Homeಮುಖಪುಟ‘ನಾಳೆ ಕಾಂಡೋಂ ಕೂಡಾ ಕೇಳುತ್ತೀರಿ’: ಸ್ಯಾನಿಟರಿ ಪ್ಯಾಡ್‌ ಬಗ್ಗೆ ಪ್ರಶ್ನೆ ಕೇಳಿದ ವಿದ್ಯಾರ್ಥಿನಿಯನ್ನು ಅವಮಾನಿಸಿದ ಐಎಎಸ್‌...

‘ನಾಳೆ ಕಾಂಡೋಂ ಕೂಡಾ ಕೇಳುತ್ತೀರಿ’: ಸ್ಯಾನಿಟರಿ ಪ್ಯಾಡ್‌ ಬಗ್ಗೆ ಪ್ರಶ್ನೆ ಕೇಳಿದ ವಿದ್ಯಾರ್ಥಿನಿಯನ್ನು ಅವಮಾನಿಸಿದ ಐಎಎಸ್‌ ಅಧಿಕಾರಿ

- Advertisement -
- Advertisement -

ಮಂಗಳವಾರ ಪಾಟ್ನಾದಲ್ಲಿ ನಡೆದ ಯುನಿಸೆಫ್ ಮತ್ತು ರಾಜ್ಯ ಸರ್ಕಾರವು ಜಂಟಿಯಾಗಿ ಆಯೋಜಿಸಿದ ‘ಸಶಕ್ತ್ ಬೇಟಿ, ಸಮ್ರದ್ದ್ ಬಿಹಾರ’ ಎಂಬ ಕಾರ್ಯಗಾರದಲ್ಲಿ ವಿದ್ಯಾರ್ಥಿನಿಯರು ಕೇಳಿದ ಪ್ರಶ್ನೆಗೆ ಬಿಹಾರದ ಮಹಿಳಾ ಅಭಿವೃದ್ಧಿ ನಿಗಮ (ಡಬ್ಲ್ಯುಡಿಸಿ) ವ್ಯವಸ್ಥಾಪಕ ನಿರ್ದೇಶಕಿ ಹರ್ಜೋತ್‌ ಕೌರ್ ಬಾಮ್ಹ್ರಾ ಉದ್ಧಟತನದಿಂದ ಉತ್ತರಿಸಿದ್ದು ವ್ಯಾಪಕ ಟೀಕೆಗೆ ಗುರಿಯಾಗಿದೆ.

ಸರ್ಕಾರ ಸ್ಯಾನಿಟರಿ ಪ್ಯಾಡ್ ಯಾಕೆ ನೀಡುತ್ತಿಲ್ಲ ಎಂದು ವಿದ್ಯಾರ್ಥಿನಿಯೊಬ್ಬರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಹಿರಿಯ ಐಎಎಸ್ ಅಧಿಕಾರಿ ಹರ್ಜೋತ್‌ ಕೌರ್, “ಇವತ್ತು ನೀವು ಸ್ಯಾನಿಟರಿ ಪ್ಯಾಡ್‌ ಕೇಳುತ್ತೀರಿ, ನಾಳೆ ಜೀನ್ಸ್ ಕೇಳುತ್ತಾರೆ, ಆನಂತರ ಉತ್ತಮ ಬೂಟುಗಳು ಮತ್ತು ಅಂತಿಮವಾಗಿ ಕುಟುಂಬ ಯೋಜನೆಗಾಗಿ ನಿರೋಧ್‌‌ಗಳನ್ನು ಕೂಡಾ ಕೇಳುತ್ತೀರಿ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಾಜಕಾರಣಿಗಳು ಮತಗಳನ್ನು ಕೇಳುತ್ತಾರೆ, ಹೀಗಿರುವಾಗ ಕೆಲವು ಸೌಲಭ್ಯಗಳನ್ನು ನೀಡುವುದು ಸರ್ಕಾರದ ಕರ್ತವ್ಯವಾಗಿದೆ ಎಂದು ವಿದ್ಯಾರ್ಥಿನಿ ವಾದಿಸಿದಾಗ,“ಮತವನ್ನು ಹಾಕಬೇಡಿ, ಪಾಕಿಸ್ತಾನ ಮಾಡಿ ಈ ದೇಶವನ್ನು. ಹಣ ಅಥವಾ ಸೌಕರ್ಯಗಳಿಗಾಗಿ ನೀವು ಮತ ​​ಚಲಾಯಿಸುತ್ತೀರಾ?” ಎಂದು ಐಎಎಸ್ ಅಧಿಕಾರಿ ಹೇಳಿದ್ದಾರೆ.

ಇದನ್ನೂ ಓದಿ: ಕೋವಿಡ್ ಸಾವಿನ ಸಂಖ್ಯೆಯ ಚರ್ಚೆ ಮಾಡಿದ್ರೆ ಮತ್ತೆ ಅವ್ರು ಹುಟ್ಟಿ ಬರುತ್ತಾರ?: ಹರಿಯಾಣ ಸಿಎಂ ಉದ್ಧಟತನ

ಡಬ್ಲ್ಯುಡಿಸಿ ರಾಜ್ಯ ಸರ್ಕಾರದ ಸಾಮಾಜಿಕ ಕಲ್ಯಾಣ ವಿಭಾಗದ ಅಡಿಯಲ್ಲಿ ಬರುತ್ತದೆ ಮತ್ತು ಮಹಿಳೆಯರಿಗಾಗಿ ಕಲ್ಯಾಣ ಯೋಜನೆಗಳನ್ನು ಜಾರಿಗೆ ತರುವ ನೋಡಲ್ ಏಜೆನ್ಸಿಯಾಗಿದೆ.

ಕಾರ್ಯಾಗಾರ ನಡೆಯುತ್ತಿದ್ದ ಸಮಯದಲ್ಲಿ ವಿದ್ಯಾರ್ಥಿನಿ,“ಸರ್ಕಾರವು ನಮಗೆ ಸಮವಸ್ತ್ರ ಮತ್ತು ವಿದ್ಯಾರ್ಥಿವೇತನವನ್ನು ನೀಡುವುದು ಸೇರಿದಂತೆ ಅನೇಕ ಕೆಲಸಗಳನ್ನು ಮಾಡುತ್ತಿದೆ. ಹೀಗಿರುವಾಗ, ಕೇವಲ 20-30ರೂ. ಗಳ ಸ್ಯಾನಿಟರಿ ಪ್ಯಾಡ್‌ಗಳನ್ನು ಏಕೆ ನೀಡಲು ಸಾಧ್ಯವಿಲ್ಲ” ಎಂದು ಕೇಳುತ್ತಾರೆ.

ವಿದ್ಯಾರ್ಥಿನಿಯ ಪ್ರಶ್ನೆಗೆ ಸಭಿಕರು ಚಪ್ಪಾಳೆ ತಟ್ಟುವ ಮೂಲಕ ಪ್ರಶ್ನೆಯನ್ನು ಮೆಚ್ಚುತ್ತಿದ್ದಂತೆ ಉತ್ತರಿಸಿದ ಹರ್ಜೋತ್‌ ಕೌರ್, “ಇಂತಹ ಬೇಡಿಕೆಗಳಿಗೆ ಅಂತ್ಯವಿಲ್ಲ ಎಂದು ಈ ಚಪ್ಪಾಳೆ ತಿಳಿದಿರಬೇಕು. ಸರ್ಕಾರವು ಸ್ಯಾನಿಟರ್‌ ಪ್ಯಾಡ್‌ಗಳನ್ನು ನೀಡುತ್ತದೆಯೇ ಎಂಬುದು ಪ್ರಶ್ನೆ. ನಾಳೆ ಜೀನ್ಸ್ ಕೇಳುತ್ತಾರೆ, ನಾಡಿದ್ದು ಶೂಗಳಿಗೆ ಬೇಡಿಕೆ ಇಡುತ್ತಾರೆ ಮತ್ತು ಅಂತಿಮವಾಗಿ ಕುಟುಂಬ ಯೋಜನೆಗೆ ಉಚಿತ ನಿರೋಧ್‌ಗಳಿಗೆ ಬೇಡಿಕೆ ಬರಬಹುದು” ಎಂದು ಹೇಳುತ್ತಾರೆ.

ಇದನ್ನೂ ಓದಿ: ನಾರಾಯಣ ಗುರುಗಳ ಪಠ್ಯಕ್ಕೆ ಕತ್ತರಿ: ‘ನನಗೆ ಅದು ನೆನಪಾಗುತ್ತಿಲ್ಲ’ ಎಂದ ಪಠ್ಯ ಪುಸ್ತಕ ಸಮಿತಿ ಸದಸ್ಯ ಡಾ. ಅನಂತಕೃಷ್ಣ…

ಸರ್ಕಾರದಿಂದಲೇ ಎಲ್ಲವನ್ನೂ ಒತ್ತಾಯಿಸಬಾರದು ಎಂದು ಐಎಎಸ್ ಅಧಿಕಾರಿ ಹೇಳುತ್ತಾರೆ.“ಸರ್ಕಾರದೊಂದಿಗೆ ಎಲ್ಲವನ್ನೂ ಕೇಳುವ ಅಗತ್ಯ ಏನಿದೆ. ನಿಮಗೆ ಬೇಕಾಗಿದ್ದು ನೀವು ಸಂಪಾದನೆ ಮಾಡಿದೆ. ಸರ್ಕಾರದ ಅನೇಕ ಯೋಜನೆಗಳು ಇವೆ. ಆದರೆ ಸರ್ಕಾರವೆ ಎಲ್ಲವನ್ನೂ ನೀಡಬೇಕು, 20-30 ರೂ. ನೀಡಲು ಸಾಧ್ಯವಿಲ್ಲವೆ ಎಂಬ ಈ ಚಿಂತನೆ ತಪ್ಪಾಗಿದೆ. ಸರ್ಕಾರ ತುಂಬಾ ವಸ್ತಗಳನ್ನು ನೀಡುತ್ತಿದೆ” ಎಂದು ಅವರು ಹೇಳುತ್ತಾರೆ.

 

ಇದನ್ನೂ ಓದಿ: ಮಾತು ಮರೆತ ಭಾರತ; ಸ್ವತಂತ್ರ ಪೂರ್ವ ಭಾರತದ ಕೆಲವು ದಲಿತ್ ಫೈಲ್ಸ್

ಅಧಿಕಾರಿಯ ಉದ್ಧಟತನವನ್ನು ಬಿಹಾರ ಶಿಕ್ಷಕರ ಅರ್ಹತಾ ಪರೀಕ್ಷೆ ಸಂಘದ ಅಧ್ಯಕ್ಷ ಅಮಿತ್ ವಿಕ್ರಮ್ ಖಂಡಿಸಿದ್ದಾರೆ. “ಡಬ್ಲ್ಯುಡಿಸಿ ನಿರ್ದೇಶಕಿ ಹುಡುಗಿಯ ಪ್ರಶ್ನೆಯನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಲಿಲ್ಲ. ಅವರು ಬಹುಶಃ ಶಾಲೆಗಳಲ್ಲಿ ಸ್ಯಾನಿಟರಿ ಪ್ಯಾಡ್‌ಗಳ ಲಭ್ಯತೆಯನ್ನು ಕೇಳುತ್ತಿದ್ದರು. 6 ರಿಂದ 12 ನೇ ತರಗತಿಯವರೆಗಿನ ಪ್ರತಿ ವಿದ್ಯಾರ್ಥಿನಿಯರಿಗೆ ಸರ್ಕಾರವು 300 ರೂಗಳನ್ನು ನೀಡಿದ್ದರೂ, ಅವರಲ್ಲಿ ಹೆಚ್ಚಿನವರು ಸ್ಯಾನಿಟರಿ ಪ್ಯಾಡ್‌ಗಳನ್ನು ಶಾಲೆಗಳಿಗೆ ಕೊಂಡೊಯ್ಯುವುದಿಲ್ಲ. ಐಎಎಸ್ ಅಧಿಕಾರಿ ವಿಭಿನ್ನವಾಗಿ ಉತ್ತರಿಸಬೇಕಾಗಿತ್ತು, ಆದರೆ ಅವರು ಪ್ರಶ್ನೆ ಕೇಳಿದ ವಿದ್ಯಾರ್ಥಿಯನ್ನು ಅವಮಾನಿಸಿದರು” ಎಂದು ಅವರು ಹೇಳಿದ್ದಾರೆ.

“ಬಾಲಕಿಯೊಂದಿಗೆ ಅಧಿಕಾರಿ ಮಾತನಾಡಿದ ರೀತಿಯು ಕಾರ್ಯಾಗಾರದ ಉದ್ದೇಶವನ್ನೇ ಬುಡಮೇಲು ಮಾಡಿದೆ. ಅವರ ಮಾತುಗಳು ಬೇಜವಾಬ್ದಾರಿಯುತವಾಗಿತ್ತು ಮತ್ತು ಅಸೂಕ್ಷ್ಮವಾಗಿತ್ತು. ಉತ್ತರದಲ್ಲಿ ಪಾಕಿಸ್ತಾನದ ಉಲ್ಲೇಖವನ್ನು ಮಾಡುವ ಅಗತ್ಯವಿರಲಿಲ್ಲ” ಎಂದು ರಾಜಕೀಯ ನಾಯಕರೊಬ್ಬರು ಹೇಳಿದ್ದಾರೆ.

ಬಿಹಾರ ಸಮಾಜ ಕಲ್ಯಾಣ ಸಚಿವ ಮದನ್ ಸಹಾನಿ ಪ್ರತಿಕ್ರಿಯಿಸಿ,“ನಮ್ಮ ಇಲಾಖೆಯು ಹುಡುಗಿಯರು ಮತ್ತು ಮಹಿಳೆಯರ ಕಲ್ಯಾಣಕ್ಕಾಗಿ ಕೆಲಸ ಮಾಡುತ್ತದೆ. ಅಧಿಕಾರಿ ಹುಡುಗಿಯರನ್ನು ನಿರುತ್ಸಾಹಗೊಳಿಸಬಾರದಿತ್ತು. ಕಾರ್ಯಾಗಾರವು ಅವರನ್ನು ಪ್ರೋತ್ಸಾಹಿಸಲು ಉದ್ದೇಶಿಸಲಾಗಿತ್ತು. ನಮ್ಮ ಇಲಾಖೆಯ ಕಾರ್ಯದರ್ಶಿ ಗುರುವಾರ ನಿರ್ದೇಶಕಿ ಜೊತೆ ಮಾತನಾಡಲಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಶೋಷಿತರ ವಲಸೆ ಮತ್ತು ಪ್ರಭುತ್ವ; ಮರದೊಳಗಣ ಬೆಂಕಿ

ಈ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲೂ ಆಕ್ರೋಶ ವ್ಯಕ್ತವಾಗಿದೆ. ಕವಿ ಶಂಕರ್‌ ಎನ್‌. ಕೆಂಚನೂರು ಅವರು, “ಐಎಎಸ್ ಅಧಿಕಾರಿಯೊಬ್ಬರು ಪ್ರೈಮರಿ ಸ್ಕೂಲ್ ಹೆಣ್ಣು ಮಕ್ಕಳ ಎದುರು ಆಡಿದ ಮಾತು ಖಂಡನೀಯ. ಅದು ಅಲ್ಲದೆ ಆಕೆ ಕೂಡಾ ಒಬ್ಬ ಮಹಿಳೆಯಾಗಿದ್ದು, ಜೊತೆಗೆ ಬಿಹಾರದ ಸಶಕ್ತ ಬೇಟಿ, ಸದೃಢ ಬಿಹಾರ ಕಾರ್ಯಕ್ರಮದ ಮುಖ್ಯ ಅಧಿಕಾರಿ. ಕೇವಲ ರಾಜಕಾರಣಿಗಳಷ್ಟೇ ಅಲ್ಲ ಈ ದೇಶದ ಅಧಿಕಾರಶಾಹಿ ಕೂಡ ಜಡವಾಗಿ ಹೋಗಿದೆ. ಇವರ ಸಂವೇದನೆಗಳು ಸತ್ತು ಹೋಗಿವೆ. ರಾಜಕಾರಣಿಗಳಿಗಾದರೂ ಜನರ ಹಂಗಿದೆ. ಆದರೆ ಈ ಬ್ಯುರೊಕ್ರಸಿಗೆ ಯಾರ ಹಂಗೂ ಇಲ್ಲ. ಇವು ಬ್ರಿಟಿಷರ ಕಾಲದಿಂದಲೂ ಅರೊಗೆನ್ಸಿಯನ್ನೇ ಉಸಿರಾಡುತ್ತಾ ಬದುಕಿವೆ. ಈಗಲೂ ನಮ್ಮ ಬ್ಯುರೊಕ್ರಸಿ ಕೆಲಸ ಮಾಡೋದು ಬ್ರಿಟಿಷ್ ಆಡಳಿತದ ಅಧಿಕಾರಿಗಳ ಮನಸ್ಥಿತಿಯಲ್ಲಿಯೇ ಹೊರತು ಪ್ರಜಾಪ್ರಭುತ್ವದ ಆಡಳಿತ ರೀತಿಯಲ್ಲಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಆ ವಿದ್ಯಾರ್ಥಿನಿ ಕೇಳಿರುವುದರಿಂದ ತಪ್ಪೇನಿಲ್ಲ ಆದರೆ ಅಧಿಕಾರಿಣಿ ಅರ್ಥಮಾಡಿ ಕೊಳ್ಳಬೇಕಿತ್ತು ಇಂತಹ ಹರಕೆ ಉತ್ತರಗಳಿಂದ ಸರಕಾರಕ್ಕೆ ಮುಜುಗರ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...