Homeಕವನನೀನೂ ಅಲ್ಲಿರಲಿಲ್ಲ: ಕಾಶ್ಮೀರದ ಜನರ ಸಂಕಟ, ತಲ್ಲಣ, ಅತಂತ್ರ-ಅನಿಶ್ಚಿತತೆಯನ್ನು ಕಟ್ಟಿಕೊಡುವ ಕವಿತೆ

ನೀನೂ ಅಲ್ಲಿರಲಿಲ್ಲ: ಕಾಶ್ಮೀರದ ಜನರ ಸಂಕಟ, ತಲ್ಲಣ, ಅತಂತ್ರ-ಅನಿಶ್ಚಿತತೆಯನ್ನು ಕಟ್ಟಿಕೊಡುವ ಕವಿತೆ

- Advertisement -
- Advertisement -

ಕಾಶ್ಮೀರಕ್ಕೆ ವಿಶೇಷ ಸ್ಥಾನ ನೀಡಿದ್ದ 370 ವಿಧಿಯನ್ನು ರದ್ದುಗೊಳಿಸಿ ಆಗಸ್ಟ್ 5ಕ್ಕೆ ಒಂದು ವರ್ಷ. ಹಲವು ತಿಂಗಳುಗಳ ಕಾಲ ಹೇರಿದ್ದ ಕರ್ಫ್ಯೂ ಸಂದರ್ಭದಲ್ಲಿ ಕಾಶ್ಮೀರದ ಸಾಮಾನ್ಯ ಜನರ ಸಂಕಟ, ತಲ್ಲಣ, ಅತಂತ್ರ-ಅನಿಶ್ಚಿತತೆಯನ್ನು ಕಟ್ಟಿಕೊಡುವ ಈ ಕಾಶ್ಮೀರಿ ಕವಿತೆಗಳನ್ನು ಸಂವರ್ಥ ಸಾಹಿಲ್ ಕನ್ನಡಕ್ಕೆ ಅನುವಾದಿಸಿದ್ದಾರೆ.

ನಾವು ಮುಷ್ಠಿ ಬಿಚ್ಚಿದರೆ

ಅದು ಮತ್ತೊಂದು ಯುದ್ಧವನ್ನು

ಬಿಗಿಹಿಡಿಯಲು.

ಬೇಲಿಯ ಮೇಲೆ ಬಿದ್ದು ಸಾಯುತ್ತಾರೆ

ನಮ್ಮ ಜನ ಬಾಗಿಲ ಹಿಂದುಗಡೆ

ನೇತುಹಾಕಿದ ಬಟ್ಟೆಯಂತೆ.

ಬೆಚ್ಚಗಿನ ವಸ್ತ್ರ ತೊಟ್ಟು ಮಕ್ಕಳು

ಮಂದ ಬೆಳಕಿನ ಓಣಿಯಲ್ಲಿ

ಆಟದ ಗನ್ ಹಿಡಿದು

ಒಬ್ಬರನ್ನೊಬ್ಬರು ಎದುರಾಗುತ್ತಾರೆ.

“ಘನತೆಯ ಸಾವಾಗಿರಲಿ”

ಎಂದು ಒಬ್ಬ ಬೊಬ್ಬಿಡುತ್ತಾನೆ

ಮತ್ತೊಬ್ಬ ನೆಲಕ್ಕುರುಳುವ

ನಟನೆ ಮಾಡುತ್ತಾನೆ.

ಸದಾ ಯುದ್ಧದಲ್ಲಿರುವ

ಮಕ್ಕಳು ನಾವು

ಯುದ್ಧದ ಮಕ್ಕಳು ನಾವು.

ಮುಯಿನ್ ಮೆಹ್ರಾಜ್

***

 

ಸಂಶಯಿಸಬೇಡ ಪ್ರಶ್ನಿಸಬೇಡ ನನ್ನನು

ಹೇಳುತೇನೆ ಕೇಳು ನನ್ನ ಕಾವ್ಯದ ಶಕ್ತಿಯ

ನನ್ನ ಕಾವ್ಯವೊಂದು ಜಾದೂ ಅಲ್ಲವೇ ಅಲ್ಲ

ಅದನ್ನು ಮೀರಿದ

ಪವಾಡವನ್ನೇ ತನ್ನೊಳಗೆ ಇರಿಸಿಕೂಂಡ

ಕಾವ್ಯ ನನ್ನದು

ನಿನ್ನ ಬಾಂಬುಗಳನ್ನು ಹಕ್ಕಿಯಾಗಿಸಬಲ್ಲದು

ನಿನ್ನ ಕಾಡತೂಸುಗಳನ್ನು ಪ್ರಾಸವಾಗಿಸಬಲ್ಲದು

ನಿನ್ನ ಚಿತ್ರಹಿಂಸೆಯನ್ನು ಸ್ವರಸಮ್ಮೇಳನವಾಗಿಸಬಲ್ಲದು

ನಿನಗೆಂದೂ ಅರ್ಥವಾಗದು ನನ್ನ ಕಾವ್ಯ

ಆದರೂ ನಾನು ಹಾಡುವುದನ್ನು ನಿಲ್ಲಿಸುವುದಿಲ್ಲ

ಯಾಕೆಂದರದು ನಿನ್ನ ವಿಷವನ್ನು ನಿಷ್ಕ್ರಿಯಗೊಳಿಸಬಲ್ಲದು

ನಿನ್ನ ಸಂಸತ್ತನ್ನು ಬುಡಸಮೇತ ನಡುಗಿಸಬಲ್ಲದು

ನನ್ನ ಕಾವ್ಯ ನಿನ್ನ ಚರ್ಮವನ್ನು ಸಿಗಿದು

ನೀ ಬಚ್ಚಿಡುವ ನಿನ್ನ ಘೋರ ವಿಕಾರವನ್ನು ಬಿಚ್ಚಿಡಬಲ್ಲದು

ಕಣ್ಣೀರನ್ನು ಪ್ರವಾಹವಾಗಿಸಬಲ್ಲದು ನನ್ನ ಕಾವ್ಯ

ಪ್ರವಾಹವನ್ನು ಚಂಡಮಾರುತವಾಗಿಸಬಲ್ಲದು

ಚಂಡಮಾರುತವನ್ನು ಹೊಸ ಮುಂಜಾವಿನ

ಸ್ವಾತಂತ್ರ ಮತ್ತು ಭರವಸೆಯಾಗಿಸಬಲ್ಲದು

ನಿನ್ನ ನಾಲಿಗೆಗೆ ರುಚಿಸದೆ ಹೋಗಬಹುದು ನನ್ನ ಕಾವ್ಯ

ಆದರೆ ನನ್ನ ಹೃದಯಕ್ಕೆ ಅದರ ಕಹಿಯೇ ಔಷದ

ನಿನ್ನ ಕಿವಿಗಳಿಗೆ ಹಾಯಾಗಿ ಕೇಳಿಸದೆ ಇರಬಹುದು

ಆದರೆ ಅವುಗಳ ತಪ್ಪಿದ ಪ್ರಾಸ ತಪ್ಪಿದ ಛಂದಸ್ಸು

ನನ್ನ ಎದೆಯ ಬಡಿತವನ್ನು ಧ್ವನಿಸುತ್ತದೆ

ಅದು ನನ್ನ ಕನಸನ್ನು ಜೀವಂತವಾಗಿರಿಸುತ್ತದೆ

ಸ್ವಾತಂತ್ರದ ಕನಸು

ಎಚ್ಚರ!

ನನ್ನ ಕಾವ್ಯ ಸುಡಬಲ್ಲದು ನಿನ್ನನು

ಹಾಗಾಗಿ ಓದು

ಗಮನವಿಟ್ಟು ಓದು

ಆಸ್ವಾದಿಸು

ನಿನ್ನ ದಬ್ಬಾಳಿಕೆಯ ಫಿರಂಗಿಯಿಂದ ಹೊರಮ್ಮಲಾರದ್ದು

ನನ್ನ ಬೇಗುದಿಯ ಗರ್ಭದಿಂದ ಹೊರಹೊಮ್ಮುವುದು.

ತನ್ನ ಹೆಸರನ್ನು ಬಹಿರಂಗಪಡಿಸಲು ಇಚ್ಚಿಸದ ಕಾಶ್ಮೀರದ ಕವಯತ್ರಿ

***

ನಾನು

ವ್ಯಕ್ತಪಡಿಸುವ ಪ್ರತಿ ಆಲೋಚನೆಗೆ, ಸಂದಾಯ ಪಡೆಯುತ್ತೇನೆ

ಬರೆಯುವ ಪ್ರತಿ ಅಕ್ಷರಕ್ಕೆ, ಸಂದಾಯ ಪಡೆಯುತ್ತೇನೆ

ಕೂಗುವ ಪ್ರತಿ ಘೋಷಣೆಗೆ, ಸಂದಾಯ ಪಡೆಯುತ್ತೇನೆ

ಎಸೆಯುವ ಪ್ರತಿ ಕಲ್ಲಿಗೂ, ಸಂದಾಯ ಪಡೆಯುತ್ತೇನೆ

ನಾನು

ದೋಚಿದ ಬಂದೂಕಿಗೆ ಸಂದಾಯ ಪಡೆಯುತ್ತೇನೆ

ನನ್ನೆದೆ ಸೀಳಿದ ಗುಂಡಿಗೆ ಸಂದಾಯ ಪಡೆಯುತ್ತೇನೆ

ಅಂತ್ಯಕ್ರಿಯೆಗಳಲ್ಲಿ ಪಾಲ್ಗೊಳ್ಳುವುದಕ್ಕೆ ಸಂದಾಯ ಪಡೆಯುತ್ತೇನೆ

ಹುತಾತ್ಮರ ಮನೆಗೆ ಭೇಟಿ ನೀಡುವುದಕ್ಕೆ ಸಂದಾಯ ಪಡೆಯುತ್ತೇನೆ

ನೀನು

ನಮ್ಮ ಕಣಿವೆಗೆ ನುಗ್ಗಿದಾಗ, ಸಂದಾಯ ಪಡೆದಿರುವೆ

ಇಲ್ಲಿ ಕಳೆಯುವ ಪ್ರತಿ ದಿನಕ್ಕೂ ಸಂದಾಯ ಪಡೆದಿರುವೆ

ನಿನ್ನಿಂದಾದ ಪೀಡನೆ, ಚಿತ್ರಹಿಂಸೆ, ಕೊಲೆ, ದಹನಕ್ಕೆ ಸಂದಾಯ ಪಡೆದಿರುವೆ

ನಾನು ಸಂದಾಯ ಪಡೆಯುತ್ತೇನೆ ಎನ್ನುವುದಕ್ಕೂ ಸಂದಾಯ ಪಡೆದಿರುವೆ

ನನ್ನ ಪ್ರತಿಭಟನೆಯ ಪ್ರತಿ ರೂಪವೂ ಸಂದಾಯ ಪಡೆದಿದ್ದರೆ

ನಿನ್ನ ಆಕ್ರಮಣವೂ ಸಂದಾಯ ಪಡೆದಿದೆ

ವ್ಯತ್ಯಾಸವಿಷ್ಟೆ:

ಹಣ ಮತ್ತು ಭಡ್ತಿಯ ಮೂಲಕ ನೀ ಸಂದಾಯ ಪಡೆದರೆ

ನಾನು ನಿನ್ನ ಅತಿಕ್ರಮಣವನ್ನು ಅಂತ್ಯಗೊಳಿಸುವ

ಭರವಸೆಯನ್ನು ಸಂದಾಯವಾಗಿ ಪಡೆಯುತ್ತೇನೆ.

ನಾಸಿರ್ ಪಟಿಗರು

***

ನೀನು ಅಲ್ಲಿರಲಿಲ್ಲ

ಹೌದು, ನೀನು ಅಲ್ಲಿರಲಿಲ್ಲ

ನನ್ನ ತಲೆಯ ಮೇಲಿನ ಸ್ಕಾರ್ಫ್

ಅವರು ಹಿಡಿದೆಳೆದು ವಶಪಡಿಸಿಕೊಂಡಾಗ

ಕಂಡಿಲ್ಲ ನೀನು

ಕಗ್ಗತ್ತಲ ರಾತ್ರಿಯಲ್ಲಿ ಅವರು

ನಮ್ಮ ಮನೆಯನ್ನು ನುಗ್ಗುವುದನ್ನು

ಉದ್ದೇಶಪೂರ್ವಕವಾಗಿಯೇ

ನಮ್ಮ ಉಗ್ರಾಣವನ್ನೇ ಆಯ್ದು

ಚಹಾದ ಸೊಪ್ಪಿಗೆ ಅರಶಿಣ ಬೆರಸುತ್ತಿದ್ದರು

ಅಲ್ಲಿ ಸಣ್ಣ ಸಂದೊಂದರಿಂದ

ಇಣುಕಿ ನೋಡುತ್ತಿದ್ದೆ ನಾನು

ಗಂಟೆಗಟ್ಟಲೆ

ನನ್ನಮ್ಮನ ಅಳುವನ್ನು, ಚೀರನ್ನು

ಆಕೆ ಮರಗಟ್ಟುವತನಕ

ಅವರು ಒದೆಯುತ್ತಿದ್ದದ್ದನ್ನು

ನೀನು ಕೇಳಿಲ್ಲ

ಅವರು ವಾಚಾಮಗೋಚರವಾಗಿ

ನನ್ನ ಬಯ್ಯುವುದನ್ನು

ಸುತ್ತಲಿನ ಹೊಲಸಿಗಾಗಿ

ಅವರನ್ನು ನಾ ದುರುಗುಟ್ಟಿ ನೋಡಿದಾಗ

ಹೇಗನ್ನಿಸಬೇಡ

ಏಕಕಾಲಕ್ಕೆ ನೂರಾರು ಕಲ್ಲುಗಳನ್ನು

ಅವರು ಎಸೆದಾಗ

ಕಿಟಕಿಯ ಗಾಜನ್ನಲ್ಲ

ಇರುಳಿನ ನಿಶಬ್ದತೆಯನ್ನು ಒಡೆಯಲು

ಒಂದೇ ಏಟಿಗೆ ಇಲ್ಲವಾಗಿಸಿದಾಗ

ಮನೆಯ ಒಬ್ಬೇಒಬ್ಬ ದುಡಿಯುವವನನ್ನು

ನೀನು ಇರಲಿಲ್ಲ

ಇವಕ್ಕೆಲ್ಲ ಸಾಕ್ಷಿಯಾಗಲು.

ಸುಂಟರಗಾಳಿಯಂತೆ ಬಂದು

ಆತನನ್ನು ಅವರು ಗಿರಗಿರ ಸುತ್ತಿಸಿದ

ಆ ಇರುಳು

ಅವರು ನೂಕಿದ ಮತ್ತು ಕಪಾಳಕ್ಕೆ ಹೊಡೆದ ಸದ್ದು

ಇಂದಿಗೂ ನನ್ನ ಕಿವಿಯಲ್ಲಿ ಗುಯ್ಗುಟ್ಟುತ್ತಿದೆ

ದೀರ್ಘವಾದ ‘ಬೀಪ್’ ಸದ್ದನ್ನು ಹಿಂಬಾಲಿಸುವ

ರಭಸದ ಆ ಪ್ರತಿ ತುಳಿತ

ಆಕ್ರಮಣಕ್ಕೆ ಬೆದರಿ

ಕೇಳಲಿಲ್ಲ ನಮ್ಮ ತಪ್ಪೇನೆಂದು

ನಾನು ನೋಡಿದ್ದು, ಮರುಕಪಟ್ಟಿದ್ದು

ಎಲ್ಲವೂ ಮೌನದಲ್ಲಿ

ಶಾಂತ ಸಮುದ್ರ ತೀರದಂತೆ

ಈಗ ನನ್ನಣ್ಣನೂ ಇಲ್ಲ.

ಅಮ್ಮನ ಉಳುಕಿಗೆ ಈಗ

ನೋವಿನ ಅನುಭವವೂ ಆಗುತ್ತಿಲ್ಲ

ಅಪ್ಪ ಅಳುತ್ತಾರೆ

ಕಣ್ಣೀರು ಕೆನ್ನೆಯ ಮೇಲೆ

ಜಾರದ ಹಾಗೆ.

ಈಗ ನಾನು ಬೀದಿಯ ಮೇಲಿದ್ದೇನೆ

ಯಾವುದೇ ಕಿರುಕುಳಕ್ಕೆ ಹೆದರದೆ

ನಮ್ಮ ಮನೆಯ ಮೇಲೆ ನೀನೆಸೆದ

ಅದೇ ಕಲ್ಲುಗಳನ್ನು ಈಗ

ನಾನು ನಿನ್ನತ್ತ ಎಸೆಯುತ್ತೇನೆ

ನೀನು ನನ್ನ ಸಹೋದರರನ್ನು

ಅಟ್ಟಿಸಿದಂತೆ ನಿನ್ನನ್ನು ಅಟ್ಟಾಡಿಸಿ

ಓಡಿ ಹೋಗುವಂತೆ ಮಾಡುತ್ತೇನೆ

ನಿನ್ನಿಂದ ಕಿತ್ತುಕೊಳ್ಳುತೇನೆ

ನಿನ್ನ ಬಂದೂಕನ್ನು

ನೀನು ನನ್ನ ಸ್ಕಾರ್ಫ್ ಅನ್ನು

ನನ್ನಿಂದ ಕಿತ್ತುಕೊಂಡಂತೆ

ನಿನ್ನ ಮೇಲೆ ಮರುಪ್ರಯೋಗಿಸುತ್ತೇನೆ

ನನ್ನ ಮೇಲೆ ನೀ ಪ್ರಯೋಗಿಸಿದ್ದ

ಆ ಎಲ್ಲಾ ಬಯ್ಗುಳಗಳನ್ನು

ನನ್ನ ವಲಯವನ್ನು ನನ್ನಿಂದ ಕಸಿದುಕೊಂಡರೆ

ಏನಾಗಬಹುದೆಂಬುದರ ಸೂಚನೆಯಷ್ಟೆ ಇದು.

ಇಕ್ರಾ ಅಖೂನ್

ಕನ್ನಡಾನುವಾದ: ಸಂವರ್ತ ‘ಸಾಹಿಲ್’

ಇದನ್ನು ಓದಿ: ದೇಗುಲದಲ್ಲಿ ದೇವರಿಲ್ಲ; 120 ವರ್ಷ ಹಳೆಯ ರವೀಂದ್ರನಾಥ ಠಾಕೂರರ ಕವಿತೆ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...