HomeಮುಖಪುಟANI ಪತ್ರಕರ್ತನನ್ನು ಕೆಟ್ಟ ಪದ ಬಳಸಿ ನಿಂದಿಸಿದ ಯುಪಿ ಸಿಎಂ ಯೋಗಿ: ವಿಡಿಯೋ ನಿಜವೆಂದ ಆಲ್ಟ್‌ನ್ಯೂಸ್‌

ANI ಪತ್ರಕರ್ತನನ್ನು ಕೆಟ್ಟ ಪದ ಬಳಸಿ ನಿಂದಿಸಿದ ಯುಪಿ ಸಿಎಂ ಯೋಗಿ: ವಿಡಿಯೋ ನಿಜವೆಂದ ಆಲ್ಟ್‌ನ್ಯೂಸ್‌

- Advertisement -
- Advertisement -

ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ANI ಪತ್ರಕರ್ತನ ಮೇಲೆ ಅಶ್ಲೀಲ ಬೈಗುಳಗಳ ದಾಳಿ ನಡೆಸಿದ ವಿಡಿಯೊ ಒಂದು ಈಗ ವೈರಲ್ ಆಗಿದೆ. ಅವರ ಮಾಧ್ಯಮ ಸಲಹೆಗಾರ ಫ್ಯಾಕ್ಟ್‌ಚೆಕ್‌ ಒಂದನ್ನು ಹಂಚಿಕೊಂಡಿದ್ದು, ವಿಡಿಯೋದ ಕೊನೆಯ ಭಾಗವನ್ನು ತಿರುಚಿ ಎಡಿಟ್‌ ಮಾಡಲಾಗಿದೆ ಎಂದು ಸಮಜಾಯಿಷಿ ನೀಡಿದ್ದಾರೆ.

 

ಟ್ವಿಟ್ಟರ್ ಬಳಕೆದಾರರು ಹಂಚಿಕೊಂಡಿರುವ ಈ ವಿಡಿಯೋದಲ್ಲಿ, ಯೋಗಿ ಆದಿತ್ಯನಾಥ್ ಅವರು ಸುದ್ದಿ ಸಂಸ್ಥೆ ಎಎನ್‌ಐನ ಕ್ಯಾಮೆರಾಮನ್ ಕುರಿತು ಅಸಭ್ಯವಾಗಿ ಮಾತಾಡುವ ಹೊತ್ತಿನಲ್ಲಿ ಕಟ್ ಆಗುತ್ತದೆ. ಇಂದು ಬೆಳಿಗ್ಗೆ ಕೋವಿಡ್ ಲಸಿಕೆಯ ಮೊದಲ ಶಾಟ್ ತೆಗೆದುಕೊಂಡು ಕೇಂದ್ರ ಆರೋಗ್ಯ ಸಚಿವಾಲಯ ಮತ್ತು ದೇಶದ ವಿಜ್ಞಾನಿಗಳಿಗೆ ಧನ್ಯವಾದ ಹೇಳಿದ ನಂತರ ಮುಖ್ಯಮಂತ್ರಿ ಮಾತನಾಡುತ್ತಿದ್ದರು.

ವೀಡಿಯೊವನ್ನು ಹೆಚ್ಚು ಹೆಚ್ಚು ಆನ್‌ಲೈನ್‌ನಲ್ಲಿ ಜನರು ವೀಕ್ಷಿಸುತ್ತಿದ್ದಂತೆ, ಮುಖ್ಯಮಂತ್ರಿಯ ಮಾಧ್ಯಮ ಸಲಹೆಗಾರ ಶಲಾಭ್ ಮಣಿ ತ್ರಿಪಾಠಿ ಅವರು “ಬ್ರೇಕಿಂಗ್ ಟ್ಯೂಬ್” ಎಂಬ ವೆಬ್‌ಸೈಟ್‌ನ ‘ಫ್ಯಾಕ್ಟ್ ಚೆಕ್’ ವರದಿಯನ್ನು ರಿಟ್ವೀಟ್ ಮಾಡಿದ್ದಾರೆ. ಈ ವರದಿಯ ಪ್ರಕಾರ ವಿಡಿಯೋ ಕ್ಲಿಪ್‌ನ ಕೊನೆಯ ಮೂರು ಸೆಕೆಂಡುಗಳನ್ನು (ಯೋಗಿಯ ಬೈಗುಳ ಇರುವ ಕ್ಷಣಗಳು) ತಿರುಚಲಾಗಿದೆ ಎಂದು ಆರೋಪಿಸಿದ್ದಾರೆ.

ಸಿಎಂ ಸಲಹೆಗಾರರು ನೀಡಿದ ಫ್ಯಾಕ್ಟ್‌ಚೆಕ್ ವರದಿಯಲ್ಲಿ ಫ್ಯಾಕ್ಟ್ ಚೆಕ್ ಬಗ್ಗೆ ಯಾವುದೇ ವಿವರಗಳಿಲ್ಲ, ಅವರ “ನಕಲಿ” ವಿಡಿಯೋವನ್ನು ಪ್ರಸಾರ ಮಾಡಿದವರ ವಿರುದ್ಧ ಕ್ರಮಕೈಗೊಳ್ಳಲು ಮುಖ್ಯಮಂತ್ರಿ ಆದೇಶಿಸಿದ್ದಾರೆ ಎಂದು ಮಾತ್ರ ಅದು ಹೇಳುತ್ತದೆ.

ಟ್ವಿಟ್ಟರ್‌ನಲ್ಲಿ ಯೋಗಿ ಅವರನ್ನು ತರಾಟೆಗೆ ತೆಗೆದುಕೊಂಡ ಹಲವರಲ್ಲಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಕೂಡ ಪ್ರಮುಖರು. “ದಯವಿಟ್ಟು ಈ ’ಗಣ್ಯವ್ಯಕ್ತಿ’ಯಿಂದ ಪತ್ರಕರ್ತರಿಗೆ ಸಲ್ಲಿಕೆಯಾದ ಸಿಹಿ ಪದಗಳನ್ನು ಕೇಳಿ. ಆದರೆ ಹೆಡ್‌ಫೋನ್‌ಗಳನ್ನು ಬಳಸಿ ಮತ್ತು ಮಕ್ಕಳಿಂದ ದೂರವಿರಿ; ಎಂದು ಅವರು ಹಿಂದಿಯಲ್ಲಿ ಟ್ವೀಟ್ ಮಾಡಿದ್ದು, ವೀಡಿಯೊವನ್ನು ಹಂಚಿಕೊಂಡಿಲ್ಲ.

ಎಎನ್‌ಐ ಹೊಸ ಐದು ನಿಮಿಷಗಳ ಯೋಗಿ ಆದಿತ್ಯನಾಥ್ ಅವರ ವಿಡಿಯೋ ಅನ್ನು ಟ್ವೀಟ್ ಮಾಡಿದೆ. ಮತ್ತು ಟ್ವೀಟ್‌ನಲ್ಲಿ ಹೀಗೆ ಹೇಳಿದೆ – “ಸಂಪಾದಕರ ಟಿಪ್ಪಣಿ: ಈ ಹಿಂದೆ ನೀಡಲಾದ ಲೈವ್ ಸೌಂಡ್ ಬೈಟ್ ಅನ್ನು ಹಿಂತೆಗೆದುಕೊಳ್ಳಲಾಗಿದೆ” ಎಂದು ಬರೆಯಲಾಗಿದೆ.

ನಿವೃತ್ತ ಐಎಎಸ್ ಅಧಿಕಾರಿ ಸೂರ್ಯ ಪ್ರತಾಪ್ ಸಿಂಗ್ ಅವರ ಟ್ವೀಟ್‌ನಲ್ಲಿ ಈ ವಿಡಿಯೋ ಮೊದಲು ಹೊರಬಿದ್ದಿದೆ. “ಇದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ನಿಜವಾದ ಮುಖ. ಸಂತನ ಭಾಷೆಯನ್ನು ಆಲಿಸಿ” ಎಂದು ಹಿಂದಿಯಲ್ಲಿ ಅವರು ಟ್ವೀಟ್ ಮಾಡಿದ್ದರು.
ಇತ್ತ ಉತ್ತರಪ್ರದೇಶದಲ್ಲಿ ಕನಿಷ್ಠ ಎರಡು ಪ್ರಾದೇಶಿಕ ಚಾನೆಲ್‌ಗಳ ಬೆಳಗಿನ ಪ್ರಸಾರದ ನಂತರ ವೀಡಿಯೊಗಳು ಸಾರ್ವತ್ರಿಕವಾದವು.

ವಿಡಿಯೋ ಎಡಿಟ್ ಮಾಡಿಲ್ಲ: ಆಲ್ಟ್‌ನ್ಯೂಸ್‌ ವರದಿ

ಇನ್ನು ಯುಪಿ ಸಿಎಂ ಅಶ್ಲೀಲವಾಗಿ ಬೈದಿರುವ ವಿಡಿಯೋವನ್ನು ಕೊನೆಯ ಮೂರು ಸೆಕೆಂಡ್‌ಗಳು ಎಡಿಟ್ ಮಾಡಿಲ್ಲ ಎಂದು ಆಲ್ಟ್‌ನ್ಯೂಸ್ ವರದಿ ಮಾಡಿದೆ.

ಆಲ್ಟ್ ನ್ಯೂಸ್ ಎಎನ್‌ಐ ಪ್ರಧಾನ ಸಂಪಾದಕಿ ಸ್ಮಿತಾ ಪ್ರಕಾಶ್ ಅವರನ್ನು ಸಂಪರ್ಕಿಸಿದಾಗ “ನಾನು ನಿಮ್ಮೊಂದಿಗೆ ಮಾತನಾಡಲು ಆಸಕ್ತಿ ಹೊಂದಿಲ್ಲ” ಎಂದು ಅವರು ಫೋನ್ ಕಟ್ ಮಾಡುವ ಮೊದಲು ಹೇಳಿದರು. ಎಎನ್‌ಐ ಯುಪಿ ಬ್ಯೂರೋ ಮುಖ್ಯಸ್ಥ ಕಮ್ನಾ ಹಜೇಲಾ ಅವರು ವಿಡಿಯೋ ಬಗ್ಗೆ ಕೇಳಿದಾಗ ಕರೆ ಸಂಪರ್ಕ ಕಡಿತಗೊಳಿಸಿದ್ದಾರೆ” ಎಂದು ಅದು ವರದಿಯಲ್ಲಿ ತಿಳಿಸಿದೆ.

ಎಎನ್‌ಐ ಆ ಅಶ್ಲೀಲ ಬೈಗುಳದ ವೀಡಿಯೊವನ್ನು ಹಿಂತೆಗೆದುಕೊಂಡರೂ, ಅದು ಇತರ ಚಾನೆಲ್‌ಗಳ ಪ್ರಸಾರಗಳಲ್ಲಿ ಇನ್ನೂ ಲಭ್ಯವಿದೆ. ಎಬಿಪಿ ಗಂಗಾ, ನ್ಯೂಸ್‌18 ಉತ್ತರ ಪ್ರದೇಶ, ಫಸ್ಟ್‌ ನ್ಯೂಸ್‌ ರಾಜಸ್ಥಾನ್ ಚಾನೆಲ್‌ಗಳು ಅದನ್ನು ಪ್ರಸಾರ ಮಾಡಿವೆ.

ದೀಪಕ್ ಚೌರಾಸಿಯ, ಒಪಿಇಂಡಿಯಾ ಸೇರಿದಂತೆ ಹಲವು ಸಾಮಾಜಿಕ ಜಾಲತಾಣಗಳ ಮೂಲಕ ಆದಿತ್ಯನಾಥ್ ಅವರ ರಕ್ಷಣೆಗೆ ಬಿಜೆಪಿ ಪರ ಟ್ವಿಟರ್ ಹ್ಯಾಂಡಲ್‌ಗಳು ಬಂದಿವೆ. ವೈರಲ್ ಕ್ಲಿಪ್ ಅನ್ನು ಎಡಿಟ್ ಮಾಡಲಾಗಿದೆ ಎಂದು ಸಾಬೀತುಪಡಿಸುವ ಪ್ರಯತ್ನದಲ್ಲಿ ಆ ಮೂರು ಸೆಕೆಂಡುಗಳ ಹೊರತಾಗಿ, ಹೊಸದಾಗಿ ಎಎನ್‌ಐ ಟ್ವೀಟ್ ಮಾಡಿದ ಎರಡನೇ ವಿಡಿಯೋದಲ್ಲಿ ಅದೇ ಪದಗಳನ್ನು ಬಳಸಿ ಯೋಗಿ ಆದಿತ್ಯನಾಥ್ ಮಾತನಾಡಿದ್ದಾರೆ ಎಂದು ಸಮರ್ಥಿಸಿಕೊಳ್ಳಲಾಗಿದೆ. ಆದರೆ ಆ ಮಾತುಗಳಲ್ಲಿ ಹಲವು ಬದಲಾವಣೆಗಳನ್ನು ಕಾಣಬಹುದಾಗಿದೆ.

ಮೊದಲ ವಿಡಿಯೋದಲ್ಲಿ ಯುಪಿ ಸಿಎಂ ಹೀಗೆ ಹೇಳುತ್ತಾರೆ. “ಕೋವಿಡ್ ಲಸಿಕೆ ಉಚಿತವಾಗಿ ನೀಡಿದ್ದಕ್ಕಾಗಿ ಗೌರವಾನ್ವಿತ ಪ್ರಧಾನ ಮಂತ್ರಿ, ಕೇಂದ್ರ ಆರೋಗ್ಯ ಸಚಿವಾಲಯಕ್ಕೆ ನನ್ನ ಹೃದಯಪೂರ್ವಕ ಧನ್ಯವಾದಗಳು. ನಾನು ದೇಶದ ವಿಜ್ಞಾನಿಗಳಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ನೀವು ಏನು ಮಾಡುತ್ತಿದ್ದೀರಿ,  ******”… ಇದರಲ್ಲಿ ಆರೋಗ್ಯ ಸಚಿವಾಲಯದ ಉಲ್ಲೇಖವನ್ನು ಎಎನ್‌ಐ ಕೂಡ ಟ್ವೀಟ್ ಮಾಡಿದೆ.

ಆದರೆ ನಂತರ ಚಿತ್ರೀಕರಿಸಿರುವ 5 ನಿಮಿಷಗಳ ವಿಡಿಯೋದಲ್ಲಿ “ಕೇಂದ್ರ ಆರೋಗ್ಯ ಸಚಿವಾಲಯದ ಬಗ್ಗೆ ಸಿಎಂ ಉಲ್ಲೇಖಿಸಿಲ್ಲ. “ದೇಶದ ನಾಗರಿಕರಿಗೆ COVID ಲಸಿಕೆ ಉಚಿತವಾಗಿ ನೀಡಿದ ಗೌರವಾನ್ವಿತ ಪ್ರಧಾನಿಗೆ ನಾನು ಧನ್ಯವಾದ ಅರ್ಪಿಸುತ್ತೇನೆ. ಭಾರತದಲ್ಲಿ ಈ ಸಮಯಕ್ಕೆ ಎರಡು ಲಸಿಕೆಗಳನ್ನು ಬಿಡುಗಡೆ ಮಾಡಿದ ಎಲ್ಲ ವಿಜ್ಞಾನಿಗಳಿಗೆ ನಾನು ಧನ್ಯವಾದ ಅರ್ಪಿಸುತ್ತೇನೆ… ” ಎಂದಷ್ಟೇ ಅವರು ಹೇಳಿದ್ದಾರೆ.

ಹಾಗಾಗಿ ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನಿಜಕ್ಕೂ ಎಎನ್‌ಐ ಸಿಬ್ಬಂದಿಯ ಸಮ್ಮುಖದಲ್ಲಿ ನಿಂದನೀಯ ಪದವನ್ನು ಬಳಸಿದ್ದಾರೆ. ವೀಡಿಯೊವನ್ನು ಎಡಿಟ್ ಮಾಡಲಾಗಿದೆ ಎಂಬ ಪ್ರತಿಪಾದನೆ ಸುಳ್ಳಾಗಿದೆ. ಎಲ್ಲಕ್ಕಿಂತ ಮುಖ್ಯವಾಗಿ ವಿವಾದದ ಕೇಂದ್ರದಲ್ಲಿರುವ ಎಎನ್‌ಐ ಈ ವಿಚಾರದ ಬಗ್ಗೆ ಪ್ರತಿಕ್ರಿಯಿಸದಿರಲು ನಿರ್ಧರಿಸಿದೆ.


ಇದನ್ನೂ ಓದಿ: ತನ್ನ ವಿರುದ್ಧದ ಮಾನಹಾನಿ ಪ್ರಕರಣ ರದ್ದತಿ ಕೋರಿ ಕಂಗನಾ ಸಲ್ಲಿಸಿದ ಅರ್ಜಿ ವಜಾಗೊಳಿಸಿದ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...