Homeಮುಖಪುಟ‘ನಾಳೆ ಕಾಂಡೋಂ ಕೂಡಾ ಕೇಳುತ್ತೀರಿ’: ಸ್ಯಾನಿಟರಿ ಪ್ಯಾಡ್‌ ಬಗ್ಗೆ ಪ್ರಶ್ನೆ ಕೇಳಿದ ವಿದ್ಯಾರ್ಥಿನಿಯನ್ನು ಅವಮಾನಿಸಿದ ಐಎಎಸ್‌...

‘ನಾಳೆ ಕಾಂಡೋಂ ಕೂಡಾ ಕೇಳುತ್ತೀರಿ’: ಸ್ಯಾನಿಟರಿ ಪ್ಯಾಡ್‌ ಬಗ್ಗೆ ಪ್ರಶ್ನೆ ಕೇಳಿದ ವಿದ್ಯಾರ್ಥಿನಿಯನ್ನು ಅವಮಾನಿಸಿದ ಐಎಎಸ್‌ ಅಧಿಕಾರಿ

- Advertisement -
- Advertisement -

ಮಂಗಳವಾರ ಪಾಟ್ನಾದಲ್ಲಿ ನಡೆದ ಯುನಿಸೆಫ್ ಮತ್ತು ರಾಜ್ಯ ಸರ್ಕಾರವು ಜಂಟಿಯಾಗಿ ಆಯೋಜಿಸಿದ ‘ಸಶಕ್ತ್ ಬೇಟಿ, ಸಮ್ರದ್ದ್ ಬಿಹಾರ’ ಎಂಬ ಕಾರ್ಯಗಾರದಲ್ಲಿ ವಿದ್ಯಾರ್ಥಿನಿಯರು ಕೇಳಿದ ಪ್ರಶ್ನೆಗೆ ಬಿಹಾರದ ಮಹಿಳಾ ಅಭಿವೃದ್ಧಿ ನಿಗಮ (ಡಬ್ಲ್ಯುಡಿಸಿ) ವ್ಯವಸ್ಥಾಪಕ ನಿರ್ದೇಶಕಿ ಹರ್ಜೋತ್‌ ಕೌರ್ ಬಾಮ್ಹ್ರಾ ಉದ್ಧಟತನದಿಂದ ಉತ್ತರಿಸಿದ್ದು ವ್ಯಾಪಕ ಟೀಕೆಗೆ ಗುರಿಯಾಗಿದೆ.

ಸರ್ಕಾರ ಸ್ಯಾನಿಟರಿ ಪ್ಯಾಡ್ ಯಾಕೆ ನೀಡುತ್ತಿಲ್ಲ ಎಂದು ವಿದ್ಯಾರ್ಥಿನಿಯೊಬ್ಬರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಹಿರಿಯ ಐಎಎಸ್ ಅಧಿಕಾರಿ ಹರ್ಜೋತ್‌ ಕೌರ್, “ಇವತ್ತು ನೀವು ಸ್ಯಾನಿಟರಿ ಪ್ಯಾಡ್‌ ಕೇಳುತ್ತೀರಿ, ನಾಳೆ ಜೀನ್ಸ್ ಕೇಳುತ್ತಾರೆ, ಆನಂತರ ಉತ್ತಮ ಬೂಟುಗಳು ಮತ್ತು ಅಂತಿಮವಾಗಿ ಕುಟುಂಬ ಯೋಜನೆಗಾಗಿ ನಿರೋಧ್‌‌ಗಳನ್ನು ಕೂಡಾ ಕೇಳುತ್ತೀರಿ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಾಜಕಾರಣಿಗಳು ಮತಗಳನ್ನು ಕೇಳುತ್ತಾರೆ, ಹೀಗಿರುವಾಗ ಕೆಲವು ಸೌಲಭ್ಯಗಳನ್ನು ನೀಡುವುದು ಸರ್ಕಾರದ ಕರ್ತವ್ಯವಾಗಿದೆ ಎಂದು ವಿದ್ಯಾರ್ಥಿನಿ ವಾದಿಸಿದಾಗ,“ಮತವನ್ನು ಹಾಕಬೇಡಿ, ಪಾಕಿಸ್ತಾನ ಮಾಡಿ ಈ ದೇಶವನ್ನು. ಹಣ ಅಥವಾ ಸೌಕರ್ಯಗಳಿಗಾಗಿ ನೀವು ಮತ ​​ಚಲಾಯಿಸುತ್ತೀರಾ?” ಎಂದು ಐಎಎಸ್ ಅಧಿಕಾರಿ ಹೇಳಿದ್ದಾರೆ.

ಇದನ್ನೂ ಓದಿ: ಕೋವಿಡ್ ಸಾವಿನ ಸಂಖ್ಯೆಯ ಚರ್ಚೆ ಮಾಡಿದ್ರೆ ಮತ್ತೆ ಅವ್ರು ಹುಟ್ಟಿ ಬರುತ್ತಾರ?: ಹರಿಯಾಣ ಸಿಎಂ ಉದ್ಧಟತನ

ಡಬ್ಲ್ಯುಡಿಸಿ ರಾಜ್ಯ ಸರ್ಕಾರದ ಸಾಮಾಜಿಕ ಕಲ್ಯಾಣ ವಿಭಾಗದ ಅಡಿಯಲ್ಲಿ ಬರುತ್ತದೆ ಮತ್ತು ಮಹಿಳೆಯರಿಗಾಗಿ ಕಲ್ಯಾಣ ಯೋಜನೆಗಳನ್ನು ಜಾರಿಗೆ ತರುವ ನೋಡಲ್ ಏಜೆನ್ಸಿಯಾಗಿದೆ.

ಕಾರ್ಯಾಗಾರ ನಡೆಯುತ್ತಿದ್ದ ಸಮಯದಲ್ಲಿ ವಿದ್ಯಾರ್ಥಿನಿ,“ಸರ್ಕಾರವು ನಮಗೆ ಸಮವಸ್ತ್ರ ಮತ್ತು ವಿದ್ಯಾರ್ಥಿವೇತನವನ್ನು ನೀಡುವುದು ಸೇರಿದಂತೆ ಅನೇಕ ಕೆಲಸಗಳನ್ನು ಮಾಡುತ್ತಿದೆ. ಹೀಗಿರುವಾಗ, ಕೇವಲ 20-30ರೂ. ಗಳ ಸ್ಯಾನಿಟರಿ ಪ್ಯಾಡ್‌ಗಳನ್ನು ಏಕೆ ನೀಡಲು ಸಾಧ್ಯವಿಲ್ಲ” ಎಂದು ಕೇಳುತ್ತಾರೆ.

ವಿದ್ಯಾರ್ಥಿನಿಯ ಪ್ರಶ್ನೆಗೆ ಸಭಿಕರು ಚಪ್ಪಾಳೆ ತಟ್ಟುವ ಮೂಲಕ ಪ್ರಶ್ನೆಯನ್ನು ಮೆಚ್ಚುತ್ತಿದ್ದಂತೆ ಉತ್ತರಿಸಿದ ಹರ್ಜೋತ್‌ ಕೌರ್, “ಇಂತಹ ಬೇಡಿಕೆಗಳಿಗೆ ಅಂತ್ಯವಿಲ್ಲ ಎಂದು ಈ ಚಪ್ಪಾಳೆ ತಿಳಿದಿರಬೇಕು. ಸರ್ಕಾರವು ಸ್ಯಾನಿಟರ್‌ ಪ್ಯಾಡ್‌ಗಳನ್ನು ನೀಡುತ್ತದೆಯೇ ಎಂಬುದು ಪ್ರಶ್ನೆ. ನಾಳೆ ಜೀನ್ಸ್ ಕೇಳುತ್ತಾರೆ, ನಾಡಿದ್ದು ಶೂಗಳಿಗೆ ಬೇಡಿಕೆ ಇಡುತ್ತಾರೆ ಮತ್ತು ಅಂತಿಮವಾಗಿ ಕುಟುಂಬ ಯೋಜನೆಗೆ ಉಚಿತ ನಿರೋಧ್‌ಗಳಿಗೆ ಬೇಡಿಕೆ ಬರಬಹುದು” ಎಂದು ಹೇಳುತ್ತಾರೆ.

ಇದನ್ನೂ ಓದಿ: ನಾರಾಯಣ ಗುರುಗಳ ಪಠ್ಯಕ್ಕೆ ಕತ್ತರಿ: ‘ನನಗೆ ಅದು ನೆನಪಾಗುತ್ತಿಲ್ಲ’ ಎಂದ ಪಠ್ಯ ಪುಸ್ತಕ ಸಮಿತಿ ಸದಸ್ಯ ಡಾ. ಅನಂತಕೃಷ್ಣ…

ಸರ್ಕಾರದಿಂದಲೇ ಎಲ್ಲವನ್ನೂ ಒತ್ತಾಯಿಸಬಾರದು ಎಂದು ಐಎಎಸ್ ಅಧಿಕಾರಿ ಹೇಳುತ್ತಾರೆ.“ಸರ್ಕಾರದೊಂದಿಗೆ ಎಲ್ಲವನ್ನೂ ಕೇಳುವ ಅಗತ್ಯ ಏನಿದೆ. ನಿಮಗೆ ಬೇಕಾಗಿದ್ದು ನೀವು ಸಂಪಾದನೆ ಮಾಡಿದೆ. ಸರ್ಕಾರದ ಅನೇಕ ಯೋಜನೆಗಳು ಇವೆ. ಆದರೆ ಸರ್ಕಾರವೆ ಎಲ್ಲವನ್ನೂ ನೀಡಬೇಕು, 20-30 ರೂ. ನೀಡಲು ಸಾಧ್ಯವಿಲ್ಲವೆ ಎಂಬ ಈ ಚಿಂತನೆ ತಪ್ಪಾಗಿದೆ. ಸರ್ಕಾರ ತುಂಬಾ ವಸ್ತಗಳನ್ನು ನೀಡುತ್ತಿದೆ” ಎಂದು ಅವರು ಹೇಳುತ್ತಾರೆ.

 

ಇದನ್ನೂ ಓದಿ: ಮಾತು ಮರೆತ ಭಾರತ; ಸ್ವತಂತ್ರ ಪೂರ್ವ ಭಾರತದ ಕೆಲವು ದಲಿತ್ ಫೈಲ್ಸ್

ಅಧಿಕಾರಿಯ ಉದ್ಧಟತನವನ್ನು ಬಿಹಾರ ಶಿಕ್ಷಕರ ಅರ್ಹತಾ ಪರೀಕ್ಷೆ ಸಂಘದ ಅಧ್ಯಕ್ಷ ಅಮಿತ್ ವಿಕ್ರಮ್ ಖಂಡಿಸಿದ್ದಾರೆ. “ಡಬ್ಲ್ಯುಡಿಸಿ ನಿರ್ದೇಶಕಿ ಹುಡುಗಿಯ ಪ್ರಶ್ನೆಯನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಲಿಲ್ಲ. ಅವರು ಬಹುಶಃ ಶಾಲೆಗಳಲ್ಲಿ ಸ್ಯಾನಿಟರಿ ಪ್ಯಾಡ್‌ಗಳ ಲಭ್ಯತೆಯನ್ನು ಕೇಳುತ್ತಿದ್ದರು. 6 ರಿಂದ 12 ನೇ ತರಗತಿಯವರೆಗಿನ ಪ್ರತಿ ವಿದ್ಯಾರ್ಥಿನಿಯರಿಗೆ ಸರ್ಕಾರವು 300 ರೂಗಳನ್ನು ನೀಡಿದ್ದರೂ, ಅವರಲ್ಲಿ ಹೆಚ್ಚಿನವರು ಸ್ಯಾನಿಟರಿ ಪ್ಯಾಡ್‌ಗಳನ್ನು ಶಾಲೆಗಳಿಗೆ ಕೊಂಡೊಯ್ಯುವುದಿಲ್ಲ. ಐಎಎಸ್ ಅಧಿಕಾರಿ ವಿಭಿನ್ನವಾಗಿ ಉತ್ತರಿಸಬೇಕಾಗಿತ್ತು, ಆದರೆ ಅವರು ಪ್ರಶ್ನೆ ಕೇಳಿದ ವಿದ್ಯಾರ್ಥಿಯನ್ನು ಅವಮಾನಿಸಿದರು” ಎಂದು ಅವರು ಹೇಳಿದ್ದಾರೆ.

“ಬಾಲಕಿಯೊಂದಿಗೆ ಅಧಿಕಾರಿ ಮಾತನಾಡಿದ ರೀತಿಯು ಕಾರ್ಯಾಗಾರದ ಉದ್ದೇಶವನ್ನೇ ಬುಡಮೇಲು ಮಾಡಿದೆ. ಅವರ ಮಾತುಗಳು ಬೇಜವಾಬ್ದಾರಿಯುತವಾಗಿತ್ತು ಮತ್ತು ಅಸೂಕ್ಷ್ಮವಾಗಿತ್ತು. ಉತ್ತರದಲ್ಲಿ ಪಾಕಿಸ್ತಾನದ ಉಲ್ಲೇಖವನ್ನು ಮಾಡುವ ಅಗತ್ಯವಿರಲಿಲ್ಲ” ಎಂದು ರಾಜಕೀಯ ನಾಯಕರೊಬ್ಬರು ಹೇಳಿದ್ದಾರೆ.

ಬಿಹಾರ ಸಮಾಜ ಕಲ್ಯಾಣ ಸಚಿವ ಮದನ್ ಸಹಾನಿ ಪ್ರತಿಕ್ರಿಯಿಸಿ,“ನಮ್ಮ ಇಲಾಖೆಯು ಹುಡುಗಿಯರು ಮತ್ತು ಮಹಿಳೆಯರ ಕಲ್ಯಾಣಕ್ಕಾಗಿ ಕೆಲಸ ಮಾಡುತ್ತದೆ. ಅಧಿಕಾರಿ ಹುಡುಗಿಯರನ್ನು ನಿರುತ್ಸಾಹಗೊಳಿಸಬಾರದಿತ್ತು. ಕಾರ್ಯಾಗಾರವು ಅವರನ್ನು ಪ್ರೋತ್ಸಾಹಿಸಲು ಉದ್ದೇಶಿಸಲಾಗಿತ್ತು. ನಮ್ಮ ಇಲಾಖೆಯ ಕಾರ್ಯದರ್ಶಿ ಗುರುವಾರ ನಿರ್ದೇಶಕಿ ಜೊತೆ ಮಾತನಾಡಲಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಶೋಷಿತರ ವಲಸೆ ಮತ್ತು ಪ್ರಭುತ್ವ; ಮರದೊಳಗಣ ಬೆಂಕಿ

ಈ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲೂ ಆಕ್ರೋಶ ವ್ಯಕ್ತವಾಗಿದೆ. ಕವಿ ಶಂಕರ್‌ ಎನ್‌. ಕೆಂಚನೂರು ಅವರು, “ಐಎಎಸ್ ಅಧಿಕಾರಿಯೊಬ್ಬರು ಪ್ರೈಮರಿ ಸ್ಕೂಲ್ ಹೆಣ್ಣು ಮಕ್ಕಳ ಎದುರು ಆಡಿದ ಮಾತು ಖಂಡನೀಯ. ಅದು ಅಲ್ಲದೆ ಆಕೆ ಕೂಡಾ ಒಬ್ಬ ಮಹಿಳೆಯಾಗಿದ್ದು, ಜೊತೆಗೆ ಬಿಹಾರದ ಸಶಕ್ತ ಬೇಟಿ, ಸದೃಢ ಬಿಹಾರ ಕಾರ್ಯಕ್ರಮದ ಮುಖ್ಯ ಅಧಿಕಾರಿ. ಕೇವಲ ರಾಜಕಾರಣಿಗಳಷ್ಟೇ ಅಲ್ಲ ಈ ದೇಶದ ಅಧಿಕಾರಶಾಹಿ ಕೂಡ ಜಡವಾಗಿ ಹೋಗಿದೆ. ಇವರ ಸಂವೇದನೆಗಳು ಸತ್ತು ಹೋಗಿವೆ. ರಾಜಕಾರಣಿಗಳಿಗಾದರೂ ಜನರ ಹಂಗಿದೆ. ಆದರೆ ಈ ಬ್ಯುರೊಕ್ರಸಿಗೆ ಯಾರ ಹಂಗೂ ಇಲ್ಲ. ಇವು ಬ್ರಿಟಿಷರ ಕಾಲದಿಂದಲೂ ಅರೊಗೆನ್ಸಿಯನ್ನೇ ಉಸಿರಾಡುತ್ತಾ ಬದುಕಿವೆ. ಈಗಲೂ ನಮ್ಮ ಬ್ಯುರೊಕ್ರಸಿ ಕೆಲಸ ಮಾಡೋದು ಬ್ರಿಟಿಷ್ ಆಡಳಿತದ ಅಧಿಕಾರಿಗಳ ಮನಸ್ಥಿತಿಯಲ್ಲಿಯೇ ಹೊರತು ಪ್ರಜಾಪ್ರಭುತ್ವದ ಆಡಳಿತ ರೀತಿಯಲ್ಲಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಆ ವಿದ್ಯಾರ್ಥಿನಿ ಕೇಳಿರುವುದರಿಂದ ತಪ್ಪೇನಿಲ್ಲ ಆದರೆ ಅಧಿಕಾರಿಣಿ ಅರ್ಥಮಾಡಿ ಕೊಳ್ಳಬೇಕಿತ್ತು ಇಂತಹ ಹರಕೆ ಉತ್ತರಗಳಿಂದ ಸರಕಾರಕ್ಕೆ ಮುಜುಗರ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...