HomeಮುಖಪುಟANI ಪತ್ರಕರ್ತನನ್ನು ಕೆಟ್ಟ ಪದ ಬಳಸಿ ನಿಂದಿಸಿದ ಯುಪಿ ಸಿಎಂ ಯೋಗಿ: ವಿಡಿಯೋ ನಿಜವೆಂದ ಆಲ್ಟ್‌ನ್ಯೂಸ್‌

ANI ಪತ್ರಕರ್ತನನ್ನು ಕೆಟ್ಟ ಪದ ಬಳಸಿ ನಿಂದಿಸಿದ ಯುಪಿ ಸಿಎಂ ಯೋಗಿ: ವಿಡಿಯೋ ನಿಜವೆಂದ ಆಲ್ಟ್‌ನ್ಯೂಸ್‌

- Advertisement -
- Advertisement -

ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ANI ಪತ್ರಕರ್ತನ ಮೇಲೆ ಅಶ್ಲೀಲ ಬೈಗುಳಗಳ ದಾಳಿ ನಡೆಸಿದ ವಿಡಿಯೊ ಒಂದು ಈಗ ವೈರಲ್ ಆಗಿದೆ. ಅವರ ಮಾಧ್ಯಮ ಸಲಹೆಗಾರ ಫ್ಯಾಕ್ಟ್‌ಚೆಕ್‌ ಒಂದನ್ನು ಹಂಚಿಕೊಂಡಿದ್ದು, ವಿಡಿಯೋದ ಕೊನೆಯ ಭಾಗವನ್ನು ತಿರುಚಿ ಎಡಿಟ್‌ ಮಾಡಲಾಗಿದೆ ಎಂದು ಸಮಜಾಯಿಷಿ ನೀಡಿದ್ದಾರೆ.

 

ಟ್ವಿಟ್ಟರ್ ಬಳಕೆದಾರರು ಹಂಚಿಕೊಂಡಿರುವ ಈ ವಿಡಿಯೋದಲ್ಲಿ, ಯೋಗಿ ಆದಿತ್ಯನಾಥ್ ಅವರು ಸುದ್ದಿ ಸಂಸ್ಥೆ ಎಎನ್‌ಐನ ಕ್ಯಾಮೆರಾಮನ್ ಕುರಿತು ಅಸಭ್ಯವಾಗಿ ಮಾತಾಡುವ ಹೊತ್ತಿನಲ್ಲಿ ಕಟ್ ಆಗುತ್ತದೆ. ಇಂದು ಬೆಳಿಗ್ಗೆ ಕೋವಿಡ್ ಲಸಿಕೆಯ ಮೊದಲ ಶಾಟ್ ತೆಗೆದುಕೊಂಡು ಕೇಂದ್ರ ಆರೋಗ್ಯ ಸಚಿವಾಲಯ ಮತ್ತು ದೇಶದ ವಿಜ್ಞಾನಿಗಳಿಗೆ ಧನ್ಯವಾದ ಹೇಳಿದ ನಂತರ ಮುಖ್ಯಮಂತ್ರಿ ಮಾತನಾಡುತ್ತಿದ್ದರು.

ವೀಡಿಯೊವನ್ನು ಹೆಚ್ಚು ಹೆಚ್ಚು ಆನ್‌ಲೈನ್‌ನಲ್ಲಿ ಜನರು ವೀಕ್ಷಿಸುತ್ತಿದ್ದಂತೆ, ಮುಖ್ಯಮಂತ್ರಿಯ ಮಾಧ್ಯಮ ಸಲಹೆಗಾರ ಶಲಾಭ್ ಮಣಿ ತ್ರಿಪಾಠಿ ಅವರು “ಬ್ರೇಕಿಂಗ್ ಟ್ಯೂಬ್” ಎಂಬ ವೆಬ್‌ಸೈಟ್‌ನ ‘ಫ್ಯಾಕ್ಟ್ ಚೆಕ್’ ವರದಿಯನ್ನು ರಿಟ್ವೀಟ್ ಮಾಡಿದ್ದಾರೆ. ಈ ವರದಿಯ ಪ್ರಕಾರ ವಿಡಿಯೋ ಕ್ಲಿಪ್‌ನ ಕೊನೆಯ ಮೂರು ಸೆಕೆಂಡುಗಳನ್ನು (ಯೋಗಿಯ ಬೈಗುಳ ಇರುವ ಕ್ಷಣಗಳು) ತಿರುಚಲಾಗಿದೆ ಎಂದು ಆರೋಪಿಸಿದ್ದಾರೆ.

ಸಿಎಂ ಸಲಹೆಗಾರರು ನೀಡಿದ ಫ್ಯಾಕ್ಟ್‌ಚೆಕ್ ವರದಿಯಲ್ಲಿ ಫ್ಯಾಕ್ಟ್ ಚೆಕ್ ಬಗ್ಗೆ ಯಾವುದೇ ವಿವರಗಳಿಲ್ಲ, ಅವರ “ನಕಲಿ” ವಿಡಿಯೋವನ್ನು ಪ್ರಸಾರ ಮಾಡಿದವರ ವಿರುದ್ಧ ಕ್ರಮಕೈಗೊಳ್ಳಲು ಮುಖ್ಯಮಂತ್ರಿ ಆದೇಶಿಸಿದ್ದಾರೆ ಎಂದು ಮಾತ್ರ ಅದು ಹೇಳುತ್ತದೆ.

ಟ್ವಿಟ್ಟರ್‌ನಲ್ಲಿ ಯೋಗಿ ಅವರನ್ನು ತರಾಟೆಗೆ ತೆಗೆದುಕೊಂಡ ಹಲವರಲ್ಲಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಕೂಡ ಪ್ರಮುಖರು. “ದಯವಿಟ್ಟು ಈ ’ಗಣ್ಯವ್ಯಕ್ತಿ’ಯಿಂದ ಪತ್ರಕರ್ತರಿಗೆ ಸಲ್ಲಿಕೆಯಾದ ಸಿಹಿ ಪದಗಳನ್ನು ಕೇಳಿ. ಆದರೆ ಹೆಡ್‌ಫೋನ್‌ಗಳನ್ನು ಬಳಸಿ ಮತ್ತು ಮಕ್ಕಳಿಂದ ದೂರವಿರಿ; ಎಂದು ಅವರು ಹಿಂದಿಯಲ್ಲಿ ಟ್ವೀಟ್ ಮಾಡಿದ್ದು, ವೀಡಿಯೊವನ್ನು ಹಂಚಿಕೊಂಡಿಲ್ಲ.

ಎಎನ್‌ಐ ಹೊಸ ಐದು ನಿಮಿಷಗಳ ಯೋಗಿ ಆದಿತ್ಯನಾಥ್ ಅವರ ವಿಡಿಯೋ ಅನ್ನು ಟ್ವೀಟ್ ಮಾಡಿದೆ. ಮತ್ತು ಟ್ವೀಟ್‌ನಲ್ಲಿ ಹೀಗೆ ಹೇಳಿದೆ – “ಸಂಪಾದಕರ ಟಿಪ್ಪಣಿ: ಈ ಹಿಂದೆ ನೀಡಲಾದ ಲೈವ್ ಸೌಂಡ್ ಬೈಟ್ ಅನ್ನು ಹಿಂತೆಗೆದುಕೊಳ್ಳಲಾಗಿದೆ” ಎಂದು ಬರೆಯಲಾಗಿದೆ.

ನಿವೃತ್ತ ಐಎಎಸ್ ಅಧಿಕಾರಿ ಸೂರ್ಯ ಪ್ರತಾಪ್ ಸಿಂಗ್ ಅವರ ಟ್ವೀಟ್‌ನಲ್ಲಿ ಈ ವಿಡಿಯೋ ಮೊದಲು ಹೊರಬಿದ್ದಿದೆ. “ಇದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ನಿಜವಾದ ಮುಖ. ಸಂತನ ಭಾಷೆಯನ್ನು ಆಲಿಸಿ” ಎಂದು ಹಿಂದಿಯಲ್ಲಿ ಅವರು ಟ್ವೀಟ್ ಮಾಡಿದ್ದರು.
ಇತ್ತ ಉತ್ತರಪ್ರದೇಶದಲ್ಲಿ ಕನಿಷ್ಠ ಎರಡು ಪ್ರಾದೇಶಿಕ ಚಾನೆಲ್‌ಗಳ ಬೆಳಗಿನ ಪ್ರಸಾರದ ನಂತರ ವೀಡಿಯೊಗಳು ಸಾರ್ವತ್ರಿಕವಾದವು.

ವಿಡಿಯೋ ಎಡಿಟ್ ಮಾಡಿಲ್ಲ: ಆಲ್ಟ್‌ನ್ಯೂಸ್‌ ವರದಿ

ಇನ್ನು ಯುಪಿ ಸಿಎಂ ಅಶ್ಲೀಲವಾಗಿ ಬೈದಿರುವ ವಿಡಿಯೋವನ್ನು ಕೊನೆಯ ಮೂರು ಸೆಕೆಂಡ್‌ಗಳು ಎಡಿಟ್ ಮಾಡಿಲ್ಲ ಎಂದು ಆಲ್ಟ್‌ನ್ಯೂಸ್ ವರದಿ ಮಾಡಿದೆ.

ಆಲ್ಟ್ ನ್ಯೂಸ್ ಎಎನ್‌ಐ ಪ್ರಧಾನ ಸಂಪಾದಕಿ ಸ್ಮಿತಾ ಪ್ರಕಾಶ್ ಅವರನ್ನು ಸಂಪರ್ಕಿಸಿದಾಗ “ನಾನು ನಿಮ್ಮೊಂದಿಗೆ ಮಾತನಾಡಲು ಆಸಕ್ತಿ ಹೊಂದಿಲ್ಲ” ಎಂದು ಅವರು ಫೋನ್ ಕಟ್ ಮಾಡುವ ಮೊದಲು ಹೇಳಿದರು. ಎಎನ್‌ಐ ಯುಪಿ ಬ್ಯೂರೋ ಮುಖ್ಯಸ್ಥ ಕಮ್ನಾ ಹಜೇಲಾ ಅವರು ವಿಡಿಯೋ ಬಗ್ಗೆ ಕೇಳಿದಾಗ ಕರೆ ಸಂಪರ್ಕ ಕಡಿತಗೊಳಿಸಿದ್ದಾರೆ” ಎಂದು ಅದು ವರದಿಯಲ್ಲಿ ತಿಳಿಸಿದೆ.

ಎಎನ್‌ಐ ಆ ಅಶ್ಲೀಲ ಬೈಗುಳದ ವೀಡಿಯೊವನ್ನು ಹಿಂತೆಗೆದುಕೊಂಡರೂ, ಅದು ಇತರ ಚಾನೆಲ್‌ಗಳ ಪ್ರಸಾರಗಳಲ್ಲಿ ಇನ್ನೂ ಲಭ್ಯವಿದೆ. ಎಬಿಪಿ ಗಂಗಾ, ನ್ಯೂಸ್‌18 ಉತ್ತರ ಪ್ರದೇಶ, ಫಸ್ಟ್‌ ನ್ಯೂಸ್‌ ರಾಜಸ್ಥಾನ್ ಚಾನೆಲ್‌ಗಳು ಅದನ್ನು ಪ್ರಸಾರ ಮಾಡಿವೆ.

ದೀಪಕ್ ಚೌರಾಸಿಯ, ಒಪಿಇಂಡಿಯಾ ಸೇರಿದಂತೆ ಹಲವು ಸಾಮಾಜಿಕ ಜಾಲತಾಣಗಳ ಮೂಲಕ ಆದಿತ್ಯನಾಥ್ ಅವರ ರಕ್ಷಣೆಗೆ ಬಿಜೆಪಿ ಪರ ಟ್ವಿಟರ್ ಹ್ಯಾಂಡಲ್‌ಗಳು ಬಂದಿವೆ. ವೈರಲ್ ಕ್ಲಿಪ್ ಅನ್ನು ಎಡಿಟ್ ಮಾಡಲಾಗಿದೆ ಎಂದು ಸಾಬೀತುಪಡಿಸುವ ಪ್ರಯತ್ನದಲ್ಲಿ ಆ ಮೂರು ಸೆಕೆಂಡುಗಳ ಹೊರತಾಗಿ, ಹೊಸದಾಗಿ ಎಎನ್‌ಐ ಟ್ವೀಟ್ ಮಾಡಿದ ಎರಡನೇ ವಿಡಿಯೋದಲ್ಲಿ ಅದೇ ಪದಗಳನ್ನು ಬಳಸಿ ಯೋಗಿ ಆದಿತ್ಯನಾಥ್ ಮಾತನಾಡಿದ್ದಾರೆ ಎಂದು ಸಮರ್ಥಿಸಿಕೊಳ್ಳಲಾಗಿದೆ. ಆದರೆ ಆ ಮಾತುಗಳಲ್ಲಿ ಹಲವು ಬದಲಾವಣೆಗಳನ್ನು ಕಾಣಬಹುದಾಗಿದೆ.

ಮೊದಲ ವಿಡಿಯೋದಲ್ಲಿ ಯುಪಿ ಸಿಎಂ ಹೀಗೆ ಹೇಳುತ್ತಾರೆ. “ಕೋವಿಡ್ ಲಸಿಕೆ ಉಚಿತವಾಗಿ ನೀಡಿದ್ದಕ್ಕಾಗಿ ಗೌರವಾನ್ವಿತ ಪ್ರಧಾನ ಮಂತ್ರಿ, ಕೇಂದ್ರ ಆರೋಗ್ಯ ಸಚಿವಾಲಯಕ್ಕೆ ನನ್ನ ಹೃದಯಪೂರ್ವಕ ಧನ್ಯವಾದಗಳು. ನಾನು ದೇಶದ ವಿಜ್ಞಾನಿಗಳಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ನೀವು ಏನು ಮಾಡುತ್ತಿದ್ದೀರಿ,  ******”… ಇದರಲ್ಲಿ ಆರೋಗ್ಯ ಸಚಿವಾಲಯದ ಉಲ್ಲೇಖವನ್ನು ಎಎನ್‌ಐ ಕೂಡ ಟ್ವೀಟ್ ಮಾಡಿದೆ.

ಆದರೆ ನಂತರ ಚಿತ್ರೀಕರಿಸಿರುವ 5 ನಿಮಿಷಗಳ ವಿಡಿಯೋದಲ್ಲಿ “ಕೇಂದ್ರ ಆರೋಗ್ಯ ಸಚಿವಾಲಯದ ಬಗ್ಗೆ ಸಿಎಂ ಉಲ್ಲೇಖಿಸಿಲ್ಲ. “ದೇಶದ ನಾಗರಿಕರಿಗೆ COVID ಲಸಿಕೆ ಉಚಿತವಾಗಿ ನೀಡಿದ ಗೌರವಾನ್ವಿತ ಪ್ರಧಾನಿಗೆ ನಾನು ಧನ್ಯವಾದ ಅರ್ಪಿಸುತ್ತೇನೆ. ಭಾರತದಲ್ಲಿ ಈ ಸಮಯಕ್ಕೆ ಎರಡು ಲಸಿಕೆಗಳನ್ನು ಬಿಡುಗಡೆ ಮಾಡಿದ ಎಲ್ಲ ವಿಜ್ಞಾನಿಗಳಿಗೆ ನಾನು ಧನ್ಯವಾದ ಅರ್ಪಿಸುತ್ತೇನೆ… ” ಎಂದಷ್ಟೇ ಅವರು ಹೇಳಿದ್ದಾರೆ.

ಹಾಗಾಗಿ ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನಿಜಕ್ಕೂ ಎಎನ್‌ಐ ಸಿಬ್ಬಂದಿಯ ಸಮ್ಮುಖದಲ್ಲಿ ನಿಂದನೀಯ ಪದವನ್ನು ಬಳಸಿದ್ದಾರೆ. ವೀಡಿಯೊವನ್ನು ಎಡಿಟ್ ಮಾಡಲಾಗಿದೆ ಎಂಬ ಪ್ರತಿಪಾದನೆ ಸುಳ್ಳಾಗಿದೆ. ಎಲ್ಲಕ್ಕಿಂತ ಮುಖ್ಯವಾಗಿ ವಿವಾದದ ಕೇಂದ್ರದಲ್ಲಿರುವ ಎಎನ್‌ಐ ಈ ವಿಚಾರದ ಬಗ್ಗೆ ಪ್ರತಿಕ್ರಿಯಿಸದಿರಲು ನಿರ್ಧರಿಸಿದೆ.


ಇದನ್ನೂ ಓದಿ: ತನ್ನ ವಿರುದ್ಧದ ಮಾನಹಾನಿ ಪ್ರಕರಣ ರದ್ದತಿ ಕೋರಿ ಕಂಗನಾ ಸಲ್ಲಿಸಿದ ಅರ್ಜಿ ವಜಾಗೊಳಿಸಿದ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...