HomeಮುಖಪುಟANI ಪತ್ರಕರ್ತನನ್ನು ಕೆಟ್ಟ ಪದ ಬಳಸಿ ನಿಂದಿಸಿದ ಯುಪಿ ಸಿಎಂ ಯೋಗಿ: ವಿಡಿಯೋ ನಿಜವೆಂದ ಆಲ್ಟ್‌ನ್ಯೂಸ್‌

ANI ಪತ್ರಕರ್ತನನ್ನು ಕೆಟ್ಟ ಪದ ಬಳಸಿ ನಿಂದಿಸಿದ ಯುಪಿ ಸಿಎಂ ಯೋಗಿ: ವಿಡಿಯೋ ನಿಜವೆಂದ ಆಲ್ಟ್‌ನ್ಯೂಸ್‌

- Advertisement -
- Advertisement -

ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ANI ಪತ್ರಕರ್ತನ ಮೇಲೆ ಅಶ್ಲೀಲ ಬೈಗುಳಗಳ ದಾಳಿ ನಡೆಸಿದ ವಿಡಿಯೊ ಒಂದು ಈಗ ವೈರಲ್ ಆಗಿದೆ. ಅವರ ಮಾಧ್ಯಮ ಸಲಹೆಗಾರ ಫ್ಯಾಕ್ಟ್‌ಚೆಕ್‌ ಒಂದನ್ನು ಹಂಚಿಕೊಂಡಿದ್ದು, ವಿಡಿಯೋದ ಕೊನೆಯ ಭಾಗವನ್ನು ತಿರುಚಿ ಎಡಿಟ್‌ ಮಾಡಲಾಗಿದೆ ಎಂದು ಸಮಜಾಯಿಷಿ ನೀಡಿದ್ದಾರೆ.

 

ಟ್ವಿಟ್ಟರ್ ಬಳಕೆದಾರರು ಹಂಚಿಕೊಂಡಿರುವ ಈ ವಿಡಿಯೋದಲ್ಲಿ, ಯೋಗಿ ಆದಿತ್ಯನಾಥ್ ಅವರು ಸುದ್ದಿ ಸಂಸ್ಥೆ ಎಎನ್‌ಐನ ಕ್ಯಾಮೆರಾಮನ್ ಕುರಿತು ಅಸಭ್ಯವಾಗಿ ಮಾತಾಡುವ ಹೊತ್ತಿನಲ್ಲಿ ಕಟ್ ಆಗುತ್ತದೆ. ಇಂದು ಬೆಳಿಗ್ಗೆ ಕೋವಿಡ್ ಲಸಿಕೆಯ ಮೊದಲ ಶಾಟ್ ತೆಗೆದುಕೊಂಡು ಕೇಂದ್ರ ಆರೋಗ್ಯ ಸಚಿವಾಲಯ ಮತ್ತು ದೇಶದ ವಿಜ್ಞಾನಿಗಳಿಗೆ ಧನ್ಯವಾದ ಹೇಳಿದ ನಂತರ ಮುಖ್ಯಮಂತ್ರಿ ಮಾತನಾಡುತ್ತಿದ್ದರು.

ವೀಡಿಯೊವನ್ನು ಹೆಚ್ಚು ಹೆಚ್ಚು ಆನ್‌ಲೈನ್‌ನಲ್ಲಿ ಜನರು ವೀಕ್ಷಿಸುತ್ತಿದ್ದಂತೆ, ಮುಖ್ಯಮಂತ್ರಿಯ ಮಾಧ್ಯಮ ಸಲಹೆಗಾರ ಶಲಾಭ್ ಮಣಿ ತ್ರಿಪಾಠಿ ಅವರು “ಬ್ರೇಕಿಂಗ್ ಟ್ಯೂಬ್” ಎಂಬ ವೆಬ್‌ಸೈಟ್‌ನ ‘ಫ್ಯಾಕ್ಟ್ ಚೆಕ್’ ವರದಿಯನ್ನು ರಿಟ್ವೀಟ್ ಮಾಡಿದ್ದಾರೆ. ಈ ವರದಿಯ ಪ್ರಕಾರ ವಿಡಿಯೋ ಕ್ಲಿಪ್‌ನ ಕೊನೆಯ ಮೂರು ಸೆಕೆಂಡುಗಳನ್ನು (ಯೋಗಿಯ ಬೈಗುಳ ಇರುವ ಕ್ಷಣಗಳು) ತಿರುಚಲಾಗಿದೆ ಎಂದು ಆರೋಪಿಸಿದ್ದಾರೆ.

ಸಿಎಂ ಸಲಹೆಗಾರರು ನೀಡಿದ ಫ್ಯಾಕ್ಟ್‌ಚೆಕ್ ವರದಿಯಲ್ಲಿ ಫ್ಯಾಕ್ಟ್ ಚೆಕ್ ಬಗ್ಗೆ ಯಾವುದೇ ವಿವರಗಳಿಲ್ಲ, ಅವರ “ನಕಲಿ” ವಿಡಿಯೋವನ್ನು ಪ್ರಸಾರ ಮಾಡಿದವರ ವಿರುದ್ಧ ಕ್ರಮಕೈಗೊಳ್ಳಲು ಮುಖ್ಯಮಂತ್ರಿ ಆದೇಶಿಸಿದ್ದಾರೆ ಎಂದು ಮಾತ್ರ ಅದು ಹೇಳುತ್ತದೆ.

ಟ್ವಿಟ್ಟರ್‌ನಲ್ಲಿ ಯೋಗಿ ಅವರನ್ನು ತರಾಟೆಗೆ ತೆಗೆದುಕೊಂಡ ಹಲವರಲ್ಲಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಕೂಡ ಪ್ರಮುಖರು. “ದಯವಿಟ್ಟು ಈ ’ಗಣ್ಯವ್ಯಕ್ತಿ’ಯಿಂದ ಪತ್ರಕರ್ತರಿಗೆ ಸಲ್ಲಿಕೆಯಾದ ಸಿಹಿ ಪದಗಳನ್ನು ಕೇಳಿ. ಆದರೆ ಹೆಡ್‌ಫೋನ್‌ಗಳನ್ನು ಬಳಸಿ ಮತ್ತು ಮಕ್ಕಳಿಂದ ದೂರವಿರಿ; ಎಂದು ಅವರು ಹಿಂದಿಯಲ್ಲಿ ಟ್ವೀಟ್ ಮಾಡಿದ್ದು, ವೀಡಿಯೊವನ್ನು ಹಂಚಿಕೊಂಡಿಲ್ಲ.

ಎಎನ್‌ಐ ಹೊಸ ಐದು ನಿಮಿಷಗಳ ಯೋಗಿ ಆದಿತ್ಯನಾಥ್ ಅವರ ವಿಡಿಯೋ ಅನ್ನು ಟ್ವೀಟ್ ಮಾಡಿದೆ. ಮತ್ತು ಟ್ವೀಟ್‌ನಲ್ಲಿ ಹೀಗೆ ಹೇಳಿದೆ – “ಸಂಪಾದಕರ ಟಿಪ್ಪಣಿ: ಈ ಹಿಂದೆ ನೀಡಲಾದ ಲೈವ್ ಸೌಂಡ್ ಬೈಟ್ ಅನ್ನು ಹಿಂತೆಗೆದುಕೊಳ್ಳಲಾಗಿದೆ” ಎಂದು ಬರೆಯಲಾಗಿದೆ.

ನಿವೃತ್ತ ಐಎಎಸ್ ಅಧಿಕಾರಿ ಸೂರ್ಯ ಪ್ರತಾಪ್ ಸಿಂಗ್ ಅವರ ಟ್ವೀಟ್‌ನಲ್ಲಿ ಈ ವಿಡಿಯೋ ಮೊದಲು ಹೊರಬಿದ್ದಿದೆ. “ಇದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ನಿಜವಾದ ಮುಖ. ಸಂತನ ಭಾಷೆಯನ್ನು ಆಲಿಸಿ” ಎಂದು ಹಿಂದಿಯಲ್ಲಿ ಅವರು ಟ್ವೀಟ್ ಮಾಡಿದ್ದರು.
ಇತ್ತ ಉತ್ತರಪ್ರದೇಶದಲ್ಲಿ ಕನಿಷ್ಠ ಎರಡು ಪ್ರಾದೇಶಿಕ ಚಾನೆಲ್‌ಗಳ ಬೆಳಗಿನ ಪ್ರಸಾರದ ನಂತರ ವೀಡಿಯೊಗಳು ಸಾರ್ವತ್ರಿಕವಾದವು.

ವಿಡಿಯೋ ಎಡಿಟ್ ಮಾಡಿಲ್ಲ: ಆಲ್ಟ್‌ನ್ಯೂಸ್‌ ವರದಿ

ಇನ್ನು ಯುಪಿ ಸಿಎಂ ಅಶ್ಲೀಲವಾಗಿ ಬೈದಿರುವ ವಿಡಿಯೋವನ್ನು ಕೊನೆಯ ಮೂರು ಸೆಕೆಂಡ್‌ಗಳು ಎಡಿಟ್ ಮಾಡಿಲ್ಲ ಎಂದು ಆಲ್ಟ್‌ನ್ಯೂಸ್ ವರದಿ ಮಾಡಿದೆ.

ಆಲ್ಟ್ ನ್ಯೂಸ್ ಎಎನ್‌ಐ ಪ್ರಧಾನ ಸಂಪಾದಕಿ ಸ್ಮಿತಾ ಪ್ರಕಾಶ್ ಅವರನ್ನು ಸಂಪರ್ಕಿಸಿದಾಗ “ನಾನು ನಿಮ್ಮೊಂದಿಗೆ ಮಾತನಾಡಲು ಆಸಕ್ತಿ ಹೊಂದಿಲ್ಲ” ಎಂದು ಅವರು ಫೋನ್ ಕಟ್ ಮಾಡುವ ಮೊದಲು ಹೇಳಿದರು. ಎಎನ್‌ಐ ಯುಪಿ ಬ್ಯೂರೋ ಮುಖ್ಯಸ್ಥ ಕಮ್ನಾ ಹಜೇಲಾ ಅವರು ವಿಡಿಯೋ ಬಗ್ಗೆ ಕೇಳಿದಾಗ ಕರೆ ಸಂಪರ್ಕ ಕಡಿತಗೊಳಿಸಿದ್ದಾರೆ” ಎಂದು ಅದು ವರದಿಯಲ್ಲಿ ತಿಳಿಸಿದೆ.

ಎಎನ್‌ಐ ಆ ಅಶ್ಲೀಲ ಬೈಗುಳದ ವೀಡಿಯೊವನ್ನು ಹಿಂತೆಗೆದುಕೊಂಡರೂ, ಅದು ಇತರ ಚಾನೆಲ್‌ಗಳ ಪ್ರಸಾರಗಳಲ್ಲಿ ಇನ್ನೂ ಲಭ್ಯವಿದೆ. ಎಬಿಪಿ ಗಂಗಾ, ನ್ಯೂಸ್‌18 ಉತ್ತರ ಪ್ರದೇಶ, ಫಸ್ಟ್‌ ನ್ಯೂಸ್‌ ರಾಜಸ್ಥಾನ್ ಚಾನೆಲ್‌ಗಳು ಅದನ್ನು ಪ್ರಸಾರ ಮಾಡಿವೆ.

ದೀಪಕ್ ಚೌರಾಸಿಯ, ಒಪಿಇಂಡಿಯಾ ಸೇರಿದಂತೆ ಹಲವು ಸಾಮಾಜಿಕ ಜಾಲತಾಣಗಳ ಮೂಲಕ ಆದಿತ್ಯನಾಥ್ ಅವರ ರಕ್ಷಣೆಗೆ ಬಿಜೆಪಿ ಪರ ಟ್ವಿಟರ್ ಹ್ಯಾಂಡಲ್‌ಗಳು ಬಂದಿವೆ. ವೈರಲ್ ಕ್ಲಿಪ್ ಅನ್ನು ಎಡಿಟ್ ಮಾಡಲಾಗಿದೆ ಎಂದು ಸಾಬೀತುಪಡಿಸುವ ಪ್ರಯತ್ನದಲ್ಲಿ ಆ ಮೂರು ಸೆಕೆಂಡುಗಳ ಹೊರತಾಗಿ, ಹೊಸದಾಗಿ ಎಎನ್‌ಐ ಟ್ವೀಟ್ ಮಾಡಿದ ಎರಡನೇ ವಿಡಿಯೋದಲ್ಲಿ ಅದೇ ಪದಗಳನ್ನು ಬಳಸಿ ಯೋಗಿ ಆದಿತ್ಯನಾಥ್ ಮಾತನಾಡಿದ್ದಾರೆ ಎಂದು ಸಮರ್ಥಿಸಿಕೊಳ್ಳಲಾಗಿದೆ. ಆದರೆ ಆ ಮಾತುಗಳಲ್ಲಿ ಹಲವು ಬದಲಾವಣೆಗಳನ್ನು ಕಾಣಬಹುದಾಗಿದೆ.

ಮೊದಲ ವಿಡಿಯೋದಲ್ಲಿ ಯುಪಿ ಸಿಎಂ ಹೀಗೆ ಹೇಳುತ್ತಾರೆ. “ಕೋವಿಡ್ ಲಸಿಕೆ ಉಚಿತವಾಗಿ ನೀಡಿದ್ದಕ್ಕಾಗಿ ಗೌರವಾನ್ವಿತ ಪ್ರಧಾನ ಮಂತ್ರಿ, ಕೇಂದ್ರ ಆರೋಗ್ಯ ಸಚಿವಾಲಯಕ್ಕೆ ನನ್ನ ಹೃದಯಪೂರ್ವಕ ಧನ್ಯವಾದಗಳು. ನಾನು ದೇಶದ ವಿಜ್ಞಾನಿಗಳಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ನೀವು ಏನು ಮಾಡುತ್ತಿದ್ದೀರಿ,  ******”… ಇದರಲ್ಲಿ ಆರೋಗ್ಯ ಸಚಿವಾಲಯದ ಉಲ್ಲೇಖವನ್ನು ಎಎನ್‌ಐ ಕೂಡ ಟ್ವೀಟ್ ಮಾಡಿದೆ.

ಆದರೆ ನಂತರ ಚಿತ್ರೀಕರಿಸಿರುವ 5 ನಿಮಿಷಗಳ ವಿಡಿಯೋದಲ್ಲಿ “ಕೇಂದ್ರ ಆರೋಗ್ಯ ಸಚಿವಾಲಯದ ಬಗ್ಗೆ ಸಿಎಂ ಉಲ್ಲೇಖಿಸಿಲ್ಲ. “ದೇಶದ ನಾಗರಿಕರಿಗೆ COVID ಲಸಿಕೆ ಉಚಿತವಾಗಿ ನೀಡಿದ ಗೌರವಾನ್ವಿತ ಪ್ರಧಾನಿಗೆ ನಾನು ಧನ್ಯವಾದ ಅರ್ಪಿಸುತ್ತೇನೆ. ಭಾರತದಲ್ಲಿ ಈ ಸಮಯಕ್ಕೆ ಎರಡು ಲಸಿಕೆಗಳನ್ನು ಬಿಡುಗಡೆ ಮಾಡಿದ ಎಲ್ಲ ವಿಜ್ಞಾನಿಗಳಿಗೆ ನಾನು ಧನ್ಯವಾದ ಅರ್ಪಿಸುತ್ತೇನೆ… ” ಎಂದಷ್ಟೇ ಅವರು ಹೇಳಿದ್ದಾರೆ.

ಹಾಗಾಗಿ ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನಿಜಕ್ಕೂ ಎಎನ್‌ಐ ಸಿಬ್ಬಂದಿಯ ಸಮ್ಮುಖದಲ್ಲಿ ನಿಂದನೀಯ ಪದವನ್ನು ಬಳಸಿದ್ದಾರೆ. ವೀಡಿಯೊವನ್ನು ಎಡಿಟ್ ಮಾಡಲಾಗಿದೆ ಎಂಬ ಪ್ರತಿಪಾದನೆ ಸುಳ್ಳಾಗಿದೆ. ಎಲ್ಲಕ್ಕಿಂತ ಮುಖ್ಯವಾಗಿ ವಿವಾದದ ಕೇಂದ್ರದಲ್ಲಿರುವ ಎಎನ್‌ಐ ಈ ವಿಚಾರದ ಬಗ್ಗೆ ಪ್ರತಿಕ್ರಿಯಿಸದಿರಲು ನಿರ್ಧರಿಸಿದೆ.


ಇದನ್ನೂ ಓದಿ: ತನ್ನ ವಿರುದ್ಧದ ಮಾನಹಾನಿ ಪ್ರಕರಣ ರದ್ದತಿ ಕೋರಿ ಕಂಗನಾ ಸಲ್ಲಿಸಿದ ಅರ್ಜಿ ವಜಾಗೊಳಿಸಿದ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...