Homeಮುಖಪುಟಯೋಹಾನಿ ಹಾಡು ಕನ್ನಡಕ್ಕೆ: ಹೊನ್ನಾವರದ ರೋಡ್ರಿಗಸ್ ಸಹೋದರರ ಸಿಂಹಳದ ಕನ್ನಡ ಹಾಡು ವೈರಲ್

ಯೋಹಾನಿ ಹಾಡು ಕನ್ನಡಕ್ಕೆ: ಹೊನ್ನಾವರದ ರೋಡ್ರಿಗಸ್ ಸಹೋದರರ ಸಿಂಹಳದ ಕನ್ನಡ ಹಾಡು ವೈರಲ್

- Advertisement -
- Advertisement -

ಸಂಗೀತದ ಸಂಮ್ಮೋಹಕ ಶಕ್ತಿಯೇ ಅಂತದ್ದು! ಅದಕ್ಕೆ ದೇಶ-ಭಾಷೆಯ ಎಲ್ಲೆಯಿಲ್ಲ. ಶ್ರೀಲಂಕಾದ ಜನಪ್ರಿಯ ಯುವ ಗಾಯಕಿ ಯೋಹಾನಿ ಅಲ್ಲಿಯ ಭಾಷೆಯಲ್ಲಿ ಹಾಡಿ ದೊಡ್ಡ ಸಂಚಲನ ಸೃಷ್ಟಿದ್ದ ಹಾಡೊಂದು ಕನ್ನಡೀಕರಣಗೊಂಡು ಕನ್ನಡ ನಾಡಲ್ಲೂ ಲಕ್ಷ-ಲಕ್ಷ ಜನರನ್ನು ಮರುಳುಗೊಳಿಸಿದೆ. ಸಿಂಹಳ ಭಾಷೆಯಿಂದ ಕನ್ನಡಕ್ಕೆ ಅನುವಾದಗೊಂಡ ಹಾಡನ್ನು ಹೊನ್ನಾವರದ ರೋಡ್ರಿಗಸ್ ಸಹೋದರರು ಹಾಡಿ ಯೂಟ್ಯೂಬ್‌ಗೆ ಹಾಕಿದ ಒಂದೇ ವಾರದಲ್ಲಿ ಬರೋಬ್ಬರಿ 3.58 ಲಕ್ಷ ಮಂದಿ ಮನವಿಟ್ಟು ಕೇಳಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.!

ಶ್ರೀಲಂಕಾದ ಗಾಯಕಿ ಯೋಹಾನಿ ಹಾಡಿರುವ ಮನಿಕೆ ಮಗೆ ಹಿತೆ ಹಾಡು ಅಲ್ಲಿ ತನ್ನದೆಯಾದ ಟ್ರೆಂಡ್ ಸೃಷಿಸಿಬಿಟ್ಟಿದೆ. ಅದರ ಹಿಂದಿ ಹಾಗೂ ಕನ್ನಡ ಅನುವಾದವನ್ನು ಹೊನ್ನಾವರದ ಹಡಿನಬಾಳದ ಆಲ್ಬನ್ ರಚಿಸಿದ್ದಾರೆ. ಯೋಹಾನಿನಾರಿ ಮನಹಾರಿ ಸುಕುಮಾರಿ ಎಂದು ತಮಿಳಿನಲ್ಲಿ ಶುರು ಮಾಡುವ ಹಾಡನ್ನು ಹೊನ್ನಾವರದ ಹುಡುಗ ಬೆನ್‌ರುಬೆನ್ ರೋಡ್ರಿಗಸ್ ಅಪ್ಸರೆ ನೀ ನನ್ನವಳೆ ನೀನಂದ್ರೆ ತುಂಬಾ ತುಂಬಾ… ಎಂಬ ಕನ್ನಡ ಸಾಲುಗಳಿಂದ ಮುಂದುವರಿಸಿದ್ದಾರೆ. ಅಲ್ಲಿಂದ ಮುಂದೆ ಅವರ ತಮ್ಮ ಬೆನ್‌ಸ್ಟನ್ ರೋಡ್ರಿಗಸ್ ಹಿಂದಿಯಲ್ಲಿ ತೇರಾ ಸಾಥ್ ನಿಭಾವೂಂಗಾ ಹಮ್ ಸಾಥ್ ರಹೇಂಗೆ… ಎಂದು ಹಾಡಿದ್ದಾರೆ.

ಯೂಟ್ಯೂಬ್‌ನಲ್ಲಿರುವ ಈ 2.50 ನಿಮಿಷದ ರೊಡ್ರಗಿಸ್ ಸಹೋದರರ ಹಾಡನ್ನು ಲಕ್ಷ ಲಕ್ಷ ಮಂದಿ ನೋಡುತ್ತಿದ್ದಾರೆ. ಹಿಂದೆ ಯೋಹಾನಿಯ ಬೇರೊಂದು ಹಾಡನ್ನು ಇದೇ ಸಹೋದರರು ಹಾಡಿದದ್ದರು. ಈ ರೋಡ್ರಿಗಸ್ ಸಹೋದರರು ಕನ್ನಡ, ಕೊಂಕಣಿ ಮತ್ತು ಇಂಗ್ಲಿಷ್‌ನಲ್ಲಿ ಒಟ್ಟೂ 11 ವಿಡಿಯೋ ಹಾಡುಗಳನ್ನು ಬಿಡುಗಡೆ ಮಾಡಿದ್ದಾರೆ. ಲಾಕ್ ಡೌನ್ ಖಾಲಿತನದ ಹೊತ್ತಲಿ ಮನೆಯಲ್ಲಿ ಕುಳಿಕತು ನಾವು ಹಾಡುತ್ತಿದ್ದೆವು. ಅದೇ ಯೋಹಾನಿ ಹಾಡಿನ ಅನುಕರಣೆಗೆ ಪ್ರೇರಣೆಯಾಯಿತೆಂದು ಅಣ್ಣ-ತಮ್ಮ ಹೇಳುತ್ತಾರೆ.

ಹೊನ್ನಾವರ ಕಾಲೇಜಿನಲ್ಲಿ ಬೆನ್‌ರುಬೆನ್ ಎಂಕಾಂ ಓದುತ್ತಿದ್ದಾರೆ. ಅವರ ತಮ್ಮ ಬೆನ್‌ಸ್ಟನ್ ಹೋಲಿರೋಸರಿ ಕಾನ್ವೆಂಟಿನಲ್ಲಿ 6ನೇ ತರಗತಿಯಲ್ಲಿದ್ದಾರೆ. ಮಕ್ಕಳ ಸಂಗೀತದ ಹುಚ್ಚು ಕಂಡು ಅವರ ತಂದೆ ಮುನ್ವೇಲ್ ರೋಡ್ರಿಗಸ್ ಮನೆಯಲ್ಲಿ ದ್ವನಿ ಮುದ್ರಣದ ವ್ಯವಸ್ಥೆ ಮಾಡಿಕೊಟ್ಟಿದ್ದಾರೆ. ಇಬ್ಬರಿಗೂ ತಬಲಾ, ಕೀಬೋರ್ಡ್‌ನಲ್ಲೂ ಆಸಕ್ತಿ.


ಇದನ್ನೂ ಓದಿ: ಕುಂದಾಪುರದ ಗೌಲು: ಡಾ ಜಯಪ್ರಕಾಶ್‌ ಶೆಟ್ಟಿ ಹೆಚ್‌ ಕುಂದಾಪುರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...