Homeಮುಖಪುಟ‘ನಾಳೆ ಕಾಂಡೋಂ ಕೂಡಾ ಕೇಳುತ್ತೀರಿ’: ಸ್ಯಾನಿಟರಿ ಪ್ಯಾಡ್‌ ಬಗ್ಗೆ ಪ್ರಶ್ನೆ ಕೇಳಿದ ವಿದ್ಯಾರ್ಥಿನಿಯನ್ನು ಅವಮಾನಿಸಿದ ಐಎಎಸ್‌...

‘ನಾಳೆ ಕಾಂಡೋಂ ಕೂಡಾ ಕೇಳುತ್ತೀರಿ’: ಸ್ಯಾನಿಟರಿ ಪ್ಯಾಡ್‌ ಬಗ್ಗೆ ಪ್ರಶ್ನೆ ಕೇಳಿದ ವಿದ್ಯಾರ್ಥಿನಿಯನ್ನು ಅವಮಾನಿಸಿದ ಐಎಎಸ್‌ ಅಧಿಕಾರಿ

- Advertisement -
- Advertisement -

ಮಂಗಳವಾರ ಪಾಟ್ನಾದಲ್ಲಿ ನಡೆದ ಯುನಿಸೆಫ್ ಮತ್ತು ರಾಜ್ಯ ಸರ್ಕಾರವು ಜಂಟಿಯಾಗಿ ಆಯೋಜಿಸಿದ ‘ಸಶಕ್ತ್ ಬೇಟಿ, ಸಮ್ರದ್ದ್ ಬಿಹಾರ’ ಎಂಬ ಕಾರ್ಯಗಾರದಲ್ಲಿ ವಿದ್ಯಾರ್ಥಿನಿಯರು ಕೇಳಿದ ಪ್ರಶ್ನೆಗೆ ಬಿಹಾರದ ಮಹಿಳಾ ಅಭಿವೃದ್ಧಿ ನಿಗಮ (ಡಬ್ಲ್ಯುಡಿಸಿ) ವ್ಯವಸ್ಥಾಪಕ ನಿರ್ದೇಶಕಿ ಹರ್ಜೋತ್‌ ಕೌರ್ ಬಾಮ್ಹ್ರಾ ಉದ್ಧಟತನದಿಂದ ಉತ್ತರಿಸಿದ್ದು ವ್ಯಾಪಕ ಟೀಕೆಗೆ ಗುರಿಯಾಗಿದೆ.

ಸರ್ಕಾರ ಸ್ಯಾನಿಟರಿ ಪ್ಯಾಡ್ ಯಾಕೆ ನೀಡುತ್ತಿಲ್ಲ ಎಂದು ವಿದ್ಯಾರ್ಥಿನಿಯೊಬ್ಬರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಹಿರಿಯ ಐಎಎಸ್ ಅಧಿಕಾರಿ ಹರ್ಜೋತ್‌ ಕೌರ್, “ಇವತ್ತು ನೀವು ಸ್ಯಾನಿಟರಿ ಪ್ಯಾಡ್‌ ಕೇಳುತ್ತೀರಿ, ನಾಳೆ ಜೀನ್ಸ್ ಕೇಳುತ್ತಾರೆ, ಆನಂತರ ಉತ್ತಮ ಬೂಟುಗಳು ಮತ್ತು ಅಂತಿಮವಾಗಿ ಕುಟುಂಬ ಯೋಜನೆಗಾಗಿ ನಿರೋಧ್‌‌ಗಳನ್ನು ಕೂಡಾ ಕೇಳುತ್ತೀರಿ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಾಜಕಾರಣಿಗಳು ಮತಗಳನ್ನು ಕೇಳುತ್ತಾರೆ, ಹೀಗಿರುವಾಗ ಕೆಲವು ಸೌಲಭ್ಯಗಳನ್ನು ನೀಡುವುದು ಸರ್ಕಾರದ ಕರ್ತವ್ಯವಾಗಿದೆ ಎಂದು ವಿದ್ಯಾರ್ಥಿನಿ ವಾದಿಸಿದಾಗ,“ಮತವನ್ನು ಹಾಕಬೇಡಿ, ಪಾಕಿಸ್ತಾನ ಮಾಡಿ ಈ ದೇಶವನ್ನು. ಹಣ ಅಥವಾ ಸೌಕರ್ಯಗಳಿಗಾಗಿ ನೀವು ಮತ ​​ಚಲಾಯಿಸುತ್ತೀರಾ?” ಎಂದು ಐಎಎಸ್ ಅಧಿಕಾರಿ ಹೇಳಿದ್ದಾರೆ.

ಇದನ್ನೂ ಓದಿ: ಕೋವಿಡ್ ಸಾವಿನ ಸಂಖ್ಯೆಯ ಚರ್ಚೆ ಮಾಡಿದ್ರೆ ಮತ್ತೆ ಅವ್ರು ಹುಟ್ಟಿ ಬರುತ್ತಾರ?: ಹರಿಯಾಣ ಸಿಎಂ ಉದ್ಧಟತನ

ಡಬ್ಲ್ಯುಡಿಸಿ ರಾಜ್ಯ ಸರ್ಕಾರದ ಸಾಮಾಜಿಕ ಕಲ್ಯಾಣ ವಿಭಾಗದ ಅಡಿಯಲ್ಲಿ ಬರುತ್ತದೆ ಮತ್ತು ಮಹಿಳೆಯರಿಗಾಗಿ ಕಲ್ಯಾಣ ಯೋಜನೆಗಳನ್ನು ಜಾರಿಗೆ ತರುವ ನೋಡಲ್ ಏಜೆನ್ಸಿಯಾಗಿದೆ.

ಕಾರ್ಯಾಗಾರ ನಡೆಯುತ್ತಿದ್ದ ಸಮಯದಲ್ಲಿ ವಿದ್ಯಾರ್ಥಿನಿ,“ಸರ್ಕಾರವು ನಮಗೆ ಸಮವಸ್ತ್ರ ಮತ್ತು ವಿದ್ಯಾರ್ಥಿವೇತನವನ್ನು ನೀಡುವುದು ಸೇರಿದಂತೆ ಅನೇಕ ಕೆಲಸಗಳನ್ನು ಮಾಡುತ್ತಿದೆ. ಹೀಗಿರುವಾಗ, ಕೇವಲ 20-30ರೂ. ಗಳ ಸ್ಯಾನಿಟರಿ ಪ್ಯಾಡ್‌ಗಳನ್ನು ಏಕೆ ನೀಡಲು ಸಾಧ್ಯವಿಲ್ಲ” ಎಂದು ಕೇಳುತ್ತಾರೆ.

ವಿದ್ಯಾರ್ಥಿನಿಯ ಪ್ರಶ್ನೆಗೆ ಸಭಿಕರು ಚಪ್ಪಾಳೆ ತಟ್ಟುವ ಮೂಲಕ ಪ್ರಶ್ನೆಯನ್ನು ಮೆಚ್ಚುತ್ತಿದ್ದಂತೆ ಉತ್ತರಿಸಿದ ಹರ್ಜೋತ್‌ ಕೌರ್, “ಇಂತಹ ಬೇಡಿಕೆಗಳಿಗೆ ಅಂತ್ಯವಿಲ್ಲ ಎಂದು ಈ ಚಪ್ಪಾಳೆ ತಿಳಿದಿರಬೇಕು. ಸರ್ಕಾರವು ಸ್ಯಾನಿಟರ್‌ ಪ್ಯಾಡ್‌ಗಳನ್ನು ನೀಡುತ್ತದೆಯೇ ಎಂಬುದು ಪ್ರಶ್ನೆ. ನಾಳೆ ಜೀನ್ಸ್ ಕೇಳುತ್ತಾರೆ, ನಾಡಿದ್ದು ಶೂಗಳಿಗೆ ಬೇಡಿಕೆ ಇಡುತ್ತಾರೆ ಮತ್ತು ಅಂತಿಮವಾಗಿ ಕುಟುಂಬ ಯೋಜನೆಗೆ ಉಚಿತ ನಿರೋಧ್‌ಗಳಿಗೆ ಬೇಡಿಕೆ ಬರಬಹುದು” ಎಂದು ಹೇಳುತ್ತಾರೆ.

ಇದನ್ನೂ ಓದಿ: ನಾರಾಯಣ ಗುರುಗಳ ಪಠ್ಯಕ್ಕೆ ಕತ್ತರಿ: ‘ನನಗೆ ಅದು ನೆನಪಾಗುತ್ತಿಲ್ಲ’ ಎಂದ ಪಠ್ಯ ಪುಸ್ತಕ ಸಮಿತಿ ಸದಸ್ಯ ಡಾ. ಅನಂತಕೃಷ್ಣ…

ಸರ್ಕಾರದಿಂದಲೇ ಎಲ್ಲವನ್ನೂ ಒತ್ತಾಯಿಸಬಾರದು ಎಂದು ಐಎಎಸ್ ಅಧಿಕಾರಿ ಹೇಳುತ್ತಾರೆ.“ಸರ್ಕಾರದೊಂದಿಗೆ ಎಲ್ಲವನ್ನೂ ಕೇಳುವ ಅಗತ್ಯ ಏನಿದೆ. ನಿಮಗೆ ಬೇಕಾಗಿದ್ದು ನೀವು ಸಂಪಾದನೆ ಮಾಡಿದೆ. ಸರ್ಕಾರದ ಅನೇಕ ಯೋಜನೆಗಳು ಇವೆ. ಆದರೆ ಸರ್ಕಾರವೆ ಎಲ್ಲವನ್ನೂ ನೀಡಬೇಕು, 20-30 ರೂ. ನೀಡಲು ಸಾಧ್ಯವಿಲ್ಲವೆ ಎಂಬ ಈ ಚಿಂತನೆ ತಪ್ಪಾಗಿದೆ. ಸರ್ಕಾರ ತುಂಬಾ ವಸ್ತಗಳನ್ನು ನೀಡುತ್ತಿದೆ” ಎಂದು ಅವರು ಹೇಳುತ್ತಾರೆ.

 

ಇದನ್ನೂ ಓದಿ: ಮಾತು ಮರೆತ ಭಾರತ; ಸ್ವತಂತ್ರ ಪೂರ್ವ ಭಾರತದ ಕೆಲವು ದಲಿತ್ ಫೈಲ್ಸ್

ಅಧಿಕಾರಿಯ ಉದ್ಧಟತನವನ್ನು ಬಿಹಾರ ಶಿಕ್ಷಕರ ಅರ್ಹತಾ ಪರೀಕ್ಷೆ ಸಂಘದ ಅಧ್ಯಕ್ಷ ಅಮಿತ್ ವಿಕ್ರಮ್ ಖಂಡಿಸಿದ್ದಾರೆ. “ಡಬ್ಲ್ಯುಡಿಸಿ ನಿರ್ದೇಶಕಿ ಹುಡುಗಿಯ ಪ್ರಶ್ನೆಯನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಲಿಲ್ಲ. ಅವರು ಬಹುಶಃ ಶಾಲೆಗಳಲ್ಲಿ ಸ್ಯಾನಿಟರಿ ಪ್ಯಾಡ್‌ಗಳ ಲಭ್ಯತೆಯನ್ನು ಕೇಳುತ್ತಿದ್ದರು. 6 ರಿಂದ 12 ನೇ ತರಗತಿಯವರೆಗಿನ ಪ್ರತಿ ವಿದ್ಯಾರ್ಥಿನಿಯರಿಗೆ ಸರ್ಕಾರವು 300 ರೂಗಳನ್ನು ನೀಡಿದ್ದರೂ, ಅವರಲ್ಲಿ ಹೆಚ್ಚಿನವರು ಸ್ಯಾನಿಟರಿ ಪ್ಯಾಡ್‌ಗಳನ್ನು ಶಾಲೆಗಳಿಗೆ ಕೊಂಡೊಯ್ಯುವುದಿಲ್ಲ. ಐಎಎಸ್ ಅಧಿಕಾರಿ ವಿಭಿನ್ನವಾಗಿ ಉತ್ತರಿಸಬೇಕಾಗಿತ್ತು, ಆದರೆ ಅವರು ಪ್ರಶ್ನೆ ಕೇಳಿದ ವಿದ್ಯಾರ್ಥಿಯನ್ನು ಅವಮಾನಿಸಿದರು” ಎಂದು ಅವರು ಹೇಳಿದ್ದಾರೆ.

“ಬಾಲಕಿಯೊಂದಿಗೆ ಅಧಿಕಾರಿ ಮಾತನಾಡಿದ ರೀತಿಯು ಕಾರ್ಯಾಗಾರದ ಉದ್ದೇಶವನ್ನೇ ಬುಡಮೇಲು ಮಾಡಿದೆ. ಅವರ ಮಾತುಗಳು ಬೇಜವಾಬ್ದಾರಿಯುತವಾಗಿತ್ತು ಮತ್ತು ಅಸೂಕ್ಷ್ಮವಾಗಿತ್ತು. ಉತ್ತರದಲ್ಲಿ ಪಾಕಿಸ್ತಾನದ ಉಲ್ಲೇಖವನ್ನು ಮಾಡುವ ಅಗತ್ಯವಿರಲಿಲ್ಲ” ಎಂದು ರಾಜಕೀಯ ನಾಯಕರೊಬ್ಬರು ಹೇಳಿದ್ದಾರೆ.

ಬಿಹಾರ ಸಮಾಜ ಕಲ್ಯಾಣ ಸಚಿವ ಮದನ್ ಸಹಾನಿ ಪ್ರತಿಕ್ರಿಯಿಸಿ,“ನಮ್ಮ ಇಲಾಖೆಯು ಹುಡುಗಿಯರು ಮತ್ತು ಮಹಿಳೆಯರ ಕಲ್ಯಾಣಕ್ಕಾಗಿ ಕೆಲಸ ಮಾಡುತ್ತದೆ. ಅಧಿಕಾರಿ ಹುಡುಗಿಯರನ್ನು ನಿರುತ್ಸಾಹಗೊಳಿಸಬಾರದಿತ್ತು. ಕಾರ್ಯಾಗಾರವು ಅವರನ್ನು ಪ್ರೋತ್ಸಾಹಿಸಲು ಉದ್ದೇಶಿಸಲಾಗಿತ್ತು. ನಮ್ಮ ಇಲಾಖೆಯ ಕಾರ್ಯದರ್ಶಿ ಗುರುವಾರ ನಿರ್ದೇಶಕಿ ಜೊತೆ ಮಾತನಾಡಲಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಶೋಷಿತರ ವಲಸೆ ಮತ್ತು ಪ್ರಭುತ್ವ; ಮರದೊಳಗಣ ಬೆಂಕಿ

ಈ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲೂ ಆಕ್ರೋಶ ವ್ಯಕ್ತವಾಗಿದೆ. ಕವಿ ಶಂಕರ್‌ ಎನ್‌. ಕೆಂಚನೂರು ಅವರು, “ಐಎಎಸ್ ಅಧಿಕಾರಿಯೊಬ್ಬರು ಪ್ರೈಮರಿ ಸ್ಕೂಲ್ ಹೆಣ್ಣು ಮಕ್ಕಳ ಎದುರು ಆಡಿದ ಮಾತು ಖಂಡನೀಯ. ಅದು ಅಲ್ಲದೆ ಆಕೆ ಕೂಡಾ ಒಬ್ಬ ಮಹಿಳೆಯಾಗಿದ್ದು, ಜೊತೆಗೆ ಬಿಹಾರದ ಸಶಕ್ತ ಬೇಟಿ, ಸದೃಢ ಬಿಹಾರ ಕಾರ್ಯಕ್ರಮದ ಮುಖ್ಯ ಅಧಿಕಾರಿ. ಕೇವಲ ರಾಜಕಾರಣಿಗಳಷ್ಟೇ ಅಲ್ಲ ಈ ದೇಶದ ಅಧಿಕಾರಶಾಹಿ ಕೂಡ ಜಡವಾಗಿ ಹೋಗಿದೆ. ಇವರ ಸಂವೇದನೆಗಳು ಸತ್ತು ಹೋಗಿವೆ. ರಾಜಕಾರಣಿಗಳಿಗಾದರೂ ಜನರ ಹಂಗಿದೆ. ಆದರೆ ಈ ಬ್ಯುರೊಕ್ರಸಿಗೆ ಯಾರ ಹಂಗೂ ಇಲ್ಲ. ಇವು ಬ್ರಿಟಿಷರ ಕಾಲದಿಂದಲೂ ಅರೊಗೆನ್ಸಿಯನ್ನೇ ಉಸಿರಾಡುತ್ತಾ ಬದುಕಿವೆ. ಈಗಲೂ ನಮ್ಮ ಬ್ಯುರೊಕ್ರಸಿ ಕೆಲಸ ಮಾಡೋದು ಬ್ರಿಟಿಷ್ ಆಡಳಿತದ ಅಧಿಕಾರಿಗಳ ಮನಸ್ಥಿತಿಯಲ್ಲಿಯೇ ಹೊರತು ಪ್ರಜಾಪ್ರಭುತ್ವದ ಆಡಳಿತ ರೀತಿಯಲ್ಲಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಆ ವಿದ್ಯಾರ್ಥಿನಿ ಕೇಳಿರುವುದರಿಂದ ತಪ್ಪೇನಿಲ್ಲ ಆದರೆ ಅಧಿಕಾರಿಣಿ ಅರ್ಥಮಾಡಿ ಕೊಳ್ಳಬೇಕಿತ್ತು ಇಂತಹ ಹರಕೆ ಉತ್ತರಗಳಿಂದ ಸರಕಾರಕ್ಕೆ ಮುಜುಗರ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...