Homeಮುಖಪುಟಯೋಹಾನಿ ಹಾಡು ಕನ್ನಡಕ್ಕೆ: ಹೊನ್ನಾವರದ ರೋಡ್ರಿಗಸ್ ಸಹೋದರರ ಸಿಂಹಳದ ಕನ್ನಡ ಹಾಡು ವೈರಲ್

ಯೋಹಾನಿ ಹಾಡು ಕನ್ನಡಕ್ಕೆ: ಹೊನ್ನಾವರದ ರೋಡ್ರಿಗಸ್ ಸಹೋದರರ ಸಿಂಹಳದ ಕನ್ನಡ ಹಾಡು ವೈರಲ್

- Advertisement -
- Advertisement -

ಸಂಗೀತದ ಸಂಮ್ಮೋಹಕ ಶಕ್ತಿಯೇ ಅಂತದ್ದು! ಅದಕ್ಕೆ ದೇಶ-ಭಾಷೆಯ ಎಲ್ಲೆಯಿಲ್ಲ. ಶ್ರೀಲಂಕಾದ ಜನಪ್ರಿಯ ಯುವ ಗಾಯಕಿ ಯೋಹಾನಿ ಅಲ್ಲಿಯ ಭಾಷೆಯಲ್ಲಿ ಹಾಡಿ ದೊಡ್ಡ ಸಂಚಲನ ಸೃಷ್ಟಿದ್ದ ಹಾಡೊಂದು ಕನ್ನಡೀಕರಣಗೊಂಡು ಕನ್ನಡ ನಾಡಲ್ಲೂ ಲಕ್ಷ-ಲಕ್ಷ ಜನರನ್ನು ಮರುಳುಗೊಳಿಸಿದೆ. ಸಿಂಹಳ ಭಾಷೆಯಿಂದ ಕನ್ನಡಕ್ಕೆ ಅನುವಾದಗೊಂಡ ಹಾಡನ್ನು ಹೊನ್ನಾವರದ ರೋಡ್ರಿಗಸ್ ಸಹೋದರರು ಹಾಡಿ ಯೂಟ್ಯೂಬ್‌ಗೆ ಹಾಕಿದ ಒಂದೇ ವಾರದಲ್ಲಿ ಬರೋಬ್ಬರಿ 3.58 ಲಕ್ಷ ಮಂದಿ ಮನವಿಟ್ಟು ಕೇಳಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.!

ಶ್ರೀಲಂಕಾದ ಗಾಯಕಿ ಯೋಹಾನಿ ಹಾಡಿರುವ ಮನಿಕೆ ಮಗೆ ಹಿತೆ ಹಾಡು ಅಲ್ಲಿ ತನ್ನದೆಯಾದ ಟ್ರೆಂಡ್ ಸೃಷಿಸಿಬಿಟ್ಟಿದೆ. ಅದರ ಹಿಂದಿ ಹಾಗೂ ಕನ್ನಡ ಅನುವಾದವನ್ನು ಹೊನ್ನಾವರದ ಹಡಿನಬಾಳದ ಆಲ್ಬನ್ ರಚಿಸಿದ್ದಾರೆ. ಯೋಹಾನಿನಾರಿ ಮನಹಾರಿ ಸುಕುಮಾರಿ ಎಂದು ತಮಿಳಿನಲ್ಲಿ ಶುರು ಮಾಡುವ ಹಾಡನ್ನು ಹೊನ್ನಾವರದ ಹುಡುಗ ಬೆನ್‌ರುಬೆನ್ ರೋಡ್ರಿಗಸ್ ಅಪ್ಸರೆ ನೀ ನನ್ನವಳೆ ನೀನಂದ್ರೆ ತುಂಬಾ ತುಂಬಾ… ಎಂಬ ಕನ್ನಡ ಸಾಲುಗಳಿಂದ ಮುಂದುವರಿಸಿದ್ದಾರೆ. ಅಲ್ಲಿಂದ ಮುಂದೆ ಅವರ ತಮ್ಮ ಬೆನ್‌ಸ್ಟನ್ ರೋಡ್ರಿಗಸ್ ಹಿಂದಿಯಲ್ಲಿ ತೇರಾ ಸಾಥ್ ನಿಭಾವೂಂಗಾ ಹಮ್ ಸಾಥ್ ರಹೇಂಗೆ… ಎಂದು ಹಾಡಿದ್ದಾರೆ.

ಯೂಟ್ಯೂಬ್‌ನಲ್ಲಿರುವ ಈ 2.50 ನಿಮಿಷದ ರೊಡ್ರಗಿಸ್ ಸಹೋದರರ ಹಾಡನ್ನು ಲಕ್ಷ ಲಕ್ಷ ಮಂದಿ ನೋಡುತ್ತಿದ್ದಾರೆ. ಹಿಂದೆ ಯೋಹಾನಿಯ ಬೇರೊಂದು ಹಾಡನ್ನು ಇದೇ ಸಹೋದರರು ಹಾಡಿದದ್ದರು. ಈ ರೋಡ್ರಿಗಸ್ ಸಹೋದರರು ಕನ್ನಡ, ಕೊಂಕಣಿ ಮತ್ತು ಇಂಗ್ಲಿಷ್‌ನಲ್ಲಿ ಒಟ್ಟೂ 11 ವಿಡಿಯೋ ಹಾಡುಗಳನ್ನು ಬಿಡುಗಡೆ ಮಾಡಿದ್ದಾರೆ. ಲಾಕ್ ಡೌನ್ ಖಾಲಿತನದ ಹೊತ್ತಲಿ ಮನೆಯಲ್ಲಿ ಕುಳಿಕತು ನಾವು ಹಾಡುತ್ತಿದ್ದೆವು. ಅದೇ ಯೋಹಾನಿ ಹಾಡಿನ ಅನುಕರಣೆಗೆ ಪ್ರೇರಣೆಯಾಯಿತೆಂದು ಅಣ್ಣ-ತಮ್ಮ ಹೇಳುತ್ತಾರೆ.

ಹೊನ್ನಾವರ ಕಾಲೇಜಿನಲ್ಲಿ ಬೆನ್‌ರುಬೆನ್ ಎಂಕಾಂ ಓದುತ್ತಿದ್ದಾರೆ. ಅವರ ತಮ್ಮ ಬೆನ್‌ಸ್ಟನ್ ಹೋಲಿರೋಸರಿ ಕಾನ್ವೆಂಟಿನಲ್ಲಿ 6ನೇ ತರಗತಿಯಲ್ಲಿದ್ದಾರೆ. ಮಕ್ಕಳ ಸಂಗೀತದ ಹುಚ್ಚು ಕಂಡು ಅವರ ತಂದೆ ಮುನ್ವೇಲ್ ರೋಡ್ರಿಗಸ್ ಮನೆಯಲ್ಲಿ ದ್ವನಿ ಮುದ್ರಣದ ವ್ಯವಸ್ಥೆ ಮಾಡಿಕೊಟ್ಟಿದ್ದಾರೆ. ಇಬ್ಬರಿಗೂ ತಬಲಾ, ಕೀಬೋರ್ಡ್‌ನಲ್ಲೂ ಆಸಕ್ತಿ.


ಇದನ್ನೂ ಓದಿ: ಕುಂದಾಪುರದ ಗೌಲು: ಡಾ ಜಯಪ್ರಕಾಶ್‌ ಶೆಟ್ಟಿ ಹೆಚ್‌ ಕುಂದಾಪುರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...