Homeಮುಖಪುಟ‘ನಾಳೆ ಕಾಂಡೋಂ ಕೂಡಾ ಕೇಳುತ್ತೀರಿ’: ಸ್ಯಾನಿಟರಿ ಪ್ಯಾಡ್‌ ಬಗ್ಗೆ ಪ್ರಶ್ನೆ ಕೇಳಿದ ವಿದ್ಯಾರ್ಥಿನಿಯನ್ನು ಅವಮಾನಿಸಿದ ಐಎಎಸ್‌...

‘ನಾಳೆ ಕಾಂಡೋಂ ಕೂಡಾ ಕೇಳುತ್ತೀರಿ’: ಸ್ಯಾನಿಟರಿ ಪ್ಯಾಡ್‌ ಬಗ್ಗೆ ಪ್ರಶ್ನೆ ಕೇಳಿದ ವಿದ್ಯಾರ್ಥಿನಿಯನ್ನು ಅವಮಾನಿಸಿದ ಐಎಎಸ್‌ ಅಧಿಕಾರಿ

- Advertisement -
- Advertisement -

ಮಂಗಳವಾರ ಪಾಟ್ನಾದಲ್ಲಿ ನಡೆದ ಯುನಿಸೆಫ್ ಮತ್ತು ರಾಜ್ಯ ಸರ್ಕಾರವು ಜಂಟಿಯಾಗಿ ಆಯೋಜಿಸಿದ ‘ಸಶಕ್ತ್ ಬೇಟಿ, ಸಮ್ರದ್ದ್ ಬಿಹಾರ’ ಎಂಬ ಕಾರ್ಯಗಾರದಲ್ಲಿ ವಿದ್ಯಾರ್ಥಿನಿಯರು ಕೇಳಿದ ಪ್ರಶ್ನೆಗೆ ಬಿಹಾರದ ಮಹಿಳಾ ಅಭಿವೃದ್ಧಿ ನಿಗಮ (ಡಬ್ಲ್ಯುಡಿಸಿ) ವ್ಯವಸ್ಥಾಪಕ ನಿರ್ದೇಶಕಿ ಹರ್ಜೋತ್‌ ಕೌರ್ ಬಾಮ್ಹ್ರಾ ಉದ್ಧಟತನದಿಂದ ಉತ್ತರಿಸಿದ್ದು ವ್ಯಾಪಕ ಟೀಕೆಗೆ ಗುರಿಯಾಗಿದೆ.

ಸರ್ಕಾರ ಸ್ಯಾನಿಟರಿ ಪ್ಯಾಡ್ ಯಾಕೆ ನೀಡುತ್ತಿಲ್ಲ ಎಂದು ವಿದ್ಯಾರ್ಥಿನಿಯೊಬ್ಬರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಹಿರಿಯ ಐಎಎಸ್ ಅಧಿಕಾರಿ ಹರ್ಜೋತ್‌ ಕೌರ್, “ಇವತ್ತು ನೀವು ಸ್ಯಾನಿಟರಿ ಪ್ಯಾಡ್‌ ಕೇಳುತ್ತೀರಿ, ನಾಳೆ ಜೀನ್ಸ್ ಕೇಳುತ್ತಾರೆ, ಆನಂತರ ಉತ್ತಮ ಬೂಟುಗಳು ಮತ್ತು ಅಂತಿಮವಾಗಿ ಕುಟುಂಬ ಯೋಜನೆಗಾಗಿ ನಿರೋಧ್‌‌ಗಳನ್ನು ಕೂಡಾ ಕೇಳುತ್ತೀರಿ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಾಜಕಾರಣಿಗಳು ಮತಗಳನ್ನು ಕೇಳುತ್ತಾರೆ, ಹೀಗಿರುವಾಗ ಕೆಲವು ಸೌಲಭ್ಯಗಳನ್ನು ನೀಡುವುದು ಸರ್ಕಾರದ ಕರ್ತವ್ಯವಾಗಿದೆ ಎಂದು ವಿದ್ಯಾರ್ಥಿನಿ ವಾದಿಸಿದಾಗ,“ಮತವನ್ನು ಹಾಕಬೇಡಿ, ಪಾಕಿಸ್ತಾನ ಮಾಡಿ ಈ ದೇಶವನ್ನು. ಹಣ ಅಥವಾ ಸೌಕರ್ಯಗಳಿಗಾಗಿ ನೀವು ಮತ ​​ಚಲಾಯಿಸುತ್ತೀರಾ?” ಎಂದು ಐಎಎಸ್ ಅಧಿಕಾರಿ ಹೇಳಿದ್ದಾರೆ.

ಇದನ್ನೂ ಓದಿ: ಕೋವಿಡ್ ಸಾವಿನ ಸಂಖ್ಯೆಯ ಚರ್ಚೆ ಮಾಡಿದ್ರೆ ಮತ್ತೆ ಅವ್ರು ಹುಟ್ಟಿ ಬರುತ್ತಾರ?: ಹರಿಯಾಣ ಸಿಎಂ ಉದ್ಧಟತನ

ಡಬ್ಲ್ಯುಡಿಸಿ ರಾಜ್ಯ ಸರ್ಕಾರದ ಸಾಮಾಜಿಕ ಕಲ್ಯಾಣ ವಿಭಾಗದ ಅಡಿಯಲ್ಲಿ ಬರುತ್ತದೆ ಮತ್ತು ಮಹಿಳೆಯರಿಗಾಗಿ ಕಲ್ಯಾಣ ಯೋಜನೆಗಳನ್ನು ಜಾರಿಗೆ ತರುವ ನೋಡಲ್ ಏಜೆನ್ಸಿಯಾಗಿದೆ.

ಕಾರ್ಯಾಗಾರ ನಡೆಯುತ್ತಿದ್ದ ಸಮಯದಲ್ಲಿ ವಿದ್ಯಾರ್ಥಿನಿ,“ಸರ್ಕಾರವು ನಮಗೆ ಸಮವಸ್ತ್ರ ಮತ್ತು ವಿದ್ಯಾರ್ಥಿವೇತನವನ್ನು ನೀಡುವುದು ಸೇರಿದಂತೆ ಅನೇಕ ಕೆಲಸಗಳನ್ನು ಮಾಡುತ್ತಿದೆ. ಹೀಗಿರುವಾಗ, ಕೇವಲ 20-30ರೂ. ಗಳ ಸ್ಯಾನಿಟರಿ ಪ್ಯಾಡ್‌ಗಳನ್ನು ಏಕೆ ನೀಡಲು ಸಾಧ್ಯವಿಲ್ಲ” ಎಂದು ಕೇಳುತ್ತಾರೆ.

ವಿದ್ಯಾರ್ಥಿನಿಯ ಪ್ರಶ್ನೆಗೆ ಸಭಿಕರು ಚಪ್ಪಾಳೆ ತಟ್ಟುವ ಮೂಲಕ ಪ್ರಶ್ನೆಯನ್ನು ಮೆಚ್ಚುತ್ತಿದ್ದಂತೆ ಉತ್ತರಿಸಿದ ಹರ್ಜೋತ್‌ ಕೌರ್, “ಇಂತಹ ಬೇಡಿಕೆಗಳಿಗೆ ಅಂತ್ಯವಿಲ್ಲ ಎಂದು ಈ ಚಪ್ಪಾಳೆ ತಿಳಿದಿರಬೇಕು. ಸರ್ಕಾರವು ಸ್ಯಾನಿಟರ್‌ ಪ್ಯಾಡ್‌ಗಳನ್ನು ನೀಡುತ್ತದೆಯೇ ಎಂಬುದು ಪ್ರಶ್ನೆ. ನಾಳೆ ಜೀನ್ಸ್ ಕೇಳುತ್ತಾರೆ, ನಾಡಿದ್ದು ಶೂಗಳಿಗೆ ಬೇಡಿಕೆ ಇಡುತ್ತಾರೆ ಮತ್ತು ಅಂತಿಮವಾಗಿ ಕುಟುಂಬ ಯೋಜನೆಗೆ ಉಚಿತ ನಿರೋಧ್‌ಗಳಿಗೆ ಬೇಡಿಕೆ ಬರಬಹುದು” ಎಂದು ಹೇಳುತ್ತಾರೆ.

ಇದನ್ನೂ ಓದಿ: ನಾರಾಯಣ ಗುರುಗಳ ಪಠ್ಯಕ್ಕೆ ಕತ್ತರಿ: ‘ನನಗೆ ಅದು ನೆನಪಾಗುತ್ತಿಲ್ಲ’ ಎಂದ ಪಠ್ಯ ಪುಸ್ತಕ ಸಮಿತಿ ಸದಸ್ಯ ಡಾ. ಅನಂತಕೃಷ್ಣ…

ಸರ್ಕಾರದಿಂದಲೇ ಎಲ್ಲವನ್ನೂ ಒತ್ತಾಯಿಸಬಾರದು ಎಂದು ಐಎಎಸ್ ಅಧಿಕಾರಿ ಹೇಳುತ್ತಾರೆ.“ಸರ್ಕಾರದೊಂದಿಗೆ ಎಲ್ಲವನ್ನೂ ಕೇಳುವ ಅಗತ್ಯ ಏನಿದೆ. ನಿಮಗೆ ಬೇಕಾಗಿದ್ದು ನೀವು ಸಂಪಾದನೆ ಮಾಡಿದೆ. ಸರ್ಕಾರದ ಅನೇಕ ಯೋಜನೆಗಳು ಇವೆ. ಆದರೆ ಸರ್ಕಾರವೆ ಎಲ್ಲವನ್ನೂ ನೀಡಬೇಕು, 20-30 ರೂ. ನೀಡಲು ಸಾಧ್ಯವಿಲ್ಲವೆ ಎಂಬ ಈ ಚಿಂತನೆ ತಪ್ಪಾಗಿದೆ. ಸರ್ಕಾರ ತುಂಬಾ ವಸ್ತಗಳನ್ನು ನೀಡುತ್ತಿದೆ” ಎಂದು ಅವರು ಹೇಳುತ್ತಾರೆ.

 

ಇದನ್ನೂ ಓದಿ: ಮಾತು ಮರೆತ ಭಾರತ; ಸ್ವತಂತ್ರ ಪೂರ್ವ ಭಾರತದ ಕೆಲವು ದಲಿತ್ ಫೈಲ್ಸ್

ಅಧಿಕಾರಿಯ ಉದ್ಧಟತನವನ್ನು ಬಿಹಾರ ಶಿಕ್ಷಕರ ಅರ್ಹತಾ ಪರೀಕ್ಷೆ ಸಂಘದ ಅಧ್ಯಕ್ಷ ಅಮಿತ್ ವಿಕ್ರಮ್ ಖಂಡಿಸಿದ್ದಾರೆ. “ಡಬ್ಲ್ಯುಡಿಸಿ ನಿರ್ದೇಶಕಿ ಹುಡುಗಿಯ ಪ್ರಶ್ನೆಯನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಲಿಲ್ಲ. ಅವರು ಬಹುಶಃ ಶಾಲೆಗಳಲ್ಲಿ ಸ್ಯಾನಿಟರಿ ಪ್ಯಾಡ್‌ಗಳ ಲಭ್ಯತೆಯನ್ನು ಕೇಳುತ್ತಿದ್ದರು. 6 ರಿಂದ 12 ನೇ ತರಗತಿಯವರೆಗಿನ ಪ್ರತಿ ವಿದ್ಯಾರ್ಥಿನಿಯರಿಗೆ ಸರ್ಕಾರವು 300 ರೂಗಳನ್ನು ನೀಡಿದ್ದರೂ, ಅವರಲ್ಲಿ ಹೆಚ್ಚಿನವರು ಸ್ಯಾನಿಟರಿ ಪ್ಯಾಡ್‌ಗಳನ್ನು ಶಾಲೆಗಳಿಗೆ ಕೊಂಡೊಯ್ಯುವುದಿಲ್ಲ. ಐಎಎಸ್ ಅಧಿಕಾರಿ ವಿಭಿನ್ನವಾಗಿ ಉತ್ತರಿಸಬೇಕಾಗಿತ್ತು, ಆದರೆ ಅವರು ಪ್ರಶ್ನೆ ಕೇಳಿದ ವಿದ್ಯಾರ್ಥಿಯನ್ನು ಅವಮಾನಿಸಿದರು” ಎಂದು ಅವರು ಹೇಳಿದ್ದಾರೆ.

“ಬಾಲಕಿಯೊಂದಿಗೆ ಅಧಿಕಾರಿ ಮಾತನಾಡಿದ ರೀತಿಯು ಕಾರ್ಯಾಗಾರದ ಉದ್ದೇಶವನ್ನೇ ಬುಡಮೇಲು ಮಾಡಿದೆ. ಅವರ ಮಾತುಗಳು ಬೇಜವಾಬ್ದಾರಿಯುತವಾಗಿತ್ತು ಮತ್ತು ಅಸೂಕ್ಷ್ಮವಾಗಿತ್ತು. ಉತ್ತರದಲ್ಲಿ ಪಾಕಿಸ್ತಾನದ ಉಲ್ಲೇಖವನ್ನು ಮಾಡುವ ಅಗತ್ಯವಿರಲಿಲ್ಲ” ಎಂದು ರಾಜಕೀಯ ನಾಯಕರೊಬ್ಬರು ಹೇಳಿದ್ದಾರೆ.

ಬಿಹಾರ ಸಮಾಜ ಕಲ್ಯಾಣ ಸಚಿವ ಮದನ್ ಸಹಾನಿ ಪ್ರತಿಕ್ರಿಯಿಸಿ,“ನಮ್ಮ ಇಲಾಖೆಯು ಹುಡುಗಿಯರು ಮತ್ತು ಮಹಿಳೆಯರ ಕಲ್ಯಾಣಕ್ಕಾಗಿ ಕೆಲಸ ಮಾಡುತ್ತದೆ. ಅಧಿಕಾರಿ ಹುಡುಗಿಯರನ್ನು ನಿರುತ್ಸಾಹಗೊಳಿಸಬಾರದಿತ್ತು. ಕಾರ್ಯಾಗಾರವು ಅವರನ್ನು ಪ್ರೋತ್ಸಾಹಿಸಲು ಉದ್ದೇಶಿಸಲಾಗಿತ್ತು. ನಮ್ಮ ಇಲಾಖೆಯ ಕಾರ್ಯದರ್ಶಿ ಗುರುವಾರ ನಿರ್ದೇಶಕಿ ಜೊತೆ ಮಾತನಾಡಲಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಶೋಷಿತರ ವಲಸೆ ಮತ್ತು ಪ್ರಭುತ್ವ; ಮರದೊಳಗಣ ಬೆಂಕಿ

ಈ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲೂ ಆಕ್ರೋಶ ವ್ಯಕ್ತವಾಗಿದೆ. ಕವಿ ಶಂಕರ್‌ ಎನ್‌. ಕೆಂಚನೂರು ಅವರು, “ಐಎಎಸ್ ಅಧಿಕಾರಿಯೊಬ್ಬರು ಪ್ರೈಮರಿ ಸ್ಕೂಲ್ ಹೆಣ್ಣು ಮಕ್ಕಳ ಎದುರು ಆಡಿದ ಮಾತು ಖಂಡನೀಯ. ಅದು ಅಲ್ಲದೆ ಆಕೆ ಕೂಡಾ ಒಬ್ಬ ಮಹಿಳೆಯಾಗಿದ್ದು, ಜೊತೆಗೆ ಬಿಹಾರದ ಸಶಕ್ತ ಬೇಟಿ, ಸದೃಢ ಬಿಹಾರ ಕಾರ್ಯಕ್ರಮದ ಮುಖ್ಯ ಅಧಿಕಾರಿ. ಕೇವಲ ರಾಜಕಾರಣಿಗಳಷ್ಟೇ ಅಲ್ಲ ಈ ದೇಶದ ಅಧಿಕಾರಶಾಹಿ ಕೂಡ ಜಡವಾಗಿ ಹೋಗಿದೆ. ಇವರ ಸಂವೇದನೆಗಳು ಸತ್ತು ಹೋಗಿವೆ. ರಾಜಕಾರಣಿಗಳಿಗಾದರೂ ಜನರ ಹಂಗಿದೆ. ಆದರೆ ಈ ಬ್ಯುರೊಕ್ರಸಿಗೆ ಯಾರ ಹಂಗೂ ಇಲ್ಲ. ಇವು ಬ್ರಿಟಿಷರ ಕಾಲದಿಂದಲೂ ಅರೊಗೆನ್ಸಿಯನ್ನೇ ಉಸಿರಾಡುತ್ತಾ ಬದುಕಿವೆ. ಈಗಲೂ ನಮ್ಮ ಬ್ಯುರೊಕ್ರಸಿ ಕೆಲಸ ಮಾಡೋದು ಬ್ರಿಟಿಷ್ ಆಡಳಿತದ ಅಧಿಕಾರಿಗಳ ಮನಸ್ಥಿತಿಯಲ್ಲಿಯೇ ಹೊರತು ಪ್ರಜಾಪ್ರಭುತ್ವದ ಆಡಳಿತ ರೀತಿಯಲ್ಲಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಆ ವಿದ್ಯಾರ್ಥಿನಿ ಕೇಳಿರುವುದರಿಂದ ತಪ್ಪೇನಿಲ್ಲ ಆದರೆ ಅಧಿಕಾರಿಣಿ ಅರ್ಥಮಾಡಿ ಕೊಳ್ಳಬೇಕಿತ್ತು ಇಂತಹ ಹರಕೆ ಉತ್ತರಗಳಿಂದ ಸರಕಾರಕ್ಕೆ ಮುಜುಗರ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....