Homeಮುಖಪುಟ'ಯೋಗಿ ಆದಿತ್ಯನಾಥ್' ಅಲ್ಲ, ಅಜಯ್ ಮೋಹನ್ ಬಿಷ್ಠ್ ಎಂದು ಕರೆಯಿರಿ!

‘ಯೋಗಿ ಆದಿತ್ಯನಾಥ್’ ಅಲ್ಲ, ಅಜಯ್ ಮೋಹನ್ ಬಿಷ್ಠ್ ಎಂದು ಕರೆಯಿರಿ!

1988ರಲ್ಲಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ ಅಜಯ್ ಮೋಹನ್ ಬಿಷ್ಠ್, ತಮ್ಮ ಹೆಸರನ್ನು ಯೋಗಿ ಆದಿತ್ಯನಾಥ್‌ ಎಂದು ಮರು ನಾಮಕರಣ ಮಾಡಿಕೊಂಡರು.

- Advertisement -
- Advertisement -

ದೇಶದಾದ್ಯಂತ ಉತ್ತರಪ್ರದೇಶದ ಹತ್ರಾಸ್ ಅತ್ಯಾಚಾರ ಪ್ರಕರಣದ ವಿರುದ್ಧ ಖಂಡನೆ ವ್ಯಕ್ತವಾಗುತ್ತಿದೆ. ಈ ಪ್ರಕರಣವನ್ನು ಅಲ್ಲಿನ ಮುಖ್ಯಮಂತ್ರಿ ನಿಭಾಯಿಸುತ್ತಿರುವ ರೀತಿಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ, ಯುಪಿ ಮುಖ್ಯಮಂತ್ರಿಯವರ ಮೂಲ ಹೆಸರಿನ ಚರ್ಚೆಯೂ ಕೂಡ ಮುನ್ನೆಲೆಗೆ ಬಂದಿದೆ. ಯೋಗಿ ಎನಿಸಿಕೊಳ್ಳಲು ಅವರು ಲಾಯಕ್ಕಿಲ್ಲ, ‘ಅಜಯ್ ಮೋಹನ್ ಬಿಷ್ಠ್’ ಎಂದು ಅವರ ಮೂಲ ಹೆಸರನ್ನು ಕರೆಯಿರಿ ಎಂದು ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಉತ್ತರಪ್ರದೇಶ: ವಾರೆಂಟ್ ಇಲ್ಲದೆ ಶೋಧಿಸುವ, ಬಂಧಿಸುವ ವಿಶೇ‍ಷ ಭದ್ರತಾ ಪಡೆ (UPSSF) ಸ್ಥಾಪನೆ!

ಉತ್ತರ ಪ್ರದೇಶದ ಹತ್ರಾಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಅಜಯ್ ಮೋಹನ್ ಬಿಷ್ಠ್ ಸರ್ಕಾರದ ನಡವಳಿಕೆ ತೀವ್ರ ಟೀಕೆಗೆ ಒಳಗಾಗಿದೆ. ಮುಖ್ಯಮಂತ್ರಿ ತಮ್ಮ ಠಾಕೂರ್ ಜಾತಿಯ ಆರೋಪಿಗಳನ್ನು ರಕ್ಷಿಸಲು ಇಡೀ ಆಡಳಿತ ಯಂತ್ರಾಂಗವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಮತ್ತು ಸಂತ್ರಸ್ತ ಕುಟುಂಬವನ್ನೇ ಆರೋಪಿ ಸ್ಥಾನದಲ್ಲಿ ನಿಲ್ಲಿಸಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ.

ಉತ್ತರ ಪ್ರದೇಶದ ಮುಖ್ಯಮಂತ್ರಿಯನ್ನು "ಯೋಗಿ" ಎಂದೇಕೆ ಕರೆಯುತ್ತೀರಿ? ಅವನ ಮೂಲ ಹೆಸರಾದ ಅಜಯ ಮೋಹನ ಬಿಷ್ತ್ ಎಂದೇ ಕರೆಯಿರಿ! ಯಾವ ಸೀಮೆಯ ಯೋಗಿ ಆತ?

Posted by Nikhil Kolpe on Thursday, October 1, 2020

ಇದನ್ನೂ ಓದಿ:ದಲಿತ ಹೆಣ್ಣುಮಕ್ಕಳ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ, ಅತ್ಯಾಚಾರದ ಈ ಅಂಕಿ-ಅಂಶಗಳನ್ನು ನೋಡಿ: ನೀವೇ ಪ್ರಶ್ನಿಸಿಕೊಳ್ಳಿ

ಅಜಯ್ ಮೋಹನ್ ಬಿಷ್ಠ್ ತಮ್ಮ 21ನೇ ವಯಸ್ಸಿನಲ್ಲಿ ಗೋರಖನಾಥ ಮಠದ ಪ್ರಧಾನ ಅರ್ಚಕ ಮಹಂತ್ ಅವಿದ್ಯಾನಾಥ್ ಅವರ ಶಿಷ್ಯರಾಗಿ ಸೇರಿದ್ದರು. ರಾಜಕಾರಣಿಯೂ ಅರ್ಚರೂ ಆಗಿದ್ದ ಮಹಂತ್‌ ಅವಿದ್ಯಾನಾಥ್‌ ಗೋರಕ್‌ಪುರ್‌ ಲೋಕಸಭಾ ಕ್ಷೇತ್ರದ ಸಂಸದರೂ ಆಗಿದ್ದರು. 1996ರಲ್ಲಿ ನಡೆದ ಚುನಾವಣೆಯಲ್ಲಿ ಅಜಯ್ ಸಿಂಗ್ ಬಿಷ್ಠ್ ಅವರು ಮಹಂತ್ ಅವಿದ್ಯಾನಾಥ್ ಅವರ ಚುನಾವಣಾ ಪ್ರಚಾರವನ್ನು ನಿರ್ವಹಿಸುವ ಉಸ್ತುವಾರಿ ವಹಿಸಿಕೊಂಡು ರಾಜಕೀಯ ಪ್ರವೇಶಿದರು.

ನಂತರದಲ್ಲಿ, 1998 ರಲ್ಲಿ, ಮಹಂತ್‌ ಅವಿದ್ಯಾನಾಥ್ ಸಕ್ರಿಯ ರಾಜಕಾರಣದಿಂದ ನಿವೃತ್ತರಾದರು. ತಮ್ಮ ನಿವೃತ್ತಿಯ ಸಂದರ್ಭದಲ್ಲಿ ಅಜಯ್ ಮೋಹನ್ ಬಿಷ್ಠ್ ಅವರನ್ನು ತಮ್ಮ ಉತ್ತರಾಧಿಕಾರಿ ಎಂದು ಘೋಷಿಸಿದರು. ನಂತರ, 1988ರಲ್ಲಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ ಅಜಯ್ ಮೋಹನ್ ಬಿಷ್ಠ್, ತಮ್ಮ ಹೆಸರನ್ನು ಯೋಗಿ ಆದಿತ್ಯಾನಾಥ್‌ ಎಂದು ಮರು ನಾಮಕರಣ ಮಾಡಿಕೊಂಡರು.

ಈಗ ಇವರ ವಿರುದ್ಧ ಭಾರಿ ಟೀಕೆ ವ್ಯಕ್ತವಾಗುತ್ತಿದೆ. ಕಾರಣ ಉತ್ತರಪ್ರದೇಶದಲ್ಲಿ ಹೆಚ್ಚುತ್ತಿರುವ ಅಪರಾಧಗಳ ಸಂಖ್ಯೆ. ಅಜಯ್ ಮೋಹನ್ ಬಿಷ್ಠ್ ಅಧಿಕಾರ ವಹಿಸಿಕೊಂಡಾಗಿನಿಂದ ರಾಜ್ಯದಲ್ಲಿ ಅಪರಾಧಗಳ ಸಂಖ್ಯೆ ಹೆಚ್ಚಾಗಿದ್ದು, ಇದರ ನಿಯಂತ್ರಣಕ್ಕೆ ಯಾವುದೇ ಸೂಕ್ತ ಕ್ರಮಕೈಗೊಳ್ಳದಿರುವುದೇ ಆಗಿದೆ. ಇನ್ನು ರಾಷ್ಟ್ರೀಯ ಅಪರಾಧ ದಾಖಲೆ ವಿಭಾಗದ (NCRB) ವರದಿಯಂತೆ, ಗೃಹ ಸಚಿವಾಲಯ (MHA) ಬಿಡುಗಡೆ ಮಾಡಿದ ದತ್ತಾಂಶಗಳ ಪ್ರಕಾರ, 2019 ಏಪ್ರಿಲ್ 1 ರಿಂದ 2020 ಮಾರ್ಚ್‌ವರೆಗೆ, ಉತ್ತರ ಪ್ರದೇಶದಲ್ಲಿ ಅತಿ ಹೆಚ್ಚು ಲಾಕಪ್ ಡೆತ್‌ ಪ್ರಕರಣಗಳು ದಾಖಲಾಗಿದೆ.

Photo Courtesy: Dhruv Rathee Facebook

ಇದನ್ನೂ ಓದಿ: ಹತ್ರಾಸ್ ಗ್ಯಾಂಗ್ ರೇಪ್: ಉತ್ತರ ಪ್ರದೇಶದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ವಕೀಲರ ಒತ್ತಾಯ

ಮಹಿಳೆಯರು ಮತ್ತು ದಲಿತರು ಮತ್ತು ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯವಂತೂ ದಿನೇ ದಿನೇ ಹೆಚ್ಚುತ್ತಲೇ ಇದೆ. ಯೋಗಿಯ ರಾಮರಾಜ್ಯ ದಲಿತರ ಪಾಲಿಗೆ ಸ್ಮಶಾನವಾಗಿದೆ ಎಂದು ಭೀಮ್‌ ಆರ್ಮಿ ಸಂಸ್ಥಾಪಕ ಚಂದ್ರಶೇಖರ್‌ ಅಜಾದ್‌ ರಾವಣ್‌ ಇತ್ತೀಚೆಗೆ ಆರೋಪಿಸಿದ್ದರು. NCRB ಪ್ರಕಾರ ಕಳೆದ 3 ವರ್ಷಗಳಲ್ಲಿ ಮಹಿಳೆಯರ ಮೇಲೆ ಅದರಲ್ಲೂ ದಲಿತ ಮಹಿಳೆಯರ ಮೇಲೆ ಹಲ್ಲೆ, ಲೈಂಗಿಕ ಕಿರುಕುಳ, ಅತ್ಯಾಚಾರ ಮತ್ತು ಕೊಲೆ ಸೇರಿದಂತೆ ಅತಿ ಹೆಚ್ಚಿನ ಪ್ರಕರಣಗಳು ದಾಖಲಾಗುತ್ತಿವೆ. NCRB ದತ್ತಾಂಶಗಳ ಪ್ರಕಾರ 2018ರಲ್ಲಿ ಸುಮಾರು 4,322 ಅತ್ಯಾಚಾರ ಪ್ರಕರಣಗಳು ಉತ್ತರಪ್ರದೇಶದಲ್ಲಿ ವರದಿಯಾಗಿವೆ. ಇನ್ನು ದಾಖಲೆಗೆ ಸಿಗದ ಸಾವಿರಾರು ಪ್ರಕರಣಗಳಿವೆ. 2017 ರಲ್ಲಿ 59,445 ಮಹಿಲೆಯರ ವಿರುದ್ಧದ ಅಪರಾಧಗಳು ದಾಖಲಾಗಿದೆ. ಇದು ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಲೇ ಇದೆ ಎಂದು ಹಲವರು ಕಳವಳ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಲಾಕಪ್ ಡೆತ್: ಉತ್ತರ ಪ್ರದೇಶದಲ್ಲಿ ಅತಿಹೆಚ್ಚು ಪ್ರಕರಣ ದಾಖಲು!

ಉತ್ತರ ಪ್ರದೇಶ ಮಕ್ಕಳ ಮೇಲೆ ದೌರ್ಜನ್ಯದಲ್ಲಿ, ದಲಿತರ ಮೇಲಿನ ದೌರ್ಜನ್ಯದಲ್ಲಿ, ಮಹಿಳೆಯರ ಮೇಲಿನ ದೌರ್ಜನ್ಯದಲ್ಲಿ, ಹತ್ಯೆಗಳಲ್ಲಿ ಒಂದನೇ ಸ್ಥಾನದಲ್ಲಿದೆ ಎಂದು ಉಲ್ಲೇಖಿಸಿ, ಪ್ರದೇಶದ ಕಾನೂನು ಮತ್ತು ಸುವ್ಯವಸ್ಥೆಯೂ ಹದಗೆಟ್ಟಿದೆ ಎಂದು ಪ್ರಿಯಾಂಕಾ ಗಾಂಧಿ ಈ ಹಿಂದೆ ಆರೋಪಿಸಿದ್ದರು.

ದೇಶದ ಪ್ರತಿಯೊಂದು ರಾಜ್ಯದಲ್ಲಿಯೂ ಅಪರಾಧ ಪ್ರಕರಣಗಳು ದಾಖಲಾಗುತ್ತವೆ. ಆದರೆ ತನಗೆ ಬೇಕಾದವರ ವಿರುದ್ಧದ ಅಪರಾಧಗಳನ್ನು ಸರ್ಕಾರವೇ ಮುಚ್ಚಿಹಾಕುವಂತಹ ಅಪರೂಪದ ಘಟನೆಗಳು ಯುಪಿಯಂತಹ ರಾಜ್ಯದಲ್ಲಿ ಮಾತ್ರ ನಡೆಯುತ್ತವೆ.

ಇದನ್ನೂ ಓದಿ: ಉತ್ತರ ಪ್ರದೇಶದ ಅತ್ಯಾಚಾರ, ಕೊಲೆ, ಕಿರುಕುಳ ಪ್ರಕರಣಗಳಿಗೆ ಇನ್ನೊಂದು ಸೇರ್ಪಡೆ; ವೈದ್ಯಕೀಯ ವಿದ್ಯಾರ್ಥಿನಿ ಶವ ಪತ್ತೆ

ಇನ್ನು ಶಿಕ್ಷಣ ವ್ಯವಸ್ಥೆಯಲ್ಲಿ ಸೇಡಿನ ರಾಜಕಾರಣ ಮಾಡುತ್ತಿರುವ ಅಜಯ್ ಸಿಂಗ್ ಬಿಷ್ಠ್ ಸರ್ಕಾರ, ಕಾಂಗ್ರೆಸ್ ನಾಯಕರಿಗೆ ಸಂಬಂಧಿಸಿದ ಮತ್ತು ಸ್ವತಂತ್ರ ಚಳುವಳಿಗೆ ಸಂಬಂಧಿಸಿದ ಪಾಠಗಳನ್ನು ಪಠ್ಯದಿಂದ ಕೈಬಿಟ್ಟಿದೆ ಎಂಬ ಆರೋಪ ಎದುರಿಸುತ್ತಿದ್ದಾರೆ

ಇದನ್ನೂ ಓದಿ: ಉತ್ತರ ಪ್ರದೇಶ: ಬ್ರಾಹ್ಮಣರ ಬಗ್ಗೆ ಸದನಕ್ಕೆ ಪ್ರಶ್ನೆ ಕೇಳಿ ತಮ್ಮದೇ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಜೆಪಿ ಶಾಸಕ

ಇತ್ತೀಚೆಗೆ ನಕಲಿ ಎನ್‌ಕೌಂಟರ್‌ಗಳಲ್ಲಿ ಉತ್ತರಪ್ರದೇಶ ದೇಶದಲ್ಲಿಯೇ ಮೊದಲ ಸ್ಥಾನದಲ್ಲಿದ್ದು, ಇದಕ್ಕೆ ಸಂಬಂಧಿಸಿದಂತೆ NCRB ದತ್ತಾಂಶಗಳು ವಿವರವಾದ ದಾಖಲೆಯನ್ನು ನೀಡುತ್ತದೆ. ಉತ್ತರಪ್ರದೇಶದಲ್ಲಿ ಗೂಂಡಾಗಳಿಗೂ ಕೂಡ ರಕ್ಷಣೆ ಕೊಡಲಾಗುತ್ತಿದೆ ಎಂದು ಹಲವರು ಆರೋಪಿಸಿದ್ದು, ಉತ್ತರಪ್ರದೇಶವನ್ನು ಜಂಗಲ್‌ರಾಜ್/ಗೂಂಡಾರಾಜ್ ಎಂದು ವಿರೋಧ ಪಕ್ಷಗಳು ಅಣಕಿಸಿವೆ. ಕೆಲವು ತಿಂಗಳುಗಳ ಹಿಂದೆ ನಡೆದ 8 ಪೊಲೀಸರ ನರಮೇಧಕ್ಕೆ ಕಾರಣಕರ್ತನಾಗಿದ್ದ ವಿಕಾಸ್‌ದುಬೆಯನ್ನು ಬಂಧಿಸಿ ಕರೆದೊಯ್ಯವ ಮಾರ್ಗಮಧ್ಯೆ ಎನ್‌ಕೌಂಟರ್ ಮಾಡಲಾಗಿತ್ತು. ಇದನ್ನು ಪೊಲೀಸರು ಮತ್ತು ಸರ್ಕಾರ ಸೇರಿ ಮಾಡಿದ ಹತ್ಯೆ ಎಂದು ಹಲವರು ಆರೋಪಿಸಿದ್ದರು. ವಿಕಾಸ್ ದುಬೆ ಬಾಯಿ ಬಿಟ್ಟರೆ ಉತ್ತರಪ್ರದೇಶ ಸರ್ಕಾರಕ್ಕೆ ತೊಂದರೆಯಾಗುತ್ತದೆ ಎಂದು ಆತನನ್ನು ಕೊಲ್ಲಲಾಗಿದೆ ಎಂದೂ ಕೆಲವರು ಅಭಿಪ್ರಾಯಪಟ್ಟಿದ್ದರು.

ಇದನ್ನೂ ಓದಿ: ಗುಂಡು ಹಾರಿಸಿ ಉತ್ತರ ಪ್ರದೇಶ ಬಿಜೆಪಿ ಮುಖಂಡನ ಹತ್ಯೆ

ವಾಕ್ ಸ್ವಾತಂತ್ರಯಕ್ಕೆ ತೊಡಕುಂಟುಮಾಡುತ್ತಿರುವ ಯುಪಿ ಸರ್ಕಾರ ಪತ್ರಕರ್ತರ ಮೇಲೆ ಹಲ್ಲೆ ಮಾಡುತ್ತಿದೆ. ಹಲವು ಪತ್ರ ಕರ್ತರನ್ನು ಬಂಧಿಸಿದ್ದಕ್ಕಾಗಿ ಸುಪ್ರೀಂ ಕೋರ್ಟ್ ಈ ಹಿಂದೆ ಸರ್ಕಾರಕ್ಕೆ ನೋಟೀಸ್ ನೀಡಿತ್ತು.

ಈ ಮೇಲಿನ ಎಲ್ಲಾ ಕಾರಣಗಳಿಂದ ವಿಪಕ್ಷಗಳು ಸೇರಿದಂತೆ ಪ್ರಜ್ಞಾವಂತ ನಾಗರೀಕರು ಅಜಯ್ ಮೋಹನ್ ಬಿಷ್ಠ್ ರಾಜಿನಾಮೆ ನೀಡಬೇಕು ಎಂದು ಒತ್ತಾಯಿಸುತ್ತಿದ್ದಾರೆ. ಸರ್ಕಾರವನ್ನು ವಜಾಗೊಳಿಸಿ ರಾಷ್ಟ್ರಪತಿ ಆಳ್ವಿಕೆ ಹೇರುವಂತೆ ಒತ್ತಾಯಿಸುತ್ತಿದ್ದಾರೆ.

ಹಾಗಾಗಿ ಇದು ಅಯೋಗ್ಯ ಸರ್ಕಾರ ಎಂದು ಹೇಳಲು ಇಂತಹ ಸಾವಿರಾರು ಉದಾಹರಣೆಗಳನ್ನು ಕೊಡಬಹುದು. ಹಾಗಾಗಿ ಯುಪಿ ಮುಖ್ಯಮಂತ್ರಿಯನ್ನು ಯೋಗಿ ಆದಿತ್ಯನಾಥ್ ಎನ್ನುವುದಕ್ಕಿಂತ, ಅವರ ಮೂಲ ಹೆಸರಾದ ‘ಅಜಯ್ ಮೋಹನ್ ಬಿಷ್ಠ್ ಎಂದು ಕರೆಯುವುದು ಉತ್ತಮ ಎಂಬುದು ಹಲವರ ಅಭಿಪ್ರಾಯವಾಗಿದೆ.


ಇದನ್ನೂ ಓದಿ: ಹತ್ರಾಸ್ ಸಂತ್ರಸ್ತೆ ತನ್ನ ಅಂತಿಮ ವಿಡಿಯೋದಲ್ಲಿ ಹೇಳಿದ್ದೇನು? ಪೋಸ್ಟ್‌ಮಾರ್ಟಂ ವರದಿ ಸುಳ್ಳೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...