂತಿಮ ವಿಡಿಯೋದಲ್ಲಿ ಹೇಳಿದ್ದೇನು? ಪೋಸ್ಟ್‌ಮಾರ್ಟಂ ವರದಿ ಸುಳ್ಳೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...