Homeಮುಖಪುಟ‘ನಾಳೆ ಕಾಂಡೋಂ ಕೂಡಾ ಕೇಳುತ್ತೀರಿ’: ಸ್ಯಾನಿಟರಿ ಪ್ಯಾಡ್‌ ಬಗ್ಗೆ ಪ್ರಶ್ನೆ ಕೇಳಿದ ವಿದ್ಯಾರ್ಥಿನಿಯನ್ನು ಅವಮಾನಿಸಿದ ಐಎಎಸ್‌...

‘ನಾಳೆ ಕಾಂಡೋಂ ಕೂಡಾ ಕೇಳುತ್ತೀರಿ’: ಸ್ಯಾನಿಟರಿ ಪ್ಯಾಡ್‌ ಬಗ್ಗೆ ಪ್ರಶ್ನೆ ಕೇಳಿದ ವಿದ್ಯಾರ್ಥಿನಿಯನ್ನು ಅವಮಾನಿಸಿದ ಐಎಎಸ್‌ ಅಧಿಕಾರಿ

- Advertisement -
- Advertisement -

ಮಂಗಳವಾರ ಪಾಟ್ನಾದಲ್ಲಿ ನಡೆದ ಯುನಿಸೆಫ್ ಮತ್ತು ರಾಜ್ಯ ಸರ್ಕಾರವು ಜಂಟಿಯಾಗಿ ಆಯೋಜಿಸಿದ ‘ಸಶಕ್ತ್ ಬೇಟಿ, ಸಮ್ರದ್ದ್ ಬಿಹಾರ’ ಎಂಬ ಕಾರ್ಯಗಾರದಲ್ಲಿ ವಿದ್ಯಾರ್ಥಿನಿಯರು ಕೇಳಿದ ಪ್ರಶ್ನೆಗೆ ಬಿಹಾರದ ಮಹಿಳಾ ಅಭಿವೃದ್ಧಿ ನಿಗಮ (ಡಬ್ಲ್ಯುಡಿಸಿ) ವ್ಯವಸ್ಥಾಪಕ ನಿರ್ದೇಶಕಿ ಹರ್ಜೋತ್‌ ಕೌರ್ ಬಾಮ್ಹ್ರಾ ಉದ್ಧಟತನದಿಂದ ಉತ್ತರಿಸಿದ್ದು ವ್ಯಾಪಕ ಟೀಕೆಗೆ ಗುರಿಯಾಗಿದೆ.

ಸರ್ಕಾರ ಸ್ಯಾನಿಟರಿ ಪ್ಯಾಡ್ ಯಾಕೆ ನೀಡುತ್ತಿಲ್ಲ ಎಂದು ವಿದ್ಯಾರ್ಥಿನಿಯೊಬ್ಬರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಹಿರಿಯ ಐಎಎಸ್ ಅಧಿಕಾರಿ ಹರ್ಜೋತ್‌ ಕೌರ್, “ಇವತ್ತು ನೀವು ಸ್ಯಾನಿಟರಿ ಪ್ಯಾಡ್‌ ಕೇಳುತ್ತೀರಿ, ನಾಳೆ ಜೀನ್ಸ್ ಕೇಳುತ್ತಾರೆ, ಆನಂತರ ಉತ್ತಮ ಬೂಟುಗಳು ಮತ್ತು ಅಂತಿಮವಾಗಿ ಕುಟುಂಬ ಯೋಜನೆಗಾಗಿ ನಿರೋಧ್‌‌ಗಳನ್ನು ಕೂಡಾ ಕೇಳುತ್ತೀರಿ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಾಜಕಾರಣಿಗಳು ಮತಗಳನ್ನು ಕೇಳುತ್ತಾರೆ, ಹೀಗಿರುವಾಗ ಕೆಲವು ಸೌಲಭ್ಯಗಳನ್ನು ನೀಡುವುದು ಸರ್ಕಾರದ ಕರ್ತವ್ಯವಾಗಿದೆ ಎಂದು ವಿದ್ಯಾರ್ಥಿನಿ ವಾದಿಸಿದಾಗ,“ಮತವನ್ನು ಹಾಕಬೇಡಿ, ಪಾಕಿಸ್ತಾನ ಮಾಡಿ ಈ ದೇಶವನ್ನು. ಹಣ ಅಥವಾ ಸೌಕರ್ಯಗಳಿಗಾಗಿ ನೀವು ಮತ ​​ಚಲಾಯಿಸುತ್ತೀರಾ?” ಎಂದು ಐಎಎಸ್ ಅಧಿಕಾರಿ ಹೇಳಿದ್ದಾರೆ.

ಇದನ್ನೂ ಓದಿ: ಕೋವಿಡ್ ಸಾವಿನ ಸಂಖ್ಯೆಯ ಚರ್ಚೆ ಮಾಡಿದ್ರೆ ಮತ್ತೆ ಅವ್ರು ಹುಟ್ಟಿ ಬರುತ್ತಾರ?: ಹರಿಯಾಣ ಸಿಎಂ ಉದ್ಧಟತನ

ಡಬ್ಲ್ಯುಡಿಸಿ ರಾಜ್ಯ ಸರ್ಕಾರದ ಸಾಮಾಜಿಕ ಕಲ್ಯಾಣ ವಿಭಾಗದ ಅಡಿಯಲ್ಲಿ ಬರುತ್ತದೆ ಮತ್ತು ಮಹಿಳೆಯರಿಗಾಗಿ ಕಲ್ಯಾಣ ಯೋಜನೆಗಳನ್ನು ಜಾರಿಗೆ ತರುವ ನೋಡಲ್ ಏಜೆನ್ಸಿಯಾಗಿದೆ.

ಕಾರ್ಯಾಗಾರ ನಡೆಯುತ್ತಿದ್ದ ಸಮಯದಲ್ಲಿ ವಿದ್ಯಾರ್ಥಿನಿ,“ಸರ್ಕಾರವು ನಮಗೆ ಸಮವಸ್ತ್ರ ಮತ್ತು ವಿದ್ಯಾರ್ಥಿವೇತನವನ್ನು ನೀಡುವುದು ಸೇರಿದಂತೆ ಅನೇಕ ಕೆಲಸಗಳನ್ನು ಮಾಡುತ್ತಿದೆ. ಹೀಗಿರುವಾಗ, ಕೇವಲ 20-30ರೂ. ಗಳ ಸ್ಯಾನಿಟರಿ ಪ್ಯಾಡ್‌ಗಳನ್ನು ಏಕೆ ನೀಡಲು ಸಾಧ್ಯವಿಲ್ಲ” ಎಂದು ಕೇಳುತ್ತಾರೆ.

ವಿದ್ಯಾರ್ಥಿನಿಯ ಪ್ರಶ್ನೆಗೆ ಸಭಿಕರು ಚಪ್ಪಾಳೆ ತಟ್ಟುವ ಮೂಲಕ ಪ್ರಶ್ನೆಯನ್ನು ಮೆಚ್ಚುತ್ತಿದ್ದಂತೆ ಉತ್ತರಿಸಿದ ಹರ್ಜೋತ್‌ ಕೌರ್, “ಇಂತಹ ಬೇಡಿಕೆಗಳಿಗೆ ಅಂತ್ಯವಿಲ್ಲ ಎಂದು ಈ ಚಪ್ಪಾಳೆ ತಿಳಿದಿರಬೇಕು. ಸರ್ಕಾರವು ಸ್ಯಾನಿಟರ್‌ ಪ್ಯಾಡ್‌ಗಳನ್ನು ನೀಡುತ್ತದೆಯೇ ಎಂಬುದು ಪ್ರಶ್ನೆ. ನಾಳೆ ಜೀನ್ಸ್ ಕೇಳುತ್ತಾರೆ, ನಾಡಿದ್ದು ಶೂಗಳಿಗೆ ಬೇಡಿಕೆ ಇಡುತ್ತಾರೆ ಮತ್ತು ಅಂತಿಮವಾಗಿ ಕುಟುಂಬ ಯೋಜನೆಗೆ ಉಚಿತ ನಿರೋಧ್‌ಗಳಿಗೆ ಬೇಡಿಕೆ ಬರಬಹುದು” ಎಂದು ಹೇಳುತ್ತಾರೆ.

ಇದನ್ನೂ ಓದಿ: ನಾರಾಯಣ ಗುರುಗಳ ಪಠ್ಯಕ್ಕೆ ಕತ್ತರಿ: ‘ನನಗೆ ಅದು ನೆನಪಾಗುತ್ತಿಲ್ಲ’ ಎಂದ ಪಠ್ಯ ಪುಸ್ತಕ ಸಮಿತಿ ಸದಸ್ಯ ಡಾ. ಅನಂತಕೃಷ್ಣ…

ಸರ್ಕಾರದಿಂದಲೇ ಎಲ್ಲವನ್ನೂ ಒತ್ತಾಯಿಸಬಾರದು ಎಂದು ಐಎಎಸ್ ಅಧಿಕಾರಿ ಹೇಳುತ್ತಾರೆ.“ಸರ್ಕಾರದೊಂದಿಗೆ ಎಲ್ಲವನ್ನೂ ಕೇಳುವ ಅಗತ್ಯ ಏನಿದೆ. ನಿಮಗೆ ಬೇಕಾಗಿದ್ದು ನೀವು ಸಂಪಾದನೆ ಮಾಡಿದೆ. ಸರ್ಕಾರದ ಅನೇಕ ಯೋಜನೆಗಳು ಇವೆ. ಆದರೆ ಸರ್ಕಾರವೆ ಎಲ್ಲವನ್ನೂ ನೀಡಬೇಕು, 20-30 ರೂ. ನೀಡಲು ಸಾಧ್ಯವಿಲ್ಲವೆ ಎಂಬ ಈ ಚಿಂತನೆ ತಪ್ಪಾಗಿದೆ. ಸರ್ಕಾರ ತುಂಬಾ ವಸ್ತಗಳನ್ನು ನೀಡುತ್ತಿದೆ” ಎಂದು ಅವರು ಹೇಳುತ್ತಾರೆ.

 

ಇದನ್ನೂ ಓದಿ: ಮಾತು ಮರೆತ ಭಾರತ; ಸ್ವತಂತ್ರ ಪೂರ್ವ ಭಾರತದ ಕೆಲವು ದಲಿತ್ ಫೈಲ್ಸ್

ಅಧಿಕಾರಿಯ ಉದ್ಧಟತನವನ್ನು ಬಿಹಾರ ಶಿಕ್ಷಕರ ಅರ್ಹತಾ ಪರೀಕ್ಷೆ ಸಂಘದ ಅಧ್ಯಕ್ಷ ಅಮಿತ್ ವಿಕ್ರಮ್ ಖಂಡಿಸಿದ್ದಾರೆ. “ಡಬ್ಲ್ಯುಡಿಸಿ ನಿರ್ದೇಶಕಿ ಹುಡುಗಿಯ ಪ್ರಶ್ನೆಯನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಲಿಲ್ಲ. ಅವರು ಬಹುಶಃ ಶಾಲೆಗಳಲ್ಲಿ ಸ್ಯಾನಿಟರಿ ಪ್ಯಾಡ್‌ಗಳ ಲಭ್ಯತೆಯನ್ನು ಕೇಳುತ್ತಿದ್ದರು. 6 ರಿಂದ 12 ನೇ ತರಗತಿಯವರೆಗಿನ ಪ್ರತಿ ವಿದ್ಯಾರ್ಥಿನಿಯರಿಗೆ ಸರ್ಕಾರವು 300 ರೂಗಳನ್ನು ನೀಡಿದ್ದರೂ, ಅವರಲ್ಲಿ ಹೆಚ್ಚಿನವರು ಸ್ಯಾನಿಟರಿ ಪ್ಯಾಡ್‌ಗಳನ್ನು ಶಾಲೆಗಳಿಗೆ ಕೊಂಡೊಯ್ಯುವುದಿಲ್ಲ. ಐಎಎಸ್ ಅಧಿಕಾರಿ ವಿಭಿನ್ನವಾಗಿ ಉತ್ತರಿಸಬೇಕಾಗಿತ್ತು, ಆದರೆ ಅವರು ಪ್ರಶ್ನೆ ಕೇಳಿದ ವಿದ್ಯಾರ್ಥಿಯನ್ನು ಅವಮಾನಿಸಿದರು” ಎಂದು ಅವರು ಹೇಳಿದ್ದಾರೆ.

“ಬಾಲಕಿಯೊಂದಿಗೆ ಅಧಿಕಾರಿ ಮಾತನಾಡಿದ ರೀತಿಯು ಕಾರ್ಯಾಗಾರದ ಉದ್ದೇಶವನ್ನೇ ಬುಡಮೇಲು ಮಾಡಿದೆ. ಅವರ ಮಾತುಗಳು ಬೇಜವಾಬ್ದಾರಿಯುತವಾಗಿತ್ತು ಮತ್ತು ಅಸೂಕ್ಷ್ಮವಾಗಿತ್ತು. ಉತ್ತರದಲ್ಲಿ ಪಾಕಿಸ್ತಾನದ ಉಲ್ಲೇಖವನ್ನು ಮಾಡುವ ಅಗತ್ಯವಿರಲಿಲ್ಲ” ಎಂದು ರಾಜಕೀಯ ನಾಯಕರೊಬ್ಬರು ಹೇಳಿದ್ದಾರೆ.

ಬಿಹಾರ ಸಮಾಜ ಕಲ್ಯಾಣ ಸಚಿವ ಮದನ್ ಸಹಾನಿ ಪ್ರತಿಕ್ರಿಯಿಸಿ,“ನಮ್ಮ ಇಲಾಖೆಯು ಹುಡುಗಿಯರು ಮತ್ತು ಮಹಿಳೆಯರ ಕಲ್ಯಾಣಕ್ಕಾಗಿ ಕೆಲಸ ಮಾಡುತ್ತದೆ. ಅಧಿಕಾರಿ ಹುಡುಗಿಯರನ್ನು ನಿರುತ್ಸಾಹಗೊಳಿಸಬಾರದಿತ್ತು. ಕಾರ್ಯಾಗಾರವು ಅವರನ್ನು ಪ್ರೋತ್ಸಾಹಿಸಲು ಉದ್ದೇಶಿಸಲಾಗಿತ್ತು. ನಮ್ಮ ಇಲಾಖೆಯ ಕಾರ್ಯದರ್ಶಿ ಗುರುವಾರ ನಿರ್ದೇಶಕಿ ಜೊತೆ ಮಾತನಾಡಲಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಶೋಷಿತರ ವಲಸೆ ಮತ್ತು ಪ್ರಭುತ್ವ; ಮರದೊಳಗಣ ಬೆಂಕಿ

ಈ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲೂ ಆಕ್ರೋಶ ವ್ಯಕ್ತವಾಗಿದೆ. ಕವಿ ಶಂಕರ್‌ ಎನ್‌. ಕೆಂಚನೂರು ಅವರು, “ಐಎಎಸ್ ಅಧಿಕಾರಿಯೊಬ್ಬರು ಪ್ರೈಮರಿ ಸ್ಕೂಲ್ ಹೆಣ್ಣು ಮಕ್ಕಳ ಎದುರು ಆಡಿದ ಮಾತು ಖಂಡನೀಯ. ಅದು ಅಲ್ಲದೆ ಆಕೆ ಕೂಡಾ ಒಬ್ಬ ಮಹಿಳೆಯಾಗಿದ್ದು, ಜೊತೆಗೆ ಬಿಹಾರದ ಸಶಕ್ತ ಬೇಟಿ, ಸದೃಢ ಬಿಹಾರ ಕಾರ್ಯಕ್ರಮದ ಮುಖ್ಯ ಅಧಿಕಾರಿ. ಕೇವಲ ರಾಜಕಾರಣಿಗಳಷ್ಟೇ ಅಲ್ಲ ಈ ದೇಶದ ಅಧಿಕಾರಶಾಹಿ ಕೂಡ ಜಡವಾಗಿ ಹೋಗಿದೆ. ಇವರ ಸಂವೇದನೆಗಳು ಸತ್ತು ಹೋಗಿವೆ. ರಾಜಕಾರಣಿಗಳಿಗಾದರೂ ಜನರ ಹಂಗಿದೆ. ಆದರೆ ಈ ಬ್ಯುರೊಕ್ರಸಿಗೆ ಯಾರ ಹಂಗೂ ಇಲ್ಲ. ಇವು ಬ್ರಿಟಿಷರ ಕಾಲದಿಂದಲೂ ಅರೊಗೆನ್ಸಿಯನ್ನೇ ಉಸಿರಾಡುತ್ತಾ ಬದುಕಿವೆ. ಈಗಲೂ ನಮ್ಮ ಬ್ಯುರೊಕ್ರಸಿ ಕೆಲಸ ಮಾಡೋದು ಬ್ರಿಟಿಷ್ ಆಡಳಿತದ ಅಧಿಕಾರಿಗಳ ಮನಸ್ಥಿತಿಯಲ್ಲಿಯೇ ಹೊರತು ಪ್ರಜಾಪ್ರಭುತ್ವದ ಆಡಳಿತ ರೀತಿಯಲ್ಲಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಆ ವಿದ್ಯಾರ್ಥಿನಿ ಕೇಳಿರುವುದರಿಂದ ತಪ್ಪೇನಿಲ್ಲ ಆದರೆ ಅಧಿಕಾರಿಣಿ ಅರ್ಥಮಾಡಿ ಕೊಳ್ಳಬೇಕಿತ್ತು ಇಂತಹ ಹರಕೆ ಉತ್ತರಗಳಿಂದ ಸರಕಾರಕ್ಕೆ ಮುಜುಗರ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...