Homeಮುಖಪುಟಯೋಹಾನಿ ಹಾಡು ಕನ್ನಡಕ್ಕೆ: ಹೊನ್ನಾವರದ ರೋಡ್ರಿಗಸ್ ಸಹೋದರರ ಸಿಂಹಳದ ಕನ್ನಡ ಹಾಡು ವೈರಲ್

ಯೋಹಾನಿ ಹಾಡು ಕನ್ನಡಕ್ಕೆ: ಹೊನ್ನಾವರದ ರೋಡ್ರಿಗಸ್ ಸಹೋದರರ ಸಿಂಹಳದ ಕನ್ನಡ ಹಾಡು ವೈರಲ್

- Advertisement -
- Advertisement -

ಸಂಗೀತದ ಸಂಮ್ಮೋಹಕ ಶಕ್ತಿಯೇ ಅಂತದ್ದು! ಅದಕ್ಕೆ ದೇಶ-ಭಾಷೆಯ ಎಲ್ಲೆಯಿಲ್ಲ. ಶ್ರೀಲಂಕಾದ ಜನಪ್ರಿಯ ಯುವ ಗಾಯಕಿ ಯೋಹಾನಿ ಅಲ್ಲಿಯ ಭಾಷೆಯಲ್ಲಿ ಹಾಡಿ ದೊಡ್ಡ ಸಂಚಲನ ಸೃಷ್ಟಿದ್ದ ಹಾಡೊಂದು ಕನ್ನಡೀಕರಣಗೊಂಡು ಕನ್ನಡ ನಾಡಲ್ಲೂ ಲಕ್ಷ-ಲಕ್ಷ ಜನರನ್ನು ಮರುಳುಗೊಳಿಸಿದೆ. ಸಿಂಹಳ ಭಾಷೆಯಿಂದ ಕನ್ನಡಕ್ಕೆ ಅನುವಾದಗೊಂಡ ಹಾಡನ್ನು ಹೊನ್ನಾವರದ ರೋಡ್ರಿಗಸ್ ಸಹೋದರರು ಹಾಡಿ ಯೂಟ್ಯೂಬ್‌ಗೆ ಹಾಕಿದ ಒಂದೇ ವಾರದಲ್ಲಿ ಬರೋಬ್ಬರಿ 3.58 ಲಕ್ಷ ಮಂದಿ ಮನವಿಟ್ಟು ಕೇಳಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.!

ಶ್ರೀಲಂಕಾದ ಗಾಯಕಿ ಯೋಹಾನಿ ಹಾಡಿರುವ ಮನಿಕೆ ಮಗೆ ಹಿತೆ ಹಾಡು ಅಲ್ಲಿ ತನ್ನದೆಯಾದ ಟ್ರೆಂಡ್ ಸೃಷಿಸಿಬಿಟ್ಟಿದೆ. ಅದರ ಹಿಂದಿ ಹಾಗೂ ಕನ್ನಡ ಅನುವಾದವನ್ನು ಹೊನ್ನಾವರದ ಹಡಿನಬಾಳದ ಆಲ್ಬನ್ ರಚಿಸಿದ್ದಾರೆ. ಯೋಹಾನಿನಾರಿ ಮನಹಾರಿ ಸುಕುಮಾರಿ ಎಂದು ತಮಿಳಿನಲ್ಲಿ ಶುರು ಮಾಡುವ ಹಾಡನ್ನು ಹೊನ್ನಾವರದ ಹುಡುಗ ಬೆನ್‌ರುಬೆನ್ ರೋಡ್ರಿಗಸ್ ಅಪ್ಸರೆ ನೀ ನನ್ನವಳೆ ನೀನಂದ್ರೆ ತುಂಬಾ ತುಂಬಾ… ಎಂಬ ಕನ್ನಡ ಸಾಲುಗಳಿಂದ ಮುಂದುವರಿಸಿದ್ದಾರೆ. ಅಲ್ಲಿಂದ ಮುಂದೆ ಅವರ ತಮ್ಮ ಬೆನ್‌ಸ್ಟನ್ ರೋಡ್ರಿಗಸ್ ಹಿಂದಿಯಲ್ಲಿ ತೇರಾ ಸಾಥ್ ನಿಭಾವೂಂಗಾ ಹಮ್ ಸಾಥ್ ರಹೇಂಗೆ… ಎಂದು ಹಾಡಿದ್ದಾರೆ.

ಯೂಟ್ಯೂಬ್‌ನಲ್ಲಿರುವ ಈ 2.50 ನಿಮಿಷದ ರೊಡ್ರಗಿಸ್ ಸಹೋದರರ ಹಾಡನ್ನು ಲಕ್ಷ ಲಕ್ಷ ಮಂದಿ ನೋಡುತ್ತಿದ್ದಾರೆ. ಹಿಂದೆ ಯೋಹಾನಿಯ ಬೇರೊಂದು ಹಾಡನ್ನು ಇದೇ ಸಹೋದರರು ಹಾಡಿದದ್ದರು. ಈ ರೋಡ್ರಿಗಸ್ ಸಹೋದರರು ಕನ್ನಡ, ಕೊಂಕಣಿ ಮತ್ತು ಇಂಗ್ಲಿಷ್‌ನಲ್ಲಿ ಒಟ್ಟೂ 11 ವಿಡಿಯೋ ಹಾಡುಗಳನ್ನು ಬಿಡುಗಡೆ ಮಾಡಿದ್ದಾರೆ. ಲಾಕ್ ಡೌನ್ ಖಾಲಿತನದ ಹೊತ್ತಲಿ ಮನೆಯಲ್ಲಿ ಕುಳಿಕತು ನಾವು ಹಾಡುತ್ತಿದ್ದೆವು. ಅದೇ ಯೋಹಾನಿ ಹಾಡಿನ ಅನುಕರಣೆಗೆ ಪ್ರೇರಣೆಯಾಯಿತೆಂದು ಅಣ್ಣ-ತಮ್ಮ ಹೇಳುತ್ತಾರೆ.

ಹೊನ್ನಾವರ ಕಾಲೇಜಿನಲ್ಲಿ ಬೆನ್‌ರುಬೆನ್ ಎಂಕಾಂ ಓದುತ್ತಿದ್ದಾರೆ. ಅವರ ತಮ್ಮ ಬೆನ್‌ಸ್ಟನ್ ಹೋಲಿರೋಸರಿ ಕಾನ್ವೆಂಟಿನಲ್ಲಿ 6ನೇ ತರಗತಿಯಲ್ಲಿದ್ದಾರೆ. ಮಕ್ಕಳ ಸಂಗೀತದ ಹುಚ್ಚು ಕಂಡು ಅವರ ತಂದೆ ಮುನ್ವೇಲ್ ರೋಡ್ರಿಗಸ್ ಮನೆಯಲ್ಲಿ ದ್ವನಿ ಮುದ್ರಣದ ವ್ಯವಸ್ಥೆ ಮಾಡಿಕೊಟ್ಟಿದ್ದಾರೆ. ಇಬ್ಬರಿಗೂ ತಬಲಾ, ಕೀಬೋರ್ಡ್‌ನಲ್ಲೂ ಆಸಕ್ತಿ.


ಇದನ್ನೂ ಓದಿ: ಕುಂದಾಪುರದ ಗೌಲು: ಡಾ ಜಯಪ್ರಕಾಶ್‌ ಶೆಟ್ಟಿ ಹೆಚ್‌ ಕುಂದಾಪುರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...