HomeಮುಖಪುಟANI ಪತ್ರಕರ್ತನನ್ನು ಕೆಟ್ಟ ಪದ ಬಳಸಿ ನಿಂದಿಸಿದ ಯುಪಿ ಸಿಎಂ ಯೋಗಿ: ವಿಡಿಯೋ ನಿಜವೆಂದ ಆಲ್ಟ್‌ನ್ಯೂಸ್‌

ANI ಪತ್ರಕರ್ತನನ್ನು ಕೆಟ್ಟ ಪದ ಬಳಸಿ ನಿಂದಿಸಿದ ಯುಪಿ ಸಿಎಂ ಯೋಗಿ: ವಿಡಿಯೋ ನಿಜವೆಂದ ಆಲ್ಟ್‌ನ್ಯೂಸ್‌

- Advertisement -
- Advertisement -

ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ANI ಪತ್ರಕರ್ತನ ಮೇಲೆ ಅಶ್ಲೀಲ ಬೈಗುಳಗಳ ದಾಳಿ ನಡೆಸಿದ ವಿಡಿಯೊ ಒಂದು ಈಗ ವೈರಲ್ ಆಗಿದೆ. ಅವರ ಮಾಧ್ಯಮ ಸಲಹೆಗಾರ ಫ್ಯಾಕ್ಟ್‌ಚೆಕ್‌ ಒಂದನ್ನು ಹಂಚಿಕೊಂಡಿದ್ದು, ವಿಡಿಯೋದ ಕೊನೆಯ ಭಾಗವನ್ನು ತಿರುಚಿ ಎಡಿಟ್‌ ಮಾಡಲಾಗಿದೆ ಎಂದು ಸಮಜಾಯಿಷಿ ನೀಡಿದ್ದಾರೆ.

 

ಟ್ವಿಟ್ಟರ್ ಬಳಕೆದಾರರು ಹಂಚಿಕೊಂಡಿರುವ ಈ ವಿಡಿಯೋದಲ್ಲಿ, ಯೋಗಿ ಆದಿತ್ಯನಾಥ್ ಅವರು ಸುದ್ದಿ ಸಂಸ್ಥೆ ಎಎನ್‌ಐನ ಕ್ಯಾಮೆರಾಮನ್ ಕುರಿತು ಅಸಭ್ಯವಾಗಿ ಮಾತಾಡುವ ಹೊತ್ತಿನಲ್ಲಿ ಕಟ್ ಆಗುತ್ತದೆ. ಇಂದು ಬೆಳಿಗ್ಗೆ ಕೋವಿಡ್ ಲಸಿಕೆಯ ಮೊದಲ ಶಾಟ್ ತೆಗೆದುಕೊಂಡು ಕೇಂದ್ರ ಆರೋಗ್ಯ ಸಚಿವಾಲಯ ಮತ್ತು ದೇಶದ ವಿಜ್ಞಾನಿಗಳಿಗೆ ಧನ್ಯವಾದ ಹೇಳಿದ ನಂತರ ಮುಖ್ಯಮಂತ್ರಿ ಮಾತನಾಡುತ್ತಿದ್ದರು.

ವೀಡಿಯೊವನ್ನು ಹೆಚ್ಚು ಹೆಚ್ಚು ಆನ್‌ಲೈನ್‌ನಲ್ಲಿ ಜನರು ವೀಕ್ಷಿಸುತ್ತಿದ್ದಂತೆ, ಮುಖ್ಯಮಂತ್ರಿಯ ಮಾಧ್ಯಮ ಸಲಹೆಗಾರ ಶಲಾಭ್ ಮಣಿ ತ್ರಿಪಾಠಿ ಅವರು “ಬ್ರೇಕಿಂಗ್ ಟ್ಯೂಬ್” ಎಂಬ ವೆಬ್‌ಸೈಟ್‌ನ ‘ಫ್ಯಾಕ್ಟ್ ಚೆಕ್’ ವರದಿಯನ್ನು ರಿಟ್ವೀಟ್ ಮಾಡಿದ್ದಾರೆ. ಈ ವರದಿಯ ಪ್ರಕಾರ ವಿಡಿಯೋ ಕ್ಲಿಪ್‌ನ ಕೊನೆಯ ಮೂರು ಸೆಕೆಂಡುಗಳನ್ನು (ಯೋಗಿಯ ಬೈಗುಳ ಇರುವ ಕ್ಷಣಗಳು) ತಿರುಚಲಾಗಿದೆ ಎಂದು ಆರೋಪಿಸಿದ್ದಾರೆ.

ಸಿಎಂ ಸಲಹೆಗಾರರು ನೀಡಿದ ಫ್ಯಾಕ್ಟ್‌ಚೆಕ್ ವರದಿಯಲ್ಲಿ ಫ್ಯಾಕ್ಟ್ ಚೆಕ್ ಬಗ್ಗೆ ಯಾವುದೇ ವಿವರಗಳಿಲ್ಲ, ಅವರ “ನಕಲಿ” ವಿಡಿಯೋವನ್ನು ಪ್ರಸಾರ ಮಾಡಿದವರ ವಿರುದ್ಧ ಕ್ರಮಕೈಗೊಳ್ಳಲು ಮುಖ್ಯಮಂತ್ರಿ ಆದೇಶಿಸಿದ್ದಾರೆ ಎಂದು ಮಾತ್ರ ಅದು ಹೇಳುತ್ತದೆ.

ಟ್ವಿಟ್ಟರ್‌ನಲ್ಲಿ ಯೋಗಿ ಅವರನ್ನು ತರಾಟೆಗೆ ತೆಗೆದುಕೊಂಡ ಹಲವರಲ್ಲಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಕೂಡ ಪ್ರಮುಖರು. “ದಯವಿಟ್ಟು ಈ ’ಗಣ್ಯವ್ಯಕ್ತಿ’ಯಿಂದ ಪತ್ರಕರ್ತರಿಗೆ ಸಲ್ಲಿಕೆಯಾದ ಸಿಹಿ ಪದಗಳನ್ನು ಕೇಳಿ. ಆದರೆ ಹೆಡ್‌ಫೋನ್‌ಗಳನ್ನು ಬಳಸಿ ಮತ್ತು ಮಕ್ಕಳಿಂದ ದೂರವಿರಿ; ಎಂದು ಅವರು ಹಿಂದಿಯಲ್ಲಿ ಟ್ವೀಟ್ ಮಾಡಿದ್ದು, ವೀಡಿಯೊವನ್ನು ಹಂಚಿಕೊಂಡಿಲ್ಲ.

ಎಎನ್‌ಐ ಹೊಸ ಐದು ನಿಮಿಷಗಳ ಯೋಗಿ ಆದಿತ್ಯನಾಥ್ ಅವರ ವಿಡಿಯೋ ಅನ್ನು ಟ್ವೀಟ್ ಮಾಡಿದೆ. ಮತ್ತು ಟ್ವೀಟ್‌ನಲ್ಲಿ ಹೀಗೆ ಹೇಳಿದೆ – “ಸಂಪಾದಕರ ಟಿಪ್ಪಣಿ: ಈ ಹಿಂದೆ ನೀಡಲಾದ ಲೈವ್ ಸೌಂಡ್ ಬೈಟ್ ಅನ್ನು ಹಿಂತೆಗೆದುಕೊಳ್ಳಲಾಗಿದೆ” ಎಂದು ಬರೆಯಲಾಗಿದೆ.

ನಿವೃತ್ತ ಐಎಎಸ್ ಅಧಿಕಾರಿ ಸೂರ್ಯ ಪ್ರತಾಪ್ ಸಿಂಗ್ ಅವರ ಟ್ವೀಟ್‌ನಲ್ಲಿ ಈ ವಿಡಿಯೋ ಮೊದಲು ಹೊರಬಿದ್ದಿದೆ. “ಇದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ನಿಜವಾದ ಮುಖ. ಸಂತನ ಭಾಷೆಯನ್ನು ಆಲಿಸಿ” ಎಂದು ಹಿಂದಿಯಲ್ಲಿ ಅವರು ಟ್ವೀಟ್ ಮಾಡಿದ್ದರು.
ಇತ್ತ ಉತ್ತರಪ್ರದೇಶದಲ್ಲಿ ಕನಿಷ್ಠ ಎರಡು ಪ್ರಾದೇಶಿಕ ಚಾನೆಲ್‌ಗಳ ಬೆಳಗಿನ ಪ್ರಸಾರದ ನಂತರ ವೀಡಿಯೊಗಳು ಸಾರ್ವತ್ರಿಕವಾದವು.

ವಿಡಿಯೋ ಎಡಿಟ್ ಮಾಡಿಲ್ಲ: ಆಲ್ಟ್‌ನ್ಯೂಸ್‌ ವರದಿ

ಇನ್ನು ಯುಪಿ ಸಿಎಂ ಅಶ್ಲೀಲವಾಗಿ ಬೈದಿರುವ ವಿಡಿಯೋವನ್ನು ಕೊನೆಯ ಮೂರು ಸೆಕೆಂಡ್‌ಗಳು ಎಡಿಟ್ ಮಾಡಿಲ್ಲ ಎಂದು ಆಲ್ಟ್‌ನ್ಯೂಸ್ ವರದಿ ಮಾಡಿದೆ.

ಆಲ್ಟ್ ನ್ಯೂಸ್ ಎಎನ್‌ಐ ಪ್ರಧಾನ ಸಂಪಾದಕಿ ಸ್ಮಿತಾ ಪ್ರಕಾಶ್ ಅವರನ್ನು ಸಂಪರ್ಕಿಸಿದಾಗ “ನಾನು ನಿಮ್ಮೊಂದಿಗೆ ಮಾತನಾಡಲು ಆಸಕ್ತಿ ಹೊಂದಿಲ್ಲ” ಎಂದು ಅವರು ಫೋನ್ ಕಟ್ ಮಾಡುವ ಮೊದಲು ಹೇಳಿದರು. ಎಎನ್‌ಐ ಯುಪಿ ಬ್ಯೂರೋ ಮುಖ್ಯಸ್ಥ ಕಮ್ನಾ ಹಜೇಲಾ ಅವರು ವಿಡಿಯೋ ಬಗ್ಗೆ ಕೇಳಿದಾಗ ಕರೆ ಸಂಪರ್ಕ ಕಡಿತಗೊಳಿಸಿದ್ದಾರೆ” ಎಂದು ಅದು ವರದಿಯಲ್ಲಿ ತಿಳಿಸಿದೆ.

ಎಎನ್‌ಐ ಆ ಅಶ್ಲೀಲ ಬೈಗುಳದ ವೀಡಿಯೊವನ್ನು ಹಿಂತೆಗೆದುಕೊಂಡರೂ, ಅದು ಇತರ ಚಾನೆಲ್‌ಗಳ ಪ್ರಸಾರಗಳಲ್ಲಿ ಇನ್ನೂ ಲಭ್ಯವಿದೆ. ಎಬಿಪಿ ಗಂಗಾ, ನ್ಯೂಸ್‌18 ಉತ್ತರ ಪ್ರದೇಶ, ಫಸ್ಟ್‌ ನ್ಯೂಸ್‌ ರಾಜಸ್ಥಾನ್ ಚಾನೆಲ್‌ಗಳು ಅದನ್ನು ಪ್ರಸಾರ ಮಾಡಿವೆ.

ದೀಪಕ್ ಚೌರಾಸಿಯ, ಒಪಿಇಂಡಿಯಾ ಸೇರಿದಂತೆ ಹಲವು ಸಾಮಾಜಿಕ ಜಾಲತಾಣಗಳ ಮೂಲಕ ಆದಿತ್ಯನಾಥ್ ಅವರ ರಕ್ಷಣೆಗೆ ಬಿಜೆಪಿ ಪರ ಟ್ವಿಟರ್ ಹ್ಯಾಂಡಲ್‌ಗಳು ಬಂದಿವೆ. ವೈರಲ್ ಕ್ಲಿಪ್ ಅನ್ನು ಎಡಿಟ್ ಮಾಡಲಾಗಿದೆ ಎಂದು ಸಾಬೀತುಪಡಿಸುವ ಪ್ರಯತ್ನದಲ್ಲಿ ಆ ಮೂರು ಸೆಕೆಂಡುಗಳ ಹೊರತಾಗಿ, ಹೊಸದಾಗಿ ಎಎನ್‌ಐ ಟ್ವೀಟ್ ಮಾಡಿದ ಎರಡನೇ ವಿಡಿಯೋದಲ್ಲಿ ಅದೇ ಪದಗಳನ್ನು ಬಳಸಿ ಯೋಗಿ ಆದಿತ್ಯನಾಥ್ ಮಾತನಾಡಿದ್ದಾರೆ ಎಂದು ಸಮರ್ಥಿಸಿಕೊಳ್ಳಲಾಗಿದೆ. ಆದರೆ ಆ ಮಾತುಗಳಲ್ಲಿ ಹಲವು ಬದಲಾವಣೆಗಳನ್ನು ಕಾಣಬಹುದಾಗಿದೆ.

ಮೊದಲ ವಿಡಿಯೋದಲ್ಲಿ ಯುಪಿ ಸಿಎಂ ಹೀಗೆ ಹೇಳುತ್ತಾರೆ. “ಕೋವಿಡ್ ಲಸಿಕೆ ಉಚಿತವಾಗಿ ನೀಡಿದ್ದಕ್ಕಾಗಿ ಗೌರವಾನ್ವಿತ ಪ್ರಧಾನ ಮಂತ್ರಿ, ಕೇಂದ್ರ ಆರೋಗ್ಯ ಸಚಿವಾಲಯಕ್ಕೆ ನನ್ನ ಹೃದಯಪೂರ್ವಕ ಧನ್ಯವಾದಗಳು. ನಾನು ದೇಶದ ವಿಜ್ಞಾನಿಗಳಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ನೀವು ಏನು ಮಾಡುತ್ತಿದ್ದೀರಿ,  ******”… ಇದರಲ್ಲಿ ಆರೋಗ್ಯ ಸಚಿವಾಲಯದ ಉಲ್ಲೇಖವನ್ನು ಎಎನ್‌ಐ ಕೂಡ ಟ್ವೀಟ್ ಮಾಡಿದೆ.

ಆದರೆ ನಂತರ ಚಿತ್ರೀಕರಿಸಿರುವ 5 ನಿಮಿಷಗಳ ವಿಡಿಯೋದಲ್ಲಿ “ಕೇಂದ್ರ ಆರೋಗ್ಯ ಸಚಿವಾಲಯದ ಬಗ್ಗೆ ಸಿಎಂ ಉಲ್ಲೇಖಿಸಿಲ್ಲ. “ದೇಶದ ನಾಗರಿಕರಿಗೆ COVID ಲಸಿಕೆ ಉಚಿತವಾಗಿ ನೀಡಿದ ಗೌರವಾನ್ವಿತ ಪ್ರಧಾನಿಗೆ ನಾನು ಧನ್ಯವಾದ ಅರ್ಪಿಸುತ್ತೇನೆ. ಭಾರತದಲ್ಲಿ ಈ ಸಮಯಕ್ಕೆ ಎರಡು ಲಸಿಕೆಗಳನ್ನು ಬಿಡುಗಡೆ ಮಾಡಿದ ಎಲ್ಲ ವಿಜ್ಞಾನಿಗಳಿಗೆ ನಾನು ಧನ್ಯವಾದ ಅರ್ಪಿಸುತ್ತೇನೆ… ” ಎಂದಷ್ಟೇ ಅವರು ಹೇಳಿದ್ದಾರೆ.

ಹಾಗಾಗಿ ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನಿಜಕ್ಕೂ ಎಎನ್‌ಐ ಸಿಬ್ಬಂದಿಯ ಸಮ್ಮುಖದಲ್ಲಿ ನಿಂದನೀಯ ಪದವನ್ನು ಬಳಸಿದ್ದಾರೆ. ವೀಡಿಯೊವನ್ನು ಎಡಿಟ್ ಮಾಡಲಾಗಿದೆ ಎಂಬ ಪ್ರತಿಪಾದನೆ ಸುಳ್ಳಾಗಿದೆ. ಎಲ್ಲಕ್ಕಿಂತ ಮುಖ್ಯವಾಗಿ ವಿವಾದದ ಕೇಂದ್ರದಲ್ಲಿರುವ ಎಎನ್‌ಐ ಈ ವಿಚಾರದ ಬಗ್ಗೆ ಪ್ರತಿಕ್ರಿಯಿಸದಿರಲು ನಿರ್ಧರಿಸಿದೆ.


ಇದನ್ನೂ ಓದಿ: ತನ್ನ ವಿರುದ್ಧದ ಮಾನಹಾನಿ ಪ್ರಕರಣ ರದ್ದತಿ ಕೋರಿ ಕಂಗನಾ ಸಲ್ಲಿಸಿದ ಅರ್ಜಿ ವಜಾಗೊಳಿಸಿದ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...