HomeಮುಖಪುಟANI ಪತ್ರಕರ್ತನನ್ನು ಕೆಟ್ಟ ಪದ ಬಳಸಿ ನಿಂದಿಸಿದ ಯುಪಿ ಸಿಎಂ ಯೋಗಿ: ವಿಡಿಯೋ ನಿಜವೆಂದ ಆಲ್ಟ್‌ನ್ಯೂಸ್‌

ANI ಪತ್ರಕರ್ತನನ್ನು ಕೆಟ್ಟ ಪದ ಬಳಸಿ ನಿಂದಿಸಿದ ಯುಪಿ ಸಿಎಂ ಯೋಗಿ: ವಿಡಿಯೋ ನಿಜವೆಂದ ಆಲ್ಟ್‌ನ್ಯೂಸ್‌

- Advertisement -
- Advertisement -

ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ANI ಪತ್ರಕರ್ತನ ಮೇಲೆ ಅಶ್ಲೀಲ ಬೈಗುಳಗಳ ದಾಳಿ ನಡೆಸಿದ ವಿಡಿಯೊ ಒಂದು ಈಗ ವೈರಲ್ ಆಗಿದೆ. ಅವರ ಮಾಧ್ಯಮ ಸಲಹೆಗಾರ ಫ್ಯಾಕ್ಟ್‌ಚೆಕ್‌ ಒಂದನ್ನು ಹಂಚಿಕೊಂಡಿದ್ದು, ವಿಡಿಯೋದ ಕೊನೆಯ ಭಾಗವನ್ನು ತಿರುಚಿ ಎಡಿಟ್‌ ಮಾಡಲಾಗಿದೆ ಎಂದು ಸಮಜಾಯಿಷಿ ನೀಡಿದ್ದಾರೆ.

 

ಟ್ವಿಟ್ಟರ್ ಬಳಕೆದಾರರು ಹಂಚಿಕೊಂಡಿರುವ ಈ ವಿಡಿಯೋದಲ್ಲಿ, ಯೋಗಿ ಆದಿತ್ಯನಾಥ್ ಅವರು ಸುದ್ದಿ ಸಂಸ್ಥೆ ಎಎನ್‌ಐನ ಕ್ಯಾಮೆರಾಮನ್ ಕುರಿತು ಅಸಭ್ಯವಾಗಿ ಮಾತಾಡುವ ಹೊತ್ತಿನಲ್ಲಿ ಕಟ್ ಆಗುತ್ತದೆ. ಇಂದು ಬೆಳಿಗ್ಗೆ ಕೋವಿಡ್ ಲಸಿಕೆಯ ಮೊದಲ ಶಾಟ್ ತೆಗೆದುಕೊಂಡು ಕೇಂದ್ರ ಆರೋಗ್ಯ ಸಚಿವಾಲಯ ಮತ್ತು ದೇಶದ ವಿಜ್ಞಾನಿಗಳಿಗೆ ಧನ್ಯವಾದ ಹೇಳಿದ ನಂತರ ಮುಖ್ಯಮಂತ್ರಿ ಮಾತನಾಡುತ್ತಿದ್ದರು.

ವೀಡಿಯೊವನ್ನು ಹೆಚ್ಚು ಹೆಚ್ಚು ಆನ್‌ಲೈನ್‌ನಲ್ಲಿ ಜನರು ವೀಕ್ಷಿಸುತ್ತಿದ್ದಂತೆ, ಮುಖ್ಯಮಂತ್ರಿಯ ಮಾಧ್ಯಮ ಸಲಹೆಗಾರ ಶಲಾಭ್ ಮಣಿ ತ್ರಿಪಾಠಿ ಅವರು “ಬ್ರೇಕಿಂಗ್ ಟ್ಯೂಬ್” ಎಂಬ ವೆಬ್‌ಸೈಟ್‌ನ ‘ಫ್ಯಾಕ್ಟ್ ಚೆಕ್’ ವರದಿಯನ್ನು ರಿಟ್ವೀಟ್ ಮಾಡಿದ್ದಾರೆ. ಈ ವರದಿಯ ಪ್ರಕಾರ ವಿಡಿಯೋ ಕ್ಲಿಪ್‌ನ ಕೊನೆಯ ಮೂರು ಸೆಕೆಂಡುಗಳನ್ನು (ಯೋಗಿಯ ಬೈಗುಳ ಇರುವ ಕ್ಷಣಗಳು) ತಿರುಚಲಾಗಿದೆ ಎಂದು ಆರೋಪಿಸಿದ್ದಾರೆ.

ಸಿಎಂ ಸಲಹೆಗಾರರು ನೀಡಿದ ಫ್ಯಾಕ್ಟ್‌ಚೆಕ್ ವರದಿಯಲ್ಲಿ ಫ್ಯಾಕ್ಟ್ ಚೆಕ್ ಬಗ್ಗೆ ಯಾವುದೇ ವಿವರಗಳಿಲ್ಲ, ಅವರ “ನಕಲಿ” ವಿಡಿಯೋವನ್ನು ಪ್ರಸಾರ ಮಾಡಿದವರ ವಿರುದ್ಧ ಕ್ರಮಕೈಗೊಳ್ಳಲು ಮುಖ್ಯಮಂತ್ರಿ ಆದೇಶಿಸಿದ್ದಾರೆ ಎಂದು ಮಾತ್ರ ಅದು ಹೇಳುತ್ತದೆ.

ಟ್ವಿಟ್ಟರ್‌ನಲ್ಲಿ ಯೋಗಿ ಅವರನ್ನು ತರಾಟೆಗೆ ತೆಗೆದುಕೊಂಡ ಹಲವರಲ್ಲಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಕೂಡ ಪ್ರಮುಖರು. “ದಯವಿಟ್ಟು ಈ ’ಗಣ್ಯವ್ಯಕ್ತಿ’ಯಿಂದ ಪತ್ರಕರ್ತರಿಗೆ ಸಲ್ಲಿಕೆಯಾದ ಸಿಹಿ ಪದಗಳನ್ನು ಕೇಳಿ. ಆದರೆ ಹೆಡ್‌ಫೋನ್‌ಗಳನ್ನು ಬಳಸಿ ಮತ್ತು ಮಕ್ಕಳಿಂದ ದೂರವಿರಿ; ಎಂದು ಅವರು ಹಿಂದಿಯಲ್ಲಿ ಟ್ವೀಟ್ ಮಾಡಿದ್ದು, ವೀಡಿಯೊವನ್ನು ಹಂಚಿಕೊಂಡಿಲ್ಲ.

ಎಎನ್‌ಐ ಹೊಸ ಐದು ನಿಮಿಷಗಳ ಯೋಗಿ ಆದಿತ್ಯನಾಥ್ ಅವರ ವಿಡಿಯೋ ಅನ್ನು ಟ್ವೀಟ್ ಮಾಡಿದೆ. ಮತ್ತು ಟ್ವೀಟ್‌ನಲ್ಲಿ ಹೀಗೆ ಹೇಳಿದೆ – “ಸಂಪಾದಕರ ಟಿಪ್ಪಣಿ: ಈ ಹಿಂದೆ ನೀಡಲಾದ ಲೈವ್ ಸೌಂಡ್ ಬೈಟ್ ಅನ್ನು ಹಿಂತೆಗೆದುಕೊಳ್ಳಲಾಗಿದೆ” ಎಂದು ಬರೆಯಲಾಗಿದೆ.

ನಿವೃತ್ತ ಐಎಎಸ್ ಅಧಿಕಾರಿ ಸೂರ್ಯ ಪ್ರತಾಪ್ ಸಿಂಗ್ ಅವರ ಟ್ವೀಟ್‌ನಲ್ಲಿ ಈ ವಿಡಿಯೋ ಮೊದಲು ಹೊರಬಿದ್ದಿದೆ. “ಇದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ನಿಜವಾದ ಮುಖ. ಸಂತನ ಭಾಷೆಯನ್ನು ಆಲಿಸಿ” ಎಂದು ಹಿಂದಿಯಲ್ಲಿ ಅವರು ಟ್ವೀಟ್ ಮಾಡಿದ್ದರು.
ಇತ್ತ ಉತ್ತರಪ್ರದೇಶದಲ್ಲಿ ಕನಿಷ್ಠ ಎರಡು ಪ್ರಾದೇಶಿಕ ಚಾನೆಲ್‌ಗಳ ಬೆಳಗಿನ ಪ್ರಸಾರದ ನಂತರ ವೀಡಿಯೊಗಳು ಸಾರ್ವತ್ರಿಕವಾದವು.

ವಿಡಿಯೋ ಎಡಿಟ್ ಮಾಡಿಲ್ಲ: ಆಲ್ಟ್‌ನ್ಯೂಸ್‌ ವರದಿ

ಇನ್ನು ಯುಪಿ ಸಿಎಂ ಅಶ್ಲೀಲವಾಗಿ ಬೈದಿರುವ ವಿಡಿಯೋವನ್ನು ಕೊನೆಯ ಮೂರು ಸೆಕೆಂಡ್‌ಗಳು ಎಡಿಟ್ ಮಾಡಿಲ್ಲ ಎಂದು ಆಲ್ಟ್‌ನ್ಯೂಸ್ ವರದಿ ಮಾಡಿದೆ.

ಆಲ್ಟ್ ನ್ಯೂಸ್ ಎಎನ್‌ಐ ಪ್ರಧಾನ ಸಂಪಾದಕಿ ಸ್ಮಿತಾ ಪ್ರಕಾಶ್ ಅವರನ್ನು ಸಂಪರ್ಕಿಸಿದಾಗ “ನಾನು ನಿಮ್ಮೊಂದಿಗೆ ಮಾತನಾಡಲು ಆಸಕ್ತಿ ಹೊಂದಿಲ್ಲ” ಎಂದು ಅವರು ಫೋನ್ ಕಟ್ ಮಾಡುವ ಮೊದಲು ಹೇಳಿದರು. ಎಎನ್‌ಐ ಯುಪಿ ಬ್ಯೂರೋ ಮುಖ್ಯಸ್ಥ ಕಮ್ನಾ ಹಜೇಲಾ ಅವರು ವಿಡಿಯೋ ಬಗ್ಗೆ ಕೇಳಿದಾಗ ಕರೆ ಸಂಪರ್ಕ ಕಡಿತಗೊಳಿಸಿದ್ದಾರೆ” ಎಂದು ಅದು ವರದಿಯಲ್ಲಿ ತಿಳಿಸಿದೆ.

ಎಎನ್‌ಐ ಆ ಅಶ್ಲೀಲ ಬೈಗುಳದ ವೀಡಿಯೊವನ್ನು ಹಿಂತೆಗೆದುಕೊಂಡರೂ, ಅದು ಇತರ ಚಾನೆಲ್‌ಗಳ ಪ್ರಸಾರಗಳಲ್ಲಿ ಇನ್ನೂ ಲಭ್ಯವಿದೆ. ಎಬಿಪಿ ಗಂಗಾ, ನ್ಯೂಸ್‌18 ಉತ್ತರ ಪ್ರದೇಶ, ಫಸ್ಟ್‌ ನ್ಯೂಸ್‌ ರಾಜಸ್ಥಾನ್ ಚಾನೆಲ್‌ಗಳು ಅದನ್ನು ಪ್ರಸಾರ ಮಾಡಿವೆ.

ದೀಪಕ್ ಚೌರಾಸಿಯ, ಒಪಿಇಂಡಿಯಾ ಸೇರಿದಂತೆ ಹಲವು ಸಾಮಾಜಿಕ ಜಾಲತಾಣಗಳ ಮೂಲಕ ಆದಿತ್ಯನಾಥ್ ಅವರ ರಕ್ಷಣೆಗೆ ಬಿಜೆಪಿ ಪರ ಟ್ವಿಟರ್ ಹ್ಯಾಂಡಲ್‌ಗಳು ಬಂದಿವೆ. ವೈರಲ್ ಕ್ಲಿಪ್ ಅನ್ನು ಎಡಿಟ್ ಮಾಡಲಾಗಿದೆ ಎಂದು ಸಾಬೀತುಪಡಿಸುವ ಪ್ರಯತ್ನದಲ್ಲಿ ಆ ಮೂರು ಸೆಕೆಂಡುಗಳ ಹೊರತಾಗಿ, ಹೊಸದಾಗಿ ಎಎನ್‌ಐ ಟ್ವೀಟ್ ಮಾಡಿದ ಎರಡನೇ ವಿಡಿಯೋದಲ್ಲಿ ಅದೇ ಪದಗಳನ್ನು ಬಳಸಿ ಯೋಗಿ ಆದಿತ್ಯನಾಥ್ ಮಾತನಾಡಿದ್ದಾರೆ ಎಂದು ಸಮರ್ಥಿಸಿಕೊಳ್ಳಲಾಗಿದೆ. ಆದರೆ ಆ ಮಾತುಗಳಲ್ಲಿ ಹಲವು ಬದಲಾವಣೆಗಳನ್ನು ಕಾಣಬಹುದಾಗಿದೆ.

ಮೊದಲ ವಿಡಿಯೋದಲ್ಲಿ ಯುಪಿ ಸಿಎಂ ಹೀಗೆ ಹೇಳುತ್ತಾರೆ. “ಕೋವಿಡ್ ಲಸಿಕೆ ಉಚಿತವಾಗಿ ನೀಡಿದ್ದಕ್ಕಾಗಿ ಗೌರವಾನ್ವಿತ ಪ್ರಧಾನ ಮಂತ್ರಿ, ಕೇಂದ್ರ ಆರೋಗ್ಯ ಸಚಿವಾಲಯಕ್ಕೆ ನನ್ನ ಹೃದಯಪೂರ್ವಕ ಧನ್ಯವಾದಗಳು. ನಾನು ದೇಶದ ವಿಜ್ಞಾನಿಗಳಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ನೀವು ಏನು ಮಾಡುತ್ತಿದ್ದೀರಿ,  ******”… ಇದರಲ್ಲಿ ಆರೋಗ್ಯ ಸಚಿವಾಲಯದ ಉಲ್ಲೇಖವನ್ನು ಎಎನ್‌ಐ ಕೂಡ ಟ್ವೀಟ್ ಮಾಡಿದೆ.

ಆದರೆ ನಂತರ ಚಿತ್ರೀಕರಿಸಿರುವ 5 ನಿಮಿಷಗಳ ವಿಡಿಯೋದಲ್ಲಿ “ಕೇಂದ್ರ ಆರೋಗ್ಯ ಸಚಿವಾಲಯದ ಬಗ್ಗೆ ಸಿಎಂ ಉಲ್ಲೇಖಿಸಿಲ್ಲ. “ದೇಶದ ನಾಗರಿಕರಿಗೆ COVID ಲಸಿಕೆ ಉಚಿತವಾಗಿ ನೀಡಿದ ಗೌರವಾನ್ವಿತ ಪ್ರಧಾನಿಗೆ ನಾನು ಧನ್ಯವಾದ ಅರ್ಪಿಸುತ್ತೇನೆ. ಭಾರತದಲ್ಲಿ ಈ ಸಮಯಕ್ಕೆ ಎರಡು ಲಸಿಕೆಗಳನ್ನು ಬಿಡುಗಡೆ ಮಾಡಿದ ಎಲ್ಲ ವಿಜ್ಞಾನಿಗಳಿಗೆ ನಾನು ಧನ್ಯವಾದ ಅರ್ಪಿಸುತ್ತೇನೆ… ” ಎಂದಷ್ಟೇ ಅವರು ಹೇಳಿದ್ದಾರೆ.

ಹಾಗಾಗಿ ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನಿಜಕ್ಕೂ ಎಎನ್‌ಐ ಸಿಬ್ಬಂದಿಯ ಸಮ್ಮುಖದಲ್ಲಿ ನಿಂದನೀಯ ಪದವನ್ನು ಬಳಸಿದ್ದಾರೆ. ವೀಡಿಯೊವನ್ನು ಎಡಿಟ್ ಮಾಡಲಾಗಿದೆ ಎಂಬ ಪ್ರತಿಪಾದನೆ ಸುಳ್ಳಾಗಿದೆ. ಎಲ್ಲಕ್ಕಿಂತ ಮುಖ್ಯವಾಗಿ ವಿವಾದದ ಕೇಂದ್ರದಲ್ಲಿರುವ ಎಎನ್‌ಐ ಈ ವಿಚಾರದ ಬಗ್ಗೆ ಪ್ರತಿಕ್ರಿಯಿಸದಿರಲು ನಿರ್ಧರಿಸಿದೆ.


ಇದನ್ನೂ ಓದಿ: ತನ್ನ ವಿರುದ್ಧದ ಮಾನಹಾನಿ ಪ್ರಕರಣ ರದ್ದತಿ ಕೋರಿ ಕಂಗನಾ ಸಲ್ಲಿಸಿದ ಅರ್ಜಿ ವಜಾಗೊಳಿಸಿದ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...